ಲಿಂಗಪರಿವರ್ತನೆ: ಬಡವಾಗುತ್ತಿವೆ ಕಂದಮ್ಮಗಳು!
-ವಿಷ್ಣುಪ್ರಿಯ
ಜೆನಿಟೋಪ್ಲಾಸ್ಟಿ. ಈ ತಂತ್ರಜ್ಞಾನದ ಹಿಂದಿದ್ದ ಉದ್ದೇಶವೂ ಸಹ ಕೆಟ್ಟದಾಗೇನೂ ಇರಲಿಲ್ಲ. ನಪುಂಸಕತೆಯನ್ನು ನಿವಾರಿವಂಥ ಮಹತ್ವದ ಉದ್ದೇಶವನ್ನು ಇಟ್ಟುಕೊಂಡಿದ್ದಂಥ ಈ ತಂತ್ರಜ್ಞಾನ ಧನದಾಹಿ ವೈದ್ಯರ ಕೈಯಲ್ಲಿ ಲಿಂಗಪರಿವರ್ತನೆಯಂಥ ದುರುದ್ದೇಶಕ್ಕೆ ಬಳಕೆಯಾಗುತ್ತಿದೆ ಅಷ್ಟೆ. ಎಂತಹುದ್ದೇ ಅಭಿವೃದ್ಧಿಯಾದರೂ ಅದು ನಿಸರ್ಗವನ್ನು, ಆ ನಿಸರ್ಗದ ಸೃಷ್ಟಿಯನ್ನು ಕಾಪಾಡಿಕೊಂಡು ಬರಬೇಕೇ ಹೊರತು, ಅದನ್ನೇ ಧಿಕ್ಕರಿಸಿ ಮುನ್ನಡೆಯುವಂತಿರಬಾರದು.ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 10 -ಮೇಳವನ್ನು ಉಳಿಸಿದ ಹರಕೆಯ ಆಟಗಳು
ಧರ್ಮಸ್ಥಳ ಮೇಳದ ಆಡಳಿತವೆಂದರೆ ಅಷ್ಟು ಸುಲಭವಾಗಿ ತೀರ್ಮಾನಿಸುವ ವಿಷಯವಲ್ಲ. ಸುಲಭದ ಮಾತೂ ಅಲ್ಲ. ತುಂಬಾ ವಿಚಾರ ಮಾಡಿ ನಿರ್ಧರಿಸಬೇಕಾದುದು’ ಎಂದು ಸಿ. ಎಸ್. ಶಾಸ್ತ್ರಿಗಳು ನನ್ನ ಯೋಜನೆಯ ಬಗ್ಗೆ ತಿಳಿಸಿದರು.
“ಯಾವುದಕ್ಕೂ ನೀವು ಸ್ಥಳಕ್ಕೆ ಬನ್ನಿ. ಅಲ್ಲಿ ಮಾತನಾಡಿ ನೋಡೋಣ” ಎಂದರು.
ಆ ಮಾತಿಗೆ ಅಣ್ಣನವರ ಒಪ್ಪಿಗೆಯೂ ಸಿಕ್ಕಿತು. ಹಾಗೆ ನಾವಿಬ್ಬರೂ ಧರ್ಮಸ್ಥಳಕ್ಕೆ ಹೋಗಿ ಶ್ರೀಮಾನ್ ಹೆಗ್ಗಡೆಯವರನ್ನು ಭೇಟಿಯಾದೆವು.
ನನ್ನ ಆಸೆಯನ್ನು ಶ್ರೀ ರಾಮಕೃಷ್ಣಯ್ಯನವರೇ ಶ್ರೀ ಹೆಗ್ಗಡೆಯವರೊಂದಿಗೆ ಅರುಹಿದರು.
ಅವರದು ಶೀಘ್ರ ನಿರ್ಧಾರದ ಕ್ರಮವೋ ಏನೋ ಎಂದು ನಾನು ಭಾವಿಸುವ ಹಾಗೆ-
“ಆಗಲಿ ಸಂತೋಷ” ಎಂದು ಅವರ ಅಪ್ಪಣೆ ಬಂದಿತು.
ಮೇಳಕ್ಕೆ ಬೇಕಾದ ವೇಷಭೂಷಣಗಳು ಯಾವುವೆಲ್ಲ ಅಗತ್ಯವಿದೆ ಎಂದು ಒಂದು ಪಟ್ಟಿ ತಯಾರಿಸಿ ಕೊಡಲೂ ಹೇಳಿದರು.
ಅವರಿಂದ ವಾಗ್ದಾನ ಪಡೆದು ಊರಿಗೆ ಬರುವಾಗಲೇ ಧರ್ಮಸ್ಥಳ ಮೇಳವನ್ನು ನಾನು ವಹಿಸಿಕೊಳ್ಳಲಿರುವ ಸುದ್ದಿ ಗಾಳಿಯಲ್ಲಿ ಹರಡತೊಡಗಿತ್ತು.





