ಮಧುರ ಪಿಸುಮಾತಿಗೆ, ಅದರ ತುಸು ಪ್ರೀತಿಗೆ
– ಪ್ರಸಾದ್.ಡಿ.ವಿ
ಜನವರಿ ೧, ಸದಾ ನನ್ನ ನೆನಪಿನಲ್ಲುಳಿಯುವ ದಿನ. ಅದು ನವ ವಸಂತದ ಆರಂಭವೆಂಬ ಕಾರಣಕ್ಕೆ ಮಾತ್ರವಲ್ಲ. ನನ್ನ ಜೀವನದಲ್ಲಿನ ಒಂದು ಅನಿರೀಕ್ಷಿತ ತಿರುವು, ಒಂದು ಸುಮಧುರ ಯಾತನೆಯಾಗಿ ಉಳಿದ ಕಾರಣದಿಂದ. “ಆತ(?)” ನನ್ನ ಜೀವನದಲ್ಲಾಡಿದ ಆಟವನ್ನು ನಾನೆಂದಿಗೂ ಮರೆಯುವಂತಿಲ್ಲ..! ಇಂದು ಆ ಕ್ಷಣವನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇನೆ.
ನನ್ನ ಕ್ಯಾಂಟೀನ್ ಪುರಾಣದಲ್ಲಿ “ನಾನು ನಿನ್ನನ್ನು ನನ್ನ ಜೀವದ ಗೆಳೆಯನೆಂದು ತಿಳಿದಿದ್ದೇನೆಯೇ ಹೊರತು ನಲ್ಲನಾಗಿ ಅಲ್ಲ” ಎಂದು ಆಕೆ ನನ್ನ ಪ್ರೀತಿಗೆ ಅಲ್ಪವಿರಾಮವಿಟ್ಟಿದ್ದಳು..! ನನಗೋ ಅದ್ಯಾವುದಕ್ಕೂ ಹೊಂದಿಕೊಳ್ಳಲಾಗದೆ ಸ್ನೇಹಕ್ಕೆ ಪ್ರೀತಿಯನ್ನು ತ್ಯಾಗ ಮಾಡಿದ ಅಮರ ಪ್ರೇಮಿಯಾಗಿದ್ದೆ. ಆನಂತರದಲ್ಲಿ ಆಕೆ ಮತ್ತೊಂದು ಕತೆ ಹೇಳಲು ಶುರುವಚ್ಚಿದ್ದಳು. ನಾನು ಒಬ್ಬ ಹುಡುಗನನ್ನು ಪ್ರೇಮಿಸಿದ್ದೇನೆ, ಆತನನ್ನು ನನ್ನ ಜೀವದ ಗೆಳೆಯನಾದ ನಿನಗೆ ಪರಿಚಯಿಸಬೇಕೆಂದು ಹೇಳಿದಳು.ನನಗೋ ಹೃದಯದಲ್ಲಿ ಹೇಳಿಕೊಳ್ಳಲೂ, ತಾಳಿಕೊಳ್ಳಲೂ ಆಗದ ತಳಮಳ. ನನ್ನವಳೆಂದು ತಿಳಿದವಳು ನನ್ನೆದುರಿಗೆ ಮತ್ತೊಬ್ಬನನ್ನು ಪ್ರೀತಿಸುವುದು ಸಹಿಸಲಾಗದ ನೋವನ್ನು ನೀಡಿತ್ತು, ನಿದ್ರೆ ಬಿಟ್ಟ ಉದಾಹರಣೆಗಳೂ ಉಂಟು. ಇವೆಲ್ಲವುಗಳ ನಡುವೆಯೇ ಆಕೆ ಮತ್ತು ಆಕೆಯ ಮನೆಯವರೊಂದಿಗೆ ನಿಮಿಷಾಂಬಾ ದೇವಿಯ ದರ್ಶನವೂ ಆಗಿತ್ತು. ಅವಳ ಕುಟುಂಬದ ಎಲ್ಲ ಸದಸ್ಯರೂ ನನಗೆ ತುಂಬಾ ಹಿಡಿಸಿದ್ದರು ಆಕೆ ಅಂದು ನನ್ನೊಂದಿಗೆ ಏನನ್ನೋ ಹೇಳಲು ಚಡಪಡಿಸಿದ್ದಳು, ನಾನು ಆ ನಿಮಿಷಾಂಬಾ ದೇವಿಗೆ ನನ್ನ ಪ್ರೀತಿಯನ್ನು ‘ನಮ್ಮ ಪ್ರೀತಿಯಾಗಿ’ ಮಾಡೆಂದು ಅರ್ಜಿ ಹಾಕಿದ್ದೂ ಆಗಿತ್ತು.
ಹರೆಯ
–ಸತೀಶ್ ರಾಮನಗರ
ಹೆಂಡ ಕುಡಿದ ಕೋತಿಯಂತ ಮನಸ್ಸು
ಎಲ್ಲಂದರಲ್ಲೇ
ಕಾರಿಕೊಳ್ಳುವ ಕನಸುಗಳು
ಹಾದಿ ತಪ್ಪಿದ ಗಮ್ಯ
ಲಗ್ಗೆಯಿಟ್ಟಲ್ಲೆಲ್ಲ ಕಾಮನ ಚಿತ್ರಗಳೇ….!
ಕಣ್ಣು ಹಾಯಿಸಿದಲ್ಲೆಲ್ಲ
ಉಬ್ಬು ತಗ್ಗುಗಳ ಮೆರೆವಣಿಗೆ
ಬೆರಗಿನಾಕರ್ಷಣೆ
ನಿಂತಲ್ಲೇ ಬಿಸಿಯುಸಿರ ಸ್ನಾನ
ಕಣ್ಣ ತುಂಬೆಲ್ಲ ನಕ್ಷತ್ರಗಳೇ ….!
ಜಾರುವ ಮನಸಿನೋಳಗೊಂದು
ಹಸಿ ಬಿಸಿ ಬಯಕೆಗಳ ಮೇಲಾಟ…!
ಬೆವರ ವಾಸನೆಗೆ
ಕನಸಿನೂರಿನ ಬಾಗಿಲ ಬಡಿದು
ಒಮ್ಮೆ ಇಣುಕುವಾಸೆ…,
ಆವೇಗ ಆವಿಯಾಗುವ ಮೊದಲೇ
ಹೊಸಲೋಕವನ್ನೊಮ್ಮೆ ಸ್ಪರ್ಶಿಸಿ
ಪ್ರಕೃತಿಯಲಿ ಲೀನವಾಗಿ
ಬೀಗುವಾಸೆ…..?
ಚಿತ್ರಕೃಪೆ :poojary-manase.blogspot.in
ಶ್ರಾದ್ಧ … ಆಚರಣೆ
-ಪ್ರಕಾಶ್ ನರಸಿಂಹಯ್ಯ
ಹುಟ್ಟು ಅಂದಮೇಲೆ ಸಾವು ನಿಶ್ಚಿತ. ಹುಟ್ಟಿನೊಂದಿಗೆ ಪ್ರಾರಂಭವಾಗುವ ಜೀವನ ಯಾತ್ರೆ ಮರಣದೊಂದಿಗೆ ಮುಗಿಯುತ್ತವೆ. ಅಂತ್ಯಸಂಸ್ಕಾರ ನಡೆಯುತ್ತವೆ . ನಂತರದಲ್ಲಿ ಮೃತ ವ್ಯಕ್ತಿಗೆ ಹಲವಾರು ಸಂಸ್ಕಾರಗಳು ನಡೆಯುತ್ತವೆ. ಸತ್ತ ದಿನದಿಂದ ಹದಿನಾಲ್ಕು ದಿನಗಳವರೆಗೆ ಹಲವಾರು ರೀತಿಯ ಕರ್ಮಗಳನ್ನು ಅವರವರ ಪದ್ದತಿಗನುಸಾರವಾಗಿ ಮತ್ತು ಸಂಪ್ರದಾಯದಂತೆ ಮಾಡುತ್ತಾರೆ. ಮೃತ ವ್ಯಕ್ತಿಯ ಮಕ್ಕಳು ಸಾಮಾನ್ಯವಾಗಿ ಈ ಕರ್ಮವನ್ನು ಮಾಡುತ್ತಾರೆ.ನಂತರದಲ್ಲಿ ಪ್ರತಿ ವರ್ಷ ಮೃತರ ನೆನಪಿನಲ್ಲಿ ಶ್ರಾದ್ಧ ಕರ್ಮಅಥವಾ ತಿಥಿ ಎಂಬ ಹೆಸರಿನಲ್ಲಿ ಆಚರಣೆ ಮಾಡುವುದು ರೂಡಿಯಲ್ಲಿದೆ.
ಸಂಸ್ಕೃತಿ ಸಂಕಥನ – 19 – ವಿಚಾರಕ್ಕೂ ಆಚಾರಕ್ಕೂ ಏನು ಸಂಬಂಧ ?
-ರಮಾನಂದ ಐನಕೈ
ನಮ್ಮೂರಿನಲ್ಲಿ ಒಬ್ಬರು ವಿಚಾರವಂತರಿದ್ದಾರೆ. ನಿಜವಾಗಲೂ ಅವರು ಚಿಂತಕರೆ, ನಾವೆಲ್ಲ ತಮಾಷೆಗಾಗಿ ಅವರನ್ನು ಸೆಕ್ಯುಲರ್ ಚಿಂತಕರು ಎಂದು ಕರೆಯುತ್ತೇವೆ. ಯಾವತ್ತೂ ವೇದಿಕೆಯ ಮೇಲೆ ಅವರು ನಾಸ್ತಿಕತೆಯ ಕುರಿತಾಗಿ ಮಾತನಾಡುತ್ತಾರೆ. ದೇವರುಗಳನ್ನು ಟೀಕಿಸುತ್ತಾರೆ. ಗ್ರಾಮೀಣ ಜನರ ಆಚಾರಗಳು ಮೌಢ್ಯವೆಂದು ಗುರುತಿಸುತ್ತಾರೆ. ಹೊರಗೆ ಬಂದಾಗ ಹೆಂಡ, ಸಿಗರೇಟುಗಳೆಲ್ಲ ಅವರ ಆಪ್ತ ಸಂಗಾತಿಗಳು. ಆದರೆ ಆ ವ್ಯಕ್ತಿ ಅವರ ಊರಿನಲ್ಲಿ ಒಬ್ಬ ಪೂಜಾರಿ. ಮನೆಯಲ್ಲಿ ಕರ್ಮಠ ಆಸ್ತಿಕರು. ಜಪ-ತಪ, ಮಡಿ-ಮೈಲಿಗೆ ಮುಂತಾದವುಗೆಳೆಲ್ಲವೂ ಅವರ ನಿತ್ಯಕರ್ಮಗಳು. ಜ್ಯೋತಿಷ್ಯ, ಶಕುನ ಮುಂತಾದವುಗಳೆಲ್ಲದರಲ್ಲೂ ಪ್ರವೀಣರು. ಶನಿವಾರ ಅವರ ಮನೆ ಮುಂದೆ ಜನರ ಸರದಿ ಇರುತ್ತದೆ. ಈ ವ್ಯಕ್ತಿಯನ್ನು ನಾವು ಯಾವ ರೀತಿ ಅರ್ಥೈಸೋಣ? ಸಾರ್ವಜನಿಕವಾಗಿ ಅವರು ವ್ಯಕ್ತಪಡಿಸುವ ವಿಚಾರಗಳು ನಿಜವೇ ಇರುತ್ತದೆ. ವೈಯಕ್ತಿಕವಾಗಿ ಅವರು ವ್ಯಕ್ತಪಡಿಸುವ ವಿಚಾರಗಳು ನಿಜವೇ ಇರುತ್ತದೆ. ವೈಯಕ್ತಿಕವಾದ ಅವರ ಆಚರಣೆಯೂ ಶುದ್ಧವಾಗಿರುತ್ತದೆ. ಇವೆರಡರಲ್ಲಿ ಯಾವುದು ತಪ್ಪು ಅನ್ನಲು ಸಾಧ್ಯ? ಇದೇ ಭಾರತದ ಆಧುನಿಕ ವಿಚಾರವಾದಿಗಳ ಸಮಸ್ಯೆ.
ವಿಜ್ಞಾನಿಯೊಬ್ಬರು ದೇವರ ಫೋಟೋ ಪೂಜಿಸುವುದು, ದೇವಸ್ಥಾನಕ್ಕೆ ಹೋಗುವುದು ಹಾಸ್ಯಾಸ್ಪದ ಅನಿಸುತ್ತದೆ. ಲಕ್ಷ್ಮೀ ಪೂಜೆಯ ದಿನ ಕಂಪ್ಯೂಟರಿಗೆ ಬಿಳಿಪಟ್ಟೆ ಎಳೆದು ಪೂಜಿಸಿದರೆ ನಗು ಬರುತ್ತದೆ. ಸೂರ್ಯ, ಚಂದ್ರ ಭೂಮಿಯ ಪರ್ಯಟನದಿಂದಾಗಿ ಗ್ರಹಣವಾಗುತ್ತದೆ ಎಂಬ ವೈಜ್ಞಾನಿಕ ಸತ್ಯ ನಮಗೆ ಗೊತ್ತಿದೆ. ಆದರೂ ಉಪವಾಸ ಇರುತ್ತೇವೆ. ದೇವರನ್ನು ಮುಳುಗಿಸಿಬಿಡುತ್ತೇವೆ. ಮನೆಯ ಬಿಟ್ಟು ರಸ್ತೆಗೇ ಬರುವುದಿಲ್ಲ. ಗ್ರಹಣದ ನಂತರ ಸ್ನಾನ ಮಾಡುತ್ತೇವೆ. ಯಾಕೆ? ತಿಳಿದಿರುವುದೊಂದು ಮಾಡುವುದೊಂದು, ಹೇಳುವುದೊಂದು ಮಾಡುವುದೊಂದು. ಇದನ್ನೇ ಸೋಗಲಾಡಿತನ ಎಂದು ಟೀಕಿಸುತ್ತೇವೆ.
ಐಶ್ವರ್ಯ ಕಳೆದು ಹೋದಾಗ….!!
ಪುಟ್ಟನಿಗೆ ಕ್ರಿಕೆಟ್ ಎಂದರೆ ಪ್ರಾಣ, ಹರಿದ ಚಡ್ಡಿ ಹಾಕಿಕೊಂಡು ತೂತು ಬನಿಯನ್ನಲ್ಲೇ ಮರದ ತುಂಡೊಂದನ್ನು ಹಿಡಿದು ಆಡಲು ಹೋಗುತಿದ್ದ. ಕೈಗೆ ಸಿಕ್ಕಿದ ಉದ್ದಗಿನ ವಸ್ತುಗಳೆಲ್ಲಾ ಅವನ ಕೈಲಿ ಬ್ಯಾಟ್ ಆಗಿಬಿಡುತಿತ್ತು. ಅದಕ್ಕೆ ಬಹಳಾನೆ ಉದಾಹರಣೆಗಳು. ತೆಂಗಿನ ಮೊಟ್ಟೆ, ಮರದ ರಿಪೀಸು, ಅಷ್ಟೇ ಯಾಕೆ ಅಮ್ಮನ ಮುದ್ದೆ ಕೆಲಕುವ ಕೋಲನ್ನು ಬಿಡುತ್ತಿರಲಿಲ್ಲ. ಪುಟ್ಟನ ಅಪ್ಪ ರೈತ, ಪಾರ್ಟ್ ಟೈಮ್ ಎಲೆಕ್ಟ್ರಿಕ್ ಕೆಲಸ ಸಹ ಮಾಡುತಿದ್ದರು. ಮನೆಲಿ ೨ ಸೀಮೆ ಹಸುಗಳು ಸಹ ಇದ್ದವು, ಅಪ್ಪ ಎಲೆಕ್ಟ್ರಿಕ್ ಕೆಲಸಕ್ಕೆ ಸಾಮಾನ್ಯವಾಗಿ ಸಂಜೆ ಹೋಗುತಿದ್ದರು
ಪುಟ್ಟ ಅಷ್ಟು ಹೊತ್ತಿಗೆ ಶಾಲೆಯಿಂದ ಮನೆಗೆ ಬರುತಿದ್ದ. ಬರುವಾಗಲೇ ಆಟದ ಕನಸು ಹೊತ್ತು ಬರುತಿದ್ದ ಪುಟ್ಟ ಅಪ್ಪ ಲೋ ಮಗ ನಾನು ಕೆಲಸಕ್ಕೆ ಹೋಗ್ತಾ ಇದ್ದೇನೆ ಹಸುಗಳನ್ನ ಚೆನ್ನಾಗಿ ನೋಡ್ಕೋ ಅಂತ ಹೇಳುತಿದ್ದರು. ಅಪ್ಪನ ಮಾತಿಗೆ ಇಲ್ಲ ಎನ್ನದೆ ಮುಖ ಸೊಟ್ಟಗೆ ಮಾಡ್ಕೊಂಡು ಆಯ್ತು ಅಂತಿದ್ದ. ಆಗ ಅಪ್ಪ ಲೋ ಮಗನೆ ನಿಮ್ಮೊಳ್ಳೇದಕ್ಕೆ ಕಣೋ ದುಡೀತಾ ಇರೋದು ಬೇಜಾರು ಮಾಡ್ಕೋಳದೆ ಹೋಗೋ ಅನ್ನೋರು. ಪುಟ್ಟ ಸಹ ಸ್ವಲ್ಪ ಮೂತಿ ಸೊಟ್ಟ ಮಾಡ್ಕೊಂಡು ಹಸು ಮೇಸಕ್ಕೆ ಕೆರೆ ಬಯಲಿಗೆ ಹೋಗ್ತಾ ಇದ್ದ.
ಕೆರೆ ಬಯಲಲ್ಲಿ ಪುಟ್ಟನ ತರಹವೇ ಇನ್ನೂ ಸುಮಾರು ಹುಡುಗರು ಬರುತಿದ್ದರು. ಹಸುಗಳನ್ನು ಬಯಲಲ್ಲಿ ಬಿಟ್ಟು ಎಲ್ಲರೂ ಸೇರಿ ಕಲ್ಲನ್ನು ವಿಕೆಟ್ನಂತೆ ಜೋಡಿಸಿ ತಮ್ಮಲ್ಲೇ ತಂಡಗಳನ್ನಾಗಿ ಮಾಡಿಕೊಂಡು ಸೂರ್ಯ ಬೈದು ಮನೇಗೆ ಹೋಗ್ರೋ ಅನ್ನೋವರೆಗು ಆಡುತಿದ್ದರು. ಪುಟ್ಟ ಒಳ್ಳೆಯ ಬೌಲರ್ ಆಗಿದ್ದ. ಬಹಳ ದೂರದಿಂದ ಓಡಿ ಬರದಿದ್ದರೂ ವೇಗವಾಗಿ ಚೆಂಡು ಎಸೆಯುವ ತಂತ್ರಗಾರಿಕೆ ಅವನಲ್ಲಿತ್ತು. ಆಗಾಗ ಲೆಗ್ ಸ್ಪಿನ್ ಹಾಕುತಿದ್ದ ಇದ್ದಕ್ಕಿದ್ದಂತೆ ಆಫ್ ಸ್ಪಿನ್ ಹಾಕುತಿದ್ದ. ಅವನ ಎಸತದಲ್ಲೇ ವೇಗವಾಗಿ ಸ್ಪಿನ್ ಆಗತಿದ್ದುದ್ದನ್ನು ಆಡಲಾಗದೆ ಬ್ಯಾಟಿಂಗ್ ಮಾಡುತ್ತಿರುವರೆಲ್ಲ ತತ್ತರಿಸುತಿದ್ದರು. ಎಲ್ಲಾ ಆಡಿದ ನಂತರ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ಹಸುಗಳನ್ನು ಕರೆದುಕೊಂಡು ಮನೆಗೆ ಮರಳುತಿದ್ದರು. ಮತ್ತಷ್ಟು ಓದು
ಭಗವಾನ್ ರಮಣ ಮಹರ್ಷಿಗಳ ಸಂದೇಶ – 2
–ಪ್ರಕಾಶ್ ನರಸಿಂಹಯ್ಯ
ತನ್ನ ತಾನು ಅರಿಯಲು ಬ್ರಹ್ಮಜ್ಞಾನ ಪ್ರಾಪ್ತಿಯಾಗಬೇಕೆ?. ಈ ಬ್ರಹ್ಮಜ್ಞಾನ ಪಡೆಯಲು ಸಾಮಾನ್ಯರಿಗೆ ಸಾಧ್ಯವೇ? ಈ ಪ್ರಶ್ನೆಯನ್ನು ಭಗವಾನ್ ರಮಣ ಮಹರ್ಷಿಗಳಲ್ಲಿ ಒಬ್ಬ ವಿದೇಶಿ ಭಕ್ತ ನಿವೇದಿಸಿಕೊಂಡ.
ಆಗ ಮಹಷಿಗಳು ಕೊಟ್ಟ ಸ್ಪಷ್ಟ ಉತ್ತರ ಏನೆಂದರೆ “ಬ್ರಹ್ಮಜ್ಞಾನವೆಂಬುದು ಸಂಪಾದಿಸುವ ವಿದ್ಯೆಯಲ್ಲ; ಬ್ರಹ್ಮಜ್ಞಾನ ಪಡೆಯುವುದರಿಂದ ಸಂತೋಷ ವಾಗಿರಬಹುದೆಂದು ಆಶಿಸಿದರೆ ಇದೊಂದು ತಪ್ಪು ಗ್ರಹಿಕೆ. ನಿಮ್ಮೊಳಗಿರಬಹುದಾದ ಈ ತಪ್ಪುಗ್ರಹಿಕೆ ಹೇಗಿದೆಯೆಂದರೆ ಹತ್ತು ಜನ ಧಡ್ಡರು ನದಿದಾಟಿದಂತಿದೆ.” ಎಂದು ಒಂದು ಕಥೆಯನ್ನು ಹೇಳಲು ಪ್ರಾರಂಭಿಸಿದರು. ” ಹತ್ತು ಜನ ಧಡ್ಡರು ನದಿ ದಾಟಲು ಸಿದ್ದರಾದರು. ಎಲ್ಲರೂ ಈಜಿ ದಡವನ್ನು ಸೇರಿದರು. ದಡ ಸೇರಿದ ನಂತರ ಎಲ್ಲರೂ ಬಂದು ತಲುಪಿರವರೆ, ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕೆಂದು ತಂಡದ ನಾಯಕನು ಎಲ್ಲರ ತಲೆಯನ್ನು ಎಣಿಸಿದ. ಒಂಬತ್ತು ಜನ ಮಾತ್ರ ಲೆಕ್ಕಕ್ಕೆ ಸಿಕ್ಕಿದರು. ಪುನಃ ಎಣಿಸಿದ, ಆಗಲು ಅಷ್ಟೇ! ಮತ್ತೊಬ್ಬನನ್ನು ಕರೆದು ಎಲ್ಲರನ್ನು ಸಾಲಾಗಿ ನಿಲ್ಲಿಸಿ ಎಣಿಸಲು ಹೇಳಿದ. ಆಗಲೂ ಒಂಬತ್ತು ಜನರೇ! ನಾಯಕನಿಗೆ ಗಾಭರಿ ಆಯ್ತು. ಏನೂ ತೋಚದೆ ಎಲ್ಲರು ಅಳಲು ಪ್ರಾರಂಭಿಸಿದರು. ಇವರ ಅಳುವನ್ನು ಕೇಳಿ ದಾರಿಯಲ್ಲಿ ಬರುತ್ತಿದ್ದ ದಾರಿಹೋಕ ಏನೆಂದು ವಿಚಾರಿಸಿದ. ನಾಯಕ ಎಲ್ಲವನ್ನು ವಿಸ್ತಾರವಾಗಿ ವಿವರಿಸಿದ. ದಾರಿಹೋಕ ಸುಮ್ಮನೆ ಎಣಿಸಿನೋಡುವಾಗ ಸರಿಯಾಗಿ ಹತ್ತು ಜನರಿದ್ದರು. ಆಗ ಎಲ್ಲರನ್ನು ಸಾಲಾಗಿ ನಿಲ್ಲಿಸಿ ಎಲ್ಲರ ಬೆನ್ನು ಮೇಲೆ ಒಂದೊಂದು ಪೆಟ್ಟು ಕೊಡುತ್ತ ಎಣಿಸಿದ. ಎಲ್ಲರು ಸೇರಿ ಹತ್ತು ಜನರಾದರೆಂದು ತಿಳಿದಮೇಲೆ ಸಂತೋಷಗೊಂಡ ದಡ್ಡರು ದಾರಿಹೋಕನನ್ನು ಕೊಂಡಾಡಿದರು. ಹತ್ತೂ ಜನರು ತಮ್ಮ ಪ್ರಯಾಣವನ್ನು ಮುದುವರೆಸಿದರು.” ಕಥೆಯನ್ನು ಮುಗಿಸಿ ಒಂದು ಕ್ಷಣ ಸುಮ್ಮನಾದರು.
ಮಿಡ್ನಾಪುರದಲ್ಲಿ ಕ್ರಾಂತಿಯ ಕಲರವ…
– ಭೀಮಸೇನ್ ಪುರೋಹಿತ್
ಬಂಗಾಳದ ತೋಟದಿಂದ, ತಾಯಿ ಭಾರತಿಗೆ ಪೂಜಿತಗೊಂಡ ಕ್ರಾಂತಿಯ ಹೂವುಗಳು ಅಸಂಖ್ಯ,ಅಂಥಾ ಒಬ್ಬ ಯುವಕನ ಸ್ಮರಣೆ ಇದು.
ಮಿಡ್ನಾಪುರ ಅನ್ನೋದು ಬಂಗಾಳದ ಒಂದು ಜಿಲ್ಲೆ. “ಅನುಶೀಲನ ಸಮಿತಿ”ಯ ಪ್ರಭಾವದಿಂದ ಅನೇಕ ಯುವಕ ಕ್ರಾಂತಿಕಾರಿಗಳು ಅಲ್ಲಿ ಬೆಳೆದಿದ್ರು..ಮಿಡ್ನಾಪುರದಲ್ಲಿ ಇದ್ದ ಆಂಗ್ಲ ಅಧಿಕಾರಿಗಳು ಅತಿಕ್ರೂರತನದಿಂದ ಆಳ್ವಿಕೆ ನಡೆಸ್ತಿದ್ರು.
ಅಲ್ಲಿನ ಮ್ಯಾಜಿಸ್ಟ್ರೇಟ್ ಗಳಂತೂ, ಕ್ರಾಂತಿಕಾರಿಗಳ ಮೇಲೆ ಕೇಸುಗಳನ್ನ ಹಾಕಿ, ವಿವಿಧ ಶಿಕ್ಷೆಗಳನ್ನ ವಿಧಿಸ್ತಿದ್ರು.ಹೀಗಾಗಿಯೇ, ಮಿಡ್ನಾಪುರದ ಯುವಕರು ಆಲ್ಲಿನ ಬ್ರಿಟಿಷರಿಗೆ ಒಂದು ಬಿಸಿ ಮುಟ್ಟಿಸಿದರು. ತಮ್ಮ ಜಿಲ್ಲೆಗೆ ಒಬ್ಬ ಭಾರತೀಯನನ್ನು ಮ್ಯಾಜಿಸ್ಟ್ರೇಟ್ ಮಾಡೋ ವರೆಗೂ, ಉಳಿದ ಆಂಗ್ಲ ಮ್ಯಾಜಿಸ್ಟ್ರೇಟ್ ಗಳನ್ನ ಕೊಲ್ತಿವಿ ಅಂತ..ಬ್ರಿಟಿಷರು ಇದನ್ನು ಅಷ್ಟೊಂದು ಪರಿಗಣಿಸಲಿಲ್ಲ.
ಆಗ ಅಲ್ಲಿಗೆ ‘ಜೇಮ್ಸ್ ಪ್ಯಾಡಿ’ ಅನ್ನೋನು ಮ್ಯಾಜಿಸ್ಟ್ರೇಟ್ ಆಗಿ ಬಂದ. ಪ್ರತಿಜ್ಞೆ ಮಾಡಿದ್ದ ಕ್ರಾಂತಿಕಾರಿಗಳು, ಅದೊಂದು ಸಮಾರಂಭದಲ್ಲಿ, ಅತಿಥಿಯಾಗಿ ಬಂದಿದ್ದ ಅವನನ್ನು ಗುಂಡು ಹಾರಿಸಿ ಕೊಂದೇ ಬಿಟ್ಟರು. ಬ್ರಿಟಿಷರು ಕಲ್ಕತ್ತೆಯಿಂದ ವೈದ್ಯರನ್ನು ಕರೆಸಿದರು. ವೈದ್ಯರು ಪ್ಯಾಡಿ ಯಾ ದೇಹದಿಂದ ಗುಂಡುಗಳನ್ನು ಹೊರತೆಗೆದರೂ, ಅವನನ್ನು ಬದುಕಿಸಲಾಗಲಿಲ್ಲ.. ಯುವಕರ ನಿಲುವು ಸ್ಪಷ್ಟವಾಗಿತ್ತು. ಆಂಗ್ಲರು ಈಗ ಸ್ವಲ್ಪ ಚಿನ್ತಿಸಲಾರಮ್ಭಿಸಿದರು..
ಆನಂತರ ‘ಡಾಗ್ಲಾಸ್’ ಎಂಬ ಆಂಗ್ಲನನ್ನು ಮತ್ತೆ ಮ್ಯಾಜಿಸ್ಟ್ರೇಟ್ ಆಗಿ ನಿಯೋಜಿಸಿದರು.. ಆತ ಮೊದಲಿಂದಲೂ ಹೆದರಿದ್ದ.ಅದೊಮ್ಮೆ “ಡಿಸ್ಟ್ರಿಕ್ಟ್ ಬೋರ್ಡ್” ನ ಸಭೆ ಇತ್ತು. ಸಂಜೆಯವರೆಗೂ ಶಾಂತಿಯುತವಾಗಿಯೇ ಇತ್ತು. ಆದರೆ ಗಂಟೆ ೫ ಆಗುತ್ತಿದ್ದಂತೆ ಇಬ್ರು ಯುವಕರು, ‘ಡಾಗ್ಲಾಸ್’ ನ ಹತ್ರ ಬಂದ್ರು. ನೋಡುನೋಡುತ್ತಲೇ ಆ ಆಂಗ್ಲನ ಮೇಲೆ ಗುಂಡು ಹಾರಿಸಲಾಯಿತು..ಆ ಅಧಿಕಾರಿ ಧರೆಗುರುಳಿದ.
ಸ್ವಾಮಿ ವಿವೇಕಾನಂದರೊಳಗಿನ ’ಮನುಷ್ಯ’ ಮತ್ತು ಮನುಷ್ಯನೊಳಗಿನ ’ಅವಿವೇಕ’
– ರಾಕೇಶ್ ಶೆಟ್ಟಿ
ಓದು,ಅನುಭವ ಮತ್ತು ವಯಸ್ಸು,ಮನುಷ್ಯನನ್ನ ಮಾಗಿಸುತ್ತದೆ ಅನ್ನುತ್ತಾರೆ,ಆದರೆ ಕೆಲವರ ಪಾಲಿಗೆ ಓದು,ಅನುಭವದ ಜೊತೆಗೆ ವಯಸ್ಸು ಬಾಗಿಸುತ್ತದೆ ದೇಹ ಮತ್ತೆ ತಲೆ ಎರಡನ್ನೂ…! ಅಂತವರ ವಿಷಯ ಪಕ್ಕಕ್ಕಿರಲಿ….ವಿವೇಕಾನಂದರ ವಿಷಯಕ್ಕೆ ಬರೋಣ…
ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸ್ವಾಮಿ ವಿವೇಕಾನಂದರು ಜಪಾನ್ ಮೂಲಕ ಸಾಗುವಾಗ ಅಲ್ಲಿನ ನಗರ ವೀಕ್ಷಣೆಯ ನಂತರ ತಮ್ಮ ಮದರಾಸಿ ಶಿಷ್ಯರಿಗೆ ಬರೆದ ಪತ್ರದ ಸಾಲುಗಳಿವು.ಈ ಪತ್ರದ ಕೆಲವು ಸಾಲುಗಳು ಇಂದಿಗೂ ನಮ್ಮ ನಡುವಿನ ತಲೆ ಕೆಟ್ಟ ಸಮಸ್ಯೆಗಳ ಅರಿವಿದ್ದೆ ಅವರು ಅಂದೇ ಹೇಳಿದ್ದರೇನೋ ಅನ್ನುವಂತಿವೆ.
“ಜಪಾನೀಯರ ಪಾಲಿಗಂತೂ ಭಾರತವೆಂದರೆ ಇನ್ನೂ ಎಲ್ಲ ಶ್ರೇಷ್ಠ-ಉನ್ನತ ವಿಚಾರಗಳ ಸ್ವಪ್ನ ಲೋಕವೇ ಆಗಿದೆ.ಆದರೆ ನೀವು?ನೀವೆಂಥವರು?… ಜೀವನವಿಡೀ ಕಾಡು ಹರಟೆಯಲ್ಲೇ ಮುಳುಗಿರುವವರು.ಕೇವಲ ಹರಟೆ ಮಲ್ಲರು.ಇನ್ನೆಂಥವರು ನೀವು? ಬನ್ನಿ ಇಲ್ಲಿಗೆ.ಈ ಜನರನ್ನು ನೋಡಿ ಬಳಿಕ ನಾಚಿಕೆಯಿಂದ ಮುಖ ಮುಚ್ಚಿ ಕುಳಿತುಕೊಳ್ಳಿ.
ಸಮುದ್ರ ದಾಟಿದರೆ ನಿಮ್ಮ ಜಾತಿ ಕೆಟ್ಟು ಹೋಗುತ್ತದಲ್ಲವೇ…!? ಬುದ್ದಿ ಕೆಟ್ಟ ಅರಳು ಮರಳು ಜನಾಂಗ…! ಶತಶತಮಾನಗಳಿಂದಲೂ ಮೂಢನಂಬಿಕೆ-ಕಂದಾಚಾರಗಳ ಕಂತೆಗಳನ್ನೇ ತಲೆಯ ಮೇಲೆ ಹೊತ್ತು ಕುಳಿತಿರುವವರು…!
ಈ ಆಹಾರವನ್ನು ಮುಟ್ಟಬಹುದೇ? ಆ ಆಹಾರವನ್ನು ಮುಟ್ಟಬಹುದೇ? ಎಂಬ ಬಹಳ ದೊಡ್ಡ ವಿಮರ್ಶೆಯಲ್ಲಿ ನೂರಾರು ವರ್ಷಗಳಿಂದ ಮುಳುಗಿದ್ದೀರಲ್ಲಾ-ಎಂಥ ಮನುಷರು ನೀವೆಲ್ಲ!
ಕನ್ನಡ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವ ಆಸೆಯೇ?
–ಓಂ ಶಿವಪ್ರಕಾಶ್
ಪ್ರತಿಯೊಬ್ಬ ಕನ್ನಡಿಗನಲ್ಲೂ ಕನ್ನಡಕ್ಕೆ ದುಡಿಯುವ ಬಲವಾದ ಆಸೆಯಿರುತ್ತದೆ. ಅಕ್ಷರ ಕಲಿಯುವ ದೆಸೆಯಿಂದ ಹಿಡಿದು, ದುಡಿದು ದೊಡ್ಡವನಾಗುವವರೆಗೂ ಹೇಗೆ ತನ್ನ ಆಸೆಯನ್ನು ಈಡೇರಿಸಿಕೊಳ್ಳುವುದೆಂಬ ಪ್ರಶ್ನೆ ಮನಸ್ಸಿನಲ್ಲಿ ಸುಳಿಯುತ್ತಲೇ ಇರುತ್ತದೆ. ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಂತೂ, ಅದನ್ನು ಬಳಸುವ ಸಾಮಾನ್ಯನಿಂದ ಹಿಡಿದು, ತಂತ್ರಜ್ಞಾನದ ಜೊತೆಗೇ ದಿನದೂಡುವ ತಂತ್ರಜ್ಞನವರೆಗೂ ಎಲ್ಲರಿಗೂ ಕನ್ನಡ ಬಳಸುವ ಮತ್ತು ಬೆಳೆಸುವ ಆಸೆ ಖಂಡಿತ ಇರುತ್ತದೆ. ಅಂತಹ ಆಸೆಗಳನ್ನು ಮತ್ತೆ ಚಿಗುರಿಸಿ, ಮಾಹಿತಿ ತಂತ್ರಜ್ಞಾನದ ಬಳಕೆದಾರನ ದಿನನಿತ್ಯದ ಪ್ರಶ್ನೆಗಳನ್ನು ಉತ್ತರಿಸುತ್ತಾ, ಕನ್ನಡದ ತಾಂತ್ರಿಕ ಬೆಳವಣಿಗೆಗೆ ನಾಂದಿಯಾಗಲು ನಾವು ಇಡಬೇಕಾದ ‘ಹೆಜ್ಜೆಗಳು” ಅನೇಕ.
ದೈನಂದಿನ ಬದುಕಿನಲ್ಲಿ ತಂತ್ರಜ್ಞಾನದ ಮುಖೇನ ಕನ್ನಡದಲ್ಲೇ ವ್ಯವಹರಿಸಬಹುದೇ? ಕನ್ನಡದ ತಾಂತ್ರಿಕ ಬೆಳವಣಿಗೆ ಹೇಗೆ ಸಾಧ್ಯ? ಅದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಬಗೆ ಹೇಗೆ? ಕನ್ನಡ ಭಾಷಾ ತಂತ್ರಜ್ಞಾನ ಬೆಳವಣಿಗೆಯ ತೊಡಕುಗಳ ನಿವಾರಣೆ ಸಾಧ್ಯವೇ? ತಂತ್ರಾಂಶಗಳು ನಡೆಯಬೇಕಿರುವ ಹಾದಿಯ ಕಿರು ಪರಿಚಯ ಎಲ್ಲಿ ಸಿಗಬಹುದು? ಇದಕ್ಕೊಂದು ಸಮುದಾಯವಿದೆಯೇ? ಈ ಸಮುದಾಯ ಅಭಿವೃದ್ದಿಯ ಪರಿಕಲ್ಪನೆ ಏನು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ‘ಹೆಜ್ಜೆ’ ರೂಪಿತಗೊಂಡಿದೆ.
ಮಾಹಿತಿ ತಂತ್ರಜ್ಞಾನದ ವಿವಿಧ ಸ್ತರಗಳಲ್ಲಿ ಕನ್ನಡದ ಬೆಳವಣಿಗೆಗೆ ಬೇಕಾದ ವಿಷಯಗಳ ಬಗ್ಗೆ ಅನುಭವಿ ತಜ್ಞರು, ತಂತ್ರಜ್ಞರು ತಮ್ಮ ಅನುಭವವನ್ನು ಹಂಚಿಕೊಳ್ಳುವುದರ ಮೂಲಕ ಪ್ರಾರಂಭವಾಗುವ ಈ ಕಾರ್ಯಕ್ರಮ, ಮೇಲೆ ಹೇಳಿದ ಅನೇಕ ಪ್ರಶ್ನೆಗಳಿಗೆ ಉತ್ತರವನ್ನು ಪಡೆದುಕೊಳ್ಳುವ ‘ಹೆಜ್ಜೆ’ಗಳ ಹಾದಿಯನ್ನು ನಿಮ್ಮ ಮುಂದೆ ತೆರೆಯಲಿದೆ.
ಬನ್ನಿ ನಮ್ಮೊಡನೆ ಜೊತೆಜೊತೆಯಾಗಿ ಹೆಜ್ಜೆ ಹಾಕಿ, ನಿಮ್ಮ ಬರುವಿಕೆಯನ್ನು ಇಂದೇ ಕಾಯ್ದಿರಿಸಿ
* * * * * *
ಚಿತ್ರಕೃಪೆ : hejje.sanchaya.net
ಭಾಷಾ ಆಯಾಮದಲ್ಲಿ “Consumer Protection Act”
