ವಿಷಯದ ವಿವರಗಳಿಗೆ ದಾಟಿರಿ

Archive for

3
ಮಾರ್ಚ್

ರೌಡಿಗಳ ಪಟ್ಟಿಗೆ ಹೊಸಬರ ಸೇರ್ಪಡೆ!

-ದಿನೇಶ್ ಕುಮಾರ್ ಎಸ್.ಸಿ.

ಗಾಯಗೊಂಡ ವಕೀಲರು

“ವಕೀಲರ ರೌಡಿಸಂಗೆ ಸಿಎಂ ಹೆದರ್ತಾರೆ, ಗೃಹಮಂತ್ರಿ ನಡುಗ್ತಾರೆ, ಆದ್ರೆ ನಾವು… ಮಾಧ್ಯಮದವರು ಹೆದರೋದಿಲ್ಲ…” ಇದು ಇವತ್ತಿನ ಉದಯವಾಣಿಯ ಮುಖಪುಟದ ಶೀರ್ಷಿಕೆ. ಕನ್ನಡಪ್ರಭ “ಏನ್ ಲಾ” ಎಂಬ ಎರಡು ಅರ್ಥ ಹೊರಡಿಸುವ ಶೀರ್ಷಿಕೆ ನೀಡಿದೆ. ಈ ಶೀರ್ಷಿಕೆಗಳು ಮಾಧ್ಯಮರಂಗದ ಆತ್ಮವಿಶ್ವಾಸದಂತೆಯೂ, ಅಹಂಕಾರದಂತೆಯೂ ಏಕಕಾಲಕ್ಕೆ ಧ್ವನಿ ಹೊರಡಿಸುತ್ತದೆ. ಸಿಟಿ ಸಿವಿಲ್ ಕೋರ್ಟ್ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಯಿಂದ ಕನ್ನಡ ಮಾಧ್ಯಮ ಸಮೂಹ ಕೆರಳಿ ನಿಂತಿದೆ ಎಂಬುದಂತೂ ಸ್ಪಷ್ಟ. ಕೆರಳುವುದು, ಕೆರಳಿಸುವುದು ಎಲೆಕ್ಟ್ರಾನಿಕ್ ಮಾಧ್ಯಮಗಳ ಜಾಯಮಾನ. ಯಾಕೆಂದರೆ ಅವುಗಳ ಟಿ‍ಆರ್‌ಪಿ ಯೊಂದಿಗೆ ಈ ಕೆರಳುವಿಕೆಗೆ ಸಂಬಂಧಿಸಿದೆ. ಈ ಬಾರಿ ಪತ್ರಿಕೆಗಳೂ ಸಹ ಕೆರಳಿವೆ. ಅದಕ್ಕೆ ಕಾರಣಗಳೂ ಇವೆ.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಕೆಲ ವಕೀಲರು ನಡೆಸಿದ ಪುಂಡಾಟಿಕೆ ಅಸಹನೀಯ ಮತ್ತು ಅಸಮರ್ಥನೀಯ. ಅದು ಅಕ್ಷರಶಃ ಗೂಂಡಾಗಿರಿಯೇ ಹೌದು. ಘಟನೆಗೆ ಕಾರಣವಾಗಿರಬಹುದಾದ ಪ್ರಚೋದನೆ ಏನೇ ಆಗಿದ್ದರೂ ಇಂಥ ಪುಂಡಾಟಿಕೆ ಅನಪೇಕ್ಷಿತ ಮತ್ತು ಕಾನೂನು ಬಾಹಿರ. ಇಂಥ ಕೃತ್ಯ ಎಸಗಿದ ವಕೀಲರು ಜೈಲು ಸೇರಲು ಲಾಯಕ್ಕಾದವರು ಮಾತ್ರವಲ್ಲ, ಅವರು ಮತ್ತೆಂದೂ ಕರಿಕೋಟು ಹಾಕುವಂತಾಗಬಾರದು.

ಈ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಕೆರಳುವಿಕೆಯೂ ಅರ್ಥ ಮಾಡಿಕೊಳ್ಳುವಂಥದ್ದು. ನ್ಯೂಸ್ ಚಾನಲ್‍ಗಳು ಎರಡು ನಿಮಿಷಗಳ ಕಾಲ ಪ್ರಸಾರವನ್ನೇ ನಿಲ್ಲಿಸಿ ಪ್ರತಿಭಟಿಸಿದವು. ದಿನವಿಡೀ ಕಪ್ಪು ಬಣ್ಣದ ಹಿನ್ನೆಲೆಯನ್ನು ಪರದೆಯ ಮೇಲೆ ಬಳಸಿದವು. ಕಪ್ಪು ಪಟ್ಟಿ ಕಟ್ಟಿಕೊಂಡೇ ಸುದ್ದಿ ಓದಲಾಯಿತು. ಒಂದು ವಾಹಿನಿಯಲ್ಲಂತೂ ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಸುದ್ದಿ ಓದಲಾಯಿತು.

ಮತ್ತಷ್ಟು ಓದು »

3
ಮಾರ್ಚ್

” ಅನ್ಯಾಯವಾದಿಗಳ ಹುಟ್ಟಡಗಿ ಪ್ರಜಾ ಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲಿ”

-ಬನವಾಸಿ ಸೋಮಶೇಖರ್

ಕೆಲವು ಗೂಂಡಾ ವಕೀಲರುಗಳು ಪೂರ್ವಾಗ್ರಹ ಪೀಡಿತರಾಗಿ ಮಾಧ್ಯಮದವರು ಹಾಗೂ ಪೋಲೀಸರ ಮೇಲೆ ಅಮಾನವೀಯ ದೌರ್ಜನ್ಯ,ಹಲ್ಲೆ ನಡೆಸುವ ಮೂಲಕ ನಮ್ಮ ಪವಿತ್ರ ನ್ಯಾಯಾಂಗ ವ್ಯವಸ್ಥೆಗೆ ಅಕ್ಷರಶಃ ಚ್ಯುತಿ ತಂದರು.ಇವರು ತಮ್ಮನ್ನು ಏನೆಂದುಕೊಂಡಿರುವರೋ?

ಪ್ರಜಾಪ್ರಭುತ್ವದ ಸಾರ್ವಭೌಮ ಪರಮಾಧಿಕಾರದ ಉತ್ತುಂಗ ವ್ಯವಸ್ಥೆಯನ್ನು ಹೊಂದಿರುವ ಭಾರತೀಯ ಸಂವಿಧಾನದ ಆಶಯ,ಮೂಲೋದ್ಧೇಶ ಹಾಗೂ ನಿಯಮಗಳ ಮೇಲೆ ದಬ್ಬಾಳಿಕೆ ನಡೆಸಿರುವ ಈ ಅನ್ಯಾಯವಾದಿಗಳ ಹುಟ್ಟಡಗಲೇಬೇಕು.ಸಂವಿಧಾನದ 19 (1) ನೇ ವಿಧಿಗೆ ಕಳಂಕ ತಂದು ಅಭಿವ್ಯಕ್ತಿ ಸ್ವಾತಂತ್ರ್ಯದ  ಹರಣ ಮಾಡಿರುವ ಈ ವಿಕೃತ ಮನಸುಗಳ ಮರ್ಧನ ಆಗಲೇಬೇಕು.ನಮ್ಮ ಪರಂಪರೆಗೆ,ನ್ಯಾಯ ದೇವತೆಯ ಕಣ್ಣಿಗೆ ಮಣ್ಣೆರಚಿರುವ ಈ ಕೂಳರ ಅಟ್ಟಹಾಸದ ಹಿಂದಿನ ಪಟ್ಟಭದ್ರರ ಬಣ್ಣ ಬಯಲಾಗಿ ಪ್ರಜಾಪ್ರಭುವಿಗೆ ಸತ್ಯದರಿವು ಆಗಲೇಬೇಕು.ಮೌಲ್ಯಾಧಾರಿತ ನ್ಯಾಯವಾದಿಗಳ ಮನಸ್ಸನ್ನು ಘಾಸಿಗೊಳಿಸಿರುವ ಈ ಘಟನೆ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡುವ ಹುನ್ನಾರುವುಳ್ಳದ್ದು.ಇಂಥ ವಿಚಾರ ಹೀನ,ಬುದ್ಧಿ ಹೀನ,ಅವಿವೇಕಿ ಲಂಪಟರಿಗೆ ಕೈಕೊಳತೊಡಿಸಿ ಜೈಲಿಗಟ್ಟಲೇಬೇಕು.ಬುಡಮೇಲು ಕೃತ್ಯವೆಸಗುವ ಯಾರನ್ನೇ ಆಗಲಿ ರಕ್ಷಿಸುವ,ಹಿನ್ನೆಲೆಯಲ್ಲಿ ಆಶ್ರಯ ನೀಡುವ ಕಾರ್ಯ ಸರ್ವಥಾ ಸಲ್ಲದು.ನಮ್ಮ ಶ್ರೀಮಂತ ಸಂಸ್ಕ್ರತಿ,ಪರಂಪರೆ,ಜನ ಜೀವನ,ನ್ಯಾಯ-ಅನ್ಯಾಯ ಇತ್ಯಾದಿ ಅಂಶಗಳ ಮೇಲೆ ಬೆಳಕು ಚೆಲ್ಲಿ ಸತ್ಯ ದರ್ಶನ ಮಾಡಿಸುವ ಮಾಧ್ಯಮ ಹಾಗೂ ಅದರ ಪ್ರತಿನಿಧಿಗಳ ಬದುಕಿಗೆ ಭದ್ರತೆ ಮತ್ತು ರಕ್ಷಣೆಯೇ ಇಲ್ಲವಾಗಿದೆ.ಜೀವದ ಹಂಗು ತೊರೆದು ಕಾವಲು ನಾಯಿಯಂತೆ ಕಾರ್ಯವೆಸಗುವ ಪತ್ರಕರ್ತರಿಗೆ,ಕಾನೂನು ಮತ್ತು ಸುವ್ಯವಸ್ಥೆಯ ಸೇವೆಗೈಯುವ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವ ಹೊಣೆಗಾರಿಕೆ ಹಿಂದಿಗಿಂತಲೂ ಈಗ ಅತ್ಯಂತಯ ಅಗತ್ಯವಾಗಿದೆ ಎಂಬುದನ್ನು ದಿನಾಂಕ:02-03-2012 ರಂದು ಬೆಂಗಳೂರಿನ ನ್ಯಾಯ ದೇವತೆಯ ಅಂಗಳದಲ್ಲಿ ನಡೆದ ಅನ್ಯಾಯವಾದಿಗಳ ಕ್ರೌರ್ಯ,ಅನಾಗರಿಕ  ಕೃತ್ಯ  ಜೀವಂತ ಸಾಕ್ಷಿಯಾಗಿ ಕರ್ನಾಟಕ ಇತಿಹಾಸದ ಪುಟಗಳಲ್ಲಿ ದಾಖಲಾಯಿತು.

ಮತ್ತಷ್ಟು ಓದು »

3
ಮಾರ್ಚ್

ಉದ್ಯೋಗ ಮಾಹಿತಿ

ಗೆಳೆಯರೆ
sccm ಡೆಪ್ಲೊಯ್ಮಮೆ೦ಟ್ ಪರಿಣಿತರು ಬೇಕಾಗಿದ್ದಾರೆ
ಅನುಭವ ೧ ರಿ೦ದ ೩ ವರ್ಷದ ವರಗೆ
sccm ಸೆರ್ವರ್ ನಲ್ಲಿ ಕೆಲಸದ ಅನುಭವ ಇಲ್ಲದಿದ್ದರು ನಡೆಯುತ್ತೆ ಆದರೆ
sccm ನ ತ೦ತ್ರಜ್ನಾದ ವಾತವಾರಣದಲ್ಲಿ ಕೆಲಸ ಮಾಡಿದ ಅನುಭವ ಇರಲೆಬೇಕು
ದಯವಿಟ್ಟು ನಿಮ್ಮ ರೆಸುಮೆ ಅನ್ನು udyoga12@gmail.com ಗೆ ತಕ್ಷಣ ಕಳುಹಿಸಿ