ವಿಷಯದ ವಿವರಗಳಿಗೆ ದಾಟಿರಿ

Archive for

16
ಜನ

ಸಂಸ್ಕೃತಿ ಸಂಕಥನ – 18 – ಇಸ್ಲಾಮಿಕ್ ಹಾಗೂ ಯುರೋಪಿಯನ್ ವಸಾಹತುಶಾಹಿ

-ರಮಾನಂದ ಐನಕೈ

ಇತ್ತೀಚೆಗೆ ಮಂಚೀಕೇರಿಯಲ್ಲಿ ಬಾಲಗಂಗಾಧರರ ಸಂವಾದ ಕಾರ್ಯಕ್ರಮ ಏರ್ಪಡಿಸ ಲಾಗಿತ್ತು. ಮುಂಚೀಕೇರಿಯ ಸಂಹತಿ ಟ್ರಸ್ಟ್ ಹಾಗೂ ಶಿವಮೊಗ್ಗ ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಂಹತಿ ಗೆಳೆಯರು ತುಂಬಾ ಅಚ್ಚುಕಟ್ಟಾಗಿ ಸಂಘಟಿಸಿದ್ದರು. ನೂರಕ್ಕೂ ಹೆಚ್ಚು ಜನ ಸಂವಾದದಲ್ಲಿ ಪಾಲ್ಗೊಂಡು ಪ್ರಶ್ನೆಗಳ ಸುರಿಮಳೆ ಗೈದರು. ಬೇರೆ ಬೇರೆ ಪ್ರಶ್ನೆಗಳಿಗೆ ಬಾಲ ಗಂಗಾಧರರು ನೀಡಿದ ಉತ್ತರಗಳನ್ನು ಒಂದು ಚೌಕಟ್ಟಿನಲ್ಲಿ ಹಿಡಿದಿಡುವ ಪ್ರಯತ್ನ ಇಲ್ಲಿದೆ.

ಭಾರತ ತನ್ನ ಇತಿಹಾಸದಲ್ಲಿ ಎರಡು ವಸಹಾತು ಶಾಹಿಗಳನ್ನು ಕಂಡಿದೆ. ಇಸ್ಲಾಮಿಕ್ ಹಾಗೂ ಯುರೋಪಿಯನ್ ವಸಾಹತುಶಾಹಿ. ಇವೆರಡೂ ಕೂಡಾ ಸೆಮೆಟಿಕ್ ರಿಲಿಜನ್ ಹೊಂದಿದ ಸಂಸ್ಕೃತಿ ಯಿಂದ ಬಂದಂತಹವುಗಳು. ಇವರು ಪ್ರಪಂಚದ ಎಲ್ಲ ಸಂಸ್ಕೃತಿಗಳಲ್ಲಿ ರಿಲಿಜನ್ ಇದೆ ಎಂದು ನಂಬಿ ದವರು, ಭಾರತಕ್ಕೆ ಬಂದಾಗ ಇಲ್ಲಿನ ಸಂಸ್ಕೃತಿ ಯಲ್ಲೂ ರಿಲಿಜನ್ ಹುಡುಕಲು ಪ್ರಾರಂಭಿಸಿದರು. ಅದು ಅವರಿಗೆ ಸುಲಭಕ್ಕೆ ಸಾಧ್ಯವಾಗಲಿಲ್ಲ. ಸೆಮೆಟಿಕ್ ರಿಲಿಜನ್ಗಳ ಕನ್ನಡಕ ಹಾಕಿಕೊಂಡು ಹುಡುಕಿದರು. ಕೊನೆಗೂ ‘ಹಿಂದೂಯಿಸಂ’ ಎಂಬ ರಿಲಿಜನ್ನನ್ನು ಕಂಡುಹಿಡಿದೇಬಿಟ್ಟರು. ಹಿಂದೂ ರಿಲಿಜನ್ ಅಂದರೆ ಪಾಶ್ಚಾತ್ಯರಿಗೆ ಮಾತ್ರ ಅರ್ಥ ವಾಗುತ್ತದೆ. ಭಾರತೀಯರಿಗೆ ಅರ್ಥವಾಗುವು ದಿಲ್ಲ. ಏಕೆಂದರೆ ಭಾರತದ ಹೆಚ್ಚಿನ ಜನರಿಗೆ ಹಿಂದೂ ರಿಲಿಜನ್ನಿನ ಅನುಭವವೇ ಆಗುವುದಿಲ್ಲ. ರಿಲಿಜ ನ್ನಿನ ಯಾವುದೇ ಸರಳ ರೇಖೆಗಳು ನಮ್ಮಲ್ಲಿಲ್ಲ. ದಿನನಿತ್ಯ ನಮ್ಮ ನಡುವೆ ಕಾಣುವ ಗೊಂದಲಗಳು ರಿಲಿಜನ್ ಹಾಗೂ ಸಂಸ್ಕೃತಿಯ ನಡುವಿನ ಹೊಂದಾಣಿಕೆ ಆಗದ ತಿಕ್ಕಾಟಗಳು, ಆದರೆ ಇದು ವರೆಗೆ ಯಾವ ಭಾರತೀ ಯನೂ ಈ ಕುರಿತು ಸಂಶೋಧನೆ ನಡೆಸದೇ ಇದ್ದದ್ದು ಆಶ್ಚರ್ಯದ ವಿಷಯ. ಪಾಶ್ಚಿಮಾತ್ಯರು ಭಾರತದ ಕುರಿತಾದ ತಮ್ಮ ಅನುಭವಗಳನ್ನು ಹೇಳಿ ಕೊಳ್ಳುತ್ತ ಬಂದರು. ಅವರ ಅನುಭವಗಳನ್ನೇ ಭಾರತೀಯರು ತಮ್ಮ ನಿಜ ಎಂದು ನಂಬಿಕೊಳ್ಳುತ್ತ ಬಂದರು. ಅವರ ಅನುಭವಗಳನ್ನೇ ಈಗ ನಮ್ಮ ಅನುಭವಗಳೆಂಬಂತೆ ಪುನರಾವರ್ತಿಸುತ್ತಿದ್ದೇವೆ. ಇದನ್ನೇ ವಸಾಹತು ಪ್ರಜ್ಞೆ ಅನ್ನುವುದು. ಬಾಲ ಗಂಗಾಧರರು ಈ ಕುರಿತು ಸಂಶೋ ಧನೆ ನಡೆಸುತ್ತಿರುವ ದೇಶದ ಹಾಗೂ ಪ್ರಪಂಚದ ಪ್ರಪ್ರಥಮ ಚಿಂತಕರು.

ಮತ್ತಷ್ಟು ಓದು »