ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳು ಹ್ಯಾಕ್ ಆದದ್ದಾದರೂ ಹೇಗೆ?
-ಓಂ ಶಿವಪ್ರಕಾಶ್
ಇತ್ತೀಚೆಗೆ ನ್ಯೂಯಾರ್ಕ್ ಟೈಮ್ಸ್ ನಲ್ಲೊಂದು ದೊಡ್ಡ ಸುದ್ದಿ. ೨ಮಿಲಿಯನ್ ಸಿಟಿಬ್ಯಾಂಕ್ ಗ್ರಾಹಕರ ಅಕೌಂಟುಗಳು, ಹೆಸರು, ಕ್ರೆಡಿಟ್ ಕಾರ್ಡುಗಳ ಸಂಖ್ಯೆ, ವಿಳಾಸ ಜೊತೆಗೆ ಇ-ಮೈಲ್ ಎಲ್ಲವೂ ಹ್ಯಾಕರ್ಗಳ ಕೈಗೆ ಸಿಕ್ಕಿವೆ ಎಂದು. ಇದು ಸಾಧ್ಯವಾದದ್ದಾದರೂ ಹೇಗೆ? ಇಲ್ಲಿದೆ ಒಂದು ಸಣ್ಣ ಇಣುಕು ನೋಟ.
ಸಂಸ್ಕೃತಿ ಸಂಕಥನ – ೧೨- ಭಾರತದಲ್ಲಿರುವ ಜಾತಿಗಳು ಒಂದು ‘ವ್ಯವಸ್ಥೆ’ ಅಲ್ಲ
– ರಮಾನಂದ ಐನಕೈ
ಭಾರತದಲ್ಲಿರುವ ಜಾತಿಗಳು ಒಂದು ‘ವ್ಯವಸ್ಥೆ’ ಅಲ್ಲ
ಕೆಲವು ವೈದ್ಯರಿರುತ್ತಾರೆ. ಔಷಧಿ ಕೊಟ್ಟಾಕ್ಷಣ ರೋಗ ವಾಸಿಯಾಗುತ್ತದೆ. ನಾವಂದುಕೊಳ್ಳುತ್ತೇವೆ ‘ಅವರು ತುಂಬಾ ಚೆನ್ನಾಗಿ ಔಷಧಿ ಕೊಡುತ್ತಾರೆ’ ಎಂದು. ಹಾಗಾದರೆ ಮಾರುಕಟ್ಟೆಯಲ್ಲಿ ಎಷ್ಟೊಂದು ವೈವಿಧ್ಯಮಯವಾದ ಔಷಧಿಗಳು ಸಿಗುತ್ತವೆ. ಎಲ್ಲ ವೈದ್ಯರು ಕೊಡಬಹುದಲ್ಲ? ಇಲ್ಲೇ ಇದೆ ಸೂಕ್ಷ್ಮ. ವೈದ್ಯರ ಯಶಸ್ಸು ಇರುವುದು ಔಷಧಿ ಕೊಡುವುದರಲ್ಲೊಂದೇ ಅಲ್ಲ. ಅದಕ್ಕಿಂತ ಮುಖ್ಯವಾಗಿ ವ್ಯಕ್ತಿಯಲ್ಲಿರುವ ರೋಗ ಪತ್ತೆಮಾಡುವುದರಲ್ಲಿರುತ್ತದೆ. ಒಮ್ಮೆ ರೋಗ ಗೊತ್ತಾದರೆ ಅದಕ್ಕೆ ಔಷಧ ಯಾವುದೆಂಬುದು ವೈದ್ಯಕೀಯ ಸಾಮಾನ್ಯಜ್ಞಾನ.
ಸದ್ಯದ ಸಮಾಜವಿಜ್ಞಾನ ಪ್ರಕಾರ ಭಾರತೀಯ ಸಮಾಜದ ಪರಿಸ್ಥಿತಿಯೂ ಇದೇ ಆಗಿದೆ. ಭಾರತೀಯ ಸಮಾಜ ವ್ಯವಸ್ಥೆ ಸರಿಯಾಗಿಲ್ಲ. ಮೌಢ್ಯ ಮತ್ತು ಅಸಮಾನತೆಯಿಂದ ಕೊಳೆಯುತ್ತ ರೋಗಗ್ರಸ್ತವಾಗಿವೆ ಎಂಬುದು ಚಿಂತಕರ ಅಭಿಮತ. ಜಾತಿವ್ಯವಸ್ಥೆ ಭಾರತೀಯಸಮಾಜಕ್ಕೆ ಅಂಟಿಕೊಂಡ ದೊಡ್ಡ ರೋಗ. ಹಾಗಾಗಿ ಈ ರೋಗ ಹೋಗಬೇಕಾದರೆ ಜಾತಿವ್ಯವಸ್ಥೆಯನ್ನು ಆಮೂಲಾಗ್ರವಾಗಿ ನಾಶಮಾಡಬೇಕು ಎಂಬ ಮಾತು ದಿನನಿತ್ಯ ಕೇಳಿಬರುತ್ತವೆ. ಭಾರತೀಯ ಸಮಾಜಕ್ಕೆ ಈ ರೀತಿಯ ರೋಗವಿದೆಯೆಂಬ ತಿಳುವಳಿಕೆ ಎಲ್ಲಿಂದ ಬಂತು? ಇದು ನಿಜವಾಗಿಯೂ ರೋಗ ಹೌದೋ ಎಂಬುದರ ಬಗ್ಗೆ ನಾವು ಚಿಂತಿಸಿಲ್ಲ. ನೂರಾರು ವರ್ಷಗಳಿಂದ ಹಲವಾರು ರೀತಿಯ ಔಷಧ ಮಾಡುತ್ತಲೇ ಬಂದಿದ್ದೇವೆ. ರೋಗ ಗುಣಾಗುವುದರ ಬದಲು ಉಲ್ಭಣಿಸುತ್ತ ಬಂದಿದೆ. ಅಂದರೆ ನಾವು ರೋಗವನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ. ಹಾಗಾಗಿ ನಾವು ನೀಡುವ ಔಷಧಿಗಳು ವ್ಯರ್ಥವಾಗುತ್ತಿವೆ. ರೋಗ ಇಲ್ಲದೆಯೇ ಔಷಧ ಕೊಡುವುದು ಅಥವಾ ಸರಿಯಾದ ರೋಗಕ್ಕೆ ಸರಿಯಾದ ಔಷಧ ಕೊಡದೇ ಇರುವುದು ಯಾವತ್ತೂ ಅಪಾಯ. ಅದು ದೊಡ್ಡ ರೋಗಕ್ಕೆ ನಾಂದಿಯಾಗುತ್ತದೆ.