ವಿಷಯದ ವಿವರಗಳಿಗೆ ದಾಟಿರಿ

Archive for

20
ಫೆಬ್ರ

ಅರಿಯದೇ ಅರ್ಚಿಸಿದರೂ ಮರೆಯದೇ ಮರ್ಯಾದೆಕೊಡುವ ಮುಗ್ಧನಿವ ಮಹಾದೇವ !

-ವಿ.ಆರ್. ಭಟ್

ಶಿವನ ಕುರಿತು ಸಾವಿರ ಸಾವಿರ ಕಥೆಗಳು ನಮಗೆ ದೊರೆಯುತ್ತಲೇ ಇರುತ್ತವೆ. ಈ ಲೋಕದ ಸೃಷ್ಟಿ, ಸ್ಥಿತಿ, ಲಯ[ನಾಶ] ಈ ಮೂರೂ ಕಾರ್ಯಗಳು ಏಕಮೂಲದ ಶಕ್ತಿಯಿಂದ ನಡೆದರೂ ಶಿವನನ್ನು ಲಯಕರ್ತನೆಂದು ದೂರಿ ಆತನನ್ನು ದೂರವೇ ಇಡುವ ಮಂದಿಯೂ ಇದ್ದಾರೆ; ಅದು ಹೊಸದೇನೂ ಅಲ್ಲ. ಪಾಲಿಗೆ ಬಂದ ಕೆಲಸವನ್ನು ಅನಿವಾರ್ಯವಾಗಿ ಪಾಲಿಸುವ ಶಿವ ಮಾರ್ಕಾಂಡೇಯನ ಭಕ್ತಿಗೆ ಒಲಿದು ಮೃತ್ಯುಂಜಯನೂ ಆಗಿದ್ದಾನೆ, ಕಣ್ಣ[ಪ್ಪ]ನ ಕಣ್ಣಿಗೆ ತನ್ನನ್ನೇ ಮಾರಿಕೊಂಡಿದ್ದಾನೆ! ಶಿವನನ್ನು ತಪಿಸಿ ಕರೆದು ಅರ್ಜುನ ಪಾಶುಪತಾಸ್ತ್ರವನ್ನೇ ಪಡೆದರೆ ರಾವಣ ಆತ್ಮ ಲಿಂಗವನ್ನೇ ಪಡೆದಿದ್ದ ಎಂಬುದು ಈ ನೆಲದ ಕಥೆ. ಇಂತಹ ನಮ್ಮ ಬೋಲೇನಾಥ ಯಾ ಬೋಳೇ ಶಂಕರ ಪುರಾಣದ ಭಾಗವತದ ಕಥಾಭಾಗಗಳಲ್ಲಿ ರಕ್ಕಸರಿಗೆ ವರಗಳನ್ನು ಕರುಣಿಸಿ ಸಂದಿಗ್ಧದಲ್ಲಿ ಸಿಲುಕಿಕೊಳ್ಳುವುದನ್ನೂ ಕೂಡ ಕಾಣಬಹುದಾಗಿದೆ. ಭೂತಗಣಗಳಿಗೆ, ರಕ್ಕಸರಿಗೆ ಪ್ರಿಯ ದೈವ ಶಿವನೇ ಆದರೂ ಪರೋಕ್ಷ ಅವರುಗಳ ನಿಯಂತ್ರಣಕ್ಕೂ ಆತ ಕಾರಣನಾಗಿದ್ದಾನೆ.

ಅಲಂಕಾರ ಪ್ರಿಯೋ ವಿಷ್ಣುಃ
ಅಭಿಷೇಕ ಪ್ರಿಯಃ ಶಿವಃ |…..

ಒಂದು ಚೊಂಬು ನೀರನ್ನು ನಿಷ್ಕಲ್ಮಶ ಹೃದಯದಿಂದ ಲಿಂಗರೂಪೀ ಶಿವನಮೇಲೆ ಎರಚಿದರೆ ಆತ ಸಂತೃಪ್ತ! ಸರಳತೆಯಲ್ಲಿ ಅತಿ ಸರಳ ಪೂಜೆ ಶಿವನ ಪೂಜೆ. ಇದೇ ಶಿವ ಕ್ರುದ್ಧನಾದರೆ ಮಾತ್ರ ಆಡುವುದು ತಾಂಡವ ! ಶಿವತಾಂಡವದ ಡಮರು ನಿನಾದಕ್ಕೆ ಸಮಸ್ತಲೋಕಗಳೂ ಅಂಜುತ್ತವೆ ಎಂಬುದು ಪ್ರತೀತಿ. ನರ್ತನದಲ್ಲಿಯೂ ಈತನದೇ ಮೊದಲಸ್ಥಾನವಾದ್ದರಿಂದ ನಟರಾಜ ಎಂಬ ಹೆಸರಿನಿಂದಲೂ ಪೂಜಿಸಲ್ಪಡುತ್ತಾನೆ.

ಮತ್ತಷ್ಟು ಓದು »

20
ಫೆಬ್ರ

ಹರಃ ಪಾಪಾನಿ ಹರತಾತ್ ಶಿವೋ ಧತ್ತಾಂ ಸದಾ ಶಿವಂ

-ಸುಗುಣಾ ಮಹೇಶ್

ಇತ್ತೀಚೆಗೆ ಮಗನಿಗೆ ಶಿವರಾತ್ರಿ ಹಬ್ಬವಿದೆ ಉಪವಾಸ ಜಾಗರಣೆ ಎಲ್ಲಾ ಮಾಡುತ್ತಾರೆ. ಊರಲ್ಲಿ ಇದ್ದಿದ್ದರೆ ನಾವೂ ಸಹ ಆಚರಿಸಬಹುದಿತ್ತು ಆದರೆ ಕುವೈತಿನಲ್ಲಿ ಇದ್ದೀವಿ ಕೆಲಸದ ದಿನ ಬೇರೆ ಉಪವಾಸವಂತೂ ಮಾಡುತ್ತೇವೆ, ಜಾಗರಣೆ ಕಷ್ಟವೇನೋ ಎಂದು ಹೇಳಿದಾಗ ಮಗ ಶಿವನ ಬಗ್ಗೆ ಏನಾದರು ಇದ್ದರೆ ಹೇಳು ಎಂದ ಅವನಿಗಾಗಿ ಈ ಲೇಖನ ಬರೆದೆ ನಿಮ್ಮೊಂದಿಗೂ ಹಂಚಿಕೊಳ್ಳುತ್ತಲಿದ್ದೇನೆ….
ದೇವತೆಗಳ ಮತ್ತು ರಾಕ್ಷಸರ ಮಧ್ಯೆ ನಡೆದ ಸಮುದ್ರ ಮಥನದ ಸಂದರ್ಭದಲ್ಲಿ ಸಮುದ್ರದಿಂದ ಹಾಲಾಹಲ ಹೊರಬಂದು ಸೃಷ್ಟಿಯನ್ನು ಅಲ್ಲೋಲ ಕಲ್ಲೋಲ ಮಾಡುವ ಸಾಧ್ಯತೆಗಳು ಹೆಚ್ಚಾದ್ದರಿಂದ ದೇವತೆಗಳು ಈ ಸಂಕಷ್ಟದಿಂದ ಪಾರುಮಾಡಲು ಭಗವಾನ್ ವಿಷ್ಣುವಿನ ಮೊರೆ ಇಟ್ಟಾಗ, ವಿಷ್ಣು ಶಿವನನ್ನು ಭೇಟಿಯಾಗುವಂತೆ ಸಲಹೆ ನೀಡುತ್ತಾನೆ. ನಂತರ ದೇವತೆಗಳು ಶಿವನ ಬಳಿಗೆ ತೆರಳಿ ಕಷ್ಟದಿಂದ ಪಾರು ಮಾಡೆಂದು ಬೇಡಿಕೊಳ್ಳುತ್ತಾರೆ. ದೇವತೆಗಳ ಕಷ್ಟವನ್ನು ಅರಿತ ಶಿವ ಹಾಲಾಹಲ ಕುಡಿದು ಅದು ಹೊರಗೆ ಬರದಂತೆ ಹಾವಿನಿಂದ ಸುತ್ತಿಕೊಂಡನೆಂದು ಹೇಳಲಾಗುತ್ತದೆ. ಆದುದರಿಂದ ಶಿವನ ಕಂಠ ನೀಲಿಯಾಗಿರುತ್ತದೆ ಇದೇ ಕಾರಣಕ್ಕೆ ಶಿವನನ್ನು ನೀಲಕಂಠ ಎಂದೂ ಸಹ ಕರೆಯುತ್ತಾರೆ.
ಒಮ್ಮೆ, ಇಡೀ ಜಗತ್ತೇ ಪ್ರಳಯದ ಅಂಚಿನಲ್ಲಿದ್ದಾಗ ಪಾರ್ವತಿ ದೇವಿ ಈ ಜಗತ್ತನ್ನು ಉಳಿಸಲು ಶಿವನ್ನಲಿ ಮೊರೆಯಿಟ್ಟು ಬೇಡಿಕೊಳ್ಳುತ್ತಾಳೆ. ಆ ಸಂದರ್ಭದಲ್ಲಿ ಶಿವನು ಪ್ರಳಯದಿಂದ  ಜೀವಸಂಕುಲಗಳನ್ನೆಲ್ಲಾ ಪಾರು ಮಾಡಿದ ರಾತ್ರಿಯನ್ನು ಮಹಾಶಿವರಾತ್ರಿ ಎಂದು ಪಾರ್ವತಿ ದೇವಿ ಕರೆದರೆಂದು ಹೇಳಲಾಗುತ್ತದೆ. ಪ್ರಳಯದ ನಂತರ ಪಾರ್ವತಿ ಶಿವನ ಪೂಜೆ ಸಲ್ಲಿಸಲು ಇಷ್ಟವಾದ ದಿನ ಯಾವುದೆಂದು ಕೇಳಿದಾಗ, ಮಾಘ ತಿಂಗಳಿನ ೧೪ರ ರಾತ್ರಿ ನನ್ನ ಇಷ್ಟದ ರಾತ್ರಿ, ಅದನ್ನು ಶಿವರಾತ್ರಿ ಎಂದು ಹೇಳಿದ ಕೂಡಲೆ ಪಾರ್ವತಿ ಈ ಹಬ್ಬವನ್ನು ಪ್ರಚಲಿತಪಡಿಸಿದಳು ಎಂದು ಪುರಾಣಕಥೆಗಳು ಹೇಳುತ್ತವೆ.
20
ಫೆಬ್ರ

ವಿವೇಕಾನಂದರು ನಮಗೆಷ್ಟು ಗೊತ್ತು?

-ಹೇಮಾ ಪವಾರ್

ಈಗಾಗಲೇ ಕಾಂಟ್ರಾವರ್ಷಿಯಲ್ ನ ಉತ್ತುಂಗದಲ್ಲಿರುವ ವಿವೇಕಾನಂದರ ಬಗ್ಗೆ ಅವಹೇಳನಕಾರಿಯಾಗಿ ಹೇಳಲಾಗಿದೆ ಎನ್ನಲಾದ ದಿನೇಶ್ ಅಮಿನ್ ಮಟ್ಟುರವರ ಲೇಖನದ ರೆಫರೆನ್ಸ್ ಇಟ್ಟುಕೊಂಡೇ ಬರೆಯುತ್ತಿದ್ದೇನೆ. ಶಾಲೆಯ ದಿನಗಳಲ್ಲಿ ನನಗೆ ವಿವೇಕಾನಂದರು ಅಮೇರಿಕಾದಲ್ಲಿ ಭಾಷಣ ಮಾಡಿದವರು, ಹೊರದೇಶದಲ್ಲಿ ಭಾರತದ ಬಗ್ಗೆ ಮಾತನಾಡಿ ಮನ್ನಣೆ ಪಡೆದವರು ಎಂಬಂತಹ ಬೇಸಿಕ್ ಮಾಹಿತಿಗಳನ್ನು ಬಿಟ್ಟರೆ ಹೆಚ್ಚೇನು ತಿಳಿದಿರಲಿಲ್ಲ. ಕಾಲೇಜಿನ ದಿನಗಳಲ್ಲಿ ವಿವೇಕಾನಂದರ ಬಾಲ್ಯದ ಹೆಸರು ನರೇಂದ್ರ, ಬಡವರ ಬಗ್ಗೆ ಅತೀವ ಕಾಳಜಿ ತೋರಿಸುತ್ತಿದ್ದ ಅವರನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿದರೂ ಕಿಟಕಿಯಿಂದ ಕೈಗೆ ಸಿಕ್ಕಿದ್ದನ್ನು ಬಿಕ್ಷುಕರಿಗೆ ದಾನ ಮಾಡಿಬಿಡುತ್ತಿದ್ದರು ಎಂದೆಲ್ಲಾ ಉರು ಹಚ್ಚಿ ಭಾಷಣಗಳಲ್ಲಿ ಒಪ್ಪಿಸುತ್ತಿದ್ದದ್ದೇ ಹೊರತು ಒಬ್ಬ ವ್ಯಕ್ತಿಯಾಗಿ, ಸಾಧಕರಾಗಿ, ಅದೆಷ್ಟೋ ಜನರಿಗೆ ಪ್ರೇರಕ ಶಕ್ತಿಯಾದ ವಿವೇಕಾನಂದರ ಚಿಂತನೆಗಳನ್ನು ನಿಲುವುಗಳನ್ನು ಬಿಂಬಿಸುವಂತಹ ಮಾಹಿತಿ ಶಾಲೆ ಅಥವಾ ಕಾಲೇಜಿನ ದಿನಗಳಲ್ಲಿ ದಕ್ಕುವುದು ವಿರಳವಾಗಿತ್ತು.

ಇಂತಹ ಪುಸ್ತಕದಲ್ಲಿ, ಹೀಗೆ, ಇಂತಹವರು ಹೇಳಿದ್ದಾರೆ ಎಂದು ಇಡೀ ಪುಸ್ತಕವನ್ನೇ ಇಂಡೆಕ್ಸ್ ಮಾಡಿಕೊಂಡಿದ್ದ ಖ್ಯಾತ ಕಾದಂಬರಿಯೊಂದನ್ನು ಓದಿ ವಿವೇಕಾನಂದರ ನಿಜದ ನಿಲುವು ಹೀಗಿತ್ತೇ ಎಂದು ಗೊಂದಲಕ್ಕೊಳಗಾಗಿ ಅವರ ಬಗ್ಗೆ ಓದಲು ತೊಡಗಿದೆ. ಸೆಂಟ್ರಲ್ ಲೈಬ್ರರಿಯ ಹತ್ತಾರು ಪುಸ್ತಕಗಳ ನಡುವೆ ಆಸಕ್ತಿಕರ ಎನಿಸಿದ ಪುಸ್ತಕ ‘Swami Vivekananda On Himself’, ಆತ್ಮ ಕಥೆ ಎಂದು ಹೇಳಲು ಬರದಿದ್ದರೂ ಆ ಪುಸ್ತಕದಲ್ಲಿದ್ದದ್ದೆಲ್ಲಾ ವಿವೇಕಾನಂದರ ಬರಹಗಳೇ, ಅವರ ಡೈರಿಯಿಂದ ಹೆಕ್ಕಿದ್ದು, ಹಲವರ ಜೊತೆ ಹಂಚಿಕೊಂಡ ಪತ್ರಗಳು ಹೀಗೆ ಅವರ ವಿಚಾರಗಳನ್ನು ಹಿಡಿಯಾಗಿ ಬಿಂಬಿಸುವಂತಹ ಪುಸ್ತಕವದು. ಓದಿ ಮುಗಿಸುವಷ್ಟರಲ್ಲಿ ಅವರ ಚಿಂತನೆಗಳಿಂದ ತೀವ್ರ ಪ್ರಭಾವಿತಳಾಗಿದ್ದೆ. ವಿವೇಕಾನಂದರು ಮತ್ತವರ ಚಿಂತನೆಗಳು ಎಲ್ಲಾ ಕಾಲಕ್ಕು ಅನ್ವಯವಾಗುವಂತವು. ತಮ್ಮ ಬರಹಕ್ಕೆ ಬೆಂಬಲಿಸುವಂತದ್ದಷ್ಟೇ ಮುಖ್ಯವಾಗಿಸಿಕೊಂಡು ಅವರು ಹೀಗಿದ್ದರು ನೋಡಿ ನಾನು ಹೇಳುತ್ತಿರುವುದೂ ಅದನ್ನೇ ಎಂದು ತಮ್ಮ ವಿಕೃತಿಯನ್ನು ವಿವೇಕಾನಂದರ ಮೇಲೆ ಹೇರಲೆತ್ನಿಸಿದ ಆ ಖ್ಯಾತ ಕಾದಂಬರಿಕಾರರ ಬಗ್ಗೆ ಯೋಚಿಸಿ ನಗು ಬಂದಿತ್ತು.

ಮತ್ತಷ್ಟು ಓದು »

20
ಫೆಬ್ರ

ಸಂಸ್ಕೃತಿ ಸಂಕಥನ – 23 – ಕಾನೂನು ಸಂಸ್ಕೃತಿಯನ್ನಾಧರಿಸಿ ಇರಬೇಕು

-ರಮಾನಂದ ಐನಕೈ

ಜಿಜ್ಞಾಸುಕೂಟ ಅಂತ ಸಮಾನ ಮನಸ್ಕರ ಸಂಘಟನೆಯೊಂದು ಶಿರಸಿಯಲ್ಲಿದೆ. ಅವರು ತಿಂಗಳಿಗೊಮ್ಮೆ ಸೇರಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸುತ್ತಾರೆ. ಅವರು ಹಲವಾರು ವರ್ಷ ಗಳಿಂದ ಈ ಪ್ರವೃತ್ತಿಯನ್ನು ಉಳಿಸಿ ಬೆಳೆಸಿಕೊಡು ಬಂದಿದ್ದಾರೆ. ಮೊನ್ನೆ ಅಕ್ಟೋಬರ್ 1ಕ್ಕೆ ಅವರು ಚರ್ಚೆಗೆ ಇಟ್ಟುಕೊಂಡ ವಿಷಯ ‘ಜನಲೋಕ ಪಾಲ್ ಮಸೂದೆ’. ಈ ಚರ್ಚೆ ಶಿರಸಿಯ ವಿದ್ಯಾನಗರ ರುದ್ರಭೂಮಿ ಆವರಣದಲ್ಲಿರುವ ‘ನೆಮ್ಮದಿ’ ಕುಟಿರದಲ್ಲಿ ನಡೆಯಿತು. ಈ ಕುರಿತು ನ್ಯಾಯವಾದಿಗಳಾದ ಅನಂತ ಹೆಗಡೆ ಹೂಡ್ಲಮನೆ ಹಾಗೂ ಅರುಣಾಚಲ ಹೆಗಡೆ ಜಾನ್ಮನೆ ಜೊತೆಗೆ ಕಾನೂನು ಉಪ ನ್ಯಾಸಕರಾದ ಅರವರೆ ಅವರು ವಿಷಯ ಮಂಡಿಸಿದರು. ಸುದೀರ್ಘ ಚರ್ಚೆ ನಡೆಯಿತು. ಕೊನೆಗೂ ಒಂದು ಗೊಂದಲ ಉಳಿಯಿತು. ಅದನ್ನು ಚೌಧರಿ ಡಾಕ್ಟರ್ ಸ್ಪಷ್ಟಪಡಿಸಿದರು. ನಾವು ಕಾನೂನು ತಜ್ಞರನ್ನು ಕರೆಸಿದ್ದು ಭ್ರಷ್ಟಾ ಚಾರ ನಿವಾರಣೆಗೆ ಏನಾದರೂ ಮಾರ್ಗ ಸೂಚಿಸ ಬಹುದೆಂದು. ಆದರೆ ನೀವು ಮಾತನಾಡುವುದು ನೋಡಿದರೆ ಸರಕಾರವನ್ನೇ ಸಮರ್ಥಿಸುವಂತಿದೆ ಎಂದರು.

ಇದು ಭಾರತದಲ್ಲಿರುವ ಪ್ರತಿಯೊಬ್ಬರ ಸಮಸ್ಯೆ. ಯಾಕೆ ಹೀಗಾಗುತ್ತದೆ? ಕಾನೂನು ಅಂದರೆ ಹಿಂಬಡಿಗನ ಹಾವಿನಂತೆ  ಎರಡೂ ಕಡೆ ತಲೆ ಇದ್ದಂತೆ ಕಾಣುತ್ತದೆ. ಕಾನೂನು ವಿಳಂಬ ನೀತಿ ಅನುಸರಿಸುವಂತೆ ಕಾಣುತ್ತದೆ. ನೂರು ಜನ ಅಪರಾಧಿಗಳು ಬಿಡುಗಡೆಯಾದರೂ ಅಡ್ಡಿಯಿಲ್ಲ. ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎಂಬುದು ಕಾನೂನಿನ ಆದರ್ಶವಾದರೆ ಈ ದೇಶದಲ್ಲಿ ನೂರಾರು ಅಪರಾಧಿಗಳು ತಪ್ಪಿಸಿಕೊಂಡು ಕೊನೆ ಗೊಬ್ಬ ನಿರಪರಾಧಿ ಸಿಕ್ಕಿಬೀಳುವ ಪರಿಸ್ಥಿತಿ ಎದು ರಾಗಿದೆ ಅನಿಸುತ್ತದೆ. ಜನರಿಗೆ ಕಾನೂನಿನ ಬಗ್ಗೆ ಭಯ ಇದೆ. ಆದರೆ ಗೌರವ ಇಲ್ಲ. ಈ ದೇಶದಲ್ಲಿ ಕಾನೂನಿನ ಸದುಪಯೋಗಕ್ಕಿಂತ ದುರುಪಯೋಗ ಆಗುತ್ತಿರುವುದೇ ಹೆಚ್ಚು. ಕಾನೂನಿಗೆ ಸಂಬಂಧ ಪಟ್ಟಂತಹ ಇಂತಹ ನೂರಾರು ಪ್ರಶ್ನೆಗಳಿಗೆಲ್ಲ ಕಾರಣ ಗಳೇನು?

ಮತ್ತಷ್ಟು ಓದು »