ಮೌನ
-ಮಾಲಿನಿ ಭಟ್
ಮೌನವಾಗಿರುವುದು ನನಗೇನು ಹೊಸದಲ್ಲ
ಭಾವನೆಗಳು ಸೋತಾಗ ನಾನಾಗುವುದು ಮೌನವೇ
ಮೌನವಾಗುವುದು ಅಂದರೆ
ನಾ ಮುನಿಸಿಕೊಂಡೆ ಎಂಬ ಅರ್ಥವಲ್ಲ
ಮೌನವೆಂದರೆ ನಾ ಮೂಕವಾಗಿದ್ದೇನೆ
ಎಂಬ ಸಂದೇಶವಲ್ಲ
ಕಣ್ಣು ಬರಿದಾದ ನೋಟ ಬೀರಿದಾಗ
ನಾನಾಗುವುದು ಮೌನವೇ
ಮೌನವೆಂಬುದು ಎಲ್ಲರಲ್ಲೂ
ಆವರಿಸುವ ಶಕ್ತಿ ಅಲ್ಲ , ಅದೊಂದು
ಸುಂದರ ಪದಗಳನು ಮೌನದಲ್ಲೇ
ಸ್ಪಂದಿಸಿ ಚೈತನ್ಯ ನಿಡೋ
ಅನುರಾಗದ ಸರಮಾಲೆ ………
* * * * * * *
ಬಿಜೆಪಿ ಆಡಳಿತದಡಿ ಶಿಕ್ಷಣ ಕ್ಶೇತ್ರ
-ಪ್ರಿಯಾಂಕ್ ಭಾರ್ಗವ್
ಕರ್ನಾಟಕ ರಾಜ್ಯಸರ್ಕಾರವು ಬಿಜೆಪಿ ಪಕ್ಷದ ತೆಕ್ಕೆಗೆ ಸಿಕ್ಕಾಗಲಿಂದ, ಕಲಿಕೆ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ, ಮಾಡಲಾಗುತ್ತಿದೆ ಕೂಡಾ. ಕಳೆದ ನಾಲ್ಕು ವರ್ಷಗಳಲ್ಲಿ ಮಾಡಲಾದ ಬದಲಾವಣೆಗಳು ಮತ್ತು ಅವುಗಳಿಂದಾಗಬಹುದಾದ ಪರಿಣಾಮಗಳ ಬಗ್ಗೆ ಇಲ್ಲಿ ಮಾತನಾಡಲಾಗಿದೆ.
ಶಿಕ್ಷಣದಲ್ಲಿ ತಾನು ಪಾಲಿಸುತ್ತಿರುವ ಭಾಷಾನೀತಿಯನ್ನು ಸಮರ್ಥಿಸಿಕೊಳ್ಳುವಲ್ಲಿ ಎಡವಿದ್ದು
ಕನ್ನಡ ಮಾಧ್ಯಮ ನಡೆಸುವುದಾಗಿ ಹೇಳುತ್ತಾ, ಇಂಗ್ಲೀಶ್ ಮಾಧ್ಯಮಗಳನ್ನು ನಡೆಸುತ್ತಿದ್ದ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿತ್ತು. ಶಾಲೆಗಳು ಕೋರ್ಟು ಮೆಟ್ಟಿಲೇರಿ, ಸುಪ್ರೀಮ್ ಕೋರ್ಟಿನಲ್ಲಿ ಈ ಬಗ್ಗೆ ವಿಚಾರಣೆ ಕೂಡಾ ನಡೆಯುತ್ತಿದೆ. ಸರ್ಕಾರದ ಕಡೆಯಿಂದ ಯಾವ ವಾದ ಮಂಡನೆಯಾಗುತ್ತಿದೆಯೋ ಗೊತ್ತಿಲ್ಲ, ಆದರೆ ಪತ್ರಿಕಗಳಲ್ಲಂತೂ “ಸರ್ಕಾರಕ್ಕೆ ಹಿನ್ನಡೆ, ಇಂಗ್ಲೀಶ್ ಶಾಲೆಗಳ ಗೆಲುವು” ಎಂಬಂತಹ ಸುದ್ದಿ ಆಗಾಗ ಬರುತ್ತಲೇ ಇದೆ. ಶಾಲೆಗಳು ಮಾಡಿದ ತಪ್ಪನ್ನು ತೋರಿಸುತ್ತಾ, “ತಾಯ್ನುಡಿಯಲ್ಲೇ ಕಲಿಕೆ ಒಳಿತು” ಎಂಬ ನೀತಿಯನ್ನು ಕರ್ನಾಟಕ ಸರ್ಕಾರ ಪಾಲಿಸಿಕೊಂಡು ಬಂದಿರುವುದನ್ನು ಹೇಳಿದ್ದರೂ, ತನ್ನ ನಡೆಯನ್ನು ಸಮರ್ಥಿಸಿಕೊಳ್ಳಬಹುದಿತ್ತು. ಆದರೆ, ಕೋರ್ಟಿನಲ್ಲಿ ಸರ್ಕಾರಕ್ಕೆ ಹಿನ್ನಡೆ ಎಂಬ ಸುದ್ದಿ ನೋಡಿದರೆ, ಸರ್ಕಾರವು ತನ್ನ ಭಾಷಾನೀತಿಯನ್ನು ಸಮರ್ಥಿಸಿಕೊಳ್ಳುವಲ್ಲಿ ಎಡವಿದಂತೆ ಕಾಣುತ್ತದೆ. ಬಿಜೆಪಿ ಸರ್ಕಾರದ ಇನ್ನೂ ಕೆಲವು ನಡೆಗಳ ಜೊತೆಗೆ ಹೋಲಿಸಿ ಈ ವಿಷಯವನ್ನು ನೋಡಿದಾಗ, ತಾಯ್ನುಡಿಯಲ್ಲಿ ಶಿಕ್ಷಣದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇಲ್ಲವೇನೋ ಎಂದನಿಸುತ್ತದೆ.
ಮತ್ತಷ್ಟು ಓದು