ಉಪಚುನಾವಣೆ ಫಲಿತಾಂಶ: ಬಿಜೆಪಿಗೆ ಮತದಾರ ಪ್ರಭು ಕೊಟ್ಟ ಮೊದಲ ಮತ್ತು ಕಡೆಯ ಎಚ್ಚರಿಕೆ
ಸಾತ್ವಿಕ್ ಎನ್ ವಿ
ಕಳೆದ ವಿಧಾನಸಭಾ ಚುನಾವಣೆಯ ನಂತರ ನಡೆದ ಎಲ್ಲ ಚುನಾವಣೆಗಳಲ್ಲೂ ಕರ್ನಾಟಕದ ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದರು. ಹಲವಾರು ವಿವಾದಗಳನ್ನು ಬಿಜೆಪಿ ಹುಟ್ಟುಹಾಕಿಕೊಂಡಿದ್ದರೂ ಜನತೆ ಪಕ್ಷಕ್ಕೆ ಆಶೀರ್ವದಿಸಿದ್ದರು. ಆದರೆ ಈ ಸರಣಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪಚುನಾವಣೆಯಲ್ಲಿ ಮುಂದುವರೆದಿಲ್ಲ. ಸದಾನಂದ ಗೌಡರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ತೆರವಾಗಿ ಪ್ರತಿಷ್ಠೆಯ ಕಣವಾಗಿ ಮಾರ್ಪಾಡಾಗಿತ್ತು.
ಇಂದು ಉಪಚುನಾವಣೆಯ ಫಲಿತಾಂಶ ಹೊರಬಂದಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಜಯಪ್ರಕಾಶ ಹೆಗ್ಡೆಯವರು ಸರಿಸುಮಾರು ೫೦ ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶವು ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಬಿಸಿತುಪ್ಪವಾಗುವ ಸಾಧ್ಯತೆಗಳಿವೆ. ಇದು ಉಪಚುನಾವಣೆಯಾದುದರಿಂದ ಮುಂದಿನ ಸುಮಾರು ಎರಡು ವರ್ಷಗಳು ಹೆಗ್ಡೆಯವರು ಲೋಕಸಭಾಸದಸ್ಯರಾಗಿರುತ್ತಾರೆ. ಮತ್ತಷ್ಟು ಓದು
ಮಂಕು ತಿಮ್ಮನ ಕಗ್ಗ – ರಸಧಾರೆ (೫)
– ರವಿ ತಿರುಮಲೈ
ದೇವರೆಂಬುದದೇನು ಕಗ್ಗತ್ತಲ ಗವಿಯೆ?
ನಾವರಿಯಲಾದೆಲ್ಲದರೊಟ್ಟು ಹೆಸರೇ?
ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು ?
ಸಾವು ಹುಟ್ಟುಗಳೇನು?- ಮಂಕುತಿಮ್ಮ
ದೇವರೆಂಬುದು ಅದೇನು ಕಗ್ಗತ್ತಲ ಗವಿಯೆ?. ನಾವರಿಯಲಾರದ ಎಲ್ಲದರ ಒಟ್ಟು ಹೆಸರೇ?
ಕಾವನು(=ಕಾಯುವವನು) ಓರ್ವನು(=ಒಬ್ಬನು) ಇರಲ್ಕೆ( =ಇರಲು) ಜಗದ ಕಥೆಯು ಏಕಿಂತು? ಸಾವು ಹುಟ್ಟುಗಳೇನು? – ಮಂಕುತಿಮ್ಮ.
ಮತ್ತಷ್ಟು ಓದು
ನಿಮ್ಮ ಬ್ಲಾಗ್ ಪೂರ್ತಿ ಕನ್ನಡದಲ್ಲಿ
ಆತ್ಮೀಯ ಕನ್ನಡಿಗರೆ,
ಈಗ ನೀವು ನಿಮ್ಮ ಬ್ಲಾಗ್ ಅನ್ನು ಆಂಗ್ಲ ಭಾಷೆಯಲ್ಲಿ ಮಾತ್ರವಲ್ಲದೆ ಪೂರ್ತಿ ಕನ್ನಡದಲ್ಲೇ ನೋಡಬಹುದು. ಈಗ ನಿಮಗೆ ಗೂಗಲ್ ಈ ರೀತಿಯ ಅವಕಾಶವನ್ನು ಕಲ್ಪಿಸಿದೆ.gs->Language and Formatting
ಅಲ್ಲಿ Language ಕಾಲಂನಲ್ಲಿ ಕನ್ನಡ ಭಾಷೆಯನ್ನು ಆರಿಸಿಕೊಳ್ಳಿ.
ನಂತರ Save ಮಾಡಿ
ಗ್ಯಾಡ್ಜೆಟ್ ಗಳು ಬ್ಲಾಗಿಗೆ ಹೊರಗಿನವುಗಳಾಗಿರುವುದರಿಂದ ಅಲ್ಲಿ ನಿಮಗೆ ಕನ್ನಡ ಸಿಗುವುದಿಲ್ಲ.
ಈಗ ನಿಮ್ಮ ಬ್ಲಾಗ್ ಕನ್ನಡದಲ್ಲಿ ತಯಾರಾಗಿರುತ್ತದೆ.
ಕನ್ನಡ ಭಾಷೆಯನ್ನು ಸೇರಿಸಿರುವುದಕ್ಕೆ ನನ್ನ ಕಡೆಯಿಂದ ಗೂಗಲ್ ಗೆ ಒಂದು ಅಭಿನಂದನೆ
ಈ ವಿಷಯವನ್ನು ಎಲ್ಲರೊಂದಿಗೂ ಹಂಚಿಕೊಳ್ಳಿ 🙂
***************************************************************************
ಚಿತ್ರ ಕೃಪೆ: hackuadi.blogspot.in