ಕರ್ನಾಟಕ ಬಿ.ಜೆ.ಪಿ ನಾಯಕರೇ ಏನ್ರೀ ನಿಮ್ ಅವಸ್ಥೆ…?

ಪಾಪ ನಮ್ ಜನ ಬಿ.ಜೆ.ಪಿ ಯವರನ್ನ ವಿರೋದ ಪಕ್ಷದಲ್ಲಿ ನೋಡಿ ನೋಡಿ ಬೇಸತ್ತು ಇವರು ಒಂದು 5 ವರ್ಷ ಆಡಳಿತ ಮಾಡ್ಲಿ ಬಿಡಿ… ಅಂಥ ಇವರನ್ನ ಆಡಳಿತಕ್ಕೆ ತಂದ್ರು, ಆದರೆ ಈ ನಾಯಕರು ಕೊಟ್ಟ ಆಡಳಿತ 100 ವರುಷ ಕಳೆದರೂ ಮರೆಯಲು ಸಾದ್ಯವಾಗದ ಆಡಳಿತ. (ದಯವಿಟ್ಟು ಕ್ಷಮಿಸಿ ಓದುಗರೇ “ಅವರು-ಇವರು” ಪದವನ್ನ ಇಲ್ಲಿ ಬಳಸಿದರೆ ಆ ಪದಕ್ಕೆ ಇರುವ ಗೌರವ ಸ್ವಲ್ಪ ಕಡಿಮೆ ಆಗಬಹುದು ಅದ್ದರಿಂದ ಈ ಪದವನ್ನ ಇಲ್ಲಿ ನಿಷೇದಿಸಲಾಗಿದೆ) ಇವರಲ್ಲಿ ಒಬ್ಬ ಬರೋಬ್ಬರಿ ರಾಜ್ಯದ ಸಂಪತ್ತನ್ನ ದೋಚುತ್ತಾನೆ. ಇನ್ನೊಬ್ಬ ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಮಾಡುತ್ತಾನೆ, ಇನ್ನೊಬ್ಬ ನರ್ಸ್ ಜೊತೆ ಮೊಬೈಲ್ ನಲ್ಲಿ ಹರಿದಾಡುತ್ತಾನೆ.
ಇವರೆಲ್ಲಾ ನಮ್ ನಾಯಕ್ರು. ಕುಟುಂಬ ಕಲ್ಯಾಣ ಯೋಜನೆಯನ್ನ ಪಾಲಿಸುವವನು ರಾಜ್ಯದ ಸಂಪತ್ತನ್ನ ತನ್ನ ಪ್ರೀತಿಯ ಕುಟುಂಬದವರ ಹೆಸರಲ್ಲಿ ಮಾಡಿ ಕೊಟ್ಟಂತಹ ಪುಣ್ಯಾತ್ಮ, ಇದೆಲ್ಲವನ್ನು ದಾಟಿ ನಿನ್ನೆ ನಮ್ಮ ತ್ರಿಮೂರ್ತಿ ಮಂತ್ರಿಗಳು ಸದನದ ಕಲಾಪ ನಡಯುತ್ತಿದ್ದ ಸಂದರ್ಭದಲ್ಲೇ “ಬ್ಲೂ ಫಿಲಂ” ನೋಡಿ ಸಿಕ್ಕಿಬಿದ್ದ ನಾಮಧೇಯ ನಾಯಕ್ರು.. ಯಾಕ್ರಿ ಹಿಂಗ್ ಮಾಡ್ತಿದ್ದೀರ..? ಯಾವಾಗ ಸಾರ್ ನೀವೆಲ್ಲಾ ಸರಿ ಆಗ್ತೀರಾ ? ಗೌರವಾನ್ವಿತ ಶ್ರೀ ಅಟಲ್ ಬಿಹಾರಿ ವಾಜಪಾಯಿ ಕಟ್ಟಿ ಬೆಳೆಸಿದ ಬಿ.ಜೆ.ಪಿ ಪಕ್ಷವನ್ನ ಯಾವ ಮಟ್ಟಕ್ಕೆ ತಂದು ಬಿಟ್ರಿ ನೀವು.. ನಿಮ್ಮನ್ನ ಒಂದು ವಿಷಯದಲ್ಲಂತೂ ಅಭಿನಂಧಿಸಬೇಕ್ರಿ.,!! 50 ವರುಷದಲ್ಲಿ ಮಾಡಬೇಕಾದ ಸಾಧನೆಯನ್ನ ಕೇವಲ 3 ವರುಷದಲ್ಲೇ ಸಾಧಿಸಿದ್ದೀರ, ಅಭಿನಂದನೆಗಳು ಬಿ.ಜೆ.ಪಿ ನಾಯಕರೇ ಅಭಿನಂದನೆಗಳು..!! ಮತ್ತಷ್ಟು ಓದು