ವಿಶಿಷ್ಟ ಸ್ಯೆಕಲ್ಲಿನ ಬೆಲ್ಜಿಯಂ ಜೋಡಿ
-ಗೋವಿಂದ ನೆಲ್ಯಾರು
ನಡುರಾತ್ರೆ ಎಪಿ ಸುಬ್ರಮಣ್ಯಂ ಅವರಿಂದ ಸತತ ನನ್ನ ಸಂಪರ್ಕ ಪ್ರಯತ್ನ. ನಾನು ರಾತ್ರಿ ಬೇಗ ಮಲಗುವ ವ್ಯಕ್ತಿ. ಅದುದರಿಂದ ನಿದ್ದೆಯ ಮದ್ಯೆ ಕಿವಿಗೊಟ್ಟು ಎಲ್ಲಕ್ಕೂ ಹೂಂಗುಟ್ಟಿದೆ. ಎರಡು ಜನ ಎರಡು ಪೆಡಲ್ ಎರಡು ಚಕ್ರದ ಗಾಡಿ ಯಾವುದೂ ಸ್ಪಷ್ಟವಾಗಿ ಅರ್ಥವಾಗಿರಲಿಲ್ಲ. ಕಿವಿ ಸಮಸ್ಯೆಯೂ ನನಗುಂಟು. ಮರುದಿನ ಮಾಮೂಲಿ ಒಂಬತ್ತು ಕಿಮಿ ದೂರದ ತ್ರಿಚಕ್ರ ತಿರುಗಾಟದಿಂದ ಹಿಂತಿರುಗಿದ ನಂತರ ನಮ್ಮ ಸುಬ್ಬಣ್ಣ ಮೊದಲು ಮಾತನಾಡಿದ ಅನಿಲ ಪರದೇಶಿ ಸೈಕಲಿಗರ ಬೇಟಿಯಾದೆಯಾ ? ಎನ್ನುವಾಗಲೇ ನನಗೆ ಎಚ್ಚರವಾದುದು, ಒಂದು ಅವಕಾಶ ತಪ್ಪಿಸಿಕೊಂಡೆನಾ ? ಕೂಡಲೇ ಸುಬ್ರಮಣ್ಯಂ ಅವರ ಪುನಹ ಸಂಪರ್ಕಿಸಿದೆ. ಅವರು ಸೈಕಲ್ ಸವಾರರ ಜಾಲತಾಣದ ವಿಳಾಸವೂ ಚೂರು ಪ್ರವಾಸದ ವಿವರವನ್ನೂ ಕೊಟ್ಟರು. http://eurasia.cyclic.eu/
ನೋಡಿದರೆ ಅವರಿರುವುದು ಜರ್ಮನಿಯ ಪ್ರಖ್ಯಾತ ಹೇಸ್ ಕಂಪೇನಿಯ ಪಿನೊ ಎನ್ನುವ ಇಬ್ಬರು ಪ್ರಯಾಣಿಸಬಹುದಾದ ಸೈಕಲು. ಪ್ರಾಯುಶ: ಈ ಸೈಕಲು ಇನ್ನೊಮ್ಮೆ ನೋಡುವ ಅವಕಾಶ ಸಿಗುವುದು ದುರ್ಲಬ. ಕೂಡಲೆ ಪೆಡಲಿಸಿದೆ ರಸ್ತೆ ಬದಿಗೆ. ಕಾಲು ಗಂಟೆಯೊಳಗೆ ಅವರು ಆಗಮಿಸಿದರು. ಒಬ್ಬ ಸೈಕಲ್ ಆಸಕ್ತ ನಿಮಗೆ ದಾರಿಯಲ್ಲಿ ಸಿಗಬಹುದೆಂಬ ಸೂಚನೆ ಮೊದಲೇ ಸುಬ್ಬಣ್ಣ ಅವರಿಗಿತ್ತಿದ್ದರು ಅನಿಸುತ್ತದೆ.
ಮತ್ತಷ್ಟು ಓದು
ಒನ್ ಟು ತ್ರೀ ವಿಷ್ಣುವರ್ಧನ
– ಫಿಲ್ಮಿ ಪವನ್
ಏನ್ರಿ ಗ್ರಹಚಾರ, ಏನೇ ಹೇಳಿ ಮೊದಲ ಸರಿ ಬರದಾಗ ಬಾರೋ ಮಜಾ ಎರಡನೇ ಸರಿ ಬರಲ್ಲ. ಇ ಬರಹಾನ ಮೊದಲೇ ಬರೆದಿದ್ದೆ, ನನ್ನ ಗ್ರಹಚಾರ ಸರಿ ಇಲ್ದೆ ಬರೆದಿದ್ದ ಬರಹವೆಲ್ಲ ಹೇಗೋ ಮಿಸ್ ಆಗೋಗಿತ್ತು.ಎರಡು ದಿನ ಅಷ್ಟು ಕಷ್ಟ ಪಟ್ಟು ಬರೆದು ವೇಸ್ಟ್ ಆಯ್ತಲ್ಲ ಅಂತ ಫೀಲಿಂಗ್ ಅಲ್ಲಿದ್ದೆ. ಈಗ ಮತ್ತೆ ಬರಿತ ಇದ್ದೀನಿ. ಹೇಗಿದ್ಯೋ ನೀವೇ ಹೇಳ್ಬೇಕು. ಮೊದಲ ಬರಹದಲ್ಲಿದ್ದೆ ಬಹಳಷ್ಟು ಪಾಯಿಂಟ್ ಗಳು ಇಲ್ಲಿ ಖಂಡಿತ ಮಿಸ್ ಆಗಿರುತ್ತೆ.
ನಮ್ಮೂರಿನ ಡಬ್ಬ ಥಿಯೇಟರಲ್ಲಿ ಒಂದಾದ ವೆಂಕಟೇಶ್ವರದಲ್ಲಿ, ವಿಷ್ಣುವರ್ಧನ ಫಿಲಂ ಬಂದೈತೆ ಅಂತ ಸರ್ಕಲ್ ನಲ್ಲಿ ಹಾಕಿರೋ ದೊಡ್ಡ ಪೋಸ್ಟರ್ಗಳು ನೋಡಿದಾಗ ತಿಳೀತು, ಹಾಗೇ ಗೆಳೆಯ ಯಾದವ್ ಗೆ ಫೋನ್ ಮಡಿ ಮಗ bioscope ಅಂದೇ. ಲೇ ಅಪ್ಪಿ ನ ಈಗ ನ ಶಿವಾಜಿನಗರದಲ್ಲಿದ್ದಿನಿ, ಬರಕ್ಕೆ ಇನ್ನ ಬಹಳ ಹೊತ್ತಾಗುತ್ತೆ ಇವಿನಿಂಗ್ ಶೋ ಹೋಗಣ ಅಂದ. ನಾನು ಮಗ ಸಿನಿಮ ಚೆನ್ನಾಗಿದ್ರೆ ಇನ್ನೊಂದು ಸಲಿ ನೋಡನ, ಕಾಯಕ್ಕಂತು ಸಾಧ್ಯ ಇಲ್ಲ ಅಂತ ಹೇಳಿ ನಮ್ ಮುರುಗನ್ ಚಿಪ್ಸ್ ಅಂಗಡಿಲಿ 100gm ಸೈಕಲ್ ಚಿಪ್ಸ್ ತಗೊಂಡು ಟಾಕಿಸ್ ಅಲ್ಲಿ 50 ರು ಟಿಕೆಟ್ ತೊಗೊಂಡು ಸಿನಿಮ ಹಾಲ್ ಅಲ್ಲಿ ಕೂತೆ.
7up ಆಡ್ ಅಲ್ಲಿ ಕೂದಲು ಮೇಲಕ್ಕೆ ಮಾಡಿಕೊಂಡಿರೋ ಬೊಂಬೆ ತಾರಾ ಇದ್ದ ಒಂದು ಕಾರ್ಟೂನ್ ಬಂದು, ನಾನೆ ದಿರೆಕ್ಟೊರ್ ಕಣ್ರೀ ಅಂತು. ನ ನಂಬಲಿಲ್ಲ ಅದ್ರು ಸಿನಿಮದ ಯಾವ ಪ್ರಚಾರ ಕಾರ್ಯಕ್ರಮದಲ್ಲೂ ನಿರ್ದೇಶಕರನ್ನು ನೋಡೇ ಇಲ್ಲ ಎಲ್ಲಿ ನೋಡಿದರು ಖಿಲಾಡಿ ಕುಳ್ಳ ಮತ್ತು ನಾಯಕ ನಾಯಕಿಯರು. ಹಾಗಾಗಿ ಇ 7up ಬೊಂಬೆನೆ director ಅಂದ್ಕೊಂಡು ಕೂತೆ. ಬಂದ ನಿರ್ದೇಶಕ ಜೇಬಲ್ಲಿ ಮೊಬೈಲ್ ಇದ್ದೀಯ ನೋಡ್ಕೊಲ್ರಿ ಅಂದಾಗ ಸಿನಿಮಾ ಹಾಲ್ ಅಲ್ಲಿ ಇದ್ದ 50 ಭಾಗದಷ್ಟು ಜನ ಒಮ್ಮೆ ಮೊಬೈಲ್ ಮುಟ್ಟಿ ನೋಡ್ಕೊಂಡಿದ್ದು ನಿಜ. ನಾ ಕೂಡ ನೋಡಿ, ಮೊಬೈಲ್ ನ ಸೈಲೆಂಟ್ ಮೋಡ್ ಗೆ ಹಾಕಿದೆ. ಒಪೆನಿಂಗ್ ರೀಲ್ ಅಲ್ಲೇ ಇದು ಸಾಹಸ ಸಿಂಹನಿಗೆ ಅವನ ಆಪ್ತಮಿತ್ರನ ಅರ್ಪಣೆ ಎಂಬ ಮಾತು ದ್ವಾರಕೀಶ್ ಅವರ ಧ್ವನಿಯಲ್ಲಿ ಕೇಳಿ ಬಂತು. ಸುದೀಪ್ introduction ಡಿಟ್ಟೋ ಆಪ್ತಮಿತ್ರ ಮೊದಲನೇ ಸಾಹಸ ದೃಶ್ಯದಂತೆ ಮಾಡಿದ್ದರು. ಡೈಲಾಗು ಫೈಟು ಎಲ್ಲ same t same. ಎಲ್ಲೋ ಒಂದು ಮುಲೆಯಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ನಮ್ಮೊಡನೆ ಇಲ್ಲ ಎಂಬ ನೋವನ್ನು ಸಾಹಸ ದೃಶ್ಯದ ಮೂಲಕ ನಿರ್ದೇಶಕರು ಬಹಳ ಜಾಣ್ಮೆಯಿಂದ ತೆರೆಯ ಮೇಲೆ ಮುಡಿಸಿದ್ದರು.
ಪುನರ್ಜನ್ಮ ಪರಿಕಲ್ಪನೆಯ ಕುರಿತು ಆಸಕ್ತಿ ಇರುವವರು ಓದಲೇ ಬೇಕಾದ ಪುಸ್ತಕ
– ಗೋವಿಂದ ರಾವ್ ವಿ ಅಡಮನೆ
ನಾನೀಗ ಶಿಫಾರಸ್ಸು ಮಾಡುತ್ತಿರುವುದು ಒಂದು ಇಂಗ್ಲಿಷ್ ಪುಸ್ತಕ. ಈ ಪುಸ್ತಕ ೧೯೫೦ ರಲ್ಲಿ ಪ್ರಕಟವಾದ ಪುಸ್ತಕವಾದರೂ ಜನಪ್ರಿಯತೆ ಇನ್ನೂ ಕುಗ್ಗಿಲ್ಲ. ಅದರ ವಿಷಯವೇ ಅಂಥದ್ದು. ಪುನರ್ಜನ್ಮ ಕ್ಕೆ ಸಂಬಂಧಿಸಿದಂತೆ ನಿಮ್ಮದೇ ಆದ ಅಭಿಪ್ರಾಯ ರೂಪಿಸಿಕೊಳ್ಳಲು ನೆರವು ನೀಡಬಲ್ಲ ಪುಸ್ತಕ ಇದು. ನಾನು ಇದನ್ನು ಖರೀದಿಸಿದ್ದು ೧೯೮೨ ರಲ್ಲಿ. ನನ್ನ ಬ್ಲಾಗ್ : ‘ಮಾಡಿದ್ದುಣ್ಣೋ ಮಹಾರಾಯ’- ಒಂದು ವಿಶ್ಲೇಷಣೆ ಬರೆಯಲು ನೆರವು ನೀಡಿದ ಪುಸ್ತಕ ಇದು. ಯಾವುದೇ ವಿಷಯವನ್ನು ಮನೋಗತ ಮಾಡಿಕೊಳ್ಳ ಬೇಕಾದರೆ ಆ ವಿಷಯದ ಮೂಲ ಆಕರವನ್ನೇ ನೋಡು ಎಂಬುದು ನನ್ನ ಅಧ್ಯಾಪಕರು ನನಗೆ ಕಲಿಸಿದ ಅಮೂಲ್ಯ ಪಾಠಗಳಲ್ಲಿ ಒಂದು. ಪುನರ್ಜನ್ಮ ಕುರಿತಾದ ಕುತೂಹಲಜನಕ ಉದಾಹರಣೆಗಳು ಈ ಪುಸ್ತಕದಲ್ಲಿವೆ. ಎಂದೇ, ಈ ವಿಷಯದಲ್ಲಿ ಆಸಕ್ತಿ ಇರುವವರು ನೀವಾಗಿದ್ದರೆ ಈ ಪುಸ್ತಕ ಓದುವುದು ಒಳಿತು ಎಂಬುದು ನನ್ನ ಸಲಹೆ.
ಪುಸ್ತಕದ ಹೆಸರು: Many Manisions – “The Edgar Cayce Story On Reincarnation”. ಬರೆದವರು: Gina Cerminaria [ಗಿನಾ ಸರ್ಮಿನಾರಾ (ಏಪ್ರಿಲ್ ೧೯೧೪ – ಏಪ್ರಿಲ್ ೧೯೮೪). ಮನೋವಿಜ್ಙಾನದಲ್ಲಿ Ph.D ಪದವೀಧರೆ. ವಿಷಯದ ಕುರಿತು ಸುದೀರ್ಘ ಕಾಲ ಸಂಶೋಧನೆ ಮಾಡಿದ ಬಳಿಕ ಪ್ರಕಟಿಸಿದ ಪುಸ್ತಕ ಇದು.] ಪ್ರಕಾಶನ: A Signet Bool from New American Library.
ರಷ್ಯಾದಲ್ಲಿ ಭಗವದ್ಗೀತೆ ನಿಷೇಧಕ್ಕೆ ಯಾಕೀ ಕೂಗಾಟ ?
-ಅರವಿಂದ್
ಮಾಧ್ಯಮಗಳಲ್ಲಿ ಹಾಗೂ ಲೋಕಸಭೆಯಲ್ಲಿ ನೆನ್ನೆಯಿಂದಲೂ ಒಕ್ಕೊರಲಿಗಿನ ವಾದ-ವಿವಾದ. ಬಿಜೆಪಿ ಇನ್ನಿತರ ವಿರೋಧಪಕ್ಷಗಳು, ಹಿಂದೂ ಹೋರಾಟಗಾರರು, ಇಸ್ಕಾನು ಎಲ್ಲರದೂ ಒಂದೇ, ಮಾತು. ರಷ್ಯಾದಲ್ಲಿ ಭಗವದ್ಗೀತೆ ನಿಷೇಧ ಬೇಡವೆಂಬ ಕೂಗು. ಇದ್ಯಾಕೋ ಗೊತ್ತಾಗಲಿಲ್ಲ. ರಷ್ಯಾದಲ್ಲಿ ಭಗವದ್ಗೀತೆ ನಿಷೇಧಿಸಿದರೆ ಭಾರತಕ್ಕಾಗುವ ನಷ್ಟವೇನು ? ಹೇಳಿ ಕೇಳಿ ರಷ್ಯಾ ಕಮ್ಯೂನಿಷ್ಟ್ ದೇಶ. ಆ ದೇಶ ಭಾರತದಂತೆ ಯಾವುದೇ ಧರ್ಮ ತಳಹದಿಯ ಮೇಲೆ ನಿರ್ಮಾಣವಾದ ದೇಶವಲ್ಲ. ಅದು ಧರ್ಮವನ್ನು ಅಫೀಮು ಎಂದುಕೊಂಡ ದೇಶ. ಇಂಥ ದೇಶಕ್ಕೆ ಧರ್ಮಗಳಿಂದ ನಾಗರೀಕರನ್ನು ಉದ್ಧಾರ ಮಾಡುವ ರಾಜಕೀಯವೂ ಇಲ್ಲ. ಇಂಥ ದೇಶದಲ್ಲಿ ಭಗವದ್ಗೀತೆಯಾದರೇನು, ಖುರಾನಾದರೇನು ಇನ್ಯಾವುದೇ…. ಇದ್ದರೇನು ಧರ್ಮಗ್ರಂಥಗಳಿಗೆ ವಿಶೇಷ ಮಾನ್ಯತೆಯೂ ಇಲ್ಲ.
ರಷ್ಯಾಕ್ಕೆ ತನ್ನದೇ ಆದ ಇತಿಹಾಸವಿದೆ, ಕಮ್ಯೂನಿಷ್ಟ್ ಮ್ಯಾನಿಫೆಸ್ಟೋ ಅಲ್ಲಿನ ಧರ್ಮಗ್ರಂಥವಿದ್ದಂತೆ. ಇಂಥ ದೇಶದಲ್ಲಿ ಭಗವದ್ಗೀತೆ ನಿಷೇಧಿಸಬಾರದೆಂಬ ಕೂಗು, ಅದಕ್ಕೆ ಬೇಕಾದ ರಾಜತಾಂತ್ರಿಕತೆಯ ರಾಯಭಾರ ಭಾರತಕ್ಯಾಕೆ ಅಂತ ತಿಳಿಯುತ್ತಿಲ್ಲ. ಹೋರಾಟ ಇವೆಲ್ಲ ಅವಶ್ಯಕತೆ ಇದ್ಯಾ ? ಭಾರತದಲ್ಲಿ ಮುಸಲ್ಮಾನ, ಕ್ರ್ಯೆಸ್ತ ಅನುಯಾಯಿಗಳು ಆ ಧರ್ಮದ ಪ್ರಚಾರ ಕ್ಯೆಗೊಂಡರೆ ಅದು ಮತಾಂತರವಾದರೆ, ರಷ್ಯಾಗೂ ಅದು ಅನ್ವಯಿಸುವುದಿಲ್ಲವೇ ? ನಾನಿಲ್ಲಿ ಯಾವುದೇ ಧರ್ಮ ದೊಡ್ಡದು ವಿಶಾಲವಾದದ್ದೂ ಅನ್ನೋ ತುಲನೆಗೆ ಹೇಳುತ್ತಿಲ್ಲ. ಪ್ರತಿ ದೇಶಕ್ಕೂ ಅದರದ್ದೇ ಆದ ಸಂವಿಧಾನ ಕರಡು ಇರುತ್ತದೆ. ರಷ್ಯಾಕ್ಕೆ ಭಗವದ್ಗೀತೆಯ ಅವಶ್ಯಕತೆಯಿಲ್ಲ ಮತ್ತು ಅಲ್ಲಿ ಭಗವದ್ಗೀತೆಯ ಯಾವುದೋ ಅಧ್ಯಾಯದ ಯಾವುದೋ ಸಾಲು ಅಹಿಂಸೆಯನ್ನು ಸೃಷ್ಠಿಮಾಡುತ್ತದೆ ಎಂಬ ಆಲೋಚನೆಯಿದ್ದರೆ ಇರಲಿ ಬಿಡಿ, ಅದರಿಂದ ನಮಗ್ಯಾವ ನಷ್ಟವೂ ಇಲ್ಲ. ಭಗವದ್ಗೀತೆ ಭಾರತದ ಸಂಸ್ಕೃತಿಗೆ ತಳಹದಿಯಾದರೆ, ಅದು ಭಾರತಕ್ಕಾದೀತು. ರಷ್ಯಾವೂ ಭಾರತದಂತೆ ಪಾಲಿಸಬೇಕು ಅನ್ನುವ ಹಠ ಯಾಕೆ ? ಅದೇನೋ ಆಗಬಾರದ್ದು ಮಾಡಬಾರದ್ದು ಮಾಡುತ್ತಿರುವಂತೆ ಕೂಗಾಡುವ ಅವಶ್ಯಕತೆಯೇನಿದೆ. ಮತ್ತಷ್ಟು ಓದು
ಜನಲೋಕಪಾಲ್ ಜಾರಿಯಿಂದ ಭ್ರಷ್ಟಾಚಾರ ನಾಶವಾಗಲಿದೆಯೇ ?
-ಉಮೇಶ್ ದೇಸಾಯಿ
ಹೌದು ಈ ಪ್ರಶ್ನೆ ಕಾಡುತ್ತಿದೆ. ಬಹುಶಃ ಅನೇಕರಿಗೂ ಈ ಪ್ರಶ್ನೆ ಕಾಡುತ್ತಿರಬಹುದು. ಸ್ವಲ್ಪ ಆರಾಮಾಗಿ ಉತ್ತರ ಹುಡುಕುವ. ಈಗ ನಾವು ನೀವು ವ್ಯವಸ್ಥೆ ಅಥವಾ ಸರಕಾರವನ್ನು ಸುಲಭವಾಗಿ ಟೀಕಿಸುತ್ತೇವೆ.ನಮ್ಮ ದೇಶದಲ್ಲಿ ಅಭಿವ್ಯಕ್ತಿಸ್ವಾತಂತ್ರ್ಯ ಇನ್ನೂ ಇದೆ
ಹೀಗಾಗಿ ನಾವು ಪೆನ್ನಿಂದ,ಕೀಲಿಮಣೆ ಕುಟ್ಟುವುದರಿಂದ ನಮ್ಮ ಕಹಿಭಾವನೆಗಳನ್ನುಮುಕ್ತವಾಗಿ ಕಾರುತ್ತೇವೆ. ಅದು ನಮ್ಮ ಹಕ್ಕು ನಿಜ. ಅದನ್ನು ನಾವು ಚಲಾಯಿಸುತ್ತೇವೆ ಕೂಡ.ಅನೇಕ ರೀತಿಯಲ್ಲಿ ಅಂದರೆ ಫೇಸಬುಕ್, ಟ್ವೀಟರ್ ಹಿಡಿದು ವಾಚಕರ ವಾಣಿವರೆಗೂ ನಮ್ಮ ಆಕ್ರೋಶ ಹರಿಯುತ್ತದೆ. ನಮ್ಮ ಈ ಕಾರುವಿಕೆಯಿಂದ ಏನಾದರೂ ಬದಲಾಗಿದೆಯೇ..
ನಮ್ಮ ಬೀದಿಯಲ್ಲಿ ಹಗಲು ದೀಪ ಉರಿಯುವುದು ಬಂದಾಗಿದೆಯೇ..ನಮ್ಮ ನಲ್ಲಿಯಲ್ಲಿ ನೀರು ನಿರಂತರ ಹರಿಯುತ್ತಿದೆಯೇ ಅಥವಾ ಉಗಿಸಿಕೊಂಡೂ ಕುರ್ಚಿಮೇಲೆ ಕೂಡುವ ರಾಜಕಾರಣಿ ಒಂದರೆಕ್ಷಣ ವಿಚಾರ ಮಾಡಿದ್ದಾನೆಯೇ..? ಈ ಪ್ರಶ್ನೆಗಳಿಗೆ ಪರಿಹಾರ ಸಿಕ್ಕಿಲ್ಲ ಯಾಕೆಂದರೆ ಇವು ನಾವು ಈಗಿರುವ ಸದ್ಯದ ಪರಿಸ್ಥಿತಿಯ ದ್ಯೋತಕ ವಾಗಿವೆ. ಹಾಗೂ ಇವುಗಳಿಗೆ ನಾವು ಚೆನ್ನಾಗಿ ಒಗ್ಗಿಕೊಂಡಿರುವೆವು..ನಮಗೂ ಗೊತ್ತು ಇವುಗಳಿಂದ ಬಿಡುಗಡೆ ಸಾಧ್ಯವಿಲ್ಲ ಅಂತ. ಆದರೇ ಕಾರುವುದು ಇನ್ನೂ ನಿಂತಿಲ್ಲ ..ಈಗ ಅದು ಹೊಸ ಆಯಾಮ ಪಡೆದುಕೊಂಡಿದೆ. ನಮಗೆ ನಮ್ಮ ದನಿ ಕೇಳಿಸಲು ಹೊಸ ಮುಖವಾಡಗಳು ಬಂದಿವೆ…ಅವರನ್ನು ನಾವು ನಮ್ಮನ್ನುಉದ್ಧಾರ ಮಾಡಲೆಂದೆ ಬಂದ ಅವತಾರಪುರುಷ ರನ್ನಾಗಿ ನೋಡುತ್ತಿದ್ದೇವೆ..ಜೈಕಾರ ಹೇಳುತ್ತಿದ್ದೇವೆ.
ಆಧುನಿಕ ವಿಕ್ರಮಾದಿತ್ಯ, ಬೇತಾಳನೂ ಮತ್ತು ಕುರುನಾಡ ಉಳಿಸಿ ವೇದಿಕೆಯ ವ್ಯಥೆಯೂ…
-ಸಾತ್ವಿಕ್ ಎನ್ ವಿ
ಎಂದಿನಂತೆ ಬೇತಾಳವು ಲೇಡಿಸ್ ಹಾಸ್ಟೆಲ್ ಎದುರಿಗಿನ ಹುಣಸೆ ಮರದ ತನ್ನ ಕೊಂಬೆಯ ಮೇಲೆ ನೇತಾಡುತ್ತಿತ್ತು. ರಸ್ತೆ ಅಗಲೀಕರಣವಾಗುವಾಗ ತನ್ನ ಮರಕ್ಕೂ ಎಲ್ಲಿ ಕೊಡಲಿ ಬೀಳುತ್ತದೋ ಎಂಬ ಭಯ ಇದ್ದುದರಿಂದ ತರಗತಿಯಲ್ಲಿರುವ ಸಭ್ಯ ವಿದ್ಯಾರ್ಥಿಯಂತೆ ಒಂದೇ ಕಣ್ಣಿನಲ್ಲಿ ನಿದ್ದೆ ಮಾಡುತ್ತಿತ್ತು. ಇಂಥ ಸ್ಥಿತಿಯಲ್ಲಿ ವೋಟರ್ ಐಡಿಯಲ್ಲಿರುವ ಫೋಟೋದಂತೆ ಮುಖ ಮಾಡಿಕೊಂಡು ವಿಕ್ರಮರಾಜನು ಬೇತಾಳವನ್ನು ಸೆಳೆದುಕೊಂಡು ಹೋಗಲು ಧಾವಿಸಿದನು. ಆಗ ಬೇತಾಳವು ‘ನಿನಗಂತೂ ಕೆಲಸವಿಲ್ಲ. ಪದೇಪದೇ ಬಂದು ನನ್ನನ್ನು ಹೊತ್ತುಕೊಂಡು ಹೋಗುತ್ತಿಯಾ. ಆದರೆ ಒಮ್ಮೆಯೂ ನೀನು ನಿನ್ನ ಕೆಲಸದಲ್ಲಿ ಉತ್ತೀರ್ಣನಾಗಿಲ್ಲ. ಇದೆಲ್ಲ ನೋಡಿದರೆ ಮುಂದಿನ ಜನ್ಮದಲ್ಲಿ ನೀನು ಎಂಜಿನಿಯರಿಂಗ್ ವಿದ್ಯಾರ್ಥಿಯಾಗುವ ಎಲ್ಲ ಅರ್ಹತೆಗಳಿವೆ’ ಎಂದಿತು.
ಇದೆಲ್ಲವನ್ನೂ ತಲೆಗೆ ತೆಗೆದುಕೊಳ್ಳದ ವಿಕ್ರಮನು, ಮುಂದೆ ಮಕ್ಕಳು ತಮ್ಮನ್ನು ನೋಡಿಕೊಳ್ಳುತ್ತಾರೆ ಎಂಬ ಭರವಸೆ ಇಲ್ಲದಿದ್ದರೂ ಮಕ್ಕಳಿಗೆ ಒಳಿತನ್ನೇ ಬಯಸುವ ಪಾಪದ ತಂದೆತಾಯಿಗಳ ಹಾಗೆ ತನ್ನಷ್ಟಕ್ಕೆ ತನ್ನ ಕಾರ್ಯದಲ್ಲಿ ನಿರತನಾದನು. ಇವನ ಹಸುತನವನ್ನು ಗಮನಿಸಿದ ಬೇತಾಳದ ಮನಸ್ಸು ಕರಗಿ ವಿಕ್ರಮನೇ, ನಿನ್ನ ಕಾರ್ಯಶ್ರದ್ಧೆಯನ್ನು ಮೆಚ್ಚಿದ್ದೇನೆ. ಪದೇ ಪದೇ ವಿಫಲನಾದರೂ ಸ್ವಮೇಕ್ ಚಿತ್ರವನ್ನೇ ಮಾಡುವ ಕನ್ನಡ ನಿರ್ದೇಶಕನಂಥ ನಿನ್ನ ಅಚಲ ನಿರ್ಧಾರವನ್ನು ಗೌರವಿಸುತ್ತೇನೆ. ದಾರಿ ಸವೆಯಲಿ ಎಂದು ಕಥೆಯೊಂದನ್ನು ಹೇಳುತ್ತೇನೆ ಎಂದು ಹೇಳಿ ವಿಕ್ರಮನ ಅನುಮತಿಯನ್ನೂ ಕಾಯದೇ ಕಥೆಯೊಂದನ್ನು ಹೇಳಲು ಪ್ರಾರಂಭಿಸಿತು. ಮತ್ತಷ್ಟು ಓದು
ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಇಂದು ಮತ್ತು ಮುಂದು
-ಓಂ ಶಿವಪ್ರಕಾಶ್
(ಗಂಗಾವತಿಯಲ್ಲಿ ನೆಡೆದ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಧುನಿಕ ಜಗತ್ತು ಮತ್ತು ಕನ್ನಡ ಗೋಷ್ಠಿಯಲ್ಲಿ ಮಾಡಿದ ಭಾಷಣದ ಪ್ರತಿ )
ನಮಸ್ಕಾರ ಗಂಗಾವತಿ. ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಇಂದು ಮತ್ತು ಮುಂದು, ಈ ವಿಷಯವನ್ನು ಮಂಡಿಸುವ ಮುನ್ನ ಒಂದು ಸಣ್ಣ ರಿಯಾಲಿಟಿ ಚೆಕ್. ತಂತ್ರಜ್ಞಾನ ನಮಗೆಲ್ಲಿ ಅರ್ಥವಾಗುತ್ತದೆ ಎನ್ನುವಿರಾ? ಕನ್ನಡದಲ್ಲಿ ವಿಷಯವನ್ನು ಪ್ರಸ್ತಾಪಿಸಿದಲ್ಲಿ ರಾಕೆಟ್ ತಂತ್ರಜ್ಞಾನವನ್ನೂ ಕೂಡ ನೀವು ಅರ್ಥ ಮಾಡಿಕೊಳ್ಳಬಲ್ಲಿರಿ. ಆದ್ದರಿಂದ ಚಿಂತೆ ಬೇಡ. ನಮ್ಮಲ್ಲಿ ಎಷ್ಟು ಜನರ ಬಳಿ ಮೊಬೈಲ್ ಫೋನ್ ಇದೆ? ಅದರಲ್ಲಿ ಕನ್ನಡ ಬರುತ್ತಾ? ಕನ್ನಡದಲ್ಲಿ ಎಸ್.ಎಂ.ಎಸ್ ಬರುತ್ತಾ? ನೀವು ಕನ್ನಡದಲ್ಲಿ ಕಳಿಸಿದ ಎಸ್.ಎಂ.ಎಸ್ ಬೇರೆಯವರ ಮೊಬೈಲ್ ನಲ್ಲಿ ಓದ್ಲಿಕ್ಕಾಗುತ್ತಾ? ಹೌದು / ಇಲ್ಲ ಎಂಬ ಉತ್ತರ ನಮ್ಮದು.
ಮಾಹಿತಿ ತಂತ್ರಜ್ಞಾನ ನಮ್ಮೆಲ್ಲರ ಜೀವನಗಳಲ್ಲಿ ಇಂದು ಹಾಸು ಹೊಕ್ಕಾಗಿದೆ. ಕಿಸೆಯಲ್ಲಿ ಕೂರುವ ಆ ಮೊಬೈಲ್ ಫೋನ್ ಕೂಡ ಮಾಹಿತಿ ತಂತ್ರಜ್ಞಾನದ ಮಹಾಪೂರವನ್ನು ನಿಮ್ಮ ಬೆರಳಂಚುಗಳಲ್ಲಿ ಹರಿಸುವ ಶಕ್ತಿಯನ್ನು ಹೊಂದಿದೆ. ಆದರೆ ಅದರಲ್ಲಿ ಕನ್ನಡ ಒಂದು ಪ್ರಶ್ನೆ. ಮೊಬೈಲ್ಗಳಿಂದ ಹಿಡಿದು ಹತ್ತಾರು ವಿಷಯಗಳಲ್ಲಿನ ಶಿಷ್ಟತೆ/ಸ್ಟಾಂಡರ್ಡ್ಸ್ ನ ಕೊರತೆಯಿಂದಾಗಿ ತಂತ್ರಜ್ಞಾನದಲ್ಲಿ ಕನ್ನಡದ ಬಳಕೆಗೆ ಬಹಳಷ್ಟು ತೊಡಕುಗಳಿವೆ. ಆದರೂ, ಕನ್ನಡ ಮಾಹಿತಿ ತಂತ್ರಜ್ಞಾನದ ಸುತ್ತ ಬೆಳದಿದೆ. ನಿಮಗೆ ಈ ವಿಷಯಗಳನ್ನು ಸುಲಭವಾಗಿ ವಿವರಿಸಲು ಒಂದೆರಡು ಕಥೆಗಳನ್ನು ಹೇಳುತ್ತೇನೆ.
ಮತ್ತಷ್ಟು ಓದು
ರಾಮುಲು ಗೆಲುವು ಬಿಜೆಪಿಗೆ ದಿಗಿಲು
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ (ಈ ಹಿಂದೆ ಕುರಗೋಡು ಕ್ಷೇತ್ರ ಎಂದು ಕರೆಯಲಾಗುತ್ತಿತ್ತು) ಹೆಚ್ಚಾಗಿ ಲಿಂಗಾಯತರೇ ಗೆದ್ದು ಬರುತ್ತಿದ್ದರು. ರಾಮುಲು ಈ ಪರಂಪರೆಯನ್ನು ಮುರಿದಿದ್ದಾರೆ (ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ). ಆದರೆ ಈ ಮುರಿಯುವ ಪ್ರಕ್ರಿಯೆಯಲ್ಲಿ ರಾಜ್ಯದ ಲಿಂಗಾಯತ ಸಮುದಾಯದ ಅನಭಿಷಿಕ್ತ ನಾಯಕ ತಾನೇ ಎಂದು ಸ್ವಯಂಘೋಷಿಸಿಕೊಂಡಿರುವ ಅಥವಾ ಆ ರೀತಿ ತನ್ನ ಭಟ್ಟಂಗಿಗಳಿಂದ ಘೋಷಿಸಲ್ಪಟ್ಟಿರುವ ಯಡಿಯೂರಪ್ಪರಿಗೆ ಒಂದು ರೀತಿಯಲ್ಲಿ ಹೊಡೆತ ಮತ್ತು ಮತ್ತೊಂದು ರೀತಿಯಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿದ್ದಾರೆ. ಮತ್ತಷ್ಟು ಓದು
ಅಗತ್ಯವಿರುವವರಿಗೆ ವಿಮೆ ಕವಚ ಇಲ್ವಾ ?
ಸೂಚನೆ ಕೊಟ್ಟುದಲ್ಲದೆ ಒಬ್ಬ ವಿಮಾ ಅಧಿಕಾರಿಯ ಸಂಪರ್ಕವನ್ನೂ ಶ್ರಿಪಡ್ರೆಯವರೇ ಕಲ್ಪಿಸಿಕೊಟ್ಟರು. ಹಾಗೆ ತಯಾರಿಯ ಗಡಿಬಿಡಿಯಲ್ಲಿಯೇ ಹಲವು ಬಾರಿ ಪುತ್ತೂರಿನ ವಿಮಾ ಕಛೇರಿಗೆ ಓಡಿದೆ. ಇದಕ್ಕೆ ಚಾಸಿ ನಂಬರ್ ಉಂಟಾ, ಆರ್ ಟಿ ಒ ಪರವಾನಿಗೆ ಉಂಟಾ ಇತ್ಯಾದಿ ಪ್ರಶ್ನೆಗಳ ಸರಮಾಲೆ ಮೇಲಿನವರು ರವಾನಿಸಿದರು. ಇಂತಹ ಗಾಡಿಗೆ ಹಿಂದೆ ಯಾವುದೇ ಬಾರತೀಯ ಕಂಪೇನಿ ವೀಮೆ ಕೊಟ್ಟಿರುವ ಸಾದ್ಯತೆ ಇಲ್ಲ. ಹಾಗಾಗಿ ನೀವೆ ಮೊದಲಿಗರಾಗಿರುತ್ತೀರಿ ಎಂದೂ ಹೇಳಿದೆ. ಪ್ರಯೋಜನವಾಗಲಿಲ್ಲ. ಅದರ ನೈಜ ಬೆಲೆ, ಖಚಿತ ಗುರುತು ಮೇಲಿನವರಿಗೆ ಸ್ಪಷ್ಟ ಪಡಿಸಲು ತಿಂಗಳುಗಳೇ ಬೇಕು ಅನಿಸಿತು. ಹಾಗಾಗಿ ಪ್ರವಾಸದ ಅವದಿಗೆ ವೀಮಾ ಕವಚದ ಆಸೆ ಬಿಟ್ಟೆ.
ನನ್ನ ಪ್ರವಾಸದುದ್ದಕ್ಕೂ ಯಾರಲ್ಲೂ ನನ್ನ ತ್ರಿಚಕ್ರದ ನೈಜ ಬೆಲೆ ಹೇಳುತ್ತಿರಲಿಲ್ಲ. ಹತ್ತು ಸಾವಿರವೋ ಅಂದಾಗ ಹೂಂ ಅನ್ನುತ್ತಿದ್ದೆ. ಹದಿನೈದೋ ಅಂದಾಗ ಹೌದು ಅನ್ನುತ್ತಿದ್ದೆ. ಅಂತೂ ಏನೂ ತೊಂದರೆಯಾಗದೆ ಸುಮಾರು ಒಂದೂವರೆ ವರ್ಷಗಳಿಂದ ಸುದಾರಿಸುತ್ತಿದ್ದೇನೆ. ನಮ್ಮೂರಲ್ಲಿ ಇಂತಹ ಬೇರೆ ತ್ರಿಚಕ್ರ ಇಲ್ಲದಿರುವದರಿಂದ ಕಳವು ಸಾದ್ಯತೆ ಕಡಿಮೆ. ಕದ್ದರೂ ಉಪಯೋಗಿಸುವುದು ಕಷ್ಟ. ಆಯಾ ಊರಲ್ಲಿ ನೆಲೆ ಇಲ್ಲದ ಪ್ರವಾಸಿಗಳು ಯಾವಾಗಲೂ ಪುಡಿಕಳ್ಳರ ಬಲಿಪಶು.
* * * * * * * * *
ಚಿತ್ರಕೃಪೆ: 1.bp.blogspot.com
ಸಂಸ್ಕೃತಿ ಸಂಕಥನ -14 -ಏನಿದು ಸೆಕ್ಯುಲರಿಸಂ
ರಮಾನಂದ ಐನಕೈ
ರಿಲಿಜನ್ ಅನ್ನುವುದು ಮನುಷ್ಯ ಚಿಂತನೆಯಿಂದ ಹುಟ್ಟಿದ್ದಲ್ಲ. ಅದು ಗಾಡ್ನ ಕೊಡುಗೆ. ಹಾಗಾಗಿ ರಿಲಿಜನ್ನಿನ ನಂಬಿಕೆ ಹಾಗೂ ಆಚರಣೆ ಎಂಬುದು ಮನುಷ್ಯನಿಗೆ ಗಾಡ್ ಹಾಕಿಕೊಟ್ಟ ಪಾಠ. ರಿಲಿಜನ್ ಅನುಭವಿಸುವುದು ಪ್ರತಿಯೊಬ್ಬ ಕ್ರಿಶ್ಚಿಯನ್ನನ ಹಕ್ಕು. ರಿಲಿಜನ್ ಅನ್ನುವುದು ಮನುಷ್ಯ ನಿರ್ಮಿತ ಪ್ರಭುತ್ವವನ್ನೂ ಮೀರಿದ ಒಂದು ದೈವಿವ್ಯವಸ್ಥೆ ಎಂಬ ಗಾಢವಾದ ನಂಬಿಕೆಯಿದ್ದ ಸಂದರ್ಭದಲ್ಲಿ ಕೆಥೋಲಿಕ್ ಹಾಗೂ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿ ಪಂಥ ರಿಲಿಜನ್ನಿನ ನಂಬಿಕೆಯ ಕುರಿತು ಒಳಜಗಳವನ್ನು ಪಂಚಾಯತಿಗೆ ತಂದಾಗ ಪ್ರಭುತ್ವ ಏನು ಮಾಡಬೇಕು? ಯಾರಿಗೆ ನ್ಯಾಯ ಕೊಟ್ಟರೂ ರಿಲಿಜನ್ನಿಗೆ ಅನ್ಯಾಯವಾಗುತ್ತದೆ. ಇದು ಪ್ರಭುತ್ವದ ಸಂದಿಗ್ಧ ಅಲ್ಲೇ ಹುಟ್ಟಿತು ಈ ಸೆಕ್ಯುಲರಿಸಂ ಎಂಬ ಹೊಸ ವಾಸ್ತವ……………
ದಿನನಿತ್ಯ ಒಂದಲ್ಲಾ ಒಂದು ಕಾರಣಕ್ಕಾಗಿ ನಾವು ‘ಸೆಕ್ಯುಲರಿಸಂ’ ಅನ್ನುವ ಪದವನ್ನು ಉಪ ಯೋಗಿಸುತ್ತೇವೆ. ಸೆಕ್ಯುಲರಿಸಂ ಆಧುನಿಕ ಚಿಂತನೆಯ ಪ್ರಮುಖ ಅಂಗವೇ ಆಗಿದೆ. ಹಾಗಾ ದರೆ ಸೆಕ್ಯುಲರಿಸಂ ಅನ್ನುವುದರ ಅರ್ಥ ಏನು? ನಮ್ಮ ಪರಿಸ್ಥಿತಿ ಏನಾಗಿದೆ ಎಂದರೆ ಸೆಕ್ಯುಲರಿಸಂ ಅಂದರೆ ಮನಸ್ಸಿನಲ್ಲಿ ಅರ್ಥವಾದಂತಾಗುತ್ತದೆ. ಆದರೆ ಅದನ್ನು ಬಾಯಲ್ಲಿ ಹೇಳಲಿಕ್ಕೆ ಬರುವುದಿಲ್ಲ. ಅದಕ್ಕೆ ಕಾರಣ ನಮ್ಮಲ್ಲಿ ಸೆಕ್ಯುಲರಿಸಂನ ಅನುಷ್ಠಾನ ಅಷ್ಟು ಗೋಜಲಾಗಿದೆ. ಹೀಗೆ ಹೇಳಲಿಕ್ಕೆ ಬಾರದ ಸೆಕ್ಯುಲರಿಸಮ್ಮೆ ದೇಶದ ಅನೇಕ ತೊಂದರೆಗಳಿಗೆ ಕಾರಣವಾಗಿದೆಯೋ ಎಂಬುದನ್ನು ಅರಿತುಕೊಳ್ಳ ಬೇಕಾಗಿದೆ. ಸಮಾಜಶಾಸ್ತ್ರದ ಹಕೀಮರಾದ ಬಾಲಗಂಗಾಧರರು ಕರ್ನಾಟಕದ ತುಂಬ ಸಂಚರಿ ಸುತ್ತ ಹೀಗೆ ಹೇಳಲುಬಾರದ ಅನೇಕಾನೇಕ ಸಂಗತಿಗಳನ್ನು ಸುಸಂಬದ್ಧವಾಗಿ ಹೇಳುವ ತಿಳುವಳಿಕೆ ನೀಡುತ್ತಿದ್ದಾರೆ.