ವಿಷಯದ ವಿವರಗಳಿಗೆ ದಾಟಿರಿ

Archive for

21
ನವೆಂ

ಶ್ರೀರಾಮುಲು ಪುರಾಣದೊಳ್ ಭಾಜಪದ ಅವಸ್ಥೆ….!!

-ಅರೆಹೊಳೆ ಸದಾಶಿವರಾವ್

ಇಡೀ ಕರ್ನಾಟಕದ ರಾಜಕೀಯ ನಕ್ಷೆಯ ಮೇಲೆ ತನ್ನ ಪ್ರಭಾವ ಬೀರಿ, ಒಂದು ಹಂತದಲ್ಲಿ ಪಕ್ಷದ ಹೈಕಮಾಂಡ್‌ನ್ನೂ ತನ್ನ ಬಿಗಿ ಹಿಡಿತದಲ್ಲಿಟ್ಟುಕೊಂಡಿದ್ದ ಬಳ್ಳಾರಿಯ ಕಥೆ ನೋಡಿ. ಇಂದು ತಮ್ಮಿಂದ ಉಪಕಾರ ಪಡೆದ ಎಲ್ಲರಿಗೂ ತಲೆನೋವಾಗಿ, ಉಪಚುನಾವಣೆಗೆ ಕಾರಣವಾಗಿ, ’ಬಹಿರಂಗ’ವಾಗಿ, ಅ ಕಾರಣವಾಗಿ ಭಾಜಪದಿಂದ ಡೈವೋರ್ಸ್ ಪಡೆದು, ಶ್ರೀರಾಮುಲು ನಡೆಸಿರುವ ಕಾರುಬಾರು, ಎಲ್ಲರ ಹುಬ್ಬೇರಿಸಿದೆ.
ಅಲ್ಲಿ, ಚಂಚಲಗೂಡಿನಲ್ಲಿ ಗಣಿಯ ಹಿರಿಧಣಿ,
ಪರಪ್ಪನ ಅಗ್ರಹಾರದಲ್ಲಿ ಭಾಜಪದ ಕಣ್ಮಣಿ!
ಈ ನಡುವೆ ಶ್ರೀರಾಮುಲುದ್ದೇ ಬೇರೆ ಹಣಾಹಣಿ.
ಈಗ ಬಳ್ಳಾರಿಗೆ ಮತ್ತೆ ಚುನಾವಣೆಯ ಸಗಣಿ!!!

ಈ ಸಗಣಿ ಎಂದ ಬಗ್ಗೆ ನಿಮಗೆ ಆಶ್ಚರ್ಯವಿರಬಹುದು. ಆದರೆ ಇದು ಶ್ರೀರಾಮುಲು ತಮ್ಮ ಮುಖಕ್ಕೆ ಮೆತ್ತಿದ ಸಗಣಿಯನ್ನು ಯಾರದ್ದೋ  ಮುಖಕ್ಕೆ ಹಚ್ಚಿ, ಏನೋ ಮಾಡಲು ಹೊರಟಿದ್ದಾರೆ. ಇನ್ನುಳಿದ ಕೇವಲ ಅಲ್ಪ ಸಮಯಕ್ಕೆ ಅಲ್ಲಿ ಚುನಾವಣೆಯ ಕಾವೇರುವಂತೆ ಮಾಡಿದ ಶ್ರೀರಾಮುಲು ಒಂದು ರೀತಿಯಲ್ಲಿ ತನ್ನ ಆಪ್ತ ಜನಾರ್ದನ ರೆಡ್ಡಿಯೊಂದಿಗೆ ಸೇರಿಕೊಂಡು, ರಾಜ್ಯಕ್ಕೆ ಸಾಲು ಸಾಲಾಗಿ ಉಪಚುನಾವಣೆಗಳನ್ನೇ  ತಂದವರು ಎಂಬುದು ಗಮನಾರ್ಹ!. ಇನ್ನೇನು ಸರಕಾರ ರಚನೆಗೆ ಅಣಿಯಾಗಬೇಕು ಎಂದು ಭಾಜಪ ಶಾಲು ಕೊಡವಿಕೊಳ್ಳುವಷ್ಟರಲ್ಲಿ ಎದುರಾದದ್ದು ಬಹುಮತದ ಕೊರತೆ. ಆಗ ಪಕ್ಷೇತರರಿಗೆ ಲಾಟರಿ ಹೊಡೆಸಿ, ಅವರನ್ನು ಹೆಲಿಕಾಪ್ಟರ್‌ನಲ್ಲಿಯೇ ತಂದು, ಖರೀದಿಸಿ ಸರಕಾರ ರಚಿಸಿದ ನಂತರ, ’ಆಪರೇಷನ್ ಕಮಲ’ದ ಆಮಿಷದ ಹಬ್ಬ. ಈ ಮೂಲಕ ಮತ್ತೆ ಮತ್ತೆ ಉಪಚುನಾವಣೆಗಳನ್ನು ಬೇರೆ ಬೇರೆ ಕ್ಷೇತ್ರದಲ್ಲಿ ಜನತೆಯ ಮೇಲೆ ಹೇರಿದ್ದು, ಇದೇ ರೆಡ್ಡಿ ಮತ್ತು ಕಂಪೆನಿ.
ಮತ್ತಷ್ಟು ಓದು »