ವಿಷಯದ ವಿವರಗಳಿಗೆ ದಾಟಿರಿ

Archive for

22
ನವೆಂ

ಅತಿಯಾದ ಕಾಳಜಿಯೂ ಮುಳುವಾದೀತು ಜೋಕೆ…!

-ವಿಷ್ಣುಪ್ರಿಯ

ಮನುಷ್ಯನ ಕೊಳ್ಳುಬಾಕ ಸಂಸ್ಕೃತಿಯ ಲಾಭ ಮಾಡಿಕೊಳ್ಳಲು ಹವಣಿಸುವ ಕಂಪನಿಗಳು `ಆರೋಗ್ಯದ ಬಗ್ಗೆ ಮಾಹಿತಿ ಕೊಡುವ ಉಪಕರಣಗಳು’ ಎಂಬ ಹಣೆಪಟ್ಟಿಯೊಂದಿಗೆ ಹಲವಾರು ಉಪಕರಣಗಳನ್ನು ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಮೊದಲೇ ಈ ರೋಗಗಳಿಂದಾಗಿ ಕಂಗೆಟ್ಟಿರುವಂಥ ಜನ ಈ ಉಪಕರಣಗಳನ್ನು ಮುಗಿಬಿದ್ದು ಕೊಳ್ಳುತ್ತಾರೆ.

ಅತಿಯಾದರೆ ಅಮೃತವೂ ವಿಷ ಎನ್ನುತ್ತಾರೆ. ಕೆಲವೊಂದು ಬಾರಿ ನಮ್ಮ ವಿಪರೀತ ಕಾಳಜಿಯೇ ನಮಗೆ ಮುಳುವಾಗುವಂಥ ಪ್ರಸಂಗಗಳೂ ಬರುತ್ತವೆ. ದಪ್ಪಗಾಗುತ್ತೇವೆ ಎಂಬ ಆತಂಕದಲ್ಲಿ ಆಹಾರ ಬಿಡುತ್ತೇವೆ; ಪೋಷಕಾಂಶದ ಕೊರತೆ ಎದುರಾಗುತ್ತದೆ; ನಿತ್ರಾಣ ಆವರಿಸಿಕೊಳ್ಳುತ್ತದೆ; ಮತ್ತೆ ಅದನ್ನು ಸರಿಪಡಿಸುವುದಕ್ಕೆ ಔಷಧಿ ತೆಗೆದುಕೊಳ್ಳುತ್ತೇವೆ; ಉಪ್ಪು ತಿಂದರೆ ಬಿಪಿ ಬರುತ್ತೆ ಅಂತ ಉಪ್ಪು ತೀರಾ ಕಡಿಮೆ ತಿನ್ನುತ್ತೇವೆ; ಬಿಪಿ ಕಡಿಮೆಯಾಗುತ್ತದೆ; ಮತ್ತೆ ಗಿಡ್ಡಿನೆಸ್ ಕಾಡುತ್ತದೆ; ಅದಕ್ಕೆ ಔಷಧಿ.

ಹೌದು, ಮನುಷ್ಯ ಸದಾ ಏನೋ ಮಾಡುತ್ತೇನೆಂದು ಹೊರಡುತ್ತಾನೆ. ಅದಿನ್ನೇನೋ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ವಿವಿಧ ರೋಗಗಳೇ ಪ್ರಪಂಚವನ್ನು ಆಳುತ್ತಿರುವಂಥ ಸಂದರ್ಭದಲ್ಲಿ ಮಾನವ ಯಾವುದೋ ಹೊಸ ರೋಗದ ಹೆಸರು ಕೇಳಿದರೆ ಭೀತಿಗೊಳಗಾಗುತ್ತಿದ್ದಾನೆ. ಅದರಿಂದ ರಕ್ಷಣೆ ಪಡೆಯಬೇಕು ಅಂತ ಮೊದಲೇ ಔಷಧಿ ತೆಗೆದುಕೊಳ್ಳುವ ಆತುರ ತೋರುತ್ತಾನೆ. ಇದಕ್ಕಿಂತಲೂ ಹೆಚ್ಚಾಗಿ ಮನುಷ್ಯನ ಕೊಳ್ಳುಬಾಕ ಸಂಸ್ಕೃತಿಯ ಲಾಭ ಮಾಡಿಕೊಳ್ಳಲು ಹವಣಿಸುವ ಕಂಪನಿಗಳು `ಆರೋಗ್ಯದ ಬಗ್ಗೆ ಮಾಹಿತಿ ಕೊಡುವ ಉಪಕರಣಗಳು’ ಎಂಬ ಹಣೆಪಟ್ಟಿಯೊಂದಿಗೆ ಹಲವಾರು ಉಪಕರಣಗಳನ್ನು ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಮೊದಲೇ ಈ ರೋಗಗಳಿಂದಾಗಿ ಕಂಗೆಟ್ಟಿರುವಂಥ ಜನ ಈ ಉಪಕರಣಗಳನ್ನು ಮುಗಿಬಿದ್ದು ಕೊಳ್ಳುತ್ತಾರೆ; ಆ ಉಪಕರಣಗಳ ಪ್ರಾಮಾಣಿಕತೆಯನ್ನು, ಅವುಗಳ ವಿಶ್ವಾಸಾರ್ಹತೆಯನ್ನು ಪರಿಗಣಿಸುವ, ಈ ವಿಚಾರದ ಬಗ್ಗೆ ಅರೆಕ್ಷಣವೂ ಯೋಚನೆ ಮಾಡುವುದಕ್ಕೇ ಹೋಗುವುದಿಲ್ಲ. ಕೊಂಡುಕೊಂಡು ಬಿಡುತ್ತೇನೆ. ತಪ್ಪು ಮಾಹಿತಿ ನಿಡಿ ರೋಗ ಇದೆ ಎಂದು ಹೇಳಿತೋ ನಮ್ಮ ಆತಂಕ ಹೆಚ್ಚುತ್ತದೆ, ಒಂದು ವೇಳೆ ಇರುವ ರೋಗವನ್ನು ಸೂಚಿಸದೇ ಇದ್ದಲ್ಲಿ, ನಮ್ಮ ಸಮಸ್ಯೆ ಹಾಗೆಯೇ ಉಳಿದುಕೊಳ್ಳುತ್ತದೆ.

ಇನ್ನು ಕೆಲವೊಂದು ಬಾರಿ ಯಾವುದೇ ಸಮಸ್ಯೆಗೆಂದು ಚಿಕಿತ್ಸೆ ಪಡೆಯುತ್ತೇವೆ. ಆದರೆ ಆ ಚಿಕಿತ್ಸೆ ಇನ್ನೊಂದು ಸಮಸ್ಯೆಗೆ ಕಾರಣವಾಗುತ್ತದೆ. ಹಲವಾರು ಬಾರಿ ಔಷಧಿಗಳು ಅಡ್ಡ ಪರಿಣಾಮ ಬೀರಿ ಆ ಸಮಸ್ಯೆಯನ್ನು ಸರಿಪಡಿಸಿಕೊಳ್ಳುವುದಕ್ಕೆ ಇನ್ನೊಂದಷ್ಟು ಸಮಯ ಹೆಣಗಾಡಬೇಕಾದಂಥ ಪರಿಸ್ಥಿತಿ ಬರುತ್ತದೆ. ಇಷ್ಟೇ ಆಗಿದ್ದರೆ ಹೀಗೆಯೋ ಸುಧಾರಿಸಬಹುದಿತ್ತು. ಆದರೆ ಕೆಲವೊಂದು ಚಿಕಿತ್ಸೆಗಳು ಕ್ಯಾನ್ಸರ್ನಂಥ ಗಂಭೀರ ರೋಗಗಳಿಗೆ ಕಾರಣವಾಗುತ್ತವೆ. ಹೀಗೆಲ್ಲ ಆಗುತ್ತದೆಯೇ? ನಿಜಕ್ಕೂ ಈ ಉಪಕರಣಗಳು ನಿಖರವಾದ ಮಾಹಿತಿಯನ್ನು ಕೊಡುವುದಿಲ್ಲವೇ? ಒಂದು ಚಿಕಿತ್ಸೆ ಇನ್ನೊಂದು ರೋಗವನ್ನು ಸೃಷ್ಟಿ ಮಾಡಿತ್ತದೆಯೇ? ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ.
ಮತ್ತಷ್ಟು ಓದು »