ವಿಷಯದ ವಿವರಗಳಿಗೆ ದಾಟಿರಿ

Archive for

28
ಡಿಸೆ

“ಯೂನಿವರ್ಸಲ್ ಬ್ರದರ್‌ಹುಡ್” ಬರೀ ಬೂಟಾಟಿಕೆಯೇ ?

-ಸಾಗರ್ ಮೈಸೂರು

ಸ್ವಾಮೀ,
ಯಾಕೆ ಮುಗ್ಧ ಜನರ ತಲೆಯಲ್ಲಿ ವಿಷದ ಬೀಜ ಬಿತ್ತುತ್ತಿದ್ದೀರಿ? ನೀಮಗೂ ಭಯೋತ್ಪಾದಕರನ್ನು ಹುಟ್ಟು ಹಾಕುವ ಮುಲ್ಲಾ ಗಳಿಗೂ ಅಥವಾ ಭಾಷಾ ದುರಭಿಮಾನಿಗಳಿಗೂ ಏನು ವ್ಯತ್ಯಾಸ? ಸಾಮರಸ್ಯದಿಂದ ಬದುಕುವ ಬಗೆ ಹೇಗೆಂದು ತಿಳಿದಿದ್ದರೆ ಬರೆಯಿರಿ. ಇಲ್ಲಾಂದ್ರೆ ಸುಮ್ಮನಿರಿ. ನಿಮ್ಮನ್ತವರನ್ತು ಬರೆದು , ಬೆಂಕಿ ಹಚ್ಚಿ ತಣ್ಣಗೆ ಕುಳಿತು ಚಂದ ನೋಡುತ್ತಿರಿ. ಅಮಾಯಕರು ನಿಮ್ಮಿಂದ ಪ್ರೇರಿತರಾಗಿ ಯಾರದೋ ಮೈಮೇಲೆ ಬಿದ್ದು ಸಮಾಜದ ಶಾಂತಿ ಕದದುತ್ತಾರೆ ಅಥವಾ ಜೀವ ಬಿಡುತ್ತಾರೆ. ದುರಭಿಮಾನ, ಭಯೋತ್ಪಾದನೆ ಹುಟ್ಟುವುದು ಮೊದಲು ಮನಸ್ಸಿನಲ್ಲಿ. ಪ್ರೇರಿತರದವರು ಕೆಲವರು ಚಾಕು ಬಳಸುತ್ತಾರೆ, ಕೆಲವರು ಬಾಂಬು ಹಾಕುತ್ತಾರೆ, ಅವರವರ ಯೋಗ್ಯತೆಗೆ ತಕ್ಕಂತೆ. ನಿಮ್ಮಂಥವರು ಚಂದ ನೋಡುತ್ತೀರಿ.
“ಬೆಂಗಳೂರಿನ ಜುಟ್ಟು ಈಗಾಗಲೇ ರೆಡ್ಡಿಗಳ ಕೈಯ್ಯಿಗೆ ಕೊಟ್ಟಾಗಿದೆ” ಎಂದು ಮಹಾನ್ ಮೇಧಾವಿಯೊಬ್ಬರು (ಹಾಗೆಂದು ತಿಳಿದ) ಹೇಳಿದಾಗ ಅದ್ಯಾವನೋ ‘ವಿಷ್ಣು’ ಎಂಬುವವ ನೀಡಿದ್ದ ‘ಪ್ರತಿಕ್ರಿಯೆ’ ಅದು! ಹೌದಾ?! ಅದು ನಿಜಾನಾ? ನಮ್ಮ ಬೆಂಗಳೂರನ್ನ ನಿಜವಾಗಿಯೂ ‘ಅನ್ಯರು’, ‘ಕನ್ನಡೇತರರು’ ಆಳುತ್ತಿದ್ದಾರಾ ಎಂಬ ಪ್ರಶ್ನೆಯನ್ನ ನಮಗೆ ನಾವೇ ಹಾಕಿಕೊಂಡು serious ಆಗಿ ‘ಪರೀಕ್ಷಿಸಲು’ ಹೊರಟರೆ ಆ ‘ವಿಷ್ಣು’ ಎಂಬುವವನ ‘ಅಡ್ರಸ್ಸ್ ಹುಡುಕು’ವ ಮನಸ್ಸಾಗುತ್ತದೆ! ಅವನಿಗೊಂದು ವಿಶೇಷವಾದ ‘ದೊಣ್ಣೆ’ ರೆಡಿಮಾಡಿಸುವ ಕನಸು ಮೂಡುತ್ತದೆ!! ಆ ಮೇಧಾವಿ ಎಂಬ ಪತ್ರಕರ್ತ ಯಾವಾಗ ನೋಡಿದರೂ ‘ಭಾರತ’, ‘ಭಾರತೀಯತೆ’ ಎಂದು ಕಿರುಚಾಡುವವ. ಅಂಥವನೇ “ಪರಭಾಷಿಕರನ್ನ ಮಟ್ಟ ಹಾಕದಿದ್ದರೆ ಅಪಾಯ ತಪ್ಪಿದ್ದಲ್ಲ” ಎಂಬ ಸತ್ಯವನ್ನ ಕಂಡುಕೊಂಡಿದ್ದಾನೆ ಎಂದರೆ, ಅದರ ಮಹತ್ವವನ್ನ ನೀವೇ ಅರ್ಥಮಾಡಿಕೊಳ್ಳಿ.

ಮತ್ತಷ್ಟು ಓದು »