ಪುನರ್ಜನ್ಮ – ಒಂದು ವಿವೇಚನೆ
– ಗೋವಿಂದ ರಾವ್ ವಿ ಅಡಮನೆ
ಪುನರ್ಜನ್ಮ – ತಥ್ಯವೇ, ಮಿಥ್ಯಾಕಲ್ಪನೆಯೇ? ‘ಅತಿ ಸೂಕ್ಷ್ಮವಾದ ನಯವಾದ ಸದಾ ಚಲಿಸುತ್ತಿರುವ ಕಣಗಳಿಂದ ನಿರ್ಮಿತವಾದ ಆತ್ಮವು ವ್ಯಕ್ತಿ ಸತ್ತಾಗ ಚೆದರಿ ಹೋಗುತ್ತವೆ’, ‘ಪ್ರಾಣ ಿರುವಾಗ ಮಾನವ ಸಂತೋಷವಾಗಿ ಬದುಕಲಿ, ಸಾಲ ಮಾಡಿ ಆದರೂ ತುಪ್ಪ ತಿನ್ನಲಿ, ದೇಹ ಬೂದಿ ಆದ ನಂತರ ಅದು ಹಿಂತಿರುಗುವುದೆಂತು?’ ಎಂದೆಲ್ಲ ಆತ್ಮದ ಶಾಶ್ವತತೆಯನ್ನು ಅಲ್ಲಗಳೆಯುವ ಭೋಗಪ್ರಿಯ ವಾದಗಳನ್ನು ನಂಬೋಣವೇ? ಅಥವ ‘ಒಬ್ಬ ವ್ಯಕ್ತಿ ಜೀರ್ಣವಾದ ವಸ್ತ್ರವನ್ನು ತೊರೆದು ಹೊಸ ವಸ್ತ್ರ ಧರಿಸುವಂತೆ ಆತ್ಮವು ಜೀರ್ಣವಾದ ಶರೀರವನ್ನು ತೊರೆದು ಹೊಸ ಶರೀರವನ್ನು ಧರಿಸುತ್ತದೆ’, ‘ಶರೀರ ರಥ, ಆತ್ಮ ರಥಿ. ರಥ ಮುರಿದಾಗ ರಥಿ ಹೊಸದೊಂದು ರಥವೇರಿ ಪಯಣ ಮುಂದುವರಿಸುತ್ತಾನೆ’ ಎಂದೆಲ್ಲ ಆತ್ಮದ ಶಾಶ್ವತತೆಯನ್ನು ಸಾರುವ ಆಧ್ಯಾತ್ಮಪ್ರಿಯ ವಾದಗಳನ್ನು ನಂಬೋಣವೇ? ಇಂಥ ಪ್ರಶ್ನೆಗಳಿಗೆ ಉತ್ತರ ಹುಡುಕಲು ಪ್ರಯತ್ನಿಸುವುದೇ ಮೂರ್ಖತನವಾದೀತೇ? ಕೆಲವು ಸಂಶಯವಾದಿಗಳು ವಾದಿಸುತ್ತಿರುವಂತೆ ‘ಪುನರ್ಜನ್ಮದ ಪರಿಕಲ್ಪನೆ ನಿಜವಾಗಿರಲು ಸಾಧ್ಯವಿಲ್ಲ, ಆದ್ದರಿಂದ ಅದು ನಿಜವಲ್ಲ’ ಎಂದು ನಾವೂ ಹೇಳೋಣವೇ?
ಅನಾದಿ ಕಾಲದಿಂದಲೂ ನಡೆಯುತ್ತಿರುವ ಈ ಚರ್ಚೆಯ ಕುರಿತು ಆಧುನಿಕ ವಿಜ್ಞಾನಿಗಳ, ವಿಚಾರವಾದಿಗಳ ನಿಲುವೇನು? ಸಮ್ಮೋಹಿತ ನಿವರ್ತನ ತಂತ್ರದಿಂದ ಪುನರ್ಜನ್ಮ ಸ್ಮರಣೆ ಯ ಕುರಿತು ಈಗಾಗಲೇ ಚರ್ಚಿಸಿದ್ದೇನೆ. ಅಧಿಮನಃಶಾಸ್ತ್ರಜ್ಞರು (ಪ್ಯಾರಸೈಕಾಲಜಿಸ್ಟ್ಸ್) ಪುನರ್ಜನ್ಮ ಒಂದು ತಥ್ಯ ಎಂದು ಸಮರ್ಥಿಸಲು ನೀಡುವ ಇತರ ಸಾಕ್ಞ್ಯಾಧಾರಗಳನ್ನೂ ಅವನ್ನು ಅಲ್ಲಗಳೆಯುವ ವಾದಗಳನ್ನೂ ಅವಲೋಕಿಸಿದರೆ ನೀವು ನಿಮ್ಮದೇ ಆದ ತೀರ್ಮಾನ ಕೈಗೊಳ್ಳಲು ಸಾಧ್ಯವಾದೀತು. ಎಂದೇ ಅವುಗಳ ಪಕ್ಷಿನೋಟವನ್ನು ಈ ಲೇಖನದಲ್ಲಿ ನೀಡುತ್ತಿದ್ದೇನೆ.
ಬುವಿಯ ಸುಡುತ್ತವೆಯೇ ಸೌರಜ್ವಾಲೆಗಳು?
-ವಿಷ್ಣುಪ್ರಿಯ
ನಿಜಕ್ಕೂ ಪ್ರಳಯವಾಗುತ್ತದೆಯೇ? ಸೌರಜ್ವಾಲೆಗಳು ಭೂಮಿಯನ್ನು ಸುಡುತ್ತವೆಯೇ? ಸೂರ್ಯನಲ್ಲಿನ ಕಾಂತವಲಯದಲ್ಲಿ ಅತಿಯಾದ ಚಟುವಟಿಕೆಗಳು ಕಾಣಿಸಿಕೊಳ್ಳುವ ಮೂಲಕ ಉತ್ಪತ್ತಿಯಾಗುವಂಥ ಶಕ್ತಿಯುತ ಸೌರಜ್ವಾಲೆಗಳಿಂದ ಭೂಮಿ ಸರ್ವನಾಶವಾಗುತ್ತದೆ ಎಂಬ ಮಾತು ನಿಜವೇ?… ಈ ವಿಚಾರವಾಗಿ ಹುಟ್ಟಿಕೊಳ್ಳುವ ಪ್ರಶ್ನೆಗಳಿಗೆ ಕೊನೆಯಿಲ್ಲ. ಅವಕ್ಕೆ ಸ್ಪಷ್ಟವಾದ ಉತ್ತರಗಳೂ ಇಲ್ಲ.
ಇನ್ನು ಕೆಲವೇ ವಾರಗಳು. 2012ನೇ ಇಸವಿ ಕಾಲಿಡುತ್ತಿದೆ. `2012′ ಎಂಬ ಧ್ವನಿ ಕೆಳಿದ ತಕ್ಷಣ ಬಹಳಷ್ಟು ಜನ ಜೀವನದ ಬಗೆಗಿನ ಎಲ್ಲ ಆಸೆಗಳನ್ನೂ, ಭರವಸೆಗಳನ್ನೂ ಕಳೆದುಕೊಳ್ಳುತ್ತಿದ್ದಾರೆ. ಭೂಮಿಯ ಕಥೆಯೇ ಮುಗಿದು ಹೋಯಿತು; ಪ್ರಳಯ ಆಗುತ್ತೆ; ಸೂರ್ಯ ಉಗುಳಿದ ಸೌರಜ್ವಾಲೆಗಳು ಭೂಮಿಯನ್ನು ಸುಟ್ಟು ಹಾಕುತ್ತವೆ… ಎಂಬೆಲ್ಲ ಸುದ್ದಿಗಳು ಮೇಲಿಂದ ಮೇಲೆ ಪ್ರಸಾರವಾಗಿ ಜನರಲ್ಲಿನ ಭೀತಿಯನ್ನು ಇನ್ನಷ್ಟು ಹೆಚ್ಚಿಸುತ್ತಿವೆ. ಹಲವು ಜನರಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಭೀತಿಯಿದೆ ನಿಜ. ಆದರೆ ಅವರೆಲ್ಲ ಇಂಥದ್ದೇನೂ ಆಗುವುದಿಲ್ಲ ಎಂದು ತಮ್ಮನ್ನು ತಾವೇ ಸಮಾಧಾನ ಮಾಡಿಕೊಳ್ಳುತ್ತಿದ್ದಾರೆ.
ಮತ್ತಷ್ಟು ಓದು