ವಿಷಯದ ವಿವರಗಳಿಗೆ ದಾಟಿರಿ

Archive for

2
ಡಿಸೆ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 13- ಯಂತ್ರಗಳು, ಯಾಂತ್ರಿಕರು…

ರಾಮಚಂದ್ರ ಪಿ

ಆಧುನಿಕ ವಿಜ್ಞಾನವು ಇತ್ತ ಕೊಡುಗೆಗಳನ್ನು ನಾವು ಜೀವನದಲ್ಲಿ ಉಪಯೋಗಿಸಿಕೊಳ್ಳಲೇ ಬೇಕಷ್ಟೆ. ಕಲೆಗೂ ಕೆಲವು ಕೊಡುಗೆಗಳನ್ನು ವಿಜ್ಞಾನವು ಇತ್ತಿದೆ. ಇತರ ಕಲೆಗಳಂತೆ ಯಕ್ಷಗಾನದಲ್ಲೂ ಅವುಗಳ ಉಪಯೋಗವಾಗುತ್ತಿದೆ.

ಸರಿಯಾಗಿ ಉಪಯೋಗ ಮಾಡಿಕೊಳ್ಳುವ ಮೊದಲು, ವಿಜ್ಞಾನವಿತ್ತ ಹಲವು ಸಲಕರಣೆಗಳೂ, ‘ಅನುಕೂಲಗಳೂ’ ನನಗೆ ಉಪಟಳವಿತ್ತಿವೆ.

ನಾವು ಉತ್ತರ ಕನ್ನಡ ಪ್ರವಾಸ ಕೈಕೊಂಡ ಮಾರನೆಯ ವರ್ಷ ಡೇರೆಯ ಅಗತ್ಯ ನಮಗಾಯಿತು. ಅದಕ್ಕೆ ಮೊದಲೇ ಶ್ರೀ ಕೊರಗಪ್ಪ ಶೆಟ್ಟರು ತಮ್ಮ ಮೇಳಕ್ಕೆ ಒಂದು ಡೇರೆಯನ್ನು ಮಾಡಿಸಿಕೊಂಡಿದ್ದರು. ನಮ್ಮ ಮನೆಯಲ್ಲೇ ಬೇಕಾದ ವಸ್ತುಗಳನ್ನು ತರಿಸಿ ಹೊಸ ಡೇರೆಯೊಂದನ್ನು ತಂದೆಯವರು ಮಾಡಿಸಲು ತೊಡಗಿದರು. ಮೊದಲು ಹೊರಗಿನ ಆವರಣ ಮಾತ್ರ ಸಾಕು ಎಂದಿದ್ದುದು, ಅನಂತರ- ಆಟವಾಡುವ ಸ್ಥಳದ ಅರ್ಧ ಬಯಲನ್ನು ಮುಚ್ಚುವ ದೊಡ್ಡ ಡೇರೆಯಾಗಿಯೇ ಪರಿವರ್ತನೆಗೊಂಡಿತು. ಆಗ ಅದಕ್ಕೆ ತಕ್ಕಂತೆ ಕಟ್ಟಿ- ಬಿಚ್ಚಿ- ಜೋಡಿಸಿ ಸಾಗಿಸಬಲ್ಲ ಒಂದು ರಂಗಸ್ಥಳವೂ ಬೇಕು ಎನಿಸಿತು. ಅನಂತರ ಬಂದುದು ವಿದ್ಯುತ್ತಿನ ವ್ಯವಸ್ಥೆ; ಧ್ವನಿವರ್ಧಕದ ಏರ್ಪಾಡು.

ಮತ್ತಷ್ಟು ಓದು »