ವಿಷಯದ ವಿವರಗಳಿಗೆ ದಾಟಿರಿ

Archive for

9
ಜನ

ಸಂಸ್ಕೃತಿ ಸಂಕಥನ – 17 ಜಾತಿ, ರಿಲಿಜನ್ ಹಾಗೂ ಸೆಕ್ಯುಲರಿಸಂ ಭಗವದ್ಗೀತೆ ವಿವಾದ

-ರಮಾನಂದ ಐನಕೈ

ಕೇವಲ ಭಗವದ್ಗೀತೆ ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಪ್ರ ದಾಯಗಳಿಗೆ ಸಂಬಂಧಪಟ್ಟಂತೆ ಅನೇಕ ಸಂಗತಿ ಗಳು ವಿವಾದಕ್ಕೆ ಕಾರಣವಾಗುತ್ತಿವೆ. ಹಾಗೂ ಇವೆಲ್ಲ ರಾಜಕೀಯ ಸ್ವರೂಪ ಪಡೆದು ಸೆಕ್ಯುಲರ್ ಪ್ರಭುತ್ವ ಸಂದಿಗ್ಧದಲ್ಲಿ ಸಿಲುಕುವಂತಾಗುತ್ತಿದೆ. ಹಾಗಾದರೆ ಈ ದೇಶದಲ್ಲಿ ಏನು ನಡೆಯುತ್ತಿದೆ?

ಭಗವದ್ಗೀತೆ ವಿವಾದಕ್ಕೆ ಸಂಬಂಧಪಟ್ಟಂತೆ ಪತ್ರಿಕೆಗಳಲ್ಲಿ ದಿನನಿತ್ಯ ಹೇಳಿಕೆಗಳು ಬರುತ್ತಲಿವೆ. ಈ ಕುರಿತು ಒಂದು ಅಭಿಪ್ರಾಯ ರೂಪಿಸುವ ಪ್ರಯತ್ನ ನಡೆಯುತ್ತಿದೆ. ಅಂದರೆ ಭಾರತೀಯ ಸಂಸ್ಕೃತಿಯ ಕುರಿತಾದ ಪರಸ್ಪರ ತಪ್ಪು ತಿಳುವಳಿಕೆ ಗಾಗಿ ಭಗವದ್ಗೀತೆಯನ್ನು ಬಹಿರಂಗವಾಗಿ ಹರಾಜಿಗೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಗೀತೆಯಿಂದ ಶೂದ್ರರಿಗೆ ಹಾಗೂ ದಲಿತರಿಗೆ ಭಾರೀ ಅಪಾಯವಿದೆ ಎಂದು ಭಯ ಹುಟ್ಟಿಸಲು ಪ್ರಯತ್ನಿ ಸುತ್ತಿದ್ದಾರೆ. ಇಲ್ಲಿ ಒಂದನ್ನು ಗಮನಿಸಬೇಕು. ಇವೆಲ್ಲ ಸಾಮಾನ್ಯ ಜನರ ಅಥವಾ ಸಮೂಹದ ಅಭಿಪ್ರಾಯಗಳಲ್ಲ. ಆಯಾ ಸಮುದಾಯದ ವಕ್ತಾರರು ಅಥವಾ ಚಿಂತಕರೆನಿಸಿಕೊಂಡವರು ಮಾಧ್ಯಮಗಳ ಮೂಲಕ ಈ ರೀತಿ ಧರ್ಮಯುದ್ಧ ಮಾಡುತ್ತಿದ್ದಾರೆ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತಾಗಿದೆ ಪರಿಸ್ಥಿತಿ. ಈ ಪರಿ ಅರೆಬರೆ ಚಿಂತಕರನ್ನು ನೋಡಿದರೆ ಒಂದು ದಿನ ದೇವರ ವಿಗ್ರಹಗಳನ್ನು ಕಿತ್ತು ಕೈಯಲ್ಲಿ ಆಯುಧ ವಾಗಿ ಹಿಡಿದು ಹೊಡೆದುಕೊಂಡರೆ ಅಚ್ಚರಿಯೇ ನಿಲ್ಲ.

ಈ ಪರಿಸ್ಥಿತಿಗೆ ಮುಖ್ಯ ಕಾರಣವೆಂದರೆ ಭಾರತೀಯ ಸಂಸ್ಕೃತಿಯನ್ನು ರಿಲಿಜನ್ ಎಂದು ವ್ಯಾಖ್ಯಾನಿಸಿಕೊಳ್ಳುತ್ತಿರುವುದು. ಯುರೋಪಿ ಯನ್ನರು ಇಡೀ ಭಾರತೀಯ ಸಂಸ್ಕೃತಿಯನ್ನು ಸೇರಿಸಿ ಹಿಂದೂಯಿಸಂ ಎಂದು ಕರೆದು ಅದಕ್ಕೆ ರಿಲಿ ಜನ್ನಿನ ಲಕ್ಷಣ ಸೇರಿಸಲು ಪ್ರಯತ್ನಿಸಿದರು. ಆದ್ದರಿಂದಲೇ ನಾವಿಂದು ಹಿಂದೂಯಿಸಂ ಅಂದರೆ ಇಸ್ಲಾಂ ಹಾಗೂ ಕ್ರಿಶ್ಚಿಯಾನಿಟಿ ಇದ್ದಹಾಗೆ ಒಂದು ಅಖಂಡವಾದ ರಿಲಿಜನ್ ಎಂದು ತಿಳಿದುಕೊಂಡಿ ದ್ದೇವೆ. ಹಾಗಾಗಿ ಹಿಂದೂ ಸಂಪ್ರದಾಯಗಳನ್ನೆಲ್ಲ ರಿಲೀಜಿಯಸ್ ಚಟುವಟಿಕೆಯೆಂಬಂತೆ ಅತ್ಯಂತ ಗುಮಾನಿಯಿಂದ ನೋಡಲಾಗುತ್ತದೆ. ರಿಲಿಜೀ ಯಸ್ ಚಟುವಟಿಕೆಗಳ ಸಾರ್ವಜನೀಕರಣವನ್ನು ಸೆಕ್ಯುಲರ್ ನೀತಿ ಒಪ್ಪುವುದಿಲ್ಲ. ಅದಕ್ಕಾಗಿ ಎಡ ಪಂಥೀಯ ಚಿಂತಕರಿಗೆ ಇಂಥ ಸಾಂಪ್ರದಾಯಿಕ ಆಚರಣೆಗಳೆಲ್ಲ ನಿಷಿದ್ಧ ಹಾಗೂ ಮೌಢ್ಯ.

ಮತ್ತಷ್ಟು ಓದು »

8
ಜನ

ಮನದ ಸುಕ್ಕು

 ಪವನ್ ಪಾರುಪತ್ತೇದಾರ
 ಸುಕ್ಕು ಶುರುವಾಗಿದೆ
ಹೊಳೆಯುವ ಮೊಗವೀಗ
ನಿಜ ಬಣ್ಣ ತೆರೆಯುತಿದೆ
ಸುಕ್ಕು ಶುರುವಾಗಿದೆ
ಚಂದನವ ಮೆಲ್ಲಗೆ ಮುಖವೆಲ್ಲ ಹಚ್ಚಿ
ನಿಂಬೆ ರಸದೊಂದಿಗೆ ನಯವಾಗಿ ತೊಳೆದು
ಅರೈಕೆಗಂತ್ಯವೇ ಇಲ್ಲದಂತಾದರು
ಮನದಮೇಲೆ ಸುಕ್ಕು ಶುರುವಾಗಿದೆ
 
ಅಪನಂಬಿಕೆಯ ಸುಕ್ಕು ಅಜ್ಞಾನದ ಸುಕ್ಕು
ಆಸೆಯ ಸುಕ್ಕು ನಿರಾಸೆಯ ಸುಕ್ಕು
ಮುಖದ ನರಗಳನು ಬಿಗಿ ಹಿಡಿದು
ಮನದ ಮೇಲೆ ಗೀಟುಗಳನು ಎಳೆದು
ಗೊತ್ತಿಲ್ಲದಂತೆ ಮೋಸ ಶುರು ಮಾಡಿದೆ
ಸುಕ್ಕು ಶುರುವಾಗಿದೆ
 
ಪ್ರತಿಯೊಂದು ತಪ್ಪಿಗು ಕಾರಣ ಹೇಳಿ
ಪ್ರತಿಯೊಂದು ಮಾತಿಗು ತೇಪೆಯ ಹಚ್ಚಿ
ತನ್ನ ತಾನೇ ಆಡಂಬರಿಸುವ ಆಸೆಯಲಿ
ಗೆಳೆಯರ ಬಳಗದ ಮೆಟ್ಟಿ ಮೇಲೇರುತ
ನನ್ನದೇ ಗೆಲುವೆಂದು ಗರ್ವವನು ತೋರುವ
ಸುಕ್ಕು ಶುರುವಾಗಿದೆ ಸುಕ್ಕು ಶುರುವಾಗಿದೆ
 
 ಪವನ್  ಪಾರುಪತ್ತೇದಾರ:-
7
ಜನ

ಕಂಗ್ರಾಟ್ಸ್ ಹಾಜಬ್ಬಾಕ…

  • – ಶಿಹಾಬ್ ಉಲ್ಲಾಳ್, ಮಂಗಳೂರು

ಪೈಮೂನು ವರ್ಷತ್ತ್ ಲ್ ಇಪರ ಮೈಕಾಲ್ತೋ ಸೆ೦ಟ್ರಲ್ ಮಾರ್ಕೆಟ್ ರೋ ಮುಟ್ಟ ಮುಸ೦ಬಿ ಬಿತ್ತೋ೦ಡ್ ಉಲ್ಲೆ ಹಾಜಬ್ಬಾಕ ಇಪ್ಪ ಶಿವಮೊಗ್ಗತ್ತೊ ಯಶೋಗಾಥೆ ಕುವೆ೦ಪು ವಿಶ್ವವಿದ್ಯಾನಿಯಲಯತ್ತ್ಲ್, ಪಿನ್ನೆ ದಾವಣೆಗೆರೆರೊ ವಿಶ್ವವಿದ್ಯಾನಿಲಯತ್ತೊ ಪಠ್ಯಬುಕ್ ಲ್ ಸೇರ್ಪಡೆಯಾಯಿಡ್. ದಾವಣೆಗೆರೆರೊ ವಿಶ್ವವಿದ್ಯಾನಿಲಯತ್ತ್ ರೆ ವಾಣೆಜ್ಯ ವಿಬಾಗತ್ತ್ ರೆ ನಾಲಮತ್ತೋ ಸೆಮಿಸ್ಟರ್ಗ್ ಹಾಜಬ್ಬರೊ ಸಾದನೆರೆ  ಬಗ್ಗೆ “ಸಾಹಿತ್ಯ ಸ್ಪ೦ದನ ಭಾಗ-2”ಲ್ ಕನ್ನಡ ಪಾಠ ಬುಕ್ ಲ್ ಆವಗು ಉ೦ಡು. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆ ದಾವಣಗೆರೆ ವಿಶ್ವ ವಿದ್ಯಾನಿಯತ್ತ್ ಗ್ ವ್ಯಾಪ್ತಿಗೆ ಬ೦ಡೊ, ಉಡ್ತೋ ಡಿಗ್ರಿ ಲ್ ಪಡಿಕ್ ರೊ ಮಕ್ಕಗ್ ಹಾಜಬಾಕರೋ ಸಾಧನೆ ಬಗ್ಗೆ ಪಡಿಕಗು ಅವಕಾಶ ಆಯಿಡ್. 2016 ತ್ತೋಲ ಈ ಪಠ್ಯ ಬುಕ್ ಇಕ್ಕ್ರ್. ಇದ್ ಅಡಕೆ ಪೇಪರೊ ಸಂಪಾದಕ ‘ನಾ. ಕಾರಂತ ಪೆರಾಜೆ’ ಹಾಜಬ್ಬರ ಬಗ್ಗೆ ‘ಅಭಿವೃದ್ಧಿಗೆ ನೆರವಾಯೊ ಮಾಧ್ಯಮ ಬೆಳಕು’ ಚೊಲ್ಡ್ರೋ ಶೀರ್ಷಿಕೆಯಡಿಲ್ ಎಲ್ದಿಯೋ ಲೇಖನ ಎಟ್ಟಾಮತ್ತೊ ಪುಟತ್ತ್ ಲ್ ಅಡಕಮಾಯಿತಿಕ್ಕ್ ರ್.

“ಅಕ್ಷರ ಸ೦ತ” ಚೊ೦ತೇ ಪ್ರಕ್ಯಾತಿಯಾಯೋ ಹಾಜಬ್ಬಾಕ ತ೦ಡೊ ರಾಯತೋ ಮಕ್ಕ ಅನಕ್ಷರಸ್ಥರಾವಗು ತೀರ, ಸಮುದಾಯತ್ತೋ ಮಕ್ಕ ಪಡಿಕನು, ಶಿಕ್ಷಣತ್ತ್ ಲ್ ವ೦ಚಿತರಾವಗು ತೀರ ಚೊ೦ತು ರಾಯತ್ತ್ ಲ್ ಒರು ಶಾಲೆ ಕೆಟ್ಪಾಟಗಾಯಿಟ್ಟ್ ಅದ್ ಗ್ ಸ೦ಬ೦ದಪಟ್ಟೊ ಅಧಿಕಾರಿಮಾರೈಲ್ ಪಲಕರಿ೦ಞಿತ್ತ್, ರಾಯತ್ತೋ, ಪೊರ ರಾಯತ್ತೋ ಪೈಸಕಾರ್ ರೊ ಮುಟ್ಟ ಪೋಯಿಟ್ಟ್, ಅವುಡೆ ಇವುಡೆ ನಲಿ೦ಞಿಟ್ಟ್ ರಾಯತ್ತ್ ಗೊರು ಶಾಲೆ ಕೆಟ್ಪಾಟಿ ತ್ತ್ ಮಕ್ಕ ಗ್ ಪಡಿಕಗು ಆಸರೆಯಾಯಿತ್ತ್.

ಮತ್ತಷ್ಟು ಓದು »

6
ಜನ

ಸಮಾನೋ ಮಂತ್ರ: ಸಮಿತಿ: ಸಮಾನೀ-ಒಂದು ಚಿಂತನೆ

-ಹರಿಹರಪುರಶ್ರೀಧರ್

ಅನೇಕ ದಿನಗಳಿಂದ ನನ್ನ ಮನದೊಳಗೆ ಒಂದು ಚಿಂತೆ ಕಾಡುತ್ತಿದೆ.ನಮಗೆಲ್ಲಾ ಜನ್ಮಕೊಟ್ಟಈ ನೆಲಕ್ಕೆ ಪುಣ್ಯಭೂಮಿ, ಮೋಕ್ಷಭೂಮಿ, ತ್ಯಾಗಭೂಮಿ,ದೇವಭೂಮಿ, ಎಂದೆಲ್ಲಾ ಕವಿಗಳು ಬಣ್ಣಿಸಿದ್ದಾರೆ.ನಮ್ಮ ಋಷಿಪುಂಗವರ ತಪಸ್ಸಿನಿಂದ, ಅವರ ಆದರ್ಶಮಯ ಜೀವನದಿಂದ ನಮ್ಮ ದೇಶಕ್ಕೆ “ವಿಶ್ವಗುರುವಿನ” ಸ್ಥಾನ ಲಭಿಸಿತ್ತು ಎಂಬ ವಿಚಾರವನ್ನೂ ಸಹ ಕೇಳುತ್ತೇವೆ.ನಮ್ಮ ಈ ನೆಲದಲ್ಲಿಯೇ “ಮುತ್ತು ರತ್ನಗಳನ್ನು ಬಳ್ಳದಿಂದ ಅಳೆದು ಮಾರುತ್ತಿದರೆಂದೂ” ಕೇಳಿದ್ದೇವೆ.ಇವೆಲ್ಲದರ ಜೊತೆಗೆ ನಮ್ಮ ನಿತ್ಯ ಸಂಕಲ್ಪವಾದರೋ ” ಸರ್ವೇ ಭವಂತು ಸುಖಿನ:…….ಮಾ ಕಶ್ಚಿತ್ ದು:ಖ ಭಾಗ್ಭವೇತ್”-ಎಲ್ಲರೂ ಸುಖವಾಗಿರಬೇಕು…….., ಯಾರಿಗೂ ದು:ಖ ಬರುವುದು ಬೇಡ”. ಇದು ನಮ್ಮ ನಿತ್ಯ ಪ್ರಾರ್ಥನೆ ಯಾಗಿತ್ತು. ಆದರೆ ಎಲ್ಲೋ ಎನೋ ತಪ್ಪಾಗಿದೆಯಲ್ಲಾ! ಯಾವುದೋ ಕೊಂಡಿ ಕಳಚಿದೆಯಲ್ಲಾ!!

 ಮೊನ್ನೆ ನಾನು ಅಗ್ನಿಹೋತ್ರ ಮಾಡುತ್ತಾ ಕುಳಿತಿದ್ದೆ. ನಮ್ಮಕ್ಕ ನಮ್ಮ ಮನೆಗೆ ಬಂದವರು ” ಇದೇನೋ ನೀನು “ಹೋಮ ಮಾಡುತ್ತಿದ್ದೀಯಾ? ಯಜುರ್ವೇದವರು ಮಾಡಬೇಕಾದ್ದು,ಋಗ್ವೇದಿಯಾದ ನೀನು ಮಾಡುತ್ತಿದ್ದೀಯಲ್ಲಾ!!” ವೇದಸುಧೆಯ ವಾರ್ಷಿಕೋತ್ಸವದಲ್ಲಿ ನಡೆದ ಅಗ್ನಿಹೋತ್ರ ಕಾರ್ಯಕ್ರಮದಲ್ಲಿ ಸ್ವತ: ಅಗ್ನಿಹೋತ್ರ ಮಾಡಿದ್ದ ನಮ್ಮ ಅಕ್ಕ ಶ್ರೀ ಸುಧಾಕರ ಶರ್ಮರಿಂದ ಅಗ್ನಿಹೋತ್ರದ ಅರ್ಥವಿವರಣೆಯನ್ನು ಸವಿಸ್ತಾರವಾಗಿ ಕೇಳಿದ್ದರು. ಅಂದು ಮೆಚ್ಚುಗೆ ವ್ಯಕ್ತಪಡಿಸಿದ್ದವರು. ಇವರೇ. ಆದರೆ ಅವರ ಬಾಯಲ್ಲಿಯೇ ಈ ಪ್ರಶ್ನೆ. ನಾನು ನಮ್ಮಕ್ಕನಿಗೆ ಹೇಳಿದೆ” ಆರೋಗ್ಯ ನಿಮಗೆ ಮಾತ್ರ ಬೇಕೋ? ಬೇರೆಯವರಿಗೆ ಬೇಡವೋ?

ಅವರು ನಿರುತ್ತರರಾಗಿದ್ದರು.

5
ಜನ

ಅಗೋಚರತೆ (ಇನ್ವಿಸಿಬಿಲಿಟಿ)

ರಾವ್ ಎವಿಜಿ

ಮಿಸ್ಟರ್ ಇಂಡಿಯ, ಹ್ಯಾರಿ ಪಾಟ್ಟರ್, ಟಾಮ್ ಅಂಡ್ ಜೆರ್ರಿ ಇವೇ ಮೊದಲಾದ ಕೆಲವು ಚಲನಚಿತ್ರಗಳಲ್ಲಿ ಏನೋ ಒಂದು ದ್ರಾವಣ ಕುಡಿಯುವುದರಿಂದಲೋ, ಒಂದು ವಿಶಿಷ್ಟ ಮೇಲಂಗಿ ಅಥವ ಹೊದಿಕೆಯನ್ನು ಧರಿಸುವುದರಿಂದಲೋ, ಉಂಗುರವೊಂದನ್ನು ವಿಶಿಷ್ಟ ರೀತಿಯಲ್ಲಿ ಹಾಕಿಕೊಳ್ಳುವುದರಿಂದಲೋ ತಮಗೆ ಬೇಕೆನಿಸಿದಾಗ ಅದೃಶ್ಯರಾಗುವ ಪಾತ್ರಗಳನ್ನು ನೀವು ಗಮನಿಸಿರುತ್ತೀರಿ. ಬೇಕೆನಿಸಿದಾಗ ಅದೃಶ್ಯವಾಗುವುದು, ಅರ್ಥಾತ್ ಅಗೋಚರತೆ ಸಾಧನೀಯವೇ?

ಅಪಾರದರ್ಶಕ, ಅರ್ಥಾತ್ ಅಪಾರಕ ವಸ್ತುವಿನ ಮೇಲೆ ಬಿದ್ದ ಬೆಳಕಿನ ಕಿರಣಗಳು ಪ್ರತಿಫಲನಗೊಂಡು ನಮ್ಮ ಅಕ್ಷಿಪಟಲದ ಮೇಲೆ ಬಿಂಬವನ್ನು ಮೂಡಿಸಿದರೆ ಅದು ನಮಗೆ ಗೋಚರಿಸುತ್ತದೆ (ಚಿತ್ರ ೧). ಇದಕ್ಕೆ ಬದಲಾಗಿ ವಸ್ತು ತನ್ನ ಮೇಲೆ ಬಿದ್ದ ಬೆಳಕಿನ ಕಿರಣಗಳನ್ನು ಸಂಪೂರ್ಣವಾಗಿ ಹೀರಿಕೊಂಡರೆ ಏನಾಗುತ್ತದೆ ಊಹಿಸಬಲ್ಲಿರಾ? ಶಾಸ್ತ್ರ ರೀತ್ಯಾ ಆ ವಸ್ತು ನಮಗೆ ಗೋಚರಿಸಕೂಡದಾದರೂ ಅದರ ಆಸುಪಾಸಿನ ಎಲ್ಲ ವಸ್ತುಗಳೂ ನಮಗೆ ಗೋಚರಿಸುವುದರಿಂದ ಆ ವಸ್ತು ಎಷ್ಟು ಸ್ಥಳವನ್ನು ಆಕ್ರಮಿಸಿಕೊಂಡಿದೆಯೋ ಅಷ್ಟು ಸ್ಥಳ ಕಪ್ಪಾಗಿ ಗೋಚರಿಸುತ್ತದೆ! ಅದರ ಹಿಂದೆ ಏನಿದೆಯೋ ಅದು ನಮಗೆ ಗೋಚರಿಸುವುದಿಲ್ಲ (ಚಿತ್ರ ೨). ತತ್ಪರಿಣಾಮವಾಗಿ, ಆ ವಸ್ತುವಿನ ಸ್ವರೂಪ ನಮಗೆ ಗೋಚರಿಸದೇ ಇದ್ದರೂ ಅಲ್ಲಿ ಏನೋ ಒಂದು ಇದೆ ಎಂಬುದು ತಿಳಿಯುತ್ತದೆ. ಪರಿಪೂರ್ಣ ಅಗೋಚರತೆ ಆಗಬೇಕಾದರೆ ವಸ್ತು ನಮಗೆ ಗೋಚರಿಸ ಕೂಡದು, ಅದರ ಹಿಂದಿರುವ ವಸ್ತುಗಳು ನಮಗೆ ಗೋಚರಿಸಬೇಕು (ಚಿತ್ರ ೩). ವಸ್ತು ಯಾವದೋ ಒಂದು ತಂತ್ರದಿಂದ ಪಾರಕವಾದರೆ ಇಂತು ಆಗ ಬೇಕಲ್ಲವೇ? ಇಂತಾಗುವುದರಲ್ಲಿ ಒಂದು ಸಮಸ್ಯೆ ಇದೆ. ಈ ರೀತಿ ಅಗೋಚರವಾದ ವ್ಯಕ್ತಿಯ ಮೂಲಕ, (ಅಕ್ಷಿಪಟಲವೂ ಸೇರಿದಂತೆ ಪ್ರತಿಯೊಂದು ಅಂಗದ ಮೂಲಕ) ಬೆಳಕಿನ ಕಿರಣಗಳು ಹಾದು ಹೋಗುವುದರಿಂದ ಅವನಿಗೆ ಏನೂ ಕಾಣಿಸುವದಿಲ್ಲ. ಅರ್ಥಾತ್, ಆತ ಸಂಪೂರ್ಣ ಕುರುಡು ವ್ಯಕ್ತಿ ಆಗಲೇ ಬೇಕು!! ಇಂಥ ಅಗೋಚರತೆಯಿಂದ ಏನು ಲಾಭ?

ಮತ್ತಷ್ಟು ಓದು »

4
ಜನ

ಬರ್ರು, ನಙಉಂ ನಿಙಉಂ ಒನ್ನಾವ….

ಬ್ಯಾರಿಙ ತುಳುನಾ’ಡ್ನ್ತ್ ಮುನ್ನೋಲು ಬಿಲ್ಚೋ ಇನ್ನ ಕರ್ನಾಟಕತ್ತೋ ಇಪ್ಪತ್ತ ಕರಾವಳಿ ಜಿಲ್ಲೆಯಾಯ ದಕ್ಷಿಣ ಕನ್ನಡ, ಉಡುಪಿ ಅಲ್ಲಾಂಟ್ ಮುಟ್ಟತ್ತೋ ಕೊಡಗು, ಹಾಸನ, ಚಿಕ್ಕಮಗಳೂರುಲು ಜೀವಿಚ್ಚೋಂಟು ಉಲ್ಲೋ ಉಸ್ಲಿಮ್ ಜನಾಂಗ. ಆನ್ಙ ಆನ್ಙಲದೇ ಆಯ ವಿಶೇಷ ಸಂಪ್ರದಾಯ, ಸಂಸ್ಕೃತಿ ಉಲ್ಲೋ ಸಾಮಾಜಿಕ ವರ್ಗ. ಬ್ಯಾರಿಙಗು ಕೊಂಕಣ ತೀರತ್ತೋ ‘ನವಾಯತ’, ಮಲಬಾರುಡೋ ಮಾಪಿಳ್ಳೆಙಗುಲ್ಲೋ ಸಮಾನಾಯೋ ಮಹತ್ವಮಾಯೋ ಸಾಂಕೃತಿಕ ಸಂಪ್ರದಾಯ ಉಂಡು. ಇಡೀ ಭಾರತತ್ತ್ಲೇ ಪಂಡತ್ತೋ ಮುಸ್ಲಿಂ ಸಮುದಾಯಮಾಯಿಟ್ಟುಲ್ಲ ಬ್ಯಾರಿಙಗು ೧,೨೦೦ವರ್ಷತ್ತುಗೂ ಧೀರ್ಘಮಾಯ ಐತಿಹಾಸಿಕ ಹಿನ್ನೆಲೆಉಂಡು. ತುಳು ಜಾನಪದ ಪಟ್ಟಾಯೋ ‘ಪಾಡ್ದನ’ ಪಿನ್ನೆ ಬೇರೆ ಬೇರೆ ದಾಖಲೆಙಉಮ್ ಈ ಜನಾಂಗತ್ತ್ಗ್ ತುಳುನಾಡ್ ಪಿನ್ನೆ ಅದ್ರೋ ಸಂಸ್ಕೃತಿದೊಟ್ಟು ಇನ್ನ ಸಂಬಂಧತ್ತೋ ಎತ್ತಿ ಕಾಟ್ಟಿಡ್.

‘ಬ್ಯಾರಿ’ ಚೆಲ್ದದ್ ತುಳುಡೋ ‘ಬ್ಯಾರ’ ಶಬ್ದತ್ತ್ ಉಂಡಾಯದ್. ‘ಬ್ಯಾರ’ ಚೆನ್ನೆಙ್ಗ್ ‘ಕಚ್ಛೋಡ ವಹಿವಾಟ್’ ಎನ್ನೋ ಅರ್ಥ ಉಂಡು. ಪಂಡತ್ತೋ ಕಾಲತ್ತಿಲ್ಪಿನ್ನೆಯುಮ್ ಈ ಆಲ್ಮಾರ್ ಕಚ್ಛೋಡ ಆಕ್ಕಿಯೊಂಟು ಇನ್ನಾರ್. ಆದ್ಕೋಂಡು ಚುತ್ತುಮುತ್ತು ಇನ್ನ ತುಳುಡಙ ಇನ್ಙಲೋ ಬ್ಯಾರೀಂಟ್ ಬಿಲ್ಚೋಇನ್ನಾರ್. ಕ್ರಿ.ಶ.೧೮೯೧ಡೋ ಜನಗಣತಿ ಪ್ರಕಾರ ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ’ಲ್ ಆ ಕಾಲತ್ತ್ ೯೦,೩೪೫ ಬ್ಯಾರಿ ಕಚ್ಚೋಡತಙ ಇನ್ನಾರ್. ಇದ್ ಒಟ್ಟು ಕಚ್ಚೋಡತಙಗು ಹೋಲಿಕೆ ಆಕ್ಕಿಯೆಂಗ್ ಸುಮಾರ್ ಶೇಕಡಾ ೯೭ರತ್ತರೆ ಇಂತ್. ಐಕಾಯಿಟ್ಟೇ ಇನ್ಙಲೋ ಬ್ಯಾರೀಂಟ್ ಬಿಲಿಕ್ಕುಡೋ.

ಮತ್ತಷ್ಟು ಓದು »

4
ಜನ

ಸ್ಥಳೀಯ ಭಾಷೆಗಳ ಬಳಕೆಯ ಬಗೆಗೆ RBI ಹಾಗೂ BCSBI ಏನು ಹೇಳುತ್ತದೆ?

-ರವಿ ಸಾವ್ಕರ್

ಇತ್ತೀಚಿಗೆ ಹಲವಾರು ಕನ್ನಡಿಗ ಗ್ರಾಹಕರು ತಮಗೆ ಬ್ಯಾಂಕ್ ಗಳಲ್ಲಿ ಕನ್ನಡದಲ್ಲಿ ಸೇವೆ ಕೊಡಬೇಕು ಎಂದು ಬ್ಯಾಂಕ್ ಗಳಿಗೆ ದೂರನ್ನು ಕೊಟ್ಟಿದಾರೆ. ಕೆಲವು ಬ್ಯಾಂಕ್ ಗಳು ಗ್ರಾಹಕರ ದೂರಿಗೆ ಸ್ಪಂದಿಸಿ ಕನ್ನಡದಲ್ಲಿ ಸೇವೆ ಕೊಟ್ಟಿದಾರೆ. ಮತ್ತೆ ಕೆಲವರು ಕೊಡುವುದಿಲ್ಲ ಎಂದು ಸಾರಾಸಗಟಾಗಿ ತಿರಸ್ಕರಿಸಿದ ಸಂಗತಿಗಳು ಇದೆ.

RBI ಹಾಗೂ BCSBI ಭಾಷೆಯ ಬಳಕೆಯ ಬಗ್ಗೆ ಏನು ಹೇಳುತ್ತದೆ ಹಾಗೂ ಕನ್ನಡದಲ್ಲಿ ಸೇವೆ ಕೊಡಲು ನಿರಾಕರಿಸಿದರೆ ಬ್ಯಾಂಕ್ ಗಳ ಲೋಕಪಾಲರಿಗೆ(Banking ombudsman) ದೂರು ಕೊಡುವುದು ಹೇಗೆ ಅಂತ ಇಲ್ಲಿ ಕಲೆ ಹಾಕಲಾಗಿದೆ. ಕನ್ನಡದಲ್ಲಿ ಸೇವೆ ಸಿಗದೇ ಹೋದರೆ ಈ ನಿಯಮಗಳನ್ನು ತಿಳಿಸಿ ಬ್ಯಾಂಕ್ ಗಳಿಗೆ ದೂರು ಕೊಡಿ.

ಭಾಷಾ ಆಯಾಮದಲ್ಲಿ RBI ನಿರ್ದೇಶನ ಹೀಗಿದೆ
“In order to ensure that banking facilities percolate to the vast sections of the population,banks should make available all printed material used by retail customers including account opening forms, pay-in-slips, passbooks etc. in trilingual form i.e. English, Hindi and the concerned Regional Language.”
http://rbi.org.in/scripts/BS_ViewMasCirculardetails.aspx?Id=2673&Mode=0
“ಎಲ್ಲ ಜನರಿಗೆ ಉಪಯೋಗ ಆಗುವಂತೆ ಚೆಕ್ಕು, ಪಾಸ್ ಬುಕ್ ಗಳು ಸೇರಿದಂತೆ ಎಲ್ಲ ಮುದ್ರಿತ ಸಾಮಗ್ರಿಗಳನ್ನು (printed material) ಸ್ಥಳೀಯ ಭಾಷೆಗಳಲ್ಲಿಯೂ ಕೊಡಬೇಕು ”

ಭಾಷಾ ಆಯಾಮದಲ್ಲಿ Code of Banks Commitment to Customers ಏನು ಹೇಳುತ್ತದೆ?
“Key commitment of BCSBI is to help You To Understand How Our Financial Products And Services Work By Giving you information about them in any one or more of the following languages – Hindi, English or the appropriate local language

http://www.bcsbi.org.in/pdf/CodeOfBanks_Aug09.pdf ಮತ್ತಷ್ಟು ಓದು »

3
ಜನ

ನನ್ನ ಆಕಾಶಯಾನ

ಕವಿ ನಾಗರಾಜ್

ನನ್ನ ಮನೆಯ ಮೇಲ್ಭಾಗದ ತಾರಸಿಯಲ್ಲಿ ಕುರ್ಚಿ ಹಾಕಿಕೊಂಡು ಕುಳಿತು ಶುಭ್ರ ಆಗಸವನ್ನು ನೋಡುತ್ತಾ ಕುಳಿತಿದ್ದೆ. ನೋಡುತ್ತಾ ನೋಡುತ್ತಾ ಹೋದಂತೆ ಆಕಾಶ ಮಂದಹಾಸ ಬೀರುತ್ತಾ ತೆರೆದುಕೊಳ್ಳುತ್ತಾ ಹೋಯಿತು. ಹೊರಗಣ್ಣು, ಒಳಗಣ್ಣುಗಳನ್ನು ಅಗಲಿಸಿ ವಿಸ್ಮಯದಿಂದ ನೋಡುತ್ತಿದ್ದ ನಾನು ಒಂದು ರೀತಿಯ ಅನಿರ್ವಚನೀಯ ಭಾವಪರವಶತೆಗೆ ಒಳಗಾಗಿದ್ದೆ. ಮನದೊಳಗೆ ಅರಿವಿಲ್ಲದಂತೆ ಮಂಥನ ಆರಂಭಗೊಂಡಿತ್ತು. ಆಕಾಶ ಎಂದಾಕ್ಷಣ ಅಚಾನಕವಾಗಿ ಮೇಲೆ ನೋಡುತ್ತೇವೆ. ಹಾಗಾದರೆ ಆಕಾಶ ಮೇಲೆ ಇದೆಯೇ? ಮೇಲೆ ಇದ್ದರೆ ಎಷ್ಟು ಮೇಲೆ ಇದೆ? ನಾವು ಅದನ್ನು ಕಾಣಲು ಎಷ್ಟು ಮೇಲೆ ಹೋದರೂ ಅದು ಅಷ್ಟೂ ಅಷ್ಟೂ ಮೇಲೆಯೇ ಹೋಗುತ್ತದಲ್ಲಾ! ಹಾಗಾದರೆ ಅದು ಮರೀಚಿಕೆಯೇ? ಹಾಗಾದರೆ ನಾವು ಕಾಣುವ ಆಕಾಶ ಅನ್ನುವುದಾದರೂ ಏನು? ಅದು ನಿಜಕ್ಕೂ ಇದೆಯೇ? ಇಲ್ಲ ಎನ್ನಲಾಗುವುದಿಲ್ಲ, ಆಕಾಶ ಇದೆ. ಆದರೆ ಅದು ಹೇಗಿದೆ? ಕಂಡೂ ಕಾಣದ ಆಕಾಶ ನಿಜಕ್ಕೂ ಒಂದು ಅದ್ಭುತ. ಆಕಾಶವನ್ನು ವೈಜ್ಞಾನಿಕವಾಗಿ ವಿವರಿಸಲು ಮಾನವನಿಗೆ ಶಕ್ಯವೆಂದು ನನಗೆ ಅನ್ನಿಸುತ್ತಿಲ್ಲ. ವೈಜ್ಞಾನಿಕವಾಗಿ ವಿವರಿಸಲು ಬರುವುದಿಲ್ಲವೆಂದು ಆಕಾಶವನ್ನು ಇಲ್ಲವೆಂದು ಹೇಳಲಾಗುವುದೆ? ಕಣ್ಣಿಗೆ ಕಾಣುವುವದನ್ನು ವಿಸ್ತರಿಸಿ ಏನು ಹೇಳಬಹುದೆಂದರೆ ಇಡೀ ಬ್ರಹ್ಮಾಂಡದ ವ್ಯಾಪ್ತಿ ಎಷ್ಟು ವಿಶಾಲವೋ, ವಿಸ್ತಾರವೋ ಅಷ್ಟೂ ವಿಸ್ತಾರದಲ್ಲಿ ಆಕಾಶ ಆವರಿಸಿದೆಯೆಂದು ಮಾತ್ರ ಹೇಳಬಹುದು.
ಆಕಾಶ ಅಂದರೇನು? ಗೊತ್ತಿಲ್ಲ. ಆಕಾಶ ಎಷ್ಟು ದೊಡ್ಡದು? ಗೊತ್ತಿಲ್ಲ. ಆಕಾಶ ಹೇಗಿದೆ? ಗೊತ್ತಿಲ್ಲ. ಚಂದ್ರ ಎಲ್ಲಿದ್ದಾನೆ? ಆಕಾಶದಲ್ಲಿದ್ದಾನೆ. ಭೂಮಿ ಎಲ್ಲಿದೆ? ಅದೂ ಆಕಾಶದಲ್ಲಿದೆ. ಚಂದ್ರನ ಮೇಲೆ ನಿಂತವರಿಗೆ ಭೂಮಿ ಆಕಾಶದಲ್ಲಿರುವಂತೆ ಕಾಣುತ್ತದೆ. ಈರೀತಿ ಯೋಚಿಸಿದಾಗ ಗೊತ್ತಾಗುತ್ತದೆ, ಆಕಾಶ ಮೇಲೆ ಮಾತ್ರ ಇಲ್ಲ, ಎಲ್ಲೆಲ್ಲೂಇದೆ. ಎಲ್ಲೆಲ್ಲೂ ಅಂದರೆ ಎಲ್ಲೆಲ್ಲೂ! ಈ ಜಗತ್ತು/ವಿಶ್ವ/ಬ್ರಹ್ಮಾಂಡ ಎಂದರೆ ಕೇವಲ ಒಂದು ಭೂಮಿಯಲ್ಲ, ಒಂದು ಚಂದ್ರನಲ್ಲ, ಒಂದು ಸೂರ್ಯನಲ್ಲ. ಇಂತಹ ಅಸಂಖ್ಯ ಭೂಮಿ, ಸೂರ್ಯ, ಚಂದ್ರ, ಎಣಿಕೆಗೆ ಸಿಕ್ಕದ ಬೃಹತ್ ನಕ್ಷತ್ರಗಳ ಬೃಹತ್ ಸಮೂಹ ಇದರಲ್ಲಿದೆ. ಅಲ್ಲೆಲ್ಲಾ ಆವರಿಸಿರುವುದು ಈ ಆಕಾಶವೇ! ಅಂದರೆ ನಾವೂ ಆಕಾಶದಲ್ಲೇ ಇದ್ದೇವೆ. ಆಕಾಶ ನಮ್ಮನ್ನು ಹೊಂದಿಕೊಂಡೇ ಇದೆ! ನಾವಷ್ಟೇ ಏಕೆ, ಎಲ್ಲಾ ಚರಾಚರ, ಜೀವ, ನಿರ್ಜೀವ ವಸ್ತುಗಳನ್ನೂ ಆಕಾಶ ಆವರಿಸಿದೆ. ಅಂದರೆ ಆಕಾಶ ಸರ್ವವ್ಯಾಪಿ. ಅದು ಇಲ್ಲದ ಸ್ಥಳವೇ ಇಲ್ಲ. ಜೀವಿಗಳ ದೇಹ ಪಂಚಭೂತಗಳಿಂದ – ಜಲ, ವಾಯು, ಅಗ್ನಿ, ಭೂಮಿ ಮತ್ತು ಆಕಾಶ -ಗಳಿಂದ ಆಗಿರುವುದೆಂಬುದು ಅಂಗೀಕೃತವಾದ ವಿಚಾರ. ಅಂದರೆ ಆಕಾಶ ನಮ್ಮೊಳಗೂ ಇದೆ, ಹೊರಗೂ ಇದೆ. ಒಳಗೂ ಇರುವ, ಹೊರಗೂ ಇರುವ, ಎಲ್ಲೆಲ್ಲೂ ಇರುವ, ಅದು ಇಲ್ಲದ ಸ್ಥಳವೇ ಇರದಿರುವುದು ಆಕಾಶ ಎಂದು ಅನ್ನಿಸಿದಾಗ ನಾನು ಒಂದು ರೀತಿಯ ಆನಂದಾನುಭೂತಿ ಅನುಭವಿಸಿದೆ. ನಾವು ಆಕಾಶವನ್ನು ಕಾಣದಿರಬಹುದು. ಆದರೆ ಆಕಾಶ ಸದಾ ನಮ್ಮನ್ನು ನೋಡುತ್ತಿರುತ್ತದೆ. ಆಕಾಶದ ಕಣ್ಣು ತಪ್ಪಿಸಿ ಯಾರಾದರೂ ಏನಾದರೂ ಮಾಡಲು ಸಾಧ್ಯವೇ? ಏನಾದರೂ ನಡೆಯಲು ಸಾಧ್ಯವೇ?  ಪರಮಾತ್ಮನನ್ನು ವರ್ಣಿಸುವಾಗ ಅವನು ಸರ್ವವ್ಯಾಪಿ, ಅವನಿಲ್ಲದ ಸ್ಥಳವೇ ಇಲ್ಲ, ಅವನು ಒಳಗೂ ಇದ್ದಾನೆ, ಹೊರಗೂ ಇದ್ದಾನೆ, ಎಲ್ಲೆಲ್ಲೂ ಇದ್ದಾನೆ, ಇತ್ಯಾದಿ ಹೇಳುವುದನ್ನು ಕೇಳಿದ್ದೇವೆ. ಅವನ ಗಮನಕ್ಕೆ ಬಾರದಂತೆ ಏನೂ ಜರುಗಲು ಸಾಧ್ಯವಿಲ್ಲವೆಂದು ಹೇಳುವುದನ್ನು ಕೇಳಿದ್ದೇವೆ. ಈ ವಿಶ್ವ ಬ್ರಹ್ಮಾಂಡವನ್ನು ನಿಯಂತ್ರಿಸುವ ವಿರಾಟ್ ಶಕ್ತಿಯ ಕುರಿತು ವೇದದಲ್ಲಿ ಹೀಗೆ ಹೇಳಿದೆ;

ಮತ್ತಷ್ಟು ಓದು »

2
ಜನ

ಸಂಸ್ಕೃತಿ ಸಂಕಥನ – 16 ನೆಹರೂ ಸೆಕ್ಯುಲರಿಸಂ

 -ರಮಾನಂದ ಐನಕೈ

ನೆಹರೂರವರು ಸಂಪೂರ್ಣ ಪಾಶ್ಚಾತ್ಯ ಶಿಕ್ಷಣ ಹಾಗೂ ಪ್ರಭಾವದಿಂದ ರೂಪಗೊಂಡವರು. ಹಾಗಾಗಿ ಅವರು ಭಾರತದ ಕುರಿತು ಚಿಂತಿಸುವಾಗ ಪಶ್ಚಿಮದಿಂದ  ಪ್ರವೇಶಿಸುತ್ತಾರೆ. ಮೂಲಭೂತವಾಗಿ ನೆಹರೂರವರಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅಸಡ್ಡೆಯ ಭಾವನೆ ಇದೆ. ಈ ಭಾವನೆ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯಿಂದ ಬಂದಿದ್ದು. ಹಾಗಾಗಿ ನೆಹರೂ ಸೆಕ್ಯುಲರಿಸಂನಲ್ಲಿ  ಪ್ರಭುತ್ವ ಈ ಮೌಢ್ಯವನ್ನು ನಿವಾರಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ. ಅಂದರೆ ಪ್ರಭುತ್ವ ಹೇಗೆ ‘ತಟಸ್ಥ’ ಇದ್ದಂತಾಯಿತು?

ನೆಹರೂ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ. ಸ್ವಾತಂತ್ರ್ಯ ಹಾಗೂ ಸಮಾನತೆಯ ಬಗ್ಗೆ ಕಸನು ಕಂಡವರು. ಪಂಚವಾರ್ಷಿಕ ಯೋಜನೆಗಳ ಮೂಲಕ ಭಾರತವನ್ನು ಹಂತಹಂತವಾಗಿ ಪ್ರಗತಿಗೆ ತರಲು ಹೆಗಲು ಕೊಟ್ಟವರು. ಭಾರತ ಲಿಬರಲ್ ಸೆಕ್ಯುಲರ್ ರಾಷ್ಟ್ರವಾಗಿ ಪ್ರಗತಿ ಮತ್ತು ಸಮಾ ನತೆಯ ತುತ್ತತುದಿಗೆ ಹೋಗಬೇಕೆಂಬ ದೃಢವಾದ ಸಂಕಲ್ಪ ಹೊಂದಿದವರು. ಹಾಗಾದರೆ ನೆಹರೂರವರ ಪ್ರಕಾರ ಲಿಬರಲ್ ಸೆಕ್ಯುಲರ್ ನೀತಿಯೆಂದರೆ ಏನು? ಅದನ್ನೇ ನೆಹರೂ ಸೆಕ್ಯುಲರ್ ಎನ್ನುವುದು.

ಪ್ರಭುತ್ವ ಎಲ್ಲಾ ರಿಲಿಜನ್ಗಳಿಂದ ತಟಸ್ಥವಾಗಿರ ಬೇಕು ಹಾಗೂ ರಿಲಿಜನ್ನನ್ನು ತನ್ನ ಎಲ್ಲಾ ವ್ಯವಹಾರ ಗಳಿಂದ ಹೊರಗಿಡಬೇಕೆಂದು ನೆಹರೂ ಅಭಿ ಪ್ರಾಯಪಡುತ್ತಾರೆ. ಪ್ರಭುತ್ವ ರಿಲಿಜನ್ನನ್ನು ಪುರಸ್ಕರಿ ಸಿದರೆ ಆ ರಾಷ್ಟ್ರ ಒಂದು ಪ್ರಗತಿಹೀನ ರಾಷ್ಟ್ರವಾಗು ತ್ತದೆ ಎಂಬುದು ಅವರ ದೃಢವಾದ ನಂಬಿಕೆ. ನೆಹರೂ ಸೆಕ್ಯುರಿಸಂನ್ನು ವೈಜ್ಞಾನಿಕ ಸೆಕ್ಯುಲರಿಸಂ ಅಂತಲೂ ಕರೆಯುತ್ತಾರೆ. ಹಾಗಾದರೆ ಈ ವೈಜ್ಞಾನಿಕ ಸೆಕ್ಯುಲರಿಸಂ ಅಂದರೆ ಏನು?

ಮತ್ತಷ್ಟು ಓದು »

1
ಜನ

ಬಲೆ ತುಳುಟ್ ಪಾತೇರ್ಗ

– ನಿಲುಮೆ

ಪಂಚ ದ್ರಾವಿಡ ಭಾಷೆಡ್ ಒಂಜಾಯಿನ ತುಳುನ್ ಕುಡ್ಲಡ್ದ್ ಪತ್ತ್ ದ್ ನಮ್ಮ ಕಾಸರಗೋಡುಡ್ಲ ಪಾತೇರುವೇರ್.ಆತೆ ದಾಯೇ ಕರ್ನಾಟಕದ ಮೂಲೆ ಮೂಲೆಡ್ ಬದುಕುನ ತುಳುವೇರ್ ಉಲ್ಲೆರ್,ಪಿದಾಯಿದ ರಾಜ್ಯಡ್ ಪಾತೇರುವೆರ್,ಪಿದಾಯಿದ ದೇಶಡ್ಲ ಪಾತೇರುವೆರ್

’ತುಳು ಮಹಾಭಾರತ’ದ ಕಾಲ ೧೩ನೇ ಶತಮಾನ,’ತುಳು ದೇವಿ ಮಹಾತ್ಮೆ’ಯ ಕಾಲ ೧೫ನೇ ಶತಮಾನ.ಅಂಚನೇ ’ತುಳು ಭಾಗವತ’ ’ಕಾವೇರಿ’ ಬತ್ತಿನ ೧೭ನೇ ಶತಮಾನಡ್!

‘A comparative Grammar of the Dravidian or South Indian Family of Languages’ ಬರೆಯಿನ ರೆವ್.ಕ್ಲಾಡ್ವೆಲ್ ’ದ್ರಾವಿಡ ಭಾಷೆಡ್ ಗಟ್ಟಿಯಾದ್ ಬುಲೆದ್ ಉಂತುದಿನ ಭಾಷೆ ತುಳು’ ಪಂಡ್ದಿತ್ತೇರ್.

ವಿದ್ವಾಂಸೆರ್ನಕುಲು ಪೂರ ಇಂಚ ಪುಗಾರ್ದಿನ ನಮ್ಮ ತುಳುಕು ಲಿಪಿ ಇತ್ತಿಜ್ಜಾ?

ಎಲ್ಯೆಡ್ ಎಂಕ್ಲೆಗ್ ಉಂಡಾವೊಂತಿನ ಪ್ರಶ್ನೆ ಉಂದು.ಪೊಪ್ಪಡ-ಅಮ್ಮಡ ’ತುಳುಟ್ ಬರೆವರೆಗ್ ಆಪುಜಾ?’ ಪಂನ್ದ್ ಕೇಂಡ; ’ತುಳುಕ್ ಅವೇತವೆ ಲಿಪಿ ಇಜ್ಜಿ ಮಗಾ,ಆಂಡ ಮಲಯಾಳಂದ ಲಿಪಿಟ್ ತುಳು ಬರೆಪೆರ್’ ಪಣೋಂತೆರ್.ಯಂಕುಲು ಮಲ್ಲ ಆವೋಂದ್ ಬತ್ತಿಲೆಕ ನಮಕ್ ಗೊತ್ತಾಯಿನಿ,ಅಸಲ್ ಗ್ ಮಲಯಾಳೊನು ತುಳು ಲಿಪಿಟ್ ಬರೆಪುನ ಪಂಡ್ ದ್!

ಅಂಚಿ ತುಳುನಾಡ್ದ ಬ್ರಾಣೇರೆನ ಕಡೆಡ್ ದ್ ಕೇರಳದ ಉಲಾಯಿ ಪೋಯಿನ ತುಳು ಲಿಪಿ ಮಲಯಾಳಂ ಭಾಷೆಗ್ ಲಿಪಿ ಆಂಡ, ಇಂಚಿ ಜರ್ಮನ್ ಮಿಷನರಿನಕುಲು ತುಳುನಾಡ್ಗ್  ಬತ್ತ್ ದ್ ಮುದ್ರಣ ಕಾರ್ಯೊಗು ಕನ್ನಡದ ಬಳಕೆ ಸುರು ಮಂತುದು ತುಳು ಲಿಪಿನು ಕೆರಿಯೆರ್! ಬಹುಸಃ ಅಪಾಗ ಉಂತುದಿನ ತುಳು ಲಿಪಿಟ್ ಬರೆಪುನ ಇತ್ತೇಲ ಸುರುವಾತಿಜ್ಜಿ.ವೋಲೊ ಕೆಲವೇರ್ ಬರೆವೊಂದಿಪ್ಪೊಲಿ ಆಂಡಾಲ ಹೆಚ್ಚ್ ಜನ ತುಳುನು ಇತ್ತೆಲ ಕನ್ನಡಡೆ ಬರೆಪುನ.ಇಂಚ ಇತ್ತ್ಂಡಲ ತುಳುಟ್ ಬರೋಡಾದಿತ್ತಿನಾತ್ ಬರಹಲು ಬೈಯ್ಜ ಅಂದೆ ಪನೋಡು.ಅವ್ವು ನನಲ ತುಳುವೆರ ಉಡಲ್ದೇ ಕುಲೋಂದೊಂಡು.
ಮತ್ತಷ್ಟು ಓದು »