ವಿಷಯದ ವಿವರಗಳಿಗೆ ದಾಟಿರಿ

Archive for

6
ಜೂನ್

ಲೇಖನಿ ದುರ್ಯೋಧನನ ಗದೆಯಾಗದಿರಲಿ

ಪರೇಶ ಸರಾಫ
 
“ಅವರ್ಯಾರೋ ಏನೋ ಹೇಳಿಕೆ ಕೊಟ್ಟರು.ಅದು ಸಹ್ಯವಲ್ಲ.” ಎಂದು ಎಷ್ಟೋ ಜನರ ಮಾತುಗಳನ್ನು ತಿರುಚಿ ಅದಕ್ಕೆ ಬಣ್ಣ ಹಚ್ಚಿ ಸುಗಂಧ ಲೇಪಿಸಿ ಅನೇಕ ಲೇಖನಗಳು ಬರುತ್ತಿರುವುದನ್ನು ಇತ್ತೀಚಿಗೆ ನೋಡುತ್ತಿದ್ದೇವೆ. ಇಂತಹ ಲೇಖನಗಳ ಬಗ್ಗೆ ಹತ್ತು ಹಲವಾರು ಬಿಸಿ ಚರ್ಚೆಗಳು ಸಾಮಾಜಿಕ ತಾಣಗಳಲ್ಲಿ, ಮತ್ತು ಬುದ್ಧಿ ಜೀವಿಗಳ ನಡುವೆ ನಡೆಯುತ್ತಿವೆ. ಹೀಗೆ ಒಬ್ಬ ವ್ಯಕ್ತಿಯ ತೇಜೋವಧೆಯ ಮೂಲಕ ತಮ್ಮ ಜನಪ್ರಿಯತೆಯನ್ನು ದುಪ್ಪಟ್ಟು ಮಾಡುವ ಹುನ್ನಾರಗಳು ಈಗಿನ ಮಾಧ್ಯಮಗಳಲ್ಲಿ ವ್ಯಾಪಕವಾಗಿರುವಾಗ ಓದುಗರು ಆಲೋಚನೆ ಮಾಡಬೇಕಾದ ಅಗತ್ಯ ಇದೆ.

ಇಂದು ರಾಜಕೀಯ ಪಕ್ಷಗಳ ಚೇಲಾ ಆಗಿರುವ ಅದೆಷ್ಟೋ ಪತ್ರಿಕೆಗಳು, ಟಿ.ವಿ. ಚಾನೆಲ್ ಗಳು ತಮ್ಮ ಸ್ವಾರ್ಥಸಾಧನೆಗಾಗಿ ವೃತ್ತಿ ಧರ್ಮವನ್ನೇ ಮರೆತು ತಾಂಡವವಾಡುತ್ತಿವೆ. ದೇಶವನ್ನು ಮೇಯುತ್ತಿರುವ ರಾಜಕಾರಣಿಗಳನ್ನು ಹೊಗಳಿ ಬರೆಯುವ ಈ ಬುದ್ಧಿ ಜೀವಿಗಳು, ಇರುವೆಯಂತಹ ವಿಷಯವನ್ನು ಆನೆ ಮಾಡಿ ತೋರಿಸಿ ತನ್ಮೂಲಕ ಭಾವನಾತ್ಮಕವಾಗಿ ಜನರನ್ನು ಮೂರ್ಖರನ್ನಾಗಿಸುವಲ್ಲಿ ಪರಿಣಿತರಾಗಿದ್ದಾರೆ. ಸಮಾಜದ ಆಗು ಹೋಗುಗಳನ್ನು, ತೊಡಕುಗಳನ್ನು ಬಿಂಬಿಸಬೇಕಾದ ಮಾಧ್ಯಮಗಳು ತಮಗೆ ಬೇಕಾದ ರೀತಿಯಲ್ಲಿ ವಿಷಯವನ್ನು ತಿರುವು ಮುರುವು ಮಾಡಿ ಬಿತ್ತರಿಸಿ ಜನರನ್ನು ನಂಬಿಸುತ್ತಿದ್ದಾರೆ. ಮಾಧ್ಯಮಗಳೇ ದುಸ್ಶ್ಯಾಸನರಾಗಿ ನಿಂತಾಗ ಸಮಾಜದ ಸ್ವಾಸ್ಥ್ಯ ಬೆತ್ತಲಾಗುವುದರಲ್ಲಿ ಮತ್ತೇನು ಸಂಶಯ?

ಮತ್ತಷ್ಟು ಓದು »