ವಿಷಯದ ವಿವರಗಳಿಗೆ ದಾಟಿರಿ

Archive for

13
ನವೆಂ

ಸೂರ್ಯಾಸ್ತ

-ನವನೀತ್ ಪೈ

ಆಗಸ ಕೆಂಪಾಗಿತ್ತು. ಕೆಂಪು ಎನ್ನುವುದು ಪ್ರೀತಿಯ ಸಂಕೇತವೂ ಹೌದು ಅಪಾಯದ ಸಂಕೇತವೂ ಹೌದು. ಸೂರ‍್ಯ ತನ್ನ ಕೆಲಸವನ್ನು ಮುಗಿಸಿ ಮನೆಗೆ ತೆರಳುವ ಸಂತಸದಲ್ಲಿ ಕೆಂಪಾಗಿದ್ದ ಮಾತ್ರವಲ್ಲ ಬಾನನ್ನು ಕೆಂಪಾಗಿಸಿದ್ದ. ಆ ಸುಂದರ ಸಂಜೆಯಲ್ಲಿ ಮಹಾನಗರದ ಮಧ್ಯದಲ್ಲಿ ರಂಗು ರಂಗಿನ ದೀಪಗಳಿಂದ ಅಲಂಕೃತವಾದ ಆಬಾಲವೃದ್ಧರನ್ನೂ ಕೈ ಬೀಸಿ ಕರೆಯುತ್ತಿರುವ ಸುಸಜ್ಜಿತ ವಸ್ತು ಪ್ರದರ್ಶನ. ತಾಜ್ ಮಹಲ್ ನ ಪ್ರತಿಕೃತಿಯನ್ನು ಸ್ವಾಗತ ಗೋಪುರವನ್ನಾಗಿಸಿ ಒಳಗೆ ಸ್ವರ್ಗವನ್ನೇ ಏರ್ಪಡಿಸಿದ್ದರು ಆ ಕಲಾವಿದರು. ಈ ಒಂದು ಪ್ರದರ್ಶನಕ್ಕೆ ಬಂದ ಸಾವಿರಾರು ಜನರ ಮಧ್ಯೆ ಇರುವ ಒಂದು ಪುಟ್ಟ ಸಂಸಾರ ನಮ್ಮ ಮುಮದಿನ ಕಥೆಯ ಮೂಲವಸ್ತು.

ಎಷ್ಟೋದಿನಗಳ ಸತತ ಹಠದ ನಂತರ ಐದಾರು ವರ್ಷದ ಮುಗ್ಧಬಾಲಕ ರವಿಯನ್ನು ಆತನ ತಂದೆ ತಾಯಿ ಆ ವಸ್ತು ಪ್ರದರ್ಶನಕ್ಕೆ ಕರೆತಂದಿದ್ದರು. ಸ್ವಾಗತ ಗೋಪುರದ ಪಕ್ಕದ ಟಿಕೆಟ್ ಕೌಂಟರಿನಲ್ಲಿ ಎರಡೂವರೆ ಟಿಕೆಟ್‌ನ್ನು(೬ ವರ್ಷದ ಮಗುವನ್ನು ೩ ವರ್ಷ ಎಂದು ಟಿಕೆಟ್ ನೀಡುವವನ ಬಳಿಯಲ್ಲಿ ವಾದಿಸಿ ಅರ್ಧ ಟಿಕೆಟ್ ಪಡೆದಿದ್ದರು.) ಪಡೆದು ಸ್ವಾಗತ ಗೋಪುರದ ಎದುರು ನಿಂತಾಗ ಮನದ ಆಯಾಸವೆಲ್ಲ ನಾಶವಾಗಿ ಮನಕ್ಕೆ ಆನಂದವಾಯಿತು. ವಸ್ತು ಪ್ರದರ್ಶನದ ಒಳಗೆ ಕಾಲಿಟ್ಟಾಗ ಮಿಠಾಯಿ ಅಂಗಡಿಗಳ ಸಾಲು ರವಿಯನ್ನು ಬಹುವಾಗಿ ಆಕರ್ಷಿಸಿದವು.

ಬಣ್ಣ ಬಣ್ಣದ ಘಮ ಘಮ ಸುವಾಸನೆಯ ಮಿಠಾಯಿಗಳು ರವಿಯ ಬಾಯಲ್ಲಿ ನೀರೂರಿಸಿದವು. ಅವರು ಮುಂದೆ ನಡೆಯುತ್ತಿದ್ದಂತೆ ಒಂದು ಅಂಗಡಿಯಲ್ಲಿ ಎಣ್ಣೆ ಬಾಂಡಲೆಯಲ್ಲಿ ಜಿಲೇಬಿಯನ್ನು ಬಿಡುತ್ತಿದ್ದರು. ಜಿಲೇಬಿಗಳ ಮೇಲಿಂದ ಇಳಿಯುತ್ತಿರುವ ಪಾಕವು ಆ ಜಿಲೇಬಿಗಳನ್ನೇ ನೋಡುತ್ತಾ ನಡೆಯುತ್ತಿರುವ ರವಿಯ ಜಿಲೇಬಿಯಂತಹ ನಾಲಗೆಯಿಂದ ಇಳಿಯುತ್ತಿರುವ ಲಾಲಾ ಪಾಕದಂತಿತ್ತು.
ಸ್ವಲ್ಪ ಮುಂದೆ ನಡೆದಾಗ ಇನ್ನೊಂದು ಅಂಗಡಿಯಲ್ಲಿ ಬೊಂಬಾಯಿ ಮಿಠಾಯಿ ತಯಾರಿಸುತ್ತಿದ್ದರು. ಆಗಸದಲ್ಲಿ ಸ್ವಚ್ಛಂದವಾಗಿ ಹಾರಾಡುವ ಮೋಡಗಳಂತೆ ತೇಲುತ್ತಿರುವ  ಬೊಂಬಾಯಿ ಮಿಠಾಯಿಯ ಎಳೆಗಳನ್ನು ಕಡ್ಡಿಯಿಂದ ಸುತ್ತುತ್ತಿದ್ದರು. ಮತ್ತಷ್ಟು ಓದು »