ಮದ್ಯ, ಮಾಂಸ, ಮಾನಿನಿಯರ ಮಧ್ಯೆ ಮಿಲಿಯನೇರ್ ಮಲ್ಯ ಬರೆದ ಮತ್ತಿಳಿಸುವ ಕಥೆ !
ಮಾಡಿದ್ದುಣ್ಣೋ ಮಹರಾಯ ಎಂಬ ಗಾದೆಯನ್ನು ಯಾರು ಯಾವ ಕಾಲದಲ್ಲಿ ಮಾಡಿದರೋ ತಿಳಿಯದಲ್ಲ. ಭರತಭೂಮಿ ಎಂಬುದು ಆದರ್ಶ ಮಾನವ ಮೌಲ್ಯಗಳ
ನೆಲೆವೀಡು. ಇಂಥಾ ನೆಲದಲ್ಲೇ ಯುಗದ/ಕಾಲದ ಪ್ರಭಾವದಿಂದ ಮಾನವೀಯ ಮೌಲ್ಯಗಳಿಗೇ ಮೌಲ್ಯವಿಲ್ಲದಂತಾಗಿದೆ. ಶ್ರೀರಾಮ ಜನಿಸಿ, ಆಳಿ, ಆದರ್ಶ ಯಾವುದೆಂದು ತೋರಿಸಿಕೊಟ್ಟ ಈ ದೇಶದಲ್ಲಿ, ಪ್ರಾಜ್ಞರು ಹೇಳುತ್ತಲೇ ಬಂದರು: “ಮದ್ಯ, ಮಾಂಸ ಮತ್ತು ಮಾನಿನಿ” ಈ ಮೂರನ್ನು ದೂರವಿಡಿ ಎಂಬುದಾಗಿ. ಇಲ್ಲಿ ಮಾನಿನಿ ಎಂದರೆ ಕೇವಲ ಬೆಲೆವೆಣ್ಣುಗಳು ಎಂದರ್ಥ. ಮದ್ಯಕುಡಿದ ಯಾವ ಪ್ರಾಣಿಯೂ ತನ್ನ ಇತಿಮಿತಿಯನ್ನು ಮೀರಿ ವಿಚಿತ್ರಗತಿಯಲ್ಲಿ ವರ್ತಿಸುತ್ತದೆ, ಯಾಕೆಂದರೆ ಮದ್ಯದ ಮತ್ತು ನೆತ್ತಿಗೇರಿದಾಗ ಎಲ್ಲಿ ಏನಾಗುತ್ತಿದೆ ಎಂದಾಗಲೀ, ತಾನು ಏನು ಮಾಡುತ್ತಿದ್ದೇನೆ ಎಂದಾಗಲೀ ಅರ್ಥವಾಗದಲ್ಲ. ಮದ್ಯ, ಮಾಂಸ ಮತ್ತು ಮಾನಿನಿ ಈ ಮೂರೂ ಒಮ್ಮೆ ನಮ್ಮನ್ನು ತಮ್ಮ ತೆಕ್ಕೆಗೆ ಸೆಳೆದುಕೊಂಡರೆ ಅವುಗಳಿಂದ ಬಿಡುಗಡೆ ಬಹುತೇಕ ಸಾಧ್ಯವಿಲ್ಲ. ಅಂಥದ್ದರಲ್ಲಿ ಕಾಲಗತಿಯಲ್ಲಿ ಮದ್ಯ ತಯಾರಿಕೆಯನ್ನೇ ಉದ್ದಿಮೆಯನ್ನಾಗಿ ಮಾಡಿಕೊಂಡು ಕೆಲವರು ಬೆಳೆದರು. ಅದೆಷ್ಟೋ ಕುಟುಂಬಗಳು ಅವರ ತಯಾರಿಕೆಯ ಮದ್ಯವನ್ನು ನಿತ್ಯವೂ ಕುಡಿಯುತ್ತಾ ಬೀದಿ ಪಾಲಾದವು!
ದುಶ್ಯಂತ-ಶಕುಂತಲೆಯರ ಪ್ರಿಯ ಪುತ್ರ-ಚಕ್ರವರ್ತಿ ಭರತನ ಹೆಸರಿನಿಂದ ಭಾರತವೆನಿಸಿದ ಈ ಪುಣ್ಯನೆಲದಲ್ಲಿ, ಸಗರಪುತ್ರ ಭಗೀರಥ ತನ್ನ ಅಖಂಡ ತಪಸ್ಸಿನಿಂದ ಗಂಗೆಯನ್ನು ಧರೆಗೆ ಕರೆತಂದ ಎಂಬುದು ನಮಗೆಲ್ಲಾ ತಿಳಿದಿರುವ ವಿಷಯ. ನಿಜ ಘಟನೆಗಳನ್ನೇ ಕಥೆಯನ್ನಾಗಿಸಿದ ಇತಿಹಾಸವನ್ನು, ವಿಜ್ಞಾನವೆಂಬ ಕನ್ನಡಕ ಹಾಕಿಕೊಂಡು ಹಳದಿ ಬಣ್ಣದಲ್ಲೇ ಎಲ್ಲವನ್ನೂ ನೋಡುತ್ತಾ ನಾವು ತೆರಳುವಾಗ, ಜೀವ ಇರುವ ಜೀವಿಯೂ ನಮಗೆ ಸತ್ತ ಪ್ರಾಣಿಯ ಹಾಗೇ ಕಾಣಿಸುವುದು ಸಹಜ; ಯಾಕೆಂದರೆ ಅದು ನಮ್ಮ ಅಧಿಕಪ್ರಸಂಗದ ಪರಾಕಾಷ್ಠೆ.
ಕನ್ನಡದಲ್ಲೂ ಮಾಹಿತಿ ಮುದ್ರಿತವಾಗಲಿ
– ರವಿ ಸಾವ್ಕರ್

ಆದರೆ ಇಂಥಹ ಚರ್ಚೆಗಳಲ್ಲಿ ಈ ಮಾಹಿತಿಯನ್ನು ಜನರು ಅರಿಯಬೇಕಾದರೆ ಅದು ಜನರ ಭಾಷೆಯಲ್ಲಿ ಇರಬೇಕು ಅನ್ನೋ ಅತಿ ಮುಖ್ಯವಾದ ಅಂಶವನ್ನು ಮರೆತ ಹಾಗಿದೆ. ಒಂದು ವರದಿಯ ಪ್ರಕಾರ ನಮ್ಮ ದೇಶದಲ್ಲಿ ೭% ಜನರಿಗೆ ಮಾತ್ರ ಇಂಗ್ಲಿಷ್ ನಲ್ಲಿ ಇರುವುದನ್ನು ಅರ್ಥಮಾಡಿಕೊಳ್ಳಬಲ್ಲರು. ಮಿಕ್ಕ ೯೩% ಜನರಿಗೆ ಇಂಗ್ಲಿಷ್ ನಲ್ಲಿ ಮಾಹಿತಿ ತಲುಪಿಸಲಾಗದ ಪರಿಸ್ಥಿತಿ ಇರುವಾಗ , ಕೇವಲ ಇಂಗ್ಲಿಷ್ನಲ್ಲಿ ಮಾಹಿತಿಯನ್ನು ನಮೂದಿಸಿದರೆ ನಮ್ಮ ಜನರಿಗೆ ಹೇಗೆ ಅರ್ಥವಾದೀತು? ಒಬ್ಬ ಕನ್ನಡ ಮಾತ್ರ ಬರುವ ಗ್ರಾಹಕನೂ ಸಹ ಅಷ್ಟೇ ದುಡ್ಡು ಕೊಟ್ಟು ಖರೀದಿ ಮಾಡಿರುತ್ತಾನೆ. ಅವನಿಗೆ ಆ ಸಾಮಗ್ರಿಯ ಬಗೆಗೆ ಮಾಹಿತಿಯನ್ನು ತಿಳಿಸದಿರುವುದು ಯಾವ ನ್ಯಾಯ ?