ವಿಷಯದ ವಿವರಗಳಿಗೆ ದಾಟಿರಿ

Archive for

24
ಫೆಬ್ರ

ಚಿತ್ರ ವಿಮರ್ಶೆ – ಪಿ ಎಸ್ ಐ ಲವ್ ಯು

-ಸಂದೀಪ್ ಎನ್

“I just want to see you

When youre all alone

I just want to catch you if I can

I just want to be there

When the morning light explodes

On your face it radiates

I cant escape

I love you till the end…”  ಎಂಬ ಹಿನ್ನೆಲೆ ಗಾಯನದೊಂದಿಗೆ, ಇಬ್ಬರು ಯುವ ಜೋಡಿಗಳಾದ  Holly ಮತ್ತು Gerryಯ ನಡುವಿನ ಸರಸ/ವಿರಸದ  ಸಂಬಾಷಣೆಯೊಂದಿಗೆ ಚಿತ್ರವನ್ನು Richard Lagravenese ನಿರ್ದೇಶಿಸಿದ್ದಾರೆ. ಚಿತ್ರವೂ 2004 ನೇ ಇಸವಿಯಲ್ಲಿ Ceclia Ahern  ಎಂಬ Irish ಕವಿ ಬರೆದ  ಕಾದಂಬರಿ ಆಧಾರಿತವಾಗಿದೆ.

ಮತ್ತಷ್ಟು ಓದು »

23
ಫೆಬ್ರ

ಹೀಗೊಂದು ವೇದೋಕ್ತ ವಿವಾಹ

-ಕ.ವೆಂ.ನಾಗರಾಜ್

ಸುಮಾರು ಒಂದು ವರ್ಷದ ಹಿಂದಿನ ಘಟನೆ. ಅವನ ಹೆಸರು ಸುನಿಲ, ಓರ್ವ ಸ್ಫುರದ್ರೂಪಿ ಹಿಂದೂ ತರುಣ, ಹಾಸನ ಮೂಲದವನು. ಅವಳು ಒಲಿವಿಯ, ಮನಮೋಹಕ ಚೆಲುವಿನ ಕ್ರಿಶ್ಚಿಯನ್ ನವಯುವತಿ, ಮಂಗಳೂರಿನ ಕಡೆಯವಳು. ಇಬ್ಬರಿಗೂ ಪರಿಚಯವಾಯಿತು, ಮಾತುಕಥೆಗಳಾದವು, ಪ್ರೇಮಾಂಕುರವಾಯಿತು. ಮದುವೆಯಾಗಲು ನಿರ್ಧರಿಸಿದರು. ಜಾತಿ ಬೇರೆಯಾದ್ದರಿಂದ ಎರಡೂ ಮನೆಯವರು ಪ್ರಾರಂಭದಲ್ಲಿ ಒಪ್ಪದಿದ್ದರೂ ಅವರ ಧೃಢ ನಿರ್ಧಾರದಿಂದಾಗಿ ಒಪ್ಪಿಗೆ ಸಿಕ್ಕಿತು. ಸುನಿಲನ ಇಚ್ಛೆಯಂತೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಒಲಿವಿಯ ಸಮ್ಮತಿಸಿದಳು.

ವೇದೋಕ್ತ ರೀತಿಯಲ್ಲಿ ಮದುವೆಯಾಗಲು ನಿರ್ಧರಿಸಿ ಬೆಂಗಳೂರಿನ ವೇದಾಧ್ಯಾಯಿ ಸುಧಾಕರ ಶರ್ಮರನ್ನು ಭೇಟಿಯಾದರು. ಅವರು ಒಲಿವಿಯಳನ್ನು ಆಕೆ ಇನ್ನುಮುಂದೆ ಸುನಿಲನಂತೆ ಸಸ್ಯಾಹಾರಿಯಾಗಿರಲು ಸಾಧ್ಯವೇ ಎಂದು ವಿಚಾರಿಸಿದರು. ಆಕೆಗೆ ತಕ್ಷಣಕ್ಕೆ ಉತ್ತರಿಸಲಾಗಲಿಲ್ಲ. ಶರ್ಮರು ಹೇಳಿದರು -“ಆಹಾರ ಪದ್ಧತಿ ಬದಲಾಯಿಸಲು ನನ್ನ ಒತ್ತಾಯವಿಲ್ಲ. ಆದರೆ ಸಸ್ಯಾಹಾರಿಯಾಗಲು ನಿರ್ಧರಿಸಿದರೆ ಮಾತ್ರ ನಾನು ಮದುವೆ ಮಾಡಿಸುವೆ. ಇಲ್ಲದಿದ್ದರೆ ಬೇರೆಯವರ ಮಾರ್ಗದರ್ಶನದಲ್ಲಿ ಮದುವೆಯಾಗಬಹುದು. ನಿರ್ಧಾರವನ್ನು ಈ ಕೂಡಲೇ ತೆಗೆದುಕೊಳ್ಳಬೇಕಿಲ್ಲ. ನಿಧಾನವಾಗಿ ಯೋಚಿಸಿದ ನಂತರದಲ್ಲಿ ತಿಳಿಸಿ”. ನಂತರ ತಿಳಿಸುವುದಾಗಿ ಹೋದ ಅವರು ಕೆಲವು ದಿನಗಳ ನಂತರ ಮತ್ತೆ ಬಂದು ಶರ್ಮರನ್ನು ಭೇಟಿ ಮಾಡಿದರು. ಒಲಿವಿಯ ಇನ್ನುಮುಂದೆ ಸಸ್ಯಾಹಾರಿಯಾಗಿರಲು ನಿರ್ಧರಿಸಿದ್ದಳು.
ಮತ್ತಷ್ಟು ಓದು »

23
ಫೆಬ್ರ

ಆ ಪುಸ್ತಕದ ಕೊನೆಯ ಪುಟದಲ್ಲಿ ನಿಂತು…

-ಕಾಲಂ ೯

ಮಂಗಳೂರಿನಲ್ಲಿ ಅಶೋಕವರ್ಧನ್ ತಮ್ಮ ಅತ್ರಿ ಬುಕ್ ಸೆಂಟರ್ ನಿಲ್ಲಿಸ್ತಾರೆ ಎಂಬ ಸುದ್ದಿ ನೀವೂ ಓದಿರಬಹುದು. ಸ್ವತಃ ಅವರೇ ತಮ್ಮ ಬ್ಲಾಗಿನಲ್ಲಿ ಬರೆದುಕೊಂಡಿದ್ದಾರೆ. ಅವಧಿ, ದಟ್ಸ್ ಕನ್ನಡ….. ಈ ಬಗ್ಗೆ ಗಮನಸೆಳೆದಿವೆ. ಜೋಗಿ, ನಾಗತಿಹಳ್ಳಿ ಅತ್ರಿ ನಿರ್ಗಮನದ ಬಗ್ಗೆ ಪ್ರಸ್ತಾಪಿಸಿದ್ದಾರೆ.

೨೦೦೨ನೇ ಇಸವಿ ಇರಬೇಕು. ಕನ್ನಡ ಸಾಹಿತ್ಯದ ದಿಗ್ಗಜ ಹಾಮಾನಾ ತೀರಿಕೊಂಡಿದ್ದರು. ತಮ್ಮ ಮೈಸೂರಿನ ಮನೆ ’ಗೋಧೂಳಿ’ಯ ಪಡಸಾಲೆ, ರೂಮುಗಳನ್ನು ದಾಟಿ ಅಡುಗೆಮನೆಗೂ ನುಗ್ಗಿಬಿಡಬಹುದಾದಷ್ಟು ಪುಸ್ತಕ ಸಂಗ್ರಹಿಸಿಕೊಂಡವರು ಹಾಮಾನಾ. ತಮ್ಮ ವಿಲ್‌ನಲ್ಲಿ ಪುಸ್ತಕ ಸಂಗ್ರಹ ಧರ್ಮಸ್ಥಳದ ಹೆಗ್ಗಡೆಯವರಿಗೆ ಸಲ್ಲಬೇಕೆಂದು ಬರದಿಟ್ಟಿದ್ದರು. ಹಾಗೆ ಲಾರಿಗಟ್ಟಲೆ ಪುಸ್ತಕ ಮೈಸೂರಿನಿಂದ ಹೊರಟು ಉಜಿರೆಯ SDM ಕಾಲೇಜಿನ ಗ್ರಂಥಾಲಯದ ಅಟ್ಟ ತಲುಪಿಕೊಂಡಿತು.

ಹಾಮಾನಾರಲ್ಲಿ ಇಷ್ಟೊಂದು ಪುಸ್ತಕ ಸಂಗ್ರಹವಾಗಿದ್ದು ಹೇಗೆ? ಇದಕ್ಕೆ ಉತ್ತರ ಎಂಬಂತೆ ಅಶೋಕವರ್ಧನ್ ಖಾಸಗಿಯಾಗಿ ಪ್ರತಿಕ್ರಿಯಿಸಿದ್ದರು.
`ಪುಸ್ತಕ ಮಾರಾಟ-ಹೋರಾಟ’ ಅಶೋಕವರ್ಧನ್‌ರವರೇ ಬರೆದು ಪ್ರಕಟಿಸಿದ ವಿಶಿಷ್ಟ ಪುಸ್ತಕ. ಈ ಪುಸ್ತಕದ ವಿವರಕೊಟ್ಟು ಅಶೋಕವರ್ಧನ್ ನೂರಾರು ಸಾಹಿತಿ-ಲೇಖಕರಿಗೆ ಅಂಚೆಕಾರ್ಡ್ ಹಾಕಿದ್ದರು. ಹಾಮಾನಾರ ಮರು ಟಪಾಲು ಬಂತು. `ಹಿಂದೆಲ್ಲ ನೀವು ನೇರ ಪುಸ್ತಕವನ್ನೇ ಕಳುಹಿಸುತ್ತಿದ್ದಿರಿ, ಇದೇನು ಹೊಸ ಪರಿಪಾಠ? ಎಂದಿನಂತೆ(ಎಲ್ಲರಂತೆ?) ಪುಸ್ತಕವನ್ನೇ ಕಳುಹಿಸಿಕೊಡಬಹುದಿತ್ತಲ್ಲ?’

ಆ ಪತ್ರ ನೆನಪಿಸಿಕೊಳ್ಳುವ ಅಶೋಕವರ್ಧನ್ ‘ಹಾಮಾನಾ ಹಿಂದಿನಂತೆ’ ಗೌರವಪ್ರತಿ’ಯನ್ನೇ ನಿರೀಕ್ಷಿಸಿದ್ದರು. ‘ಪುಸ್ತಕ ಮಾರಾಟ-ಹೋರಾಟ’ ಅಂತ ಪುಸ್ತಕ ಬರೆದು ಅದನ್ನು ಗೌರವಪ್ರತಿಯಾಗಿ ಹಂಚುವುದು ಹೇಗೆ ಅನ್ನುವುದಷ್ಟೆ ಅವರ ಪ್ರಶ್ನೆಯಾಗಿರಲಿಲ್ಲ. ‘ಹೀಗೆ ಬಂದು ಸೇರಿಕೊಂಡ ಪುಸ್ತಕಗಳ ರಾಶಿಯದು’ ಎನ್ನುವ ಉತ್ತರವೂ ಅವರ ವಾದದಲ್ಲಿತ್ತು.
೩೬ ವರ್ಷಗಳ ಕಾಲ ಅಶೋಕವರ್ಧನ್ ‘ಅತ್ರಿ’ ಮೂಲಕ ಪುಸ್ತಕ ವ್ಯಾಪಾರ ನಡೆಸಿದ್ದಾರೆ. ಮೂಲ ಮೈಸೂರಿನ ಅವರ ಮನೆಯ ಹೆಸರೂ `ಅತ್ರಿ’ ಆ ಹೆಸರನ್ನೇ ಅವರು ಮಂಗಳೂರಿನ ಪುಸ್ತಕ ಮಳಿಗೆಗೂ ತಂದುಕೊಂಡರು. ಮೈಸೂರಿನ ಚಿರಪರಿಚಿತ ಗಣಿತ ಮೇಷ್ಟ್ರು GTM ತಮ್ಮ ಮೂವರು ಮಕ್ಕಳಿಗೆ ಆನಂದ, ಅಶೋಕ, ಅನಂತ ಎಂದು ಹೆಸರಿಟ್ಟರು. ಆ A3 (ATHREE)ನೇ ಅತ್ರಿ ಆದದ್ದು! ಮತ್ತಷ್ಟು ಓದು »

22
ಫೆಬ್ರ

ವಿಶ್ವಕ್ಕೆ ಸೆಡ್ಡು ಹೊಡೆದು ನಿಂತಿರುವ ಇರಾನ್ ಎಂಬ ಪರಾಕ್ರಮಿ

-ನಿತಿನ್ ರೈ ಕುಕ್ಕುವಳ್ಳಿ
ಒಂದು ಕಾಲದಲ್ಲಿ ಇರಾಕ್ ಅನ್ನೋ ರಾಷ್ಟ್ರ ಅಮೆರಿಕ ಸೇರಿದಂತೆ ಇಡೀ ವಿಶ್ವಕ್ಕೆ ಸವಾಲೆಸೆದಿತ್ತು. ಆದರೆ ಆ ದೇಶದ ಬತ್ತಳಿಕೆಯಲ್ಲಿ ಅಷ್ಟೊಂದು ಅಸ್ತ್ರಗಳಿರಲಿಲ್ಲ. ಆದರೆ ಇರಾನ್ ಅನ್ನೋ ದೇಶ ಇದೀಗ ಪೂರ್ಣ ಸಿದ್ದತೆಯ ಜೊತೆ ವಿಶ್ವದ ಮುಂದೆ ನಾನೆಷ್ಟು ಪರಾಕ್ರಮಿ ಅನ್ನೋದನ್ನ ತೋರಿಸಿದೆ.

ನಿನ್ನೆ ಅಂದರೆ ಬುಧವಾರ ಇರಾನ್ ಪ್ರಥಮ ಬಾರಿಗೆ ದೇಶೀಯವಾಗಿ ನಿರ್ಮಿಸಿರುವ ಪರಮಾಣು ಇಂಧನದ ಸರಳುಗಳನ್ನು ಸಂಶೋಧನಾ ಸ್ಥಾವರಗಳಿಗೆ ಭರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ತನ್ನ ತಾಕತ್ತನ್ನ ಹಾಗು “ತನ್ನನ್ನ ಮುಟ್ಟಿದರೆ ತಟ್ಟದೆ ಬಿಡೆನು” ಅನ್ನೋ ಎಚ್ಚರಿಕೆಯನ್ನ ಅಮೆರಿಕ ಸೇರಿದಂತೆ ಎಲ್ಲಾ ಪಾಶ್ಚಾತ್ಯ ದೇಶಗಳಿಗೆ ರವಾನೆ ಮಾಡಿದೆ. ಟೆಹರಾನ್ ಉತ್ತರ ಭಾಗದಲ್ಲಿರುವ ಸ್ಥಾವರಕ್ಕೆ ಸಲಾಕೆಗಳನ್ನ ಅಳವಡಿಸುವ ಮೂಲಕ ಇರಾನ್ ಅಧ್ಯಕ್ಷ ಮಹಮೂದ್ ಅಹ್ಮದಿ ನೆಜಾದ್ ಚಾಲನೆ ನೀಡಿದರು. ಇದರ ಜೊತೆ ಮತ್ತೊಂದು ಆಘಾತ ನೀಡಿದ ಇರಾನ್ ಅದ್ಯಕ್ಷ ನೆದರ್ಲ್ಯಾಂಡ್ಸ್, ಸ್ಪೇನ್, ಇಟಲಿ, ಫ್ರಾನ್ಸ್, ಗ್ರೀಸ್, ಪೋರ್ಚುಗಲ್‌ಗಳಿಗೆ ಇಂಧನ ರಫ್ತು ನಿಲ್ಲಿಸಲಾಗಿದೆ ಎಂದು ಘೋಷಣೆ ಮಾಡುವ ಮೂಲಕ ತಾನು ಯುದ್ದಕ್ಕೆ ಸಿದ್ದ ಅನ್ನೋದನ್ನ ಪರೋಕ್ಷವಾಗಿ ಜಗತ್ತಿಗೆ ಎಚ್ಚರಿಕೆಯ ಗಂಟೆಯನ್ನ ಹೊಡೆದರು. ತದ ನಂತರ ಮಾತನಾಡಿದ ಈ ಪರಾಕ್ರಮಿ “ನಮ್ಮವಿರೋಧಿಗಳೇನು ಬಲಾಢ್ಯರಲ್ಲ. ಅವರ ದುರಹಂಕಾರಕ್ಕೆ ತಕ್ಕ ಪಾಠ ಕಲಿಸದೇ ಬಿಡುವುದಿಲ್ಲ” ಎಂದು ಅಮೆರಿಕಕ್ಕೆ ನೇರವಾಗಿ ಎಚ್ಚರಿಕೆ ನೀಡಿದರು.

ಮತ್ತಷ್ಟು ಓದು »

22
ಫೆಬ್ರ

ಪತ್ರಕರ್ತರ ಕೊರಳಿಗೆ ಗಂಟೆ ಕಟ್ಟುವರು ಯಾರು?

– ಪೂರ್ಣಚಂದ್ರ

ಬಡವರಿಗೆ ಬಣ್ಣದ ಟಿವಿ ಎಂದು ತಮಿಳುನಾಡಿನ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ಘೋಷಿಸಿದಾಗ, ಪತ್ರಕರ್ತರು ಇದೊಂದು ಜನಪ್ರಿಯ ಘೋಷಣೆ ಎಂದು ಗೇಲಿ ಮಾಡಿದರು. ಸರಕಾರಗಳು ಘೋಷಿಸುವ ಜನಪ್ರಿಯ ಕಾರ್ಯಕ್ರಮಗಳನ್ನು ಗೇಲಿ ಮಾಡುವುದು, ವಿಶ್ಲೇಷಿಸುವುದು ಅವರ ಕರ್ತವ್ಯ ಅವರು ಮಾಡಿದರು. ಆದರೆ, ಅಂತಹ ಜನಪ್ರಿಯ ಘೋಷಣೆಯ ಫಲಾನುಭವಿಗಳೇ ತಾವೇ ಆಗಿಬಿಟ್ಟರೆ !
ಕರ್ನಾಟಕದ ಬಿಜೆಪಿ ಸರಕಾರ ರಾಜ್ಯದ ಎಲ್ಲ ಪತ್ರಕರ್ತರಿಗೆ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಂಪೂರ್ಣ ಉಚಿತವಾಗಿ ಪ್ರಯಾಣ ಮಾಡಬಹುದು ಎಂಬ ಆದೇಶವನ್ನು ಸದ್ಯದಲ್ಲಿಯೇ ಹೊರಡಿಸಲಿದೆಯಂತೆ. ಇದು ಕೂಡ ಜನಪ್ರಿಯ ಘೋಷಣೆಯೇ. ಆದರೆ, ಅದೇಕೋ ಹೆಚ್ಚು ಪತ್ರಕರ್ತರು ಈ ಬಗ್ಗೆ ಮಾತನಾಡುತ್ತಿಲ್ಲ.
ಈ ಬಗ್ಗೆ ಪೂರ್ಣಚಂದ್ರ ಬರೆದಿದ್ದಾರೆ.

ಬೀದರ್‌ನಿಂದ ಹಿಡಿದು ಚಾಮರಾಜನಗರ ಜಿಲ್ಲೆಯವರೆಗೆ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿರುವ ಮಾನ್ಯತೆ ಪಡೆದ ಪತ್ರಕರ್ತರು ಈಗ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಸಂಪೂರ್ಣ ಉಚಿತವಾಗಿ ಎಲ್ಲಿ ಬೇಕಾದರಲ್ಲಿ ಓಡಾಡಬಹುದು !

ನಾನಾ ಆರೋಪಗಳನ್ನು ಹೊತ್ತು ಮನೆಗೆ ಹೋಗಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬೆಂಗಳೂರು ಪತ್ರಕರ್ತರಿಗಷ್ಟೇ ದಯಪಾಲಿಸಿದ್ದ ಈ ಕೊಡುಗೆಯನ್ನು, ನಗುಮೊಗದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರು, ರಾಜ್ಯದ ಎಲ್ಲ ಪತ್ರಕರ್ತರಿಗೂ ವಿಸ್ತರಿಸಲಿದ್ದಾರೆ ಎಂಬ ವರ್ತಮಾನ ಬಂದಿದೆ.
ಅದೂ, ರಾಜಹಂಸ, ವೋಲ್ವೋ ಸಹಿತ ಎಲ್ಲ ಬಸ್‌ಗಳಲ್ಲೂ ! ಮತ್ತಷ್ಟು ಓದು »

21
ಫೆಬ್ರ

ಅವರು ನಿಷ್ಕ್ರಿಯರ ‘ಗಾಂಧಿ’ ಆಗಿರಲಿಲ್ಲ.. ಕ್ರೀಯಾಶೀಲರ ‘ನೇತಾಜಿ’ ಆಗಿದ್ದರು…

-ಅಶ್ವಿನ್ ಅಮೀನ್

ಭಾರತದ ಸ್ವಾತಂತ್ರ ಸಂಗ್ರಾಮದ ಇತಿಹಾಸವನ್ನು ಹೇಳ ಹೊರಟರೆ ಅದು ಇಂದು ನಾಳೆಗೆ ಮುಗಿಯುವಂತದ್ದಲ್ಲ.. ಆ ಪ್ರವಾಹೋಪಾದಿಯ ಘಟನೆಗಳೇ ಹಲವು ಕೋಟಿ ಪುಟಗಳ ಮಹಾ ಗ್ರಂಥವಾದೀತು.! ಆ ಸಮಯದಲ್ಲಿ ಭಾರತ ಮಾತೆಯ ಬಿಡುಗಡೆಗಾಗಿ ಹೋರಾಡಿದ ಮಹಾನ್ ನಾಯಕರುಗಳೆಷ್ಟೋ, ಹೋರಾಟಗಾರರೆಷ್ಟೋ.. ಅಂತಹ ಹಲವರ ಮದ್ಯೆ ಭಿನ್ನವಾಗಿ ನಿಲ್ಲುವ, ಅಹಿಂಸಾವಾದವನ್ನು ಬಹಿರಂಗವಾಗಿ ವಿರೋಧಿಸಿದ, ಭಗವದ್ಗೀತೆಯ ತಿರುಳಾದ ದುಷ್ಟದಮನ ಶಿಷ್ಟಪಾಲನವನ್ನು  ಅನುಷ್ಠಾನಕ್ಕೆ ತರಲು ಯತ್ನಿಸಿದ ಧೀಮಂತ ನಾಯಕ, ಕ್ರಾಂತಿ ಪುರುಷ ನೇತಾಜಿ ಸುಭಾಶ್ ಚಂದ್ರ ಬೋಸ್ ರ ಜನ್ಮ ದಿನ (ಜನವರಿ 23).

ನೇತಾಜಿಯವರ ಹೋರಾಟದ ದಿನಗಳು ರಾಷ್ಟ್ರೀಯ ಕಾಂಗ್ರೆಸ್ ನಿಂದ ಆರಂಭವಾಯಿತು. ಆಗ ಗಾಂಧೀಜಿಯವರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿತ್ತು. ಆದರೆ ಗಾಂಧೀಜಿ ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ತಮ್ಮ ನಾಯಕತ್ವದ ಚಳುವಳಿಗಳಲ್ಲಿ  ಎಲ್ಲಾದರೂ ಹಿಂಸಾ ಘಟನೆಗಳು ನಡೆದರೆ ಅದನ್ನು ವಿರೋಧಿಸುತ್ತಿದ್ದರು. ಯಾಕೆಂದರೆ ಬ್ರಿಟಿಷರಿಗೆ ನೋವಾಗುವುದು ಗಾಂಧೀಜಿಯವರಿಗೆ ಇಷ್ಟವಿರಲಿಲ್ಲ. !!!! ಗಾಂಧೀಜಿಯವರ ಪ್ರತಿಯೊಂದು ಚಳುವಳಿಗಳಲ್ಲೂ ಇದು ಎದ್ದು ಕಾಣುತ್ತದೆ.! ಇದು ಬಿಸಿ ರಕ್ತದ ಯುವಕ ಸುಭಾಷ್ ಚಂದ್ರ ಬೋಸ್ ರಿಗೆ ಸಹ್ಯವಾಗಲಿಲ್ಲ. ಅದನೆಲ್ಲ ಒಪ್ಪಿಕೊಳ್ಳಲು ಅವರು ಗಾಂಧಿಯಾಗಿರಲಿಲ್ಲ..! ಅವರು ಸುಭಾಶ್ ಚಂದ್ರ ಬೋಸ್ ಆಗಿದ್ದರು..! ಕ್ರಾಂತಿ ಕ್ರಾಂತಿ ಎಂದು ಜಪಿಸುತಿದ್ದ ನೇತಾಜಿಯವರ ಮನಸ್ಸು ಈ ಗಾಂಧಿಯ  ಶಿಖಂಡಿತನವನ್ನು ಒಪ್ಪಿಕೊಳ್ಳುವುದಾದರೂ ಹೇಗೆ..?! ಮುಂದೆ ಕಾಂಗ್ರೆಸ್ಸಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದರೂ ಗಾಂಧೀಜಿ ಸುಭಾಷರ ಜಯವನ್ನು ಒಪ್ಪದ ಕಾರಣ ಹಾಗು ತನ್ನ ಮನಸ್ಸಿಗೆ ವಿರುದ್ಧವಾದ ಭಾವನೆ ಹೊಂದಿರುವ ಗಾಂಧೀಜಿಯೊಡನೆ ಮುಂದುವರಿಯಲು ಸಾಧ್ಯವಾಗದ ಕಾರಣ ನೇತಾಜಿ ಕಾಂಗ್ರೆಸ್ ನಿಂದ ಅನಿವಾರ್ಯವಾಗಿ ಹೊರಬಂದರು. ಅಲ್ಲಿಂದ ಸುಭಾಷರ ಕ್ರಾಂತಿಯ ಜೀವನ ಆರಂಭವಾಯಿತು. ಜೊತೆಗೆ ಭಾರತದ ಕ್ರಾಂತಿಯ ಪುಟಕ್ಕೆ ಹೊಸ ತಿರುವು ಕೂಡ..!

ಮತ್ತಷ್ಟು ಓದು »

21
ಫೆಬ್ರ

ಎಷ್ಟು ಶುದ್ಧ ಮಾಡಿದರೂ ಕೊಚ್ಚೆ ಕೊಚ್ಚೆಯೇ

ವಿಷ್ಣುಪ್ರಿಯ

ತಾನು ಎಲ್ಲವನ್ನೂ ನಿಯಂತ್ರಿಸಬಲ್ಲೆ ಎಂಬ ಮಾನವಭ್ರಮೆಗೆ ಪ್ರತಿ ಬಾರಿಯೂ ತಡೆ ಬೀಳುತ್ತಿದೆ ಎಂಬುದು ದಿಟವಾಯಿತು. ಪ್ರಕೃತಿಯ ನಿರ್ಧಾರಗಳ ಮೇಲೆ ಮಾನವ ತನ್ನ ಪ್ರಭಾವ ಬೀರುವ ಪ್ರಯತ್ನ ಮಾಡಿದರೆ ಪ್ರಕೃತಿ ಮಾನವನಿಗಿಂತಲೂ ಎತ್ತರಕ್ಕೆ ಬೆಳೆಯುತ್ತದೆ ಎಂಬುದು ಕೂಡಾ ಸ್ಪಷ್ಟವಾಯಿತು.

ಈ ಚರಂಡಿಗಳಲ್ಲಿ ಹರಿಯುವ ನೀರನ್ನು ನೊಡಿದರೆ ಮೈಯೆಲ್ಲಾ ಜಿರಳೆ ಹರಿದಂತಾಗುತ್ತದೆ! ಬೆಂಗಳೂರಿಗರಿಗಂತೂ ಮಳೆ ಬಂದು ಚರಂಡಿಯಲ್ಲಿ ನೀರುಕ್ಕಿ ಹರಿದರೆ ಜೀವನವೇ ಬೇಡ ಎನ್ನುವಷ್ಟರ ಮಟ್ಟಿಗೆ ಜಿಗುಪ್ಸೆ ಬಂದೀತು! ಬೆಂಗಳೂರಿನಲ್ಲಿ ಚರಂಡಿಗಳ ನೀರು ಅದ್ಯಾವ ಕೆರೆ ಸೇರುತ್ತದೆ ಎಂದು ನೋಡುವುದಕ್ಕೆ ಹೊರಟರೆ ಆ ಕೆರೆಯಿಂದಲೇ ನಮಗೆ ವಿತರಣೆಯಾಗುವಂಥ ನೀರನ್ನು ಕುಡಿಯುವುದಕ್ಕೆ ಸಾಧ್ಯವಿಲ್ಲ. ನಿರನ್ನು ಶುದ್ಧೀಕರಿಸಿಯೇ ಕೆರೆಗೆ ಬಿಡಲಾಗುತ್ತದೆ, ಕೆರೆಯ ನಿರನ್ನು ಶುದ್ಧೀಕರಿಸಿಯೇ ಕುಡಿಯುವುದಕ್ಕೆ ನೀಡಲಾಗುತ್ತದೆ. ಹೀಗಾಗಿ ಆ ನೀರಿನಿಂದ ಏನೂ ಸಮಸ್ಯೆ ಆಗದು ಎಂದು ಆಧಿಕಾರಿಗಳು ಹೇಳಿದರು ಎಂದಾದರೆ ಅವರ ಮಾತನ್ನು ನಂಬಬೇಡಿ. ಯಾಕೆಂದರೆ ಕೊಚ್ಚೆ ನೀರನ್ನು ಅದೆಷ್ಟೇ ಶುದ್ಧೀಕರಿಸಿದರೂ ಸಹ, ಅದ್ಯಾವ ಅತ್ಯಾಧುನಿಕ ತಂತ್ರಜ್ಞಾನದಿಂದ ಶುದ್ಧೀಕರಿಸಿದರೂ ಸಹ ಅದರಲ್ಲಿರುವ ವೈರಾಣುಗಳು ಸಂಪೂರ್ಣವಾಗಿ ನಾಶವಾಗುವುದಿಲ್ಲ ಎಂದು ವಿಜ್ಞಾನಿಗಳ ತಂಡವೊಂದರ ಸಂಶೋಧನೆ ಹೇಳುತ್ತಿದೆ.

ಯೂನಿವರ್ಸಿಟಿ ಆಫ್ ಮಿನೆಸೋಟಾದ ವಿಜ್ಞಾನಿಗಳು ನಡೆಸಿದ ಸಂಶೋಧನೆಯ ಪ್ರಕಾರ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಶುದ್ಧೀಕರಿಸಿದ ನೀರಿನಲ್ಲಿಯೂ ಸಹ ಬಹಳಷ್ಟು ಹಾನಿಕಾರಕ ಬ್ಯಾಕ್ಟೀರಿಯಾಗಳು ಮತ್ತು ಇತರ ವೈರಾಣುಗಳು ಇರುತ್ತವೆ. ಈ ವೈರಾಣುಗಳು ಸೋಂಕು ನಿರೋಧಕಗಳು ಅಥವಾ ಆಂಟಿಬಯಾಟಿಕ್ ಗಳಿಂದ ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನೂ ಹೊಂದಿರುತ್ತವೆ. ಇವುಗಳ ಕಾರಣದಿಂದಾಗಿಯೇ ಹಲವು ರೋಗಗಳು ಹರಡುತ್ತವೆ ಎಂಬ ವಾಸ್ತವಾಂಶ ತಿಳಿದುಬಂದಿದೆ.

ಮತ್ತಷ್ಟು ಓದು »

20
ಫೆಬ್ರ

ಅರಿಯದೇ ಅರ್ಚಿಸಿದರೂ ಮರೆಯದೇ ಮರ್ಯಾದೆಕೊಡುವ ಮುಗ್ಧನಿವ ಮಹಾದೇವ !

-ವಿ.ಆರ್. ಭಟ್

ಶಿವನ ಕುರಿತು ಸಾವಿರ ಸಾವಿರ ಕಥೆಗಳು ನಮಗೆ ದೊರೆಯುತ್ತಲೇ ಇರುತ್ತವೆ. ಈ ಲೋಕದ ಸೃಷ್ಟಿ, ಸ್ಥಿತಿ, ಲಯ[ನಾಶ] ಈ ಮೂರೂ ಕಾರ್ಯಗಳು ಏಕಮೂಲದ ಶಕ್ತಿಯಿಂದ ನಡೆದರೂ ಶಿವನನ್ನು ಲಯಕರ್ತನೆಂದು ದೂರಿ ಆತನನ್ನು ದೂರವೇ ಇಡುವ ಮಂದಿಯೂ ಇದ್ದಾರೆ; ಅದು ಹೊಸದೇನೂ ಅಲ್ಲ. ಪಾಲಿಗೆ ಬಂದ ಕೆಲಸವನ್ನು ಅನಿವಾರ್ಯವಾಗಿ ಪಾಲಿಸುವ ಶಿವ ಮಾರ್ಕಾಂಡೇಯನ ಭಕ್ತಿಗೆ ಒಲಿದು ಮೃತ್ಯುಂಜಯನೂ ಆಗಿದ್ದಾನೆ, ಕಣ್ಣ[ಪ್ಪ]ನ ಕಣ್ಣಿಗೆ ತನ್ನನ್ನೇ ಮಾರಿಕೊಂಡಿದ್ದಾನೆ! ಶಿವನನ್ನು ತಪಿಸಿ ಕರೆದು ಅರ್ಜುನ ಪಾಶುಪತಾಸ್ತ್ರವನ್ನೇ ಪಡೆದರೆ ರಾವಣ ಆತ್ಮ ಲಿಂಗವನ್ನೇ ಪಡೆದಿದ್ದ ಎಂಬುದು ಈ ನೆಲದ ಕಥೆ. ಇಂತಹ ನಮ್ಮ ಬೋಲೇನಾಥ ಯಾ ಬೋಳೇ ಶಂಕರ ಪುರಾಣದ ಭಾಗವತದ ಕಥಾಭಾಗಗಳಲ್ಲಿ ರಕ್ಕಸರಿಗೆ ವರಗಳನ್ನು ಕರುಣಿಸಿ ಸಂದಿಗ್ಧದಲ್ಲಿ ಸಿಲುಕಿಕೊಳ್ಳುವುದನ್ನೂ ಕೂಡ ಕಾಣಬಹುದಾಗಿದೆ. ಭೂತಗಣಗಳಿಗೆ, ರಕ್ಕಸರಿಗೆ ಪ್ರಿಯ ದೈವ ಶಿವನೇ ಆದರೂ ಪರೋಕ್ಷ ಅವರುಗಳ ನಿಯಂತ್ರಣಕ್ಕೂ ಆತ ಕಾರಣನಾಗಿದ್ದಾನೆ.

ಅಲಂಕಾರ ಪ್ರಿಯೋ ವಿಷ್ಣುಃ
ಅಭಿಷೇಕ ಪ್ರಿಯಃ ಶಿವಃ |…..

ಒಂದು ಚೊಂಬು ನೀರನ್ನು ನಿಷ್ಕಲ್ಮಶ ಹೃದಯದಿಂದ ಲಿಂಗರೂಪೀ ಶಿವನಮೇಲೆ ಎರಚಿದರೆ ಆತ ಸಂತೃಪ್ತ! ಸರಳತೆಯಲ್ಲಿ ಅತಿ ಸರಳ ಪೂಜೆ ಶಿವನ ಪೂಜೆ. ಇದೇ ಶಿವ ಕ್ರುದ್ಧನಾದರೆ ಮಾತ್ರ ಆಡುವುದು ತಾಂಡವ ! ಶಿವತಾಂಡವದ ಡಮರು ನಿನಾದಕ್ಕೆ ಸಮಸ್ತಲೋಕಗಳೂ ಅಂಜುತ್ತವೆ ಎಂಬುದು ಪ್ರತೀತಿ. ನರ್ತನದಲ್ಲಿಯೂ ಈತನದೇ ಮೊದಲಸ್ಥಾನವಾದ್ದರಿಂದ ನಟರಾಜ ಎಂಬ ಹೆಸರಿನಿಂದಲೂ ಪೂಜಿಸಲ್ಪಡುತ್ತಾನೆ.

ಮತ್ತಷ್ಟು ಓದು »

20
ಫೆಬ್ರ

ಹರಃ ಪಾಪಾನಿ ಹರತಾತ್ ಶಿವೋ ಧತ್ತಾಂ ಸದಾ ಶಿವಂ

-ಸುಗುಣಾ ಮಹೇಶ್

ಇತ್ತೀಚೆಗೆ ಮಗನಿಗೆ ಶಿವರಾತ್ರಿ ಹಬ್ಬವಿದೆ ಉಪವಾಸ ಜಾಗರಣೆ ಎಲ್ಲಾ ಮಾಡುತ್ತಾರೆ. ಊರಲ್ಲಿ ಇದ್ದಿದ್ದರೆ ನಾವೂ ಸಹ ಆಚರಿಸಬಹುದಿತ್ತು ಆದರೆ ಕುವೈತಿನಲ್ಲಿ ಇದ್ದೀವಿ ಕೆಲಸದ ದಿನ ಬೇರೆ ಉಪವಾಸವಂತೂ ಮಾಡುತ್ತೇವೆ, ಜಾಗರಣೆ ಕಷ್ಟವೇನೋ ಎಂದು ಹೇಳಿದಾಗ ಮಗ ಶಿವನ ಬಗ್ಗೆ ಏನಾದರು ಇದ್ದರೆ ಹೇಳು ಎಂದ ಅವನಿಗಾಗಿ ಈ ಲೇಖನ ಬರೆದೆ ನಿಮ್ಮೊಂದಿಗೂ ಹಂಚಿಕೊಳ್ಳುತ್ತಲಿದ್ದೇನೆ….
ದೇವತೆಗಳ ಮತ್ತು ರಾಕ್ಷಸರ ಮಧ್ಯೆ ನಡೆದ ಸಮುದ್ರ ಮಥನದ ಸಂದರ್ಭದಲ್ಲಿ ಸಮುದ್ರದಿಂದ ಹಾಲಾಹಲ ಹೊರಬಂದು ಸೃಷ್ಟಿಯನ್ನು ಅಲ್ಲೋಲ ಕಲ್ಲೋಲ ಮಾಡುವ ಸಾಧ್ಯತೆಗಳು ಹೆಚ್ಚಾದ್ದರಿಂದ ದೇವತೆಗಳು ಈ ಸಂಕಷ್ಟದಿಂದ ಪಾರುಮಾಡಲು ಭಗವಾನ್ ವಿಷ್ಣುವಿನ ಮೊರೆ ಇಟ್ಟಾಗ, ವಿಷ್ಣು ಶಿವನನ್ನು ಭೇಟಿಯಾಗುವಂತೆ ಸಲಹೆ ನೀಡುತ್ತಾನೆ. ನಂತರ ದೇವತೆಗಳು ಶಿವನ ಬಳಿಗೆ ತೆರಳಿ ಕಷ್ಟದಿಂದ ಪಾರು ಮಾಡೆಂದು ಬೇಡಿಕೊಳ್ಳುತ್ತಾರೆ. ದೇವತೆಗಳ ಕಷ್ಟವನ್ನು ಅರಿತ ಶಿವ ಹಾಲಾಹಲ ಕುಡಿದು ಅದು ಹೊರಗೆ ಬರದಂತೆ ಹಾವಿನಿಂದ ಸುತ್ತಿಕೊಂಡನೆಂದು ಹೇಳಲಾಗುತ್ತದೆ. ಆದುದರಿಂದ ಶಿವನ ಕಂಠ ನೀಲಿಯಾಗಿರುತ್ತದೆ ಇದೇ ಕಾರಣಕ್ಕೆ ಶಿವನನ್ನು ನೀಲಕಂಠ ಎಂದೂ ಸಹ ಕರೆಯುತ್ತಾರೆ.
ಒಮ್ಮೆ, ಇಡೀ ಜಗತ್ತೇ ಪ್ರಳಯದ ಅಂಚಿನಲ್ಲಿದ್ದಾಗ ಪಾರ್ವತಿ ದೇವಿ ಈ ಜಗತ್ತನ್ನು ಉಳಿಸಲು ಶಿವನ್ನಲಿ ಮೊರೆಯಿಟ್ಟು ಬೇಡಿಕೊಳ್ಳುತ್ತಾಳೆ. ಆ ಸಂದರ್ಭದಲ್ಲಿ ಶಿವನು ಪ್ರಳಯದಿಂದ  ಜೀವಸಂಕುಲಗಳನ್ನೆಲ್ಲಾ ಪಾರು ಮಾಡಿದ ರಾತ್ರಿಯನ್ನು ಮಹಾಶಿವರಾತ್ರಿ ಎಂದು ಪಾರ್ವತಿ ದೇವಿ ಕರೆದರೆಂದು ಹೇಳಲಾಗುತ್ತದೆ. ಪ್ರಳಯದ ನಂತರ ಪಾರ್ವತಿ ಶಿವನ ಪೂಜೆ ಸಲ್ಲಿಸಲು ಇಷ್ಟವಾದ ದಿನ ಯಾವುದೆಂದು ಕೇಳಿದಾಗ, ಮಾಘ ತಿಂಗಳಿನ ೧೪ರ ರಾತ್ರಿ ನನ್ನ ಇಷ್ಟದ ರಾತ್ರಿ, ಅದನ್ನು ಶಿವರಾತ್ರಿ ಎಂದು ಹೇಳಿದ ಕೂಡಲೆ ಪಾರ್ವತಿ ಈ ಹಬ್ಬವನ್ನು ಪ್ರಚಲಿತಪಡಿಸಿದಳು ಎಂದು ಪುರಾಣಕಥೆಗಳು ಹೇಳುತ್ತವೆ.
20
ಫೆಬ್ರ

ವಿವೇಕಾನಂದರು ನಮಗೆಷ್ಟು ಗೊತ್ತು?

-ಹೇಮಾ ಪವಾರ್

ಈಗಾಗಲೇ ಕಾಂಟ್ರಾವರ್ಷಿಯಲ್ ನ ಉತ್ತುಂಗದಲ್ಲಿರುವ ವಿವೇಕಾನಂದರ ಬಗ್ಗೆ ಅವಹೇಳನಕಾರಿಯಾಗಿ ಹೇಳಲಾಗಿದೆ ಎನ್ನಲಾದ ದಿನೇಶ್ ಅಮಿನ್ ಮಟ್ಟುರವರ ಲೇಖನದ ರೆಫರೆನ್ಸ್ ಇಟ್ಟುಕೊಂಡೇ ಬರೆಯುತ್ತಿದ್ದೇನೆ. ಶಾಲೆಯ ದಿನಗಳಲ್ಲಿ ನನಗೆ ವಿವೇಕಾನಂದರು ಅಮೇರಿಕಾದಲ್ಲಿ ಭಾಷಣ ಮಾಡಿದವರು, ಹೊರದೇಶದಲ್ಲಿ ಭಾರತದ ಬಗ್ಗೆ ಮಾತನಾಡಿ ಮನ್ನಣೆ ಪಡೆದವರು ಎಂಬಂತಹ ಬೇಸಿಕ್ ಮಾಹಿತಿಗಳನ್ನು ಬಿಟ್ಟರೆ ಹೆಚ್ಚೇನು ತಿಳಿದಿರಲಿಲ್ಲ. ಕಾಲೇಜಿನ ದಿನಗಳಲ್ಲಿ ವಿವೇಕಾನಂದರ ಬಾಲ್ಯದ ಹೆಸರು ನರೇಂದ್ರ, ಬಡವರ ಬಗ್ಗೆ ಅತೀವ ಕಾಳಜಿ ತೋರಿಸುತ್ತಿದ್ದ ಅವರನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿದರೂ ಕಿಟಕಿಯಿಂದ ಕೈಗೆ ಸಿಕ್ಕಿದ್ದನ್ನು ಬಿಕ್ಷುಕರಿಗೆ ದಾನ ಮಾಡಿಬಿಡುತ್ತಿದ್ದರು ಎಂದೆಲ್ಲಾ ಉರು ಹಚ್ಚಿ ಭಾಷಣಗಳಲ್ಲಿ ಒಪ್ಪಿಸುತ್ತಿದ್ದದ್ದೇ ಹೊರತು ಒಬ್ಬ ವ್ಯಕ್ತಿಯಾಗಿ, ಸಾಧಕರಾಗಿ, ಅದೆಷ್ಟೋ ಜನರಿಗೆ ಪ್ರೇರಕ ಶಕ್ತಿಯಾದ ವಿವೇಕಾನಂದರ ಚಿಂತನೆಗಳನ್ನು ನಿಲುವುಗಳನ್ನು ಬಿಂಬಿಸುವಂತಹ ಮಾಹಿತಿ ಶಾಲೆ ಅಥವಾ ಕಾಲೇಜಿನ ದಿನಗಳಲ್ಲಿ ದಕ್ಕುವುದು ವಿರಳವಾಗಿತ್ತು.

ಇಂತಹ ಪುಸ್ತಕದಲ್ಲಿ, ಹೀಗೆ, ಇಂತಹವರು ಹೇಳಿದ್ದಾರೆ ಎಂದು ಇಡೀ ಪುಸ್ತಕವನ್ನೇ ಇಂಡೆಕ್ಸ್ ಮಾಡಿಕೊಂಡಿದ್ದ ಖ್ಯಾತ ಕಾದಂಬರಿಯೊಂದನ್ನು ಓದಿ ವಿವೇಕಾನಂದರ ನಿಜದ ನಿಲುವು ಹೀಗಿತ್ತೇ ಎಂದು ಗೊಂದಲಕ್ಕೊಳಗಾಗಿ ಅವರ ಬಗ್ಗೆ ಓದಲು ತೊಡಗಿದೆ. ಸೆಂಟ್ರಲ್ ಲೈಬ್ರರಿಯ ಹತ್ತಾರು ಪುಸ್ತಕಗಳ ನಡುವೆ ಆಸಕ್ತಿಕರ ಎನಿಸಿದ ಪುಸ್ತಕ ‘Swami Vivekananda On Himself’, ಆತ್ಮ ಕಥೆ ಎಂದು ಹೇಳಲು ಬರದಿದ್ದರೂ ಆ ಪುಸ್ತಕದಲ್ಲಿದ್ದದ್ದೆಲ್ಲಾ ವಿವೇಕಾನಂದರ ಬರಹಗಳೇ, ಅವರ ಡೈರಿಯಿಂದ ಹೆಕ್ಕಿದ್ದು, ಹಲವರ ಜೊತೆ ಹಂಚಿಕೊಂಡ ಪತ್ರಗಳು ಹೀಗೆ ಅವರ ವಿಚಾರಗಳನ್ನು ಹಿಡಿಯಾಗಿ ಬಿಂಬಿಸುವಂತಹ ಪುಸ್ತಕವದು. ಓದಿ ಮುಗಿಸುವಷ್ಟರಲ್ಲಿ ಅವರ ಚಿಂತನೆಗಳಿಂದ ತೀವ್ರ ಪ್ರಭಾವಿತಳಾಗಿದ್ದೆ. ವಿವೇಕಾನಂದರು ಮತ್ತವರ ಚಿಂತನೆಗಳು ಎಲ್ಲಾ ಕಾಲಕ್ಕು ಅನ್ವಯವಾಗುವಂತವು. ತಮ್ಮ ಬರಹಕ್ಕೆ ಬೆಂಬಲಿಸುವಂತದ್ದಷ್ಟೇ ಮುಖ್ಯವಾಗಿಸಿಕೊಂಡು ಅವರು ಹೀಗಿದ್ದರು ನೋಡಿ ನಾನು ಹೇಳುತ್ತಿರುವುದೂ ಅದನ್ನೇ ಎಂದು ತಮ್ಮ ವಿಕೃತಿಯನ್ನು ವಿವೇಕಾನಂದರ ಮೇಲೆ ಹೇರಲೆತ್ನಿಸಿದ ಆ ಖ್ಯಾತ ಕಾದಂಬರಿಕಾರರ ಬಗ್ಗೆ ಯೋಚಿಸಿ ನಗು ಬಂದಿತ್ತು.

ಮತ್ತಷ್ಟು ಓದು »