ವಿಷಯದ ವಿವರಗಳಿಗೆ ದಾಟಿರಿ

Archive for

8
ಡಿಸೆ

ಗಾಂಧಿಬಂದ ವಿವಾದ : ಆತ್ಮಾವಲೋಕನೆಗೆ ಸುಸಂದರ್ಭ

-ಪ್ರವೀಣ್. ಟಿ. ಎಲ್

ನಾಗವೇಣಿಯವರ ‘ಗಾಂಧಿಬಂದ’ ಎಂಬ ಕಾದಂಬರಿಯ ಕುರಿತು ಬೇರೆ ಬೇರೆ ಪತ್ರಿಕೆಗಳಲ್ಲಿ ಇಂದು ವಿವಾದ ನಡೆಯುತ್ತಿದೆ. ಇದಕ್ಕೆ ರಾಜೇಂದ್ರ ಚೆನ್ನಿಯವರು 1-12-2011 ರಂದು ತಮ್ಮ ಪತ್ರಿಕೆಯಲ್ಲಿ   ಗಾಂಧಿ ಬಂದ’ ಕೃತಿಯ ನಿಷೇಧಕ್ಕೆ ಒತ್ತಾಯ ತರವಲ್ಲ ಎಂಬ ಶೀರ್ಷಿಕೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯದ ಹಿನ್ನೆಲೆಯಲ್ಲಿ ನನ್ನ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಅದು ‘ಜಾತಿ ಸಂಸ್ಥೆಗಳು’ ವಿಶ್ವವಿದ್ಯಾನಿಲಯಗಳ ಮೇಲೆ ತರುತ್ತಿರುವ ‘ಅನೈತಿಕ ಒತ್ತಡ’ವಾಗಿದ್ದು, ಅವುಗಳನ್ನು ‘ಲಕ್ಷ’ಕ್ಕೆ ತೆಗೆದುಕೊಳ್ಳಬಾರದೆಂಬ ವಾದವನ್ನು ಮುಂದಿಟ್ಟರು. ಹಾಗೂ ಅವರ ವಾದವು  ಮೇಲ್ನೋಟಕ್ಕೆ ಸಮಂಜಸವಾಗಿ ಕಾಣುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಜಾತಿ ಸಂಸ್ಥೆಗಳ ರಾಜಕೀಯ ಎಂಬುದನ್ನು ಗುರುತಿಸಿದಾಗ ಈ ರಾಜಕೀಯದಲ್ಲಿ ಸಾಹಿತ್ಯವು ತಟಸ್ಥ ಪಕ್ಷವಾಗಿ ತನ್ನನ್ನು ಉಳಿಸಿಕೊಂಡಿದೆಯೆ? ಎಂಬ ಪ್ರಶ್ನೆ ಏಳುತ್ತದೆ.

ತಮಗೆ ಪಥ್ಯವಾಗದ ಯಾವುದೋ ವಿಚಾರವನ್ನು ಮಂಡಿಸಿದೆ ಎನ್ನುವ ಕಾರಣಕ್ಕಾಗಿ ಗ್ರಂಥಗಳನ್ನೇ ನಿಷೇಧಿಸಬೇಕೆಂಬ ಹಾಗೂ ಸಂಶೋಧನೆಗಳನ್ನೇ ನಿಲ್ಲಿಸಬೇಕೆಂದು ಒತ್ತಡ ತರುವ ಪೃವೃತ್ತಿಯು ಇತ್ತೀಚೆಗೆ ಹೆಚ್ಚಾಗುತ್ತಿದೆ ಎಂಬುದು ವಿಷಾದಕರ  ಸಂಗತಿ ಹಾಗೂ ಖಂಡನೀಯ. ಇದು ನಮ್ಮ ಸಂಸ್ಕೃತಿಗೆ ತೀರ ಅಸಹಜವಾದ ಒಂದು ಬೆಳವಣಿಗೆ ಎಂಬುದರಲ್ಲಿ ಸಂದೇಹವಿಲ್ಲ. ಏಕೆಂದರೆ ಕೆಲವು ಜಾತಿಯ ಪಾತ್ರಗಳನ್ನು ಹಿಯ್ಯಾಳಿಸುವ, ವ್ಯಂಗ್ಯವಾಡುವ ಹಲವಾರು ಪ್ರದರ್ಶನ ಕಲೆಗಳು ಇಂದಿಗೂ ಯಾವ ‘ಜಾತಿಸಂಸ್ಥೆಗಳ’ ಕೆಂಗಣ್ಣಿಗೂ ಗುರಿಯಾಗದೇ ಮುಂದುವರೆದುಕೊಂಡು ಬರುತ್ತಿರುವುದನ್ನು ನಮ್ಮ ಸಮಾಜದಲ್ಲಿ ನೋಡಲು ಸಾಧ್ಯವಾಗುತ್ತಿದೆ. ಉದಾಹರಣೆಗೆ ಜಾನಪದೀಯ ಕಲೆಗಳಾದ, ‘ಯಕ್ಷಗಾನ’, ‘ತಾಳಮದ್ದಳೆ’, ‘ಶನಿಮಹಾತ್ಮನ ಆಟ’ ಇವುಗಳ ಸಂದರ್ಭದಲ್ಲಿ ಬ್ರಾಹ್ಮಣರಾದಿಯಾಗಿ ಎಷ್ಟೋ ಜಾತಿಗಳ ಪಾತ್ರಗಳನ್ನು(ಮಾಣಿಭಟ್ಟ, ಇತ್ಯಾದಿ) ಹಾಸ್ಯಕ್ಕೆ, ವಿಡಂಬಿಸುವುದಕ್ಕಾಗಿ ಸೃಷ್ಟಿಸಲಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಅದೇ ಜಾತಿಯ ಜನರು ಅಂತಹ ಪ್ರದರ್ಶನಗಳನ್ನು ನೋಡಿ ಸಂತೋಷವನ್ನು ಪಡುತ್ತಾರೆ, ಕಲಾವಿದನ ಪ್ರತಿಭೆಯನ್ನು ಮೆಚ್ಚಿ ಹೊಗಳುತ್ತಾರೆ. ಜೊತೆಗೆ ಅಂತಹ  ಪ್ರದರ್ಶನಗಳು ಪದೇ ಪದೇ ತಮ್ಮ ಊರುಗಳಲ್ಲಿ ನಡೆಯುವಂತೆ ಅಲ್ಲಿನ ಜನರು ಮತ್ತು ಈ ‘ಜಾತಿಸಂಸ್ಥೆಗಳೇ’ ನೋಡಿಕೊಳ್ಳುತ್ತವೆ. ಈ ಸಾಂಪ್ರದಯಿಕ ಕಲೆಯ ಸಂದರ್ಭದಲ್ಲಿ ಕಾಣದ ಪೃವೃತ್ತಿಯು ಆಧುನಿಕ ಸಾಹಿತ್ಯದ ಸಂದರ್ಭದಲ್ಲೇಕೆ ಹುಟ್ಟಿಕೊಳ್ಳಬೇಕು? ಆಧುನಿಕ ಸಾಹಿತ್ಯದ ಸಂದರ್ಭದಲ್ಲೂ ಕೂಡ ಚೆನ್ನಿಯವರು ಹೇಳುವಂತೆ ಈ ಪೃವೃತ್ತಿಯು ಜಾತಿ ರಾಜಕೀಯ ಸಂಸ್ಥೆಗಳಿಂದ ಪ್ರಚೋದಿತವಾದುದನ್ನೇ ಕಾಣುತ್ತೇವೆಯೇ ವಿನಃ ಸಾಮಾನ್ಯ ಓದುಗರಿಂದಲ್ಲ. ಹಾಗಾಗಿ ಈ ಪೃವೃತ್ತಿಗೂ ನಮ್ಮ ಸಾಂಪ್ರದಾಯಿಕ ಸಮಾಜಕ್ಕೂ ಸಂಬಂಧವಿಲ್ಲ ಎಂಬುದು ಸ್ಪಷ್ಟ. ಇದೊಂದು ಭಿನ್ನವಾದ  ಸಾಮಾಜಿಕ ವಾಸ್ತವದಲ್ಲಿ ಹುಟ್ಟಿಕೊಂಡ ಸಮಸ್ಯೆಯಾಗಿದೆ. ಮತ್ತಷ್ಟು ಓದು »

8
ಡಿಸೆ

ಗೆಂದಾಲಾಲ್ ದಿಕ್ಷಿತ್ — ಅಪರೂಪದ ಅಜ್ಞಾತ ಕ್ರಾಂತಿಕಾರಿ..!!!

-ಭೀಮಸೇನ್ ಪುರೋಹಿತ್

ಭಾಳ ಅಂದ್ರೆ ಆ ಹುಡುಗನಿಗೆ 9-10 ವರ್ಷ ವಯಸ್ಸಿರಬಹುದು.. ಅವತ್ತೊಂದಿನ, ಬೆಳಗಿನ ನಸುಕಿನಲ್ಲಿಯೇ ಎದ್ದು, ತನ್ನೂರಿನಲ್ಲಿ ಹರಿಯುತ್ತಿದ್ದ ಯಮುನಾ ನದಿಗೆ ತೆರಳಿ ಸ್ನಾನ ಮಾಡಿ ಶುದ್ಧನಾದ. ಮಿಂದೆದ್ದು ಬಂದವನೇ, ದಡದ ಮೇಲಿದ್ದ ಕಾಳಿಯ ಗುಡಿಯೆಡೆ ಹೊರಟ.. ಪೂಜೆಗೆ ಹೋಗ್ತಾ ಇರಬಹುದೆಂದು ಎಲ್ಲರೂ ಅನ್ಕೊಂಡಿದ್ರು.. ಆದ್ರೆ ಅವನು ಹೋಗ್ತಿದ್ದಿದ್ದು ಪೂಜೆಗಲ್ಲ, ಪ್ರತಿಜ್ಞೆಗೆ..!!!!!!!!

” ತಾಯೆ, ಆಂಗ್ಲರ ದುರಾಡಳಿತದಲ್ಲಿ ನಲುಗುತಿರುವ ದೇಶದ ಸ್ವಾತಂತ್ರ್ಯವೇ ನನ್ನ ಜೀವನದ ಧ್ಯೇಯ.. ನನ್ನ ಕೊನೆ ಉಸಿರಿನವರೆಗೂ, ಕೊನೆ ರಕ್ತದ ಹನಿ ಪುಟಿಯುವವರೆಗೂ ಭಾರತಿಯ ಸೇವೆಗಾಗಿ ನನ್ನ ಬದುಕು ಮುಡಿಪು”, ಅಂತ ಆ ಸಣ್ಣ ಬಾಲಕ ಶಪಥಗೈದಿದ್ದ..!!!!

ಅವನ ಹೆಸರು “ಗೆಂದಾಲಾಲ್ ದಿಕ್ಷಿತ್”. 1888 ರಲ್ಲಿ, ಉತ್ತರಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಹಳ್ಳಿಯೊಂದರಲ್ಲಿ  ಜನನ. ಸಣ್ಣವನಿಂದಲೂ ದೇಶಭಕ್ತಿಯನ್ನು ಮೈಗೂಡಿಸಿಕೊಂಡಿದ್ದವ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿದ ಮೇಲೆ, DAV ಶಾಲೆಯಲ್ಲಿ ಶಿಕ್ಷಕನಾಗಿ ಸೇರಿಕೊಂಡ..

ಅದು 1905. ‘ಒಡೆದು ಆಳುವ’ ನೀತಿಯನ್ನೇ ಅನುಸರಿಸುತ್ತಿದ್ದ ಆಂಗ್ಲರ ಅಧಿಕಾರಿ “ಲಾರ್ಡ್ ಕರ್ಜನ್” ಬಂಗಾಳವನ್ನು ವಿಭಜಿಸಿದ. ಅವನೇನೋ ಜನರನ್ನು ಒಡೆಯಲು ಹಾಗೆ ಮಾಡಿದ.. ಆದರೆ ಆದದ್ದೇ ಬೇರೆ. ಅವನ ಈ ಕೃತ್ಯಕ್ಕೆ ಇಡೀ ದೇಶವೇ ಎದ್ದು ನಿಂತಿತು. ಎಲ್ಲೆಲ್ಲೂ ಹರತಾಳ, ಮೆರವಣಿಗೆ, ಹೋರಾಟಗಳು ನಡೆದವು. ತಿಲಕರಂತೂ ತಮ್ಮ ಕೇಸರಿ ಪತ್ರಿಕೆಯಲ್ಲಿ ಪ್ರತಿದಿನ, ಬಂಗಾಳ-ವಿಭಜನೆಯ ವಿರುದ್ಧ ಬೆಂಕಿಯ ಬರಹಗಳನ್ನು ಪ್ರಕಟಿಸ್ತಿದ್ರು.. ಅದರ ಕಿಡಿ, ಗೆನ್ದಾಲಾಲನಿಗೂ ಬಡಿಯಿತು. ತಿಲಕರಿಂದ ತುಂಬಾ ಸ್ಫೂರ್ತಿಗೊಂಡ ಗೆಂದಾಲಾಲ್, ಅವರು ಶುರುಮಾಡಿದ ಶಿವಾಜಿ-ಉತ್ಸವ, ಸಾರ್ವಜನಿಕ ಗಣೇಶ-ಉತ್ಸವ ಇದರಿಂದಲೂ ಪ್ರಭಾವಿತನಾದ. ಶಿವಾಜಿಯ ಚರಿತೆಯನ್ನು ಓದಿ, ಆ ಛತ್ರಪತಿಯ ಸಂಘಟನಾ ಕೌಶಲ್ಯ, ಧೈರ್ಯಗಳಿಂದ ಉತ್ತೇಜಿತಗೊಂಡ. ಗೆಂದಾಲಾಲ್ ಸಣ್ಣವನಿದ್ದಾಗ ಮಾಡಿದ್ದ ಪ್ರತಿಜ್ಞೆ ಈಡೇರುವ ಕಾಲ ಆಗ ಬಂದಿತ್ತು.. ಅದರ ಫಲವೇ, ಭಾರತದ ಕ್ರಾಂತಿ ಇತಿಹಾಸದಲ್ಲಿ, ಮತ್ತೊಂದು ಕ್ರಾಂತಿ ಸಂಘಟನೆಯ ಜನನ..

ಮತ್ತಷ್ಟು ಓದು »

8
ಡಿಸೆ

ಸಂಸ್ಕೃತಿ ಸಂಕಥನ – ೧೩ ಬಾಲಗಂಗಾಧರರ ಸೂಕ್ಷ್ಮದರ್ಶಕದಲ್ಲಿ ಕೋಲಾರದ ಘಟನೆ

– ರಮಾನಂದ ಐನಕೈ

ಇತ್ತೀಚೆಗೆ ಕೋಲಾರದ ಭಗವದ್ಗೀತಾ ಅಭಿಯಾನದ ಸಂದರ್ಭದಲ್ಲಿ ಸ್ವರ್ಣವಲ್ಲೀ ಸ್ವಾಮೀಜಿಯವರಿಗೆ ಹಾಗೂ ಭಗವದ್ಗೀತೆಗೆ ಅವಮಾನ ಮಾಡಿದ ಘಟನೆಯ ಹಿಂದೆ ಅನೇಕ ತಪ್ಪು ತಿಳುವಳಿಕೆಗಳು ಕೆಲಸ ಮಾಡಿವೆ. ಮೇಲ್ನೋಟಕ್ಕೆ ನೋಡಿದರೆ ಇದೊಂದು ರಾಜಕೀಯ ಚದುರಂಗದಾಟ ಎಂಬುದು ಸ್ಪಷ್ಟ. ಹಿಂದೆ ಇದೇ ಭಗವದ್ಗೀತಾ ಅಭಿಯಾನ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಕಳೆದ ವರ್ಷ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಲ್ಲೆಲ್ಲೂ ನಡೆಯದ ಭಯಂಕರ ವಿರೋಧ ಕೋಲಾರದಲ್ಲೇ ಏಕೆ ನಡೆಯಿತು? ಅದನ್ನು ಅರಿತುಕೊಳ್ಳುವ ಅಗತ್ಯ ಇದೆ.

ಕೋಲಾರದಲ್ಲಿ ಕಾರ್ಮಿಕ ವರ್ಗ ಪ್ರಬಲವಾಗಿದೆ. ಹಾಗಾಗಿ ಇಲ್ಲಿ ಕಮ್ಯುನಿಸ್ಟ್ ಪಾರ್ಟಿಯ ಪ್ರಾಬಲ್ಯ ಇದೆ. ಜೊತೆಗೆ ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟು ಹಾಕಿದ ಕೃಷ್ಣಪ್ಪ ಇದೇ ಜಿಲ್ಲೆಯವರು. ದಲಿತ ಹೋರಾಟವೂ ಈ ಜಿಲ್ಲೆಯಲ್ಲಿ ಹೆಚ್ಚು ಜೀವಂತವಾಗಿದೆ. ಈ ಕಾರಣಕ್ಕಾಗಿ ಅವರು ಭಗವದ್ಗೀತಾ ಅಭಿಯಾನವನ್ನು ಭಾರತೀಯ ಜನತಾ ಪಾರ್ಟಿಯ ಪ್ರೊಪಗಾಂಡಾ ಎಂಬಂತೆ ಗ್ರಹಿಸಿರುವ ಸಾಧ್ಯತೆ ಇದೆ. ಇಂದು ಭಾರತೀಯ ಸಮಾಜಶಾಸ್ತ್ರವನ್ನು ನಿರ್ಣಯಿಸುತ್ತಿರುವುದು ಇಂಥ ತಪ್ಪು ತಿಳುವಳಿಕೆಗಳೆ. ಭಗವದ್ಗೀತೆ ಅಂದರೆ ಬ್ರಾಹ್ಮಣರದ್ದು, ಮೇಲ್ವರ್ಗದ್ದು ಎಂಬ ನಂಬಿಕೆ ಇದೆ. ಇತ್ತೀಚೆಗೆ ಎಸ್.ಎಫ್.ಐ. ರಾಜ್ಯ ಉಪಾಧ್ಯಕ್ಷರ ಸಂದರ್ಶನದಲ್ಲೂ ಇದು ಸ್ಪಷ್ಟವಾಗಿದೆ. ಭಾಜಪಾ ಮೇಲ್ವರ್ಗದವರ ಪಕ್ಷ. ಹಾಗಾಗಿ ಭಗವದ್ಗೀತೆಯ ಪ್ರಚಾರದ ಮೂಲಕ ಪಕ್ಷ ಬಲಪಡಿಸುತ್ತಿದ್ದಾರೆಂಬ ತಿಳುವಳಿಕೆಯೂ ಇರಬಹುದು.

ಮತ್ತಷ್ಟು ಓದು »