ಜೊಳ್ಳೇ ಎಲ್ಲ – ಇದು ಸಿದ್ಲಿಂಗು ಸಿನಿಮಾ ಕಣ್ಲಾ
ಫಿಲ್ಮಿ ಪವನ್
ಬಹಳ ದಿನದಿಂದ ಸಿದ್ಲಿಂಗು ನೋಡ್ಬೇಕು ಅಂತ ಕಾದಿದ್ದೆ, ಮೆಜೆಸ್ಟಿಕ್ ತನಕ ಹೋಗಿ ಪಿಕ್ಚರ್ ನೋಡೋ ಅಷ್ಟು ಸಮಯ ಸಿಕ್ಲೆ ಇಲ್ಲ, ಅದಕ್ಕೆ ನಮ್ಮೂರಲ್ಲೇ ಹಾಕಲಿ ಅಂತ ಕಾಯ್ತಾ ಇದ್ದೆ. ಬೆಳಿಗ್ಗೆ ಆಫಿಸ್ ಗೆ ಹೋಗೋವಾಗ ಬ್ಹೊಜಣ್ಣನ ಟೀ ಅಂಗಡಿ ಹತ್ರ ಪೋಸ್ಟರ್ ನೋಡಿ ಸಿಕ್ಕಾಪಟ್ಟೆ ಖುಷಿ ಆಗೋಯ್ತು. ಸಂಜೆ ಏನೇ ಅಗಲಿ ಮಿಸ್ ಮಾಡಬಾರದು ಅಂತ ನಮ್ ಮ್ಯಾನೇಜರ್ ಗೆ ಹೇಳದೇನೆ ಅರ್ಧ ಘಂಟೆ ಮುಂಚೆನೇ escape ಆಗ್ಬಿಟ್ಟೆ. ಆಫಿಸ್ ಗೇಟ್ ಇಂದಾನೆ ದೋಸ್ತ್ ಯಾದವ್ ಗೆ ಫೋನ್ ಹಾಕಿ ಮಗಾ bioscope ಅಂದೆ. ಅವ್ನು ನಾನೆ ಫೋನ್ ಮಡ್ಬೇಕಂದಿದ್ದೆ ಬಾ ಥಿಯೇಟರ್ ಹತ್ರ ಸಿಕ್ತೀನಿ ಅಂದ, ಆಟೋ ಬಸ್ಸು ಎಲ್ಲ ಹಿಡ್ಕೊಂಡು ೫ ನಿಮಿಷ ಮುಂಚೆನೇ ಅರ್ಧ ಪ್ಯಾಕ್ ಕಿಂಗ್ ಮತ್ತೆ ೨೦೦ gm ಚಿಪ್ಸ್ ತೊಗೊಂಡು ಗೇಟ್ ಮುಂದೆ ಹಾಜರ್ ಆದೆ. ಆಗಲೇ ಯಾದವ್ ಟಿಕೆಟ್ ತೊಗೊಂಡಿದ್ದ ಒಳಗೋಗಿ ಮರದ ಬೆಂಚ್ ಮೇಲೆ ಕೂತಿದ್ದೆ ಕೂತಿದ್ದು bioscope ಶುರು ಆಗೋಯ್ತು.
petrOmax ಪುರಾಣ ಹೇಳ್ಕೊಂಡು ಶುರು ಆಗೋ ಕಥೆ, ಪುಟ್ಟ ಹುಡುಗನ ಕಾರ್ ಪ್ರೀತಿ ತೋರುಸ್ತ ಕಾರ್ ಗಾಗಿ classmate ನ dove ಹೊಡೆಯೋ ತನಕ ತಂದು ನಿಲ್ಸುತ್ತೆ, ನಿಜಕ್ಕೂ dove ಹೊಡ್ಯೋದು ಕಾರ್ ಗೋಸ್ಕರ ಆದ್ರು ನಿಜವಾಗೆ ಪ್ರೀತಿ ಮುಡಿರುತ್ತೆ. ಆದ್ರೆ ಆ ಪ್ರೀತಿ ಬಹಳ ದಿನ ಉಳ್ಯಲ್ಲ. ಅದೇ ನೋವಲ್ಲೆ ಬೆಳೆದ ಸಿದ್ಲಿಂಗು ಕಾರ್ ಗೋಸ್ಕರ ಅಂತಾನೆ ಟೀಚರ್ ಹಿಂದಿಂದೆ ತಿರ್ಗಾಡ್ತಾನೆ, ಗಂಡ ಇಲ್ಲದ ಟೀಚರ್ ಸಿದ್ಲಿಂಗು ನ ಆಕಸ್ಮಿಕವಾಗಿ ಉಪಯೋಗಿಸಿಕೊಂಡುಬಿಡುತ್ತಾಳೆ. ಅಷ್ಟರಲ್ಲೇ ಮತ್ತೊಂದು ಆಕಸ್ಮಿಕ, ಸಿದ್ಲಿಂಗು ತಂದೆ ತಾಯಿ ನ ಕಳ್ಕೊತಾನೆ. ಇನ್ನೂ ಓದಿ ದಬ್ಬಕೊದೇನು ಅಂತ ದುಡಿಮೆ ಮಾಡಕ್ಕೆ ಸಿಟಿ ಗೆ ಪ್ರಯಾಣ. ಅಲ್ಲಿಂದ ಕಾರ್ ಪ್ರೀತಿ ಬದುಕಲ್ಲಿ ಎನೆನಲ್ಲ ಮಾಡ್ಸುತ್ತೆ. ಯಾರ ಯಾರನ್ನೆಲ್ಲಾ ಪರಿಚಯ ಮಾಡ್ಸುತ್ತೆ, ಆಕಸ್ಮಿಕಗಳು ಹೇಗೆಲ್ಲ ನಡೆಯುತ್ತೆ ಅನ್ನೋದೇ ಸೀಡ್ಲೆಸ್ಸ್ ಕಡ್ಲೆಕಾಯಿ ಸಿದ್ಲಿಂಗು ಪುರಾಣ.
ಸಿದ್ಲಿಂಗು – ಚಿತ್ರ ವಿಮರ್ಶೆ
-ಹೇಮಾ ಪವಾರ್
ತನ್ನ ಪೋಲಿ ಹುಡುಗಾಟಿಕೆಯ ಪ್ರೋಮೋಗಳಿಂದಲೇ ಜನಪ್ರಿಯತೆ ಗಳಿಸಿದ್ದ ತೀವ್ರ ನಿರೀಕ್ಷೆಯ ಚಿತ್ರ ಸಿದ್ಲಿಂಗು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿವೆ. Stereotype ಸಿನಿಮಾಗಳಿಂದ ಬೇಸತ್ತ ಜನರಿಗೆ ಒಂದು ಸಾಧಾರಣ ಕತೆಯನ್ನು ವಿಭಿನ್ನವಾಗಿ ಹೇಳಲಾಗಿರುವ ಕನ್ನಡದ ಚಿತ್ರಗಳಲ್ಲೊಂದು. ಕತೆಯ ಮಾದರಿಯಿಂದ ಹಿಡಿದು, ನಿರೂಪಣೆ, ಸಂಭಾಷಣೆ ಹಾಗು ನಟನೆಯಲ್ಲೂ ಕೂಡ ಹೊಸತನ್ನು ಹೊತ್ತು ತಂದಿರುವಂತಹ ಚಿತ್ರವೂ ಹೌದು.
ಚಿತ್ರದ ಕತೆಯನ್ನು ನಾಯಕ narrate ಮಾಡುತ್ತ ಹೋಗುತ್ತಾನೆ, ಆತ ಹುಟ್ಟಿದ್ದು, ಆತನ ಅಪ್ಪ ಚಿಕ್ಕಮ್ಮ, ಸ್ಕೂಲು, ಸ್ಕೂಲಿನ ಗೆಳತಿ, ಕಾರಿನ ಬಗ್ಗೆ ಆತನಿಗೆ ವ್ಯಾಮೋಹ ಬೆಳೆದು ಬಂದ ರೀತಿ. ಕಾರಿದ್ದದ್ದಕ್ಕೆ ಹತ್ತಿರವಾದ ಲೆಕ್ಚರರ್, ಸಲೀಸಾಗಿ ಎಂಬಂತೆ ಆಕೆಯೊಂದಿಗೆ ಕಾರಿನಲ್ಲೇ ನಡೆದು ಹೋಗುವ ದೈಹಿಕ ಸಂಪರ್ಕ, ಹಠಾತ್ತನೆ ಸತ್ತು ಹೋಗುವ ಅಪ್ಪ ಅಮ್ಮ, ಒಂಟಿಯಾಗಿ ಬೆಳೆಯುವ ಆತ, ಕಾರು ಕೊಳ್ಳಬೇಕೆಂಬ ಆತನ ಕನಸು, ಕಾರ್ ಮಾಲೀಕನ ಒಂದಷ್ಟು ಎಮೋಷನ್ಸು, ಬಡ್ಡಿಗೆ ದುಡ್ಡು ಕೊಡುವ ವ್ಯಾಪಾರಿ, ಅದರಿಂದ ಪರಿಚಯವಾಗುವ ನಾಯಕಿ, ಆಕೆಯೊಂದಿಗಿರುವ ಆಯಾ, ಧಿಡೀರ್ ಎಂದು ಮತ್ತೆ ಕಾಣಿಸಿಕೊಳ್ಳುವ ಲೆಕ್ಚರರ್ ’ತುರುವೇಕೆರೆ ಆಂಡಾಳಮ್ಮ’, ಆಕೆಯನ್ನು ನೋಡಿ ಕಾರಿನ ದಾಖಲೆಗಳನ್ನು ಕಳೆದುಕೊಳ್ಳುವ ನಾಯಕ, ಕಾರ್ ಮಾಲೀಕನ ಮಗನ ವಿಲನ್ ರೂಪದ ಎಂಟ್ರಿ, ಆತನಿಗೊಬ್ಬ ಇನ್ಸ್ ಪೆಕ್ಟರ್ ಶತ್ರು, ಇನ್ಸ್ ಪೆಕ್ಟರ್ ಗೆ ಹತ್ತಿರವಾಗುವ ಸಿದ್ಲಿಂಗು ಮತ್ತು ನಾಯಕಿ, ಕ್ಲೈಮ್ಯಾಕ್ಸ್ ನಲ್ಲಿ ವೈರಿ ನಾಶಕ್ಕಾಗಿ ಇನ್ಸ್ ಪೆಕ್ಟರ್ ಹಾಗು ಸಿದ್ಲಿಂಗು ಹೊಡೆದಾಡಬೇಕಾದರೆ, ಅಚಾತುರ್ಯದಿಂದ ಸತ್ತು ಹೋಗುವ ನಾಯಕಿ. ಕ್ಲೈಮ್ಯಾಕ್ಸ್ ಅನ್ನು ಪ್ರೇಕ್ಷಕರನ್ನು ದಿಗ್ಬ್ರಮಿಸಲೆಂದೇ ಮೂಡಿಸಿರುವುದು ತಿಳಿದರು ಇಡೀ ಕತೆ ಹಾಗು ಅದರ ರೀತಿ ಕ್ಲೈಮ್ಯಾಕ್ಸನ್ನು ಜಸ್ಟಿಫೈ ಮಾಡುವುದಿಲ್ಲ. ಹಾಗಾಗಿ ಅದು ಅಲ್ಟಿಮೇಟ್ ಶಾಕ್ ಎನಿಸದೆ ಅತೀ ಭಾವುಕವೂ ಎನಿಸದೆ ಪ್ರೇಕ್ಷಕರ ಮನಸ್ಸಿನಲ್ಲಿ ನಿಲ್ಲಲು ಸೋಲುತ್ತದೆ.
ತುರ್ತಾಗಿ ಬೇಕಾಗಿದ್ದಾರೆ- ಎಂ ಐ ಎಸ್ ಸ್ಪೆಷಲಿಸ್ಟ್
-ಅರವಿಂದ್
ಕನ್ನಡಿಗರಿಗೆ ಮಾತ್ರವೇ ಆದ್ಯತೆ
ಕೆಲಸದ ರೀತಿ : ಹೊರಗುತ್ತಿಗೆ
ಮೇಲ್ವಚಾರಕರು : ಹಣಕಾಸು ಮತ್ತು ಲೆಕ್ಕ ಅಭಿಯಂತರರು
ಕೆಲಸದ ಸ್ಥಳ : ರಿನೆಸೆಸ್ ಮೊಬ್ಯೆಲ್ ಇಂಡಿಯಾ ಪ್ರ್ಯೆ ಲಿ, ಬೆಂಗಳೂರು
ನಿಮ್ಮ ಗಣಕವನ್ನು ಆನ್ಲೈನ್ ಪರೀಕ್ಷಕಗಳ ಮೂಲಕ ಪರೀಕ್ಷಿಸಿ
-ಆದೇಶ್ ಕುಮಾರ್
ನಿಮ್ಮ ಗಣಕಯಂತ್ರದಲ್ಲಿ ವೈರಸ್ ಸೇರಿಕೊಂಡಿದೆಯೆಂದೊ ಅಥವಾ ಯಾವುದಾದರೂ ಕಡತ ವೈರಸ್ ಸೋಂಕಿತ ಎಂಬ ಅನುಮಾನ ನಿಮ್ಮಲಿದ್ದು, ಮತ್ತು ನಿಮ್ಮಲ್ಲಿರುವ ಯಾವುದೇ ವೈರಸ್ ನಿರೋಧಕ ತಂತ್ರಾಂಶ ಕೆಲಸ ಮಾಡುತ್ತಿಲ್ಲವೆಂದರೆ, ಕೆಳಗೆ ನೀಡಿರುವ ವೆಬ್ಸೈಟ್ ಗಳಿಗೆ ಹೋಗಿ ಒಮ್ಮೆ ಪರೀಕ್ಷಿಸಿ.
ಈ ಆನ್ಲೈನ್ ವೈರಸ್ ಸ್ಕ್ಯಾನರ್ ಗಳಲ್ಲಿ ನೀವು ಯಾವುದೇ ಶುಲ್ಕವಿಲ್ಲದೇ ಕಡತಗಳನ್ನು ಪರೀಕ್ಞಿಸಬಹುದು.
ಕೇವಲ ನಿಮ್ಮ ಕಡತವನ್ನು ಆ ವೈರಸ್ ಸ್ಕ್ಯಾನರ್ ಗಳಲ್ಲಿ ಸೇರಿಸಿ ಮತ್ತು ನಿಮ್ಮ ಕಡತದಲ್ಲಿ ವೈರಸ್ ಸೇರಿಕೊಂಡಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ.
ಅಳಿದ ಬಳಿಕ ಚಿಂತಿಸಿ ಫಲವೇನು?
–ವಿಷ್ಣುಪ್ರಿಯ
ಉಲ್ಕಾಪಾತದಂಥ ಘಟನೆ ಸಂಭವಿಸಿದರೆ ಅದನ್ನು ತಡೆಯುವುದಕ್ಕೆ ನಮ್ಮಿಂದಾಗದು. ಭೂಮಿಯಾಳದಿಂದ ನುಗ್ಗಿ ಬರುವ ಜ್ವಾಲಾಮುಖಿಯನ್ನು ತಡೆಯಲು ಹೊರಟರೆ ಬೆಂಕಿ ಕೆಂಡವನ್ನು ರಟ್ಟಿನ ಪೆಟ್ಟಿಗೆಯೊಳಗೆ ಅಡಗಿಸಿಡುವ ಸಾಹಸ ಮಾಡಿದಂತಾದೀತು. ಹಾಗಂತ ಮಾನವ ಸೃಷ್ಟಿಸಿರುವ, ಸೃಷ್ಟಿಸುತ್ತಿರುವ ಪ್ರತಿಕೂಲ ವಿಚಾರಗಳಿಂದಾಗಿ ಜೀವಿಗಳು ಅವಸಾನಗೊಳ್ಳುವುದನ್ನು ತಡೆಯುವ ಪ್ರಯತ್ನ ಮಾಡಬಹುದಲ್ಲವೇ?
ಇದ್ದಾಗ ಗೊತ್ತಾಗದ ಮೌಲ್ಯ ಸತ್ತ ಮೇಲೆ ಗೊತ್ತಾಗುತ್ತದೆಯಂತೆ! ಇದು ಸಾರ್ವತ್ರಿಕವಾಗಿ ಅನ್ವಯವಾಗುವಂಥ ಮಾತು. ಅದು ಮನುಷ್ಯರೇ ಇರಲಿ, ಪ್ರಾಣಿಗಳೇ ಇರಲಿ ಯಾವ ಜೀವಿಯೇ ಆದರೂ ಆದು ಇಲ್ಲದಿದ್ದಾಗಲೇ ಅದರ ಬಗ್ಗೆ ಕುತೂಹಲ ಹೆಚ್ಚುತ್ತದೆ. ಈ ಮಾತು ಡೈನೋಸಾರ್ ಗಳ ವಿಚಾರದಲ್ಲಿ ಸಮರ್ಪಕವಾಗಿ ಅನ್ವಯವಾಗುತ್ತದೆ. ಹಲವು ಸಾವಿರ ವರ್ಷಗಳ ಹಿಂದೆ ಭೂಮಿಯ ಮೇಲೆ ಇದ್ದವು ಎಂದು ಹೇಳಲಾಗುವಂಥ ಡೈನೋಸಾರ್ ಗಳು ಹೇಗಿದ್ದವು? ಅವುಗಳ ಶಾರೀರಿಕ ರಚನೆ ಹೇಗಿತ್ತು? ಅವುಗಳು ನಾವಂದುಕೊಂಡಿರುವಂತೆಯೇ ಕ್ರೂರ ಮೃಗಗಳಾಗಿದ್ದವೇ? ಡೈನೋಸಾರ್ ಗ ಳ ಬಗೆಗೆ ಪ್ರಶ್ನೆಗಳು ಹುಟ್ಟಿಕೊಳ್ಳುವುದಕ್ಕೆ ಶುರುವಾಗಿ ದಶಕಗಳೇ ಕಳೆದವು. ಸಮರ್ಪಕವಾದ ಉತ್ತರಗಳಿಗೆ ಮಾತ್ರ ಇನ್ನೂ ಹುಡುಕಲಾಗುತ್ತಿದೆ. ಡೈನೋಸಾರ್ ಗಳ ಪಳೆಯುಳಿಕೆಗಳನ್ನು ವಿಜ್ಞಾನಿಗಳು ಸಂಶೋಧನೆಗೆ ಒಳಪಡಿಸುತ್ತಿದ್ದಾರೆ.