ಟಿ ವಿ ಎಂಬ ಸುಂದರಿ ..
– ಅನಿತ ನರೇಶ್ ಮಂಚಿ
ವಾಶಿಂಗ್ ಪೌಡರ್ ನಿರ್ಮ, ವಾಶಿಂಗ್ ಪೌಡರ್ ನಿರ್ಮ..’ ಇದು ಗೆಳತಿಯ ಬಾಯಲ್ಲಿ ಕೇಳಿ ಬರುತ್ತಿದ್ದ ಹೊಸ ಹಾಡು. ‘ಯಾರೇ ಹೇಳ್ಕೊಟ್ಟಿದ್ದು’ ಕೊಂಚ ಅಸೂಯೆ ಇತ್ತು ನನ್ನ ಧ್ವನಿಯಲ್ಲಿ. ‘ಹೇಳ್ಕೊಡೋದ್ಯಾಕೆ..? ನಾನೇ ಕೇಳಿ ಕಲ್ತಿದ್ದು, ಟಿ ವಿ ನೋಡಿ… ಗೊತ್ತಾ ನಿಂಗೆ , ನಮ್ಮಲ್ಲಿ ಹೊಸ ಟಿ ವಿ ತಂದಿದ್ದಾರೆ.., ಇದರ ಡ್ಯಾನ್ಸ್ ಕೂಡ ಇದೆ ನಿಲ್ಲು ತೋರಿಸ್ತೀನಿ,ಮೊದ್ಲು ಬಟ್ಟೆ ಮಣ್ಣಾಗಿರುತ್ತೆ, ಹೀಗೆ ಮಾಡಿದ ಮೇಲೆ ಬಟ್ಟೆ ಹೊಸದಾಗಿ ಹೊಳೆಯುತ್ತೆ’ ಎಂದು ತನ್ನ ಫ್ರಾಕಿನ ಎರಡೂ ತುದಿಗಳನ್ನು ಬೆರಳುಗಳಲ್ಲಿ ಅಗಲಿಸಿ ಹಿಡಿದು ಉರುಟುರುಟಾಗಿ ಸುತ್ತಿದಳು ರಸ್ತೆಯಲ್ಲಿಯೇ.. !!
ಮೀಸಲಾತಿ ಕೇವಲ ಉಳ್ಳವರಿಗೆ ಮಾತ್ರನಾ?
– ಮುರುಳಿಧರ್ ದೇವ್
ಮೊನ್ನೆ ಬೆಂಗಳೂರಿನಿಂದ ಮೈಸೂರಿಗೆ ರೈಲಿನಲ್ಲಿ ಹೋಗುವಾಗ ಒಬ್ಬ ದಲಿತ ಹೆಂಗಸು ತನ್ನ ಮಗ ಕರ್ನಾಟಕ ಸರಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ೧೨೦೦೦ ರ್ಯಾಂಕ್ ಬಂದಿರೋದನ್ನ ತುಂಬಾ ಖುಷಿಯಿಂದ ಹೇಳ್ಕೋತ ಇದ್ಲು. ಇದೇನು ೧೨೦೦೦ ರ್ಯಾಂಕ್ ಬಂದಿರೋದು ಅಂತ ದೊಡ್ಡ ವಿಷಯ ಅಂತ ಅನ್ಕೋಬೇಡಿ. ಅವಳು ಮನೆ ಮನೆಗಳಲ್ಲಿ ಪಾತ್ರೆ ತೊಳೆದು ತನ್ನ ಮಗನನ್ನು ಓದುಸ್ತ ಇರೋದು. ಅವರ ಕುಟುಂಬದಲ್ಲಿರೋದು ನಾಲ್ಕು ಜನ, ಗಂಡ ದಿನ ಕುಡಿದು ಬಂದು ಇವಳನ್ನು ಹೊಡೆಯೋದು, ಮಗಳು ಈಗ ೯ನೆ ತರಗತಿ ಓದ್ತಾ ಇರೋದು. ಸಂಪೂರ್ಣ ಮನೆಯ ಜವಾಬ್ದಾರಿ ಇವಳ ಹೆಗಲಿಗೆ. ಆದರೆ ಆ ಹುಡುಗನ ಮುಖದಲ್ಲಿ ಸಂತಸಕ್ಕಿಂತ ಮುಂದೇನು ಅನ್ನೋ ಚಿಂತೆಯೇ ಬಹುವಾಗಿ ಕಾಡ್ತಾ ಇತ್ತು. ಮಾತಿನ ಮಧ್ಯೆ ಯಾಕಿಷ್ಟು ಚಿಂತೆ ಪಡ್ತಿಯ, ಹೇಗಿದ್ರು ಸರಕಾರದವರು ದಲಿತರಿಗಾಗಿ ಶೈಕ್ಷಣಿಕ ಸೌಲಭ್ಯ ಕೊಡುತ್ತೆ, ನಿನ್ನ ಫೀಸ್ ಬಗ್ಗೆನು ಯೋಚಿಸಬೇಡ ಅಂತ ಹೇಳ್ತಾ ಇದ್ದೆ. ಆದ್ರೆ ಇದ್ಯಾವುದರಿನ್ದಾನು ಆತನ ಮುಖದಲ್ಲಿನ ಚಿಂತೆ ಕಡಮೆ ಆಗ್ಲಿಲ್ಲ.
ಕೊನೆಗೆ ಆತನೇ, ಸರಕಾರದವರೆನೋ ಶುಲ್ಕ ತುಂಬುತ್ತಾರೆ, ಆದರೆ ಮಿಸಲಾತಿ ಇದ್ದರು ಒಳ್ಳೆಯ ಕಾಲೇಜ್ ನಲ್ಲಿ ಸೀಟು ದೊರಕೋದು ಕಷ್ಟ ಅಂದ. ನಾನೋ ಅದ್ಯಾಕೆ ಮಿಸಲಾತಿ ಇರೋದು ಹಿಂದುಳಿದ ಜನಾಂಗ ಮುಂದೆ ಬರಲಿ ಅಂತ ಹೇಳಿದ್ರೆ ಎಲ್ಲಿತ್ತೋ ಕೋಪ ಎಲ್ಲ ಸೇರ್ಸಿ ಹೇಳ್ದ, ನಂಗೆ ಮನೇಲಿ ಕಷ್ಟ ಇದೆ ಅದ್ಕೆ ೧೨೦೦೦ ರ್ಯಾಂಕ್ ಬಂದಿದೆ ಸ್ವಲ್ಪ ಮಟ್ಟಿಗೆ ತೀರ ಒಳ್ಳೇದು ಅಲ್ಲದೆ ಇದ್ರುನು ಉತ್ತಮ ಕಾಲೇಜ್ ನಲ್ಲಿ ಸೀಟು ಸಿಗಬಹುದು, ಆದರೆ ನಮ್ಮ ಅಮ್ಮ ಕೆಲಸಕ್ಕೆ ಹೋಗೋ ಮನೆಯ ಯಜಮಾನ ಸರಕಾರದಲ್ಲಿ ಉನ್ನತ ಹುದ್ದೆಲಿ ಇದ್ದಾರೆ, ಅವರ ಮಗನಿಗೆ ಖಾಸಗಿಯಾಗಿ ಕೋಚಿಂಗ್ ಕೊಡ್ಸಿದಾರೆ, ಇಷ್ಟಾಗಿಯೂ ಅವನಿಗೂ ನನಗು ಇರೋ ರ್ಯಾಂಕ್ ವ್ಯತ್ಯಾಸ ಕೇವಲ ೫೦೦.