ವಿಷಯದ ವಿವರಗಳಿಗೆ ದಾಟಿರಿ

Archive for

21
ಮಾರ್ಚ್

ನಿಮ್ಮ ಬ್ಲಾಗ್ ಪೂರ್ತಿ ಕನ್ನಡದಲ್ಲಿ

ಆತ್ಮೀಯ ಕನ್ನಡಿಗರೆ,
ಈಗ ನೀವು ನಿಮ್ಮ ಬ್ಲಾಗ್ ಅನ್ನು ಆಂಗ್ಲ ಭಾಷೆಯಲ್ಲಿ ಮಾತ್ರವಲ್ಲದೆ ಪೂರ್ತಿ ಕನ್ನಡದಲ್ಲೇ ನೋಡಬಹುದು. ಈಗ ನಿಮಗೆ ಗೂಗಲ್ ಈ ರೀತಿಯ ಅವಕಾಶವನ್ನು ಕಲ್ಪಿಸಿದೆ.gs->Language and Formatting

ಅಲ್ಲಿ Language ಕಾಲಂನಲ್ಲಿ ಕನ್ನಡ ಭಾಷೆಯನ್ನು ಆರಿಸಿಕೊಳ್ಳಿ.

ನಂತರ Save ಮಾಡಿ

ಗ್ಯಾಡ್ಜೆಟ್ ಗಳು ಬ್ಲಾಗಿಗೆ ಹೊರಗಿನವುಗಳಾಗಿರುವುದರಿಂದ ಅಲ್ಲಿ ನಿಮಗೆ ಕನ್ನಡ ಸಿಗುವುದಿಲ್ಲ.

ಈಗ ನಿಮ್ಮ ಬ್ಲಾಗ್ ಕನ್ನಡದಲ್ಲಿ ತಯಾರಾಗಿರುತ್ತದೆ.

ಕನ್ನಡ ಭಾಷೆಯನ್ನು ಸೇರಿಸಿರುವುದಕ್ಕೆ ನನ್ನ ಕಡೆಯಿಂದ ಗೂಗಲ್ ಗೆ ಒಂದು ಅಭಿನಂದನೆ

ಈ ವಿಷಯವನ್ನು ಎಲ್ಲರೊಂದಿಗೂ ಹಂಚಿಕೊಳ್ಳಿ 🙂

***************************************************************************

ಚಿತ್ರ ಕೃಪೆ: hackuadi.blogspot.in

20
ಮಾರ್ಚ್

ಮಂಕು ತಿಮ್ಮನ ಕಗ್ಗ – ರಸಧಾರೆ (೪)

– ರವಿ ತಿರುಮಲೈ

ಏನು ಜೀವನದರ್ಥ? ಏನು ಪ್ರಪಂಚಾರ್ಥ ?
ಏನು ಜೀವಪ್ರಪಂಚಗಳ ಸಂಬಂಧ?
ಕಾಣದಿಲ್ಲಿರ್ಪುದೇನಾನುಮುಂಟೆ ? ಅದೇನು?
ಜ್ಞಾನಪ್ರಮಾಣವೇಮ್? ಮಂಕುತಿಮ್ಮ

ಕಾಣದಿಲ್ಲಿರ್ಪುದೇನಾನುಮುಂಟೆ = ಕಾಣದೆ + ಇಲ್ಲಿ+ ಇರ್ಪುದು(ಇರುವುದು)+ಏನಾನುಂ( ಏನಾದರೂ)+ ಉಂಟೆ

ಮತ್ತಷ್ಟು ಓದು »

20
ಮಾರ್ಚ್

ಹಲವು ರಂಗಗಳ ‘ವೇಷ’

-ರಾಘವೇಂದ್ರ ರಾವ್

ಪ್ರಾದೇಶಿಕ ಕಥಾ ವಸ್ತುಗಳನ್ನು ಆಯ್ಕೆ ಮಾಡಿಕೊಂಡು ಕೃತಿಗಳನ್ನು ರಚಿಸುವ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಸಚಿವರಾದ ಪ್ರಭಾಕರ ನೀರ್‌ಮಾರ್ಗ ಅವರ ಹದಿನೇಳನೆಯ ಕೃತಿ ‘ವೇಷ’. ದಕ್ಷಿಣ ಕನ್ನಡದ ಸಾಂಸ್ಕೃತಿಕ, ಸಾಮಾಜಿಕ ಜನಜೀವನವನ್ನ ಬಹಳ ಮಾರ್ಮಿಕವಾಗಿ ಚಿತ್ರಿಸುವ ಇವರ ಕೃತಿಗಳಲ್ಲಿ ದಾಯಿತ್ವ, ತಿಲ್ಲಾನ, ಧೀಂಗಿಣ, ಮಂಗಳೂರು ಕ್ರಾಂತಿ, ಶಿಶಿರ, ಪ್ರತಿಶೋಧ, ಜಾತ್ರೆ ಮತ್ತು ತಂಬಿಲಗಳು ಒಂದಲ್ಲ ಒಂದು ರೀತಿಯಲ್ಲಿ ಪ್ರಾದೇಶಿಕ ಹಿನ್ನಲೆಯಲ್ಲಿಯೇ ಮೂಡಿಬಂದವುಗಳು. ಆದರೆ ‘ವೇಷ’ ಕಾದಂಬರಿ ಇವುಗಳ ನಡುವೆ ತುಸು ವಿಭಿನ್ನವಾಗಿ ರಚಿಸಿದ ಕಾದಂಬರಿಯಂತೆ ಕಂಡರೂ, ಇಲ್ಲಿಯ ಪಾತ್ರಗಳಿಗೆ ಯಾವುದೇ ಪ್ರಾಮುಖ್ಯತೆಯಿಲ್ಲದೆ ಕೇವಲ ಬಣ್ಣದ ‘ವೇಷ’ ಮತ್ತು ಬದುಕಿನ ವೇಷದ ಸುತ್ತಾ ಕಥೆ ಹೆಣೆದುಕೊಂಡಿದೆಯೇನೋ ಅನಿಸುತ್ತದೆ.

ಕಥೆಯ ಆರಂಭದಲ್ಲಿ ನವರಾತ್ರಿಯ ಸಮಯದಲ್ಲಿ ವಿಶೇಷವಾಗಿ ಕಾಣಿಸಿಕೊಳ್ಳುವ ವೇಷದ ಬಗ್ಗೆ ‘ಎಪಿಲೋಗ್’ನ ಹಾಗೆ ಪ್ರಸ್ತಾಪಿಸುತ್ತಾ ದಕ್ಷಿಣ ಕನ್ನಡದಲ್ಲಿ ನವರಾತ್ರಿಯಲ್ಲಿ ಕಾಣಿಸುವ ವೇಷಗಳ ಬಗ್ಗೆ ವಿವರಗಳನ್ನು ನೀಡುತ್ತಾ ಕೃತಿಕಾರರು ಕಥೆಯೊಳಗೆ ಇಳಿಯುತ್ತಾರೆ. ಇಲ್ಲಿ ಆ ಬಣ್ಣದ ವೇಷಗಳ ಬಗ್ಗೆ ಕುತೂಹಲ ಬೆಳೆಸಿಕೊಳ್ಳುವ ಓದುಗನ ನಿರೀಕ್ಷೆಯನ್ನು ಹುಸಿಯಾಗಿಸುತ್ತಾ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಉಳಿದ ಬಣ್ಣದ ಲೋಕಗಳಾದ ಯಕ್ಷಗಾನ, ನಾಟಕರಂಗಗಳಿಗೂ ಪಾತ್ರಗಳ ಮೂಲಕ ಇಳಿಯುತ್ತಾ ಹೊಸದೇನೋ ಹೇಳುತ್ತಾ ಕಥೆ ಸಾಗುತ್ತದೆ. ಇಲ್ಲಿ ಮಾರ್ನಮಿಯ ಹುಲಿವೇಷದ ವಿವರಣೆಗಳನ್ನು ಬಿಟ್ಟರೆ ಮತ್ತೆಲ್ಲವೂ ನಾಟಕ ಮತ್ತು ಯಕ್ಷಗಾನದ ಬಗೆಯೇ ಹೆಚ್ಚು ಒತ್ತುಕೊಟ್ಟು ಬರೆದಂತೆ ಕಾಣಿಸುತ್ತದೆ. ‘ಧೀಂಗಿಣ’ ಯಕ್ಷಗಾನದ ಒಳಹೊರಗನ್ನು ತಿಳಿಸುವ ಸಮಾಜಮುಖಿಯಾದ ಕಾದಂಬರಿಯಾದರೂ ಅಲ್ಲಿ ನೀರ್‌ಮಾರ್ಗ ಅವರ ‘ಪೇಪರ್ ವರ್ಕ್’ ಎದ್ದು ಕಾಣಿಸುತ್ತದೆ. ‘ತಿಲ್ಲಾನ’ ಕಾದಂಬರಿಯಲ್ಲಿ ಭೂತದಕೋಲದ ವಿವರಗಳಿರುವಂತೆ ‘ವೇಷ’ದಲ್ಲಿಯೂ ಅಂತಹುದೊಂದನ್ನು ಹುಡುಕಿದರೆ ಸಿಗಲಾರದೆನ್ನುವುದು ನನ್ನ ಅನಿಸಿಕೆ. ಹಾಗಂತ ಕಾದಂಬರಿ ಏನನ್ನೂ ಹೇಳದೆ ಸುಮ್ಮನಿರುವುದಿಲ್ಲ.

ಮತ್ತಷ್ಟು ಓದು »

19
ಮಾರ್ಚ್

ಮಂಕು ತಿಮ್ಮನ ಕಗ್ಗ – ರಸಧಾರೆ (೩)

– ರವಿ ತಿರುಮಲೈ

ಇಹುದೋ ಇಲ್ಲವೋ ತಿಳಿಯಗೊಡದೊಂದು ವಸ್ತು ನಿಜ I
ಮಹಿಯಿಂ ಜಗವಾಗಿ ಜೀವವೇಷದಲಿ II
ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ I
ಗಹನ ತತ್ತ್ವಕೆ  ಶರಣೋ – ಮಂಕುತಿಮ್ಮ II

ತಿಳಿಯಗೊಡದೊಂದು=ತಿಳಿಯಗೊಡದ ಒಂದು ವಿಹರಿಪುದದೊಳ್ಳಿತೆಂಬುದು = ವಿಹರಿಪುದು ( ವಿಹಾರ ಮಾಡುವುದು) +ಅದು+ಒಳ್ಳಿತು = ಒಳ್ಳೆಯದು +ಎಂಬುದು
ನಿಸದವಾದೊಡಾ = ನಿಸದವಾದೊಡೆ + ಆ ವಿಹಾರಮಾಡುವುದು ಎಂದರೆ, ಎಲ್ಲದರಲ್ಲೂ  ವ್ಯಾಪಕವಾಗಿ ಚೈತನ್ಯ ರೂಪದಲ್ಲಿರುವುದು ಎಂದೂ ಅರ್ಥೈಸಬಹುದು.  ನಿಸದವಾದೊಡೆ ಎಂದರೆ ನಿಜವಾದರೆ ಎಂದೇ ಅರ್ಥೈಸಬೇಕು.

ಮತ್ತಷ್ಟು ಓದು »

19
ಮಾರ್ಚ್

ಭಕ್ತಿ ಆಂದೋಲನದ ಪರಿಪ್ರೇಕ್ಷ್ಯದಲ್ಲಿ ‘ನಳಚರಿತ್ರೆ’

-ಡಾ| ಜಿ. ಭಾಸ್ಕರ ಮಯ್ಯ

ಭಾಗ – 1

ಭಕ್ತಿ ಆಂದೋಲನವು ಶ್ರೀನಗರದಿಂದ ಕನ್ಯಾಕುಮಾರಿಯ ತನಕ ಹಾಗೂ ಗುಜರಾತಿನಿಂದ ಬಂಗಾಲದ ತನಕ ವ್ಯಾಪಿಸಿತ್ತು. ಇದು ಈ ದೇಶದ ಮಧ್ಯಯುಗದ ಅತೀ ದೊಡ್ಡ ಜನಾಂದೋಲನ.

ಸಂತರೆಂದರೆ ಯಾರು? ಕೆಲವರು ನಿರ್ಗುಣ ಪಂಥದ ಸಾಧುಗಳನ್ನು ಸಂತರೆನ್ನುತ್ತಾರೆ.ಸಂಸಾರ ತ್ಯಾಗ ಮಾಡಿದವರಿಗೆ ಮಾತ್ರ ಸಂತರೆನ್ನುವುದು ತಪ್ಪು ಕಲ್ಪನೆ. ಏಕೆಂದರೆ, ಎಷ್ಟೋ ಜನ ಸಂತರು ಗೃಹಸ್ಥರಿದ್ದರು. ಅಂತೆಯೇ ಸಂತರಲ್ಲಿ ಹಿಂದೂ-ಮುಸ್ಲಿಂ ಭೇದ ಕೂಡಾ ತಪ್ಪು. ಏಕೆಂದರೆ ಇಸ್ಲಾಂ ಮತದ ರೂಢಿವಾದದ ವಿರುದ್ಧ ಸಿಡಿದೆದ್ದ ಸಾವಿರಾರು ಮುಸ್ಲಿಂ ಸಂತರಿದ್ದರು. ಸಂತರೆಂದರೆ ಕೇವಲ ಗಂಡಸರೆಂದರೆ ಅದೂ ತಪ್ಪು. ಏಕೆಂದರೆ, ಮೀರಾ, ಅಕ್ಕಮಹಾದೇವಿ, ತಾಜ್, ಸಂಕವಿ ಯಂತವರು ಗಣನೀಯವಾಗಿ ಸಿಗುತ್ತಾರೆ.

ಅಂದರೆ ಸಂತರಲ್ಲಿ ಸನ್ಯಾಸಿ ಗೃಹಸ್ಥ, ಹಿಂದೂ, ಮುಸ್ಲಿಂ, ಗಂಡು-ಹೆಣ್ಣು, ನಿರ್ಗುಣವಾದಿ, ಸಗುಣವಾದಿ ಎಲ್ಲರೂ ಸೇರುತ್ತಾರೆ.

ಇವರು ಲೋಕಧರ್ಮ ಸಂಸ್ಥಾಪಕರು. ಪುರೋಹಿತರು ಮತ್ತು ಮೌಲ್ವಿಗಳ ಭಾಷೆ, ಸಂಸ್ಕೃತ ಮತ್ತು ಅರಬಿಯಾಗಿತ್ತು. ಆದರೆ, ಸಂತರು ಜನಭಾಷೆಯಲ್ಲಿ ಬರೆದರು.

ಇವರ ಸಾಮಾಜಿಕ ಆಧಾರ ಯಾವುದು?
ಅವರು ನೇಕಾರರು, ಬಡಗಿಗಳು, ಕೃಷಿಕರು, ಕೂಲಿಗಾರರು, ವ್ಯಾಪಾರಿಗಳು ಇತ್ಯಾದಿ ನಾನಾ ಶ್ರಮ ಆಧಾರಿತ ವೃತ್ತಿಯಲ್ಲಿರುವವರು.

ಇದು ಭಾರತೀಯ ಪರಿಪ್ರೇಕ್ಷ್ಯದ ಕೇವಲ ಒಂದು ಆಕಸ್ಮಿಕ ಘಟನೆ ಅಲ್ಲ, ಬದಲಿಗೆ ದೇಶದ ಆರ್ಥಿಕ,ಸಾಮಾಜಿಕ ಪರಿಸ್ಥಿತಿಗಳ ಅನಿವಾರ್ಯ ಉತ್ಪನ್ನ. ಆದ್ದರಿಂದಲೇ ಇದು ಒಂದು ಭಾಷೆಗಾಗಲೀ, ಒಂದು ಪ್ರದೇಶಕ್ಕಾಗಲೀ ಸೀಮಿತವಾಗಿರಲಿಲ್ಲ. ಅಂತೆಯೇ ಸಂತ ಸಾಹಿತ್ಯದ ಉಗಮವನ್ನು ಭಾರತೀಯ ಜೀವನದ ತನ್ನದೇ ಪರಿಸ್ಥಿತಿಗಳಲ್ಲಿ ಆರ್ಥಿಕ,ಸಾಮಾಜಿಕ ಪರಿಸ್ಥಿತಿಗಳಲ್ಲಿ ಹುಡುಕಬೇಕೇ ಹೊರತು ಬೌದ್ಧ ಅಥವಾ ಇಸ್ಲಾಂ ಮತಗಳ ಹಿನ್ನೆಲೆಯಲ್ಲಿ ಅಲ್ಲ.

ಮತ್ತಷ್ಟು ಓದು »

19
ಮಾರ್ಚ್

ಸಂಸ್ಕೃತಿ ಸಂಕಥನ – 27 – ನಮಗೆ ನಾವೇ ಪರಕೀಯರು

-ರಮಾನಂದ ಐನಕೈ

1947 ಅಗಸ್ಟ್ 15ರಂದು ಭಾರತ ಪರಕೀಯರ ದಾಸ್ಯದಿಂದ ಮುಕ್ತವಾಯಿತು ಎಂದು ಭಾಷಣ ಬಿಗಿಯುತ್ತೇವೆ. ಇದು ನಿಜವೇ? ಕೇವಲ ಆಡಳಿತ ಮತ್ತು ಅಧಿಕಾರ ಹಸ್ತಾಂತರ ಮಾಡಿದಾಕ್ಷಣ ದಾಸ್ಯ ವಿಮೋಚನೆ ಆಯಿತು ಅಂತ ನಿರ್ಧರಿಸಿಬಿಡಬಹುದೇ? ವಸಾಹತು ಪ್ರಭಾವದಿಂದ ಮಲೀನವಾದ ಭಾರತೀಯ ಮನಸ್ಸುಗಳಿಗೆ ಮುಕ್ತಿ ಸಿಕ್ಕಿದೆಯೇ? ಒಂದೊಮ್ಮೆ ಸಿಗದಿದ್ದ ಪಕ್ಷದಲ್ಲಿ ಇದೂ ಒಂದು ರೀತಿಯ ಮಾನಸಿಕ ದಾಸ್ಯ ಅಲ್ಲವೇ? ಈ ಮಾಸಿಕ ಅವಲಂಬನೆಯಿಂದ ಹೊರ ಬರುವುದು ಹೇಗೆ?

ಮೊದಲು ಭಾರತದಲ್ಲಿ ಮುಸ್ಲಿಂ ವಸಾಹತುಶಾಹಿ ಆಡಳಿತ ನಡೆಯಿತು. ನಂತರ ಸುದೀರ್ಘ ಕಾಲ ಕ್ರಿಶ್ಚಿಯನ್ ವಸಾಹತುಶಾಹಿ ರಾಜ್ಯಭಾರ ನಡೆಯಿತು. ಇವರೆಲ್ಲರೂ ಸೇರಿ ಭಾರತೀಯ ಸಂಸ್ಕೃತಿಯ ಕುರಿತು ಬೇರೆಯದೇ ಆದ ಚಿತ್ರಣ ಕಟ್ಟಿಕೊಟ್ಟರು. ಭಾರತೀಯ ಚಿಂತಕರೂ ಕೂಡಾ ಅದನ್ನೇ ಪಠಿಸುತ್ತ ಬಂದರು. ಸದ್ಯ ಭಾರತವನ್ನು ಆಳುತ್ತಿರುವುದು ಇದೇ ವಸಾಹತುಶಾಹಿ ಪ್ರಜ್ಞೆ. ಈ ಕಾರಣಕ್ಕಾಗಿ ಭಾರತದಲ್ಲಿ ರಾಷ್ಟ್ರತತ್ವಗಳಿಗೂ ಜನಸಾಮಾನ್ಯರ ಅನುಭವಕ್ಕೂ ತಾಳೆಯಾಗಲಾರದು. ಅದರ ಫಲಿತಾಂಶಗಳೇ ಸಂಘರ್ಷಗಳು. ಆದ್ದರಿಂದ ನಿಜವಾದ ನಮ್ಮ ಸಂಸ್ಕೃತಿಯನ್ನು ಅರಿತು ಅದರ ಆಧಾರದ ಮೇಲೆ ನಮ್ಮ ದೇಶದ ಜನಜೀವನವನ್ನು ರೂಪಿಸುವ ತುತರ್ು ಇದೆ.

ಸಾವಿರಾರು ವರ್ಷಗಳಿಂದ ಬಾಳಿ ಬೆಳಗಿದ ಭಾರತೀಯ ಸಂಸ್ಕೃತಿ ಐರೋಪ್ಯರ ಆಗಮನದಿಂದಾಗಿ ತನ್ನ ಸ್ವರೂಪವನ್ನೇ ಬದಲಿಸಿಕೊಂಡದ್ದು ಈಗ ಇತಿಹಾಸ. ಭಾರತ ಐರೋಪ್ಯರಿಗೆ ಅರ್ಥವಾಗಲಿಲ್ಲ. ಇಲ್ಲಿನ ಸಂಸ್ಕೃತಿ ಅವರಿಗೆ ಒಗಟಾಯಿತು. ಅಷ್ಟರಲ್ಲಾಗಲೇ ಪ್ರತಿ ಸಂಸ್ಕೃತಿಗೆ ಇತಿಹಾಸ ಬರೆಯುವ ಕಲೆಯನ್ನು ಐರೋಪ್ಯರು ಕರಗತ ಮಾಡಿಕೊಂಡಿದ್ದರು. ಇತಿಹಾಸ ಮಾತ್ರ ಅವರಿಗೆ ಸತ್ಯ ದಾಖಲೆಯಾಗಿತ್ತು. ಏಕೆಂದರೆ ಸತ್ಯವೇದವಾದ ಬೈಬಲ್ಲೇ ಅವರಿಗೆ ನಿಜವಾದ ಇತಿಹಾಸ. ಭಾರತೀಯ ಇತಿಹಾಸವನ್ನು ಎಲ್ಲಿಂದ ಆರಂಭಿಸಬೇಕು? ಅವರಿಗಾದ ದೊಡ್ಡ ಸಮಸ್ಯೆ ಅದು. ಯಾವುದೇ ಭಾರತೀಯ ಪಂಡಿತರನ್ನು ಭಾರ ತೀಯ ಇತಿಹಾಸದ ಕುರಿತು ಕೇಳಿದರೆ ಅವರೆಲ್ಲ ಪುರಾಣದ ರೋಚಕ ಕಥೆಗಳನ್ನೇ ಹೇಳಿದರು. ಒಂದೇ ಕಥೆಯನ್ನು ಬೇರೆ ಬೇರೆ ಪಂಡಿತರು ಬೇರೆ ಬೇರೆ ರೀತಿಯಲ್ಲಿ ಹೇಳಿದರು. ಸಂಶಯ ಶುರುವಾಯಿತು. ಆಗ ಐರೋಪ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಭಾರತವನ್ನು ಗ್ರಹಿಸತೊಡಗಿದರು.

ಮತ್ತಷ್ಟು ಓದು »

18
ಮಾರ್ಚ್

ಮಂಕು ತಿಮ್ಮನ ಕಗ್ಗ – ರಸಧಾರೆ (೨)

– ರವಿ ತಿರುಮಲೈ

ಜೀವ ಜಡರೂಪ ಪ್ರಪಂಚವನದಾವುದೋ |
ಆವರಿಸಿಕೊಂಡುಮೊಳನೆರೆದುಮಿಹುದಂತೆ ||
ಭಾವಕೊಳಪಡದಂತೆ ಅಳತೆಗಳವಡದಂತೆ |
ಆ ವಿಶೇಷಕೆ ಮಣಿಯೋ – ಮಂಕುತಿಮ್ಮ ||

(ಜೀವ ಜಡ ರೂಪ ಪ್ರಪಂಚವನು ಅದಾವುದೋ ಆವರಿಸಿಕೊಂಡು ಒಳನೆರೆದು ಇಹುದಂತೆ ಭಾವಕ್ಕೆ ಒಳಪಡದಂತೆ ಅಳತೆಗೆ ಅಳವಡದಂತೆ ಆ ವಿಶೇಷಕೆ ಮಣಿಯೋ- ಮಂಕುತಿಮ್ಮ )
(ಒಳನೆರೆದು=ಒಳಗೆ ತುಂಬಿ , ಅಳವಡದಂತೆ = ಸಿಕ್ಕದಂತೆ, ಇಹುದಂತೆ = ಇದೆಯಂತೆ)

ಈ ಪ್ರಪಂಚದಲ್ಲಿ ಇರುವುದು ಎರಡೇ. ಒಂದು ಜಡ ಮತ್ತು ಮತ್ತೊಂದು ಜೀವ. ಜಡವೆಂದರೆ ಚೇತನವಿಲ್ಲದ್ದು. ಜೀವವೆಂದರೆ ಚೇತನ . ಇವೆರಡರ ಸಮ್ಮಿಲನವೇ ಜಗದ್ವ್ಯಾಪಾರ ಇವೆರಡರಲ್ಲೂ ತುಂಬಿಕೊಂಡಿರುವ, ಭಾವದಿಂದ ಊಹಿಸಲಸಾಧ್ಯವಾದ, ಅಳತೆಗೆ  ಸಿಗದ ವ್ಯಾಪಕತ್ವವು ಹೊಂದಿರುವ ಆ ವಿಶೇಷಕೆ (ಪರಮಾತ್ಮನಿಗೆ) ನಮಿಸೋ, ಮಣಿಯೋ, ನಮಸ್ಕರಿಸೋ ಮಂಕುತಿಮ್ಮ ಎಂದು ಹೇಳುತ್ತಾರೆ ಡಿ.ವಿ.ಜಿ.

ಮತ್ತಷ್ಟು ಓದು »

18
ಮಾರ್ಚ್

ನಯನ

– ಮೇಘ ಶ್ರೀಧರ್

ಕಣ್ಮುಚ್ಚಿ ಕಣ್ತೆರೆಯೆ ಹೀಗೊಂದು ಕವನ
ಬಚ್ಚಿಟ್ಟ ಭಾವಗಳ ಕನ್ನಡೀಕರಣ
ಪಲ್ಲವಿಸುವಾ ಮನಕೆ ಶಬ್ದಗಳ ಚರಣ
ಪದಗಳಲಿ ಪೋಣಿಸಿದ ಚಂದದಾಭಾರಣ
ಮತ್ತಷ್ಟು ಓದು »

18
ಮಾರ್ಚ್

ತುಂಬೆ ನಿನ್ನ ಮಹಿಮೆ ಏನೆಂಬೆ …

-ಅನಿತಾ ನರೇಶ್ ಮಂಚಿ

ವಾಮನನಲ್ಲಿ ಬಲಿ ಚಕ್ರವರ್ತಿ ‘ ನಾನಿನ್ನು ಭೂಮಿಗೆ ಬರುವ ದಿನ ಯಾವುದು ‘ಎಂದು ಕೇಳಿದಾಗ ವಾಮನನ ಉತ್ತರದಲ್ಲಿ’ ತುಂಬೆಯ ಮರದಡಿ ಮಕ್ಕಳು

ಆಟ ಆಡುವ ದಿನ ‘ ಎಂಬುದು ಒಂದಾಗಿತ್ತು.

ಏನು ಈ ತುಂಬೆಯ ಗಿಡ, ಏನಿದರ ಮಹತ್ವ ..? ನಮ್ಮ ಸುತ್ತು ಮುತ್ತೆಲ್ಲ ಕಾಣಸಿಗುವ ಪುಟ್ಟ ಎಲೆಗಳ ಮೈಯಲ್ಲೆಲ್ಲ ತೇರಿನಂತೆ ಹೂವನ್ನೇರಿಸಿಕೊಂಡ ಚೆಲುವೆಯೇ ಇವಳು..ತುಂಬಾ ಸಣ್ಣ ನಾಲ್ಕರಿಂದ ಐದು ಕವಲುಗಳಿಂದ ಕೂಡಿದ ಐದರಿಂದ ಎಂಟು ಇಂಚಿನವರೆಗೆ ಬೆಳೆಯುವ ಸಸ್ಯ.
ಇದರ ಸಸ್ಯ ಶಾಸ್ತ್ರೀಯ ಹೆಸರು ‘ Leacus indica .
ಪುಟ್ಟ ಚೆಂಡಿನಂತಹ ರಚನೆಯ ತುಂಬೆಲ್ಲ ಬಿಳಿ ಹೂಗಳು ಇದನ್ನು  ಅಂದಗಾತಿಯನ್ನಾಗಿ ಮಾಡಿದೆ.ಇದರ ಹೂಗಳ ಆಕಾರವನ್ನು ಆಗ ತಾನೇ ಹುಟ್ಟಿದ ಮಗುವಿನ ಸುಕೋಮಲ ಪಾದಗಳಿಗೆ ಹೋಲಿಸುತ್ತಾರೆ. ಇದಕ್ಕೆ  ಒಂದು ಪುಟ್ಟ ಕತೆ ಕೂಡ ಇದೆ.. ಕೇಳಿ .
17
ಮಾರ್ಚ್

ಮಂಕು ತಿಮ್ಮನ ಕಗ್ಗ – ರಸಧಾರೆ (೧)

(ಡಿ.ವಿ ಗುಂಡಪ್ಪನವರ ಕಗ್ಗದ ರಸಧಾರೆಯನ್ನ ಶ್ರೀ ರವಿ ತಿರುಮಲೈ ಅವರು ನಿರಂತರವಾಗಿ ಹರಿಸಲಿದ್ದಾರೆ ನಿಲುಮೆಯಲ್ಲಿ)

– ರವಿ ತಿರುಮಲೈ

ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ
ದೇವ ಸರ್ವೇಶ ಪರಬೊಮ್ಮನೆಂದು ಜನಂ //
ಆವುದನು ಕಾಣದೊಡಮಳ್ತಿಯಿಂ ನಂಬಿಹುದೋ
ಆ ವಿಚಿತ್ರಕೆ ನಮಿಸೊ – ಮಂಕು ತಿಮ್ಮ //

ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ  ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು.

ನಾವಿರುವ ಭೂಮಿಯಂತಹ 9 .80 ಲಕ್ಷ ಭೂಮಿಗಳನ್ನು ನಮ್ಮ ಸೌರವ್ಯೂಹದ ಸೂರ್ಯನೊಳಕ್ಕೆ ಹಾಕಿಬಿಡಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ. ನಮ್ಮ ಸೌರಮಂಡಲವೂ  ಸೇರಿದಂತೆ  ಲಕ್ಷಾಂತರ ಸೌರಮಂಡಲಗಳಿರುವ  ನಮ್ಮ ಕ್ಷೀರಪಥ, ನಮ್ಮ ಕ್ಷೀರಪಥವೂ ಸೇರಿದಂತೆ ಲಕ್ಷಾಂತರ ಕ್ಷೀರಪಥಗಳಿರುವ ಆಕಾಶಗಂಗೆ, ನಮ್ಮ ಆಕಾಶಗಂಗೆಯೂ ಸೇರಿದಂತೆ ಲಕ್ಷಾಂತರ ಆಕಾಶಗಂಗೆಗಳಿರುವ ಈ ವಿಶ್ವ. ಇಡೀ ವಿಶ್ವವನ್ನು ಒಂದು ಸೂತ್ರದಲ್ಲಿ ನಡೆಸುತ್ತಿರುವ ಒಂದು ಶಕ್ತಿ. ಅದನ್ನೇ ಬೇರೆ ಬೇರೆಯವರು ಬೇರೆ ಹೆಸರುಗಳಿಂದ ಕರೆಯುತ್ತಾರೆಂದು ಈ ಕಗ್ಗದ ಆಂತರ್ಯ ಮತ್ತು ವಿಶ್ವದ ಒಂದು ಅನುವಷ್ಟೂ ಅಲ್ಲದ ನಾವು ಕಾಣದಿದ್ದರೂ ಆ ಶಕ್ತಿಯ ಅಧೀನದಲ್ಲಿರುವುದರಿಂದ, ಅದಕ್ಕೆ ಭಕ್ತಿಯಿಂದ ಪ್ರೀತಿಯಿಂದ ನಮಿಸಬೇಕು ಎಂದು ಒಂದು ಆದೇಶ.

ಮತ್ತಷ್ಟು ಓದು »