ಮೊಬೈಲುಗಳಲ್ಲಿ ಕನ್ನಡದ ಬೆಂಬಲ ಬರಲಿ
-ರವಿ ಸಾವ್ಕರ್
HTC ಕಂಪನಿಯವರು ತಮಿಳು, ಹಿಂದಿ ,ಮರಾಠಿ ಭಾಷೆಗಳ ಬೆಂಬಲವನ್ನು ಕೊಡುಲು ಮುಂದಾಗಿರುವ ಸುದ್ದಿ ಬಂದಿದೆ. ಆದರೆ ಕನ್ನಡ ಭಾಷೆಯ ಬೆಂಬಲದ ಬಗೆಗೆ ಪ್ರಸ್ತಾಪವೂ ಮಾಡಿಲ್ಲ. ಕನ್ನಡದಲ್ಲಿ ಸಹ ಮೊಬೈಲುಗಳನ್ನು ಹೊರತನ್ನಿ ಎಂದು HTC ಕಂಪನಿಯವರಿಗೆ ತಿಳಿಸಬೇಕಾಗಿದೆ.
ಬಡವರ “ಕೊಳಚೆ” ಉಳಿದವರ “ಶುದ್ಧತೆ”
ಡಾ!! ಅಶೋಕ್ ಕೆ.ಆರ್
ಸನ್ಮಾನ್ಯ ಶ್ರೀ ಶ್ರೀ ಶ್ರೀ ಪೇಜಾವರ ಸ್ವಾಮಿಗಳಿಗೆ ಸೆಡ್ಡು ಹೊಡೆಯಲು ಮತ್ತೊಬ್ಬ ಹುಟ್ಟಿದ್ದಾನೆ. ಶ್ರೀಗಳು ಮಾಂಸಾಹಾರಿಗಳ ಪಕ್ಕ ಕುಳಿತು ಊಟ ಮಾಡಿದರೆ ಸಸ್ಯಾಹಾರಿ ಬ್ರಾಹ್ಮಣರೂ ಮಾಂಸಾಹಾರಿಗಳಾಗಿಬಿಡುತ್ತಾರೆಂದು ಗಾಬರಿಗೊಂಡಿದ್ದರು. ನಂತರ ತಮ್ಮ ಹೇಳಿಕೆಯ ಬಗ್ಗೆ ಸಮಜಾಯಿಷಿಗಳನ್ನೂ ಕೊಟ್ಟಿದ್ದರು. ಇಂದು ಕರ್ನಾಟಕ ಅನುದಾನರಹಿತ ಶಾಲೆಗಳ ಸಂಘ ಕುಸ್ಮಾದ ಅಧ್ಯಕ್ಷ ಜಿ.ಎಸ್. ಶರ್ಮರವರು ಶಿಕ್ಷಣ ಹಕ್ಕು ಕಾಯ್ದೆಯನ್ನು ವಿರೋಧಿಸುತ್ತ “ಸಮುದ್ರಕ್ಕೆ ಕೊಳಚೆ ನೀರು ಬಂದು ಸೇರಿದರೆ ಇಡೀ ಸಮುದ್ರವೇ ಕೊಳಚೆಯಾಗುತ್ತದೆ. ನೀರು ಯಾವಾಗಲೂ ಶುದ್ಧ ಆಗಿರಬೇಕು. ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಸಂಸ್ಕೃತಿ ವಿಭಿನ್ನ. ಬಡ ಮಕ್ಕಳನ್ನು ಶಾಲೆಗೆ ಸೇರಿಸಿಕೊಂಡ ಮರುದಿನವೇ ಉಳಿದ ಪೋಷಕರು ಬಂದು ಮಕ್ಕಳ ವರ್ಗಾವಣೆಗೆ ಪತ್ರ ಕೇಳುವ ಅಪಾಯವಿದೆ. ಆದ್ದರಿಂದ ಕುಸ್ಮಾ ಶಾಲೆಗಳಲ್ಲಿ ಆರ್.ಟಿ.ಐ ಕಾಯ್ದೆ ಅನುಷ್ಠಾನ ಸಾಧ್ಯವಿಲ್ಲ” ಎಂದು ‘ಅಮೋಘ ವಿವೇಕಭರಿತವಾದ’ ಹೇಳಿಕೆಯನ್ನಿತ್ತಿದ್ದಾರೆ. ಈ ಹಾಳು ವಿಚಾರವಂತರು, ಪ್ರಗತಿಪರರು ಈ ಹೇಳಿಕೆಗೂ ವಿರೋಧ ವ್ಯಕ್ತಪಡಿಸುತ್ತಾರಲ್ಲ! ಎಂಥ ಕೆಟ್ಟ ಮನಸ್ಥಿತಿಯವರಿರಬೇಕು ಇವರೆಲ್ಲ?!





