ವಿಷಯದ ವಿವರಗಳಿಗೆ ದಾಟಿರಿ

Archive for

29
ಡಿಸೆ

ಕೋಲ್ಕತ್ತಾದಲ್ಲಿ ಕುವೆಂಪು

-ಪ್ರೊ. ಬಿ ಎ ವಿವೇಕ ರೈ

ಕನ್ನಡದ ಯುಗದ ಕವಿ ಕುವೆಂಪು (೨೯ ದಶಂಬರ ೧೯೦೪-೧೦ ನವಂಬರ ೧೯೯೪ )  ಅವರು ತಮ್ಮ ಜೀವಮಾನದಲ್ಲಿ ಕರ್ನಾಟಕದಿಂದ ಹೊರಗೆ ಪ್ರಯಾಣ ಮಾಡಿದ್ದು ಎರಡೇ ಬಾರಿ. ಮೊದಲನೆಯದು ೧೯೨೯ರಲ್ಲಿ ಕಲ್ಕತ್ತಾಕ್ಕೆ ಪ್ರಯಾಣ.ಅಲ್ಲಿ ಬೇಲೂರು ರಾಮಕೃಷ್ಣ ಮಠದಲ್ಲಿ ಸ್ವಾಮಿ ಶ್ರದ್ಧಾನಂದರಿಂದ ಮಂತ್ರ ದೀಕ್ಷೆ ಪಡೆದದ್ದು. ಎರಡನೆಯದು ಜ್ಞಾನಪೀಠ ಪ್ರಶಸ್ತಿ ಸ್ವೀಕರಿಸಲು ಎಲ್ಲ ಆಪ್ತರ ಒತ್ತಾಯದ ಮೇಲೆ ದೆಹಲಿಗೆ ಹೋದದ್ದು ೧೯೬೮.ಅವರ ಕಲ್ಕತ್ತಾದ ಭೇಟಿಯ ವೇಳೆಗೆ ಅವರಿಗೆ ಸುಮಾರು ಇಪ್ಪತ್ತೈದು ವರ್ಷ ಪ್ರಾಯ.ಅದೇ ವರ್ಷ ಅವರು ಎಂ ಎ ಮುಗಿಸಿದ್ದು.ಕಲ್ಕತ್ತಾ ಸಂದರ್ಶನ ಮತ್ತು ರಾಮಕೃಷ್ಣ ಆಶ್ರಮದ  ದರ್ಶನ ಕುವೆಂಪು ಬದುಕಿನ ಮೇಲೆ ಅಪಾರ ಪ್ರಭಾವವನ್ನು ಬೀರಿತು.ಅವರ ಸಾಹಿತ್ಯದ ದ್ರವ್ಯಗಳನ್ನು ರೂಪಿಸಿತು.

ಅಂತಹ ಕಲ್ಕತ್ತಾದಲ್ಲಿ ,ಅಂದರೆ ಈಗಿನ ಕೊಲ್ಕೊತ್ತಾದಲ್ಲಿ ‘ಕುವೆಂಪು’ ಬಗ್ಗೆ ಎರಡು ದಿನಗಳ ರಾಷ್ಟೀಯ ವಿಚಾರಸಂಕಿರಣ ಮೊನ್ನೆ ಮತ್ತು ನಿನ್ನೆ (ಸಪ್ಟಂಬರ ೧೦ ಮತ್ತು ೧೧ ) ನಡೆಯಿತು.ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಕುಪ್ಪಳಿಯ ಕುವೆಂಪು ಪ್ರತಿಷ್ಠಾನ ಜಂಟಿಯಾಗಿ ನಡೆಸಿದ ಈ ಮಹತ್ವದ ಸಂಕಿರಣಕ್ಕೆ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಸಂಸ್ಥೆ ಮತ್ತು ಕನ್ನಡ ವಿಶ್ವವಿದ್ಯಾಲಯ ಸಹಯೋಗ ಕೊಟ್ಟಿದ್ದವು.ವಿಚಾರಸಂಕಿರಣ ನಡೆದದ್ದು ಕೇಂದ್ರ ಸಾಹಿತ್ಯ ಅಕಾಡೆಮಿಯ ಕಲ್ಕತ್ತಾದ ಪ್ರಾದೇಶಿಕ ಕಚೇರಿಯಲ್ಲಿ .

ಮತ್ತಷ್ಟು ಓದು »

29
ಡಿಸೆ

ವಿಶ್ವಮಾನವನ ಜನುಮದಿನವಿಂದು