ವಿಷಯದ ವಿವರಗಳಿಗೆ ದಾಟಿರಿ

Archive for

18
ಜುಲೈ

ಮೊಬೈಲುಗಳಲ್ಲಿ ಕನ್ನಡದ ಬೆಂಬಲ ಬರಲಿ

-ರವಿ ಸಾವ್ಕರ್

 

HTC ಕಂಪನಿಯವರು  ತಮಿಳು, ಹಿಂದಿ ,ಮರಾಠಿ ಭಾಷೆಗಳ ಬೆಂಬಲವನ್ನು ಕೊಡುಲು ಮುಂದಾಗಿರುವ  ಸುದ್ದಿ ಬಂದಿದೆ. ಆದರೆ ಕನ್ನಡ ಭಾಷೆಯ ಬೆಂಬಲದ ಬಗೆಗೆ  ಪ್ರಸ್ತಾಪವೂ ಮಾಡಿಲ್ಲ. ಕನ್ನಡದಲ್ಲಿ ಸಹ ಮೊಬೈಲುಗಳನ್ನು ಹೊರತನ್ನಿ ಎಂದು HTC ಕಂಪನಿಯವರಿಗೆ ತಿಳಿಸಬೇಕಾಗಿದೆ.

ಅಂತರ್ಜಾಲದಲ್ಲಿ ಭಾರತೀಯ ಭಾಷೆಗಳ ಬಳಕೆ ೪೦% ಅಷ್ಟು ಹೆಚ್ಚಾಗಿದೆ ಎಂಬ ವರದಿ ಇದೆ. ಯಾಹೂ ಮೇಯ್ಲ್, gmail ಎಲ್ಲದರಲ್ಲೂ ಕನ್ನಡವೂ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ಲಭ್ಯವಿರುವುದು ನೋಡಬಹುದು. Facebook ನಲ್ಲಿ ಸಹ ೯೩% ಅಷ್ಟು ಕನ್ನಡಕ್ಕೆ ನುಡಿಬದಲು ಆಗಿರುವುದನ್ನು ಗಮನಿಸಬಹುದು. ಅಷ್ಟೆ ಅಲ್ಲದೆ wiktionary ಯಲ್ಲಿ ಎರಡು ಲಕ್ಶಕ್ಕೂ ಹೆಚ್ಚು ಕನ್ನಡದ ಪದಗಳನ್ನು  ಹೊಂದಿದ್ದು, ೧೫ ನೇ ಸ್ಥಾನದಲ್ಲಿದೆ.
ಮೊಬೈಲುಗಳು ಕನ್ನಡದ ಬೆಂಬಲ ಕೊಡುವುದು ಯಾಕೆ ಮುಖ್ಯ?
ಕೆಲ ತಿಂಗಳ ಹಿಂದೆ “mobile governance’ ಗೆ ಆದ್ಯತೆ ಕೊಡಲಾಗುವುದು ಎಂಬ ಸುದ್ದಿ ಬಂದಿತ್ತು. ಮ್ಫುಂದ್ನೆ  ಬಿಲ್ಲು, ಎಲೆಕ್ಟ್ರಿಸಿಟಿ ಬಿಲ್ಲು ಗಳನ್ನು ಮೊಬೈಲುಗಳಿಂದಲೇ ಕಟ್ಟಬಹುದಾಗುತ್ತದೆ. ಗ್ಯಾಸ್ ಬುಕ್ ಮಾಡಿದಾಗ, ಏಟೀಎಂ ಗಳಿಂದ ಹಣ ತೆಗೆದಾಗ ತಕ್ಷಣವೇ ಎಸೆಂಎಸ್ ಗಳ ಮೂಲಕ ಮಾಹಿತಿ ನಮ್ಮ ಬಳಿ ಬಂದು ಸೇರುತ್ತದೆ.
ಹೀಗಿರುವಾಗ ನಾವು ಬಳಸುವ ಫೊನ್ ಗಳಲ್ಲಿ ಕನ್ನಡದ ಬೆಂಬಲವೇ ಇಲ್ಲದೇ ಹೋದಾಗ ಈ ಸೇವೆಗಳನ್ನು ಕನ್ನಡದಲ್ಲಿ ಸಹ ಕೊಡಿ ಎಂದು ಕೇಳಲು/ಕೊಡಲು ಆಗುವುದಿಲ್ಲ. ಬೆಂಗಳೂರು ಟ್ರಾಫ಼ಿಕ್ ಪೋಲಿಸ್ ನವರು ಸಹ ಕನ್ನಡದಲ್ಲಿ ರಸೀತಿ ಕೊಡಿ ಎಂದು ಕೇಳಿದಾಗ ತಾವು ಬಳಸುವ ಬ್ಲಾಕ್ಬೆರಿ ಫೊನ್ ನಲ್ಲಿ ಕನ್ನಡದ ಬೆಂಬಲ ಇಲ್ಲ, ಹಾಗಾಗಿ ಕನ್ನಡದಲ್ಲಿ ರಸೀತಿ ಕೊಡಲು ಆಗದು ಎಂದು ತಿಳಿಸಿದ್ದರು.
 ತಂತ್ರಜ್ಞಾನ ಎಷ್ಟು ಮುಂದೆ ಹೋದರೇನು , ಕನ್ನಡಿಗನಿಗೆ ಅದನ್ನು ಬಳಸಲು ಆಗದಿದ್ದರೆ ಅದರಿಂದ ಏನು ಪ್ರಯೋಜನ?
18
ಜುಲೈ

ಬಡವರ “ಕೊಳಚೆ” ಉಳಿದವರ “ಶುದ್ಧತೆ”

ಡಾ!! ಅಶೋಕ್ ಕೆ.ಆರ್

Imageಸನ್ಮಾನ್ಯ ಶ್ರೀ ಶ್ರೀ ಶ್ರೀ ಪೇಜಾವರ ಸ್ವಾಮಿಗಳಿಗೆ ಸೆಡ್ಡು ಹೊಡೆಯಲು ಮತ್ತೊಬ್ಬ ಹುಟ್ಟಿದ್ದಾನೆ. ಶ್ರೀಗಳು ಮಾಂಸಾಹಾರಿಗಳ ಪಕ್ಕ ಕುಳಿತು ಊಟ ಮಾಡಿದರೆ ಸಸ್ಯಾಹಾರಿ ಬ್ರಾಹ್ಮಣರೂ ಮಾಂಸಾಹಾರಿಗಳಾಗಿಬಿಡುತ್ತಾರೆಂದು ಗಾಬರಿಗೊಂಡಿದ್ದರು. ನಂತರ ತಮ್ಮ ಹೇಳಿಕೆಯ ಬಗ್ಗೆ ಸಮಜಾಯಿಷಿಗಳನ್ನೂ ಕೊಟ್ಟಿದ್ದರು. ಇಂದು ಕರ್ನಾಟಕ ಅನುದಾನರಹಿತ ಶಾಲೆಗಳ ಸಂಘ ಕುಸ್ಮಾದ ಅಧ್ಯಕ್ಷ ಜಿ.ಎಸ್. ಶರ್ಮರವರು ಶಿಕ್ಷಣ ಹಕ್ಕು ಕಾಯ್ದೆಯನ್ನು ವಿರೋಧಿಸುತ್ತ “ಸಮುದ್ರಕ್ಕೆ ಕೊಳಚೆ ನೀರು ಬಂದು ಸೇರಿದರೆ ಇಡೀ ಸಮುದ್ರವೇ ಕೊಳಚೆಯಾಗುತ್ತದೆ. ನೀರು ಯಾವಾಗಲೂ ಶುದ್ಧ ಆಗಿರಬೇಕು. ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಸಂಸ್ಕೃತಿ ವಿಭಿನ್ನ. ಬಡ ಮಕ್ಕಳನ್ನು ಶಾಲೆಗೆ ಸೇರಿಸಿಕೊಂಡ ಮರುದಿನವೇ ಉಳಿದ ಪೋಷಕರು ಬಂದು ಮಕ್ಕಳ ವರ್ಗಾವಣೆಗೆ ಪತ್ರ ಕೇಳುವ ಅಪಾಯವಿದೆ. ಆದ್ದರಿಂದ ಕುಸ್ಮಾ ಶಾಲೆಗಳಲ್ಲಿ ಆರ್.ಟಿ.ಐ ಕಾಯ್ದೆ ಅನುಷ್ಠಾನ ಸಾಧ್ಯವಿಲ್ಲ” ಎಂದು ‘ಅಮೋಘ ವಿವೇಕಭರಿತವಾದ’ ಹೇಳಿಕೆಯನ್ನಿತ್ತಿದ್ದಾರೆ. ಈ ಹಾಳು ವಿಚಾರವಂತರು, ಪ್ರಗತಿಪರರು ಈ ಹೇಳಿಕೆಗೂ ವಿರೋಧ ವ್ಯಕ್ತಪಡಿಸುತ್ತಾರಲ್ಲ! ಎಂಥ ಕೆಟ್ಟ ಮನಸ್ಥಿತಿಯವರಿರಬೇಕು ಇವರೆಲ್ಲ?!

ಒಂದಷ್ಟು ಹಿಂದೆ ಸಾಗಿ ನೋಡಿದಾಗ –
16
ಜುಲೈ

ಕೇಸರೀಕರಣ: ದಾಯಾದಿಗಳ ಕಲಹ

– ಸಂತೋಷ್ ಕುಮಾರ್ ಪಿಕೆ

ಕರ್ನಾಟಕದ ಪ್ರಾಥಮಿಕ ಶಾಲಾಪಠ್ಯದಲ್ಲಿ ಹೊಸ ಪಠ್ಯಕ್ರಮವನ್ನು ಸೇರ್ಪಡೆ ಮಾಡುತ್ತಿರುವ ಕುರಿತು ಎರಡು ಬಣಗಳ ನಡುವೆ ವ್ಯಾಪಕವಾದ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಗತಿ. ಬಿ.ಜೆ.ಪಿಯವರು ಹೊಸಪಠ್ಯಕ್ರಮವನ್ನು ಕೇಸರೀಕರಣವೆಂದೂ ಆದರೆ ಅದು ವಿರೋಧಿ ಬಣಗಳು ತಿಳಿದುಕೊಂಡಿರುವ ರೀತಿಯದ್ದಲ್ಲ ಎಂತಲೂ ಹಾಗೂ ಅದರ ವಿರೋಧಿ ಗುಂಪು ಅದು ಕೇಸರೀಕರಣ ಪ್ರಕ್ರಿಯೆ ಎಂತಲೂ ನಿರಪಯುಕ್ತವಾದ ಚರ್ಚೆಯನ್ನು ಬಿರುಸಾಗಿ ನಡೆಸುತ್ತಿದ್ದಾರೆ. ಪ್ರಸ್ತುತ ಬರಹದಲ್ಲಿ ಆ ಚರ್ಚೆಯಲ್ಲಿ ಪಾಲ್ಗೊಂಡವರು ಬೇರೆ ಬೇರೆ ತುದಿಯಲ್ಲಿ ನಿಂತಂತೆ ಭಾಸವಾದರೂ ಇಬ್ಬರೂ ಒಂದೇ ಸೇತುವೆಯ ಮೇಲೆ ನಿಂತಿರುವುದನ್ನು ನಿದರ್ಶಿಸುವ ಪ್ರಯತ್ನವನ್ನು ಮಾಡಲಾಗುವುದು. ಮೊದಲನೆಯದಾಗಿ ಬಿ.ಜೆ.ಪಿ.ಬಣದ ವಾದದಿಂದ ಪ್ರಾರಂಭಿಸುತ್ತೇನೆ.

ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಡಗೆ ಕಾಗೇರಿಯವರು ಇತ್ತೀಚೆಗೆ ತಮ್ಮ ಲೇಖನದಲ್ಲಿ ಕೇಸರೀಕರಣದ ಕುರಿತು ಎಲ್ಲರಿಗೂ ಗೊಂದಲವಿದ್ದು, ಅದರ ಕುರಿತು ಸ್ಪಷ್ಟತೆ ಅದನ್ನು ವಿರೋಧಿಸುವ ವಿರೋಧಿಗಳಿಗಿಲ್ಲ ಎಂಬ ಮಾತನ್ನು ಹೇಳಿದ್ದಾರೆ. ನನ್ನ ಪ್ರಕಾರ, ಕೇಸರೀಕರಣದ ಕುರಿತು ಅದರ ವಿರೋಧಿಗಳಿಗಿರಲಿ, ಅದರ ಸ್ವಯಂ ಪ್ರತಿಪಾದಕರಿಗೇ ಸರಿಯಾದ ಜ್ಞಾನ ಇರುವುದು ಅನುಮಾನ. ಏಕೆಂದರೆ ಇದುವೇ ಕೇಸರೀಕರಣ ಎಂದು ಸ್ಪಷ್ಟವಾಗಿ ಹೇಳುವ ಧೈರ್ಯ ಯಾರಿಗೂ ಇದ್ದಂತಿಲ್ಲ, ಕೇವಲ ಭಗವಾಧ್ವಜ ಹಿಡಿದುಕೊಂಡು ಮಾಡುವ ಕೆಲಸಗಳು ಮಾತ್ರ ಕೇಸರೀಕರಣವಾಗುತ್ತದೆಯೇ? ಖಂಡಿತ ಇಲ್ಲ, ಏಕೆಂದರೆ ಕೇಸರೀಕರಣ ಎಂಬುದು ಒಂದು ಐಡಿಯಾಲಜಿ, ನಿದರ್ಶಿ ಷ್ಟವಾಗಿ ಇಂತಿಂತಹ ಕೆಲಸಗಳನ್ನು ಮಾಡಬೇಕು ಎಂದು ನಿರ್ದೇಶನ ನೀಡುವ ವಿಚಾರಗಳ ಗುಚ್ಚ ಅದಾಗಿದೆ. ಹಾಗೂ ಕೇಸರೀಕರಣದ ಕುರಿತು ಯಾವುದೇ ಸಿದ್ಧಾಂತ (ಥಿಯರಿ)ದ ಜ್ಞಾನಶಿಸ್ತು (ಜ್ಞಾನಶಿಸ್ತಿನ ಅಗತ್ಯ ಇಲ್ಲ ಎಂದು ಬಿ.ಜೆಪಿ ಯವರು ಭಾವಿಸಿದ್ದರೂ ಕೂಡ) ಇಲ್ಲದಿರುವುದರಿಂದ ಜನರು ತಮ್ಮ ಮನಸೋಇಚ್ಚೆ ಅರ್ಥಮಾಡಿಕೊಳ್ಳಲು ಸಾಧ್ಯವಿದೆ.

ಮತ್ತಷ್ಟು ಓದು »

16
ಜುಲೈ

ನಿಜವಾಗಿ ಇದು ಯಡಿಯೂರಪ್ಪನವರ ಸೋಲು!!

ರಾಘವೇಂದ್ರ ನಾವಡ

ಅ೦ತೂ ಇ೦ತು ಗೌಡರು ಶೆಟ್ಟರಿಗೆ ದಾರಿ ಬಿಟ್ಟಿದ್ದಾರೆ! ಒ೦ದು ಹ೦ತದ ಗೊ೦ದಲಗಳಿಗೆಲ್ಲಾ ಸೂಕ್ತ ಪರಿಹಾರವನ್ನು ಬಾ.ಜ.ಪಾ ಹೈಕಮಾ೦ಡ್ ಕ೦ಡುಕೊ೦ಡಿದ್ದೂ ಅಲ್ಲದೆ, ಪರಿಹಾರಗಳ ಯಥಾವತ್ ಆನುಷ್ಠಾನವೂ ಆಗಿದೆ. ಜಗದೀಶ್  ಶೆಟ್ಟರ್ ಮುಖ್ಯಮ೦ತ್ರಿಯಾಗಿದ್ದಾರೆ!

ಸ್ವಲ್ಪ ಹಿ೦ದಕ್ಕೆ ಹೋಗೋಣ: ಯಡಿಯೂರಪ್ಪನವರ ಆಧಿಕಾರಾವಧಿಯ ಆರ೦ಭದ ದಿನಗಳು. ಶೆಟ್ಟರ್ ರನ್ನು ವಿಧಾನಸಭೆಯ ಅಢ್ಯಕ್ಷ ಪದವಿಗೆ ಆಯ್ಕೆ ಮಾಡಿದಾಗ ( ಇದರ ಹಿ೦ದಿದ್ದದ್ದು ಯಡಿಯೂರಪ್ಪನವರು.. ಶೆಟ್ಟರ್ ರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದರೆ, ತನ್ನ ಬಲವಾದ ಪ್ರತಿಸ್ಪರ್ಧಿಯೊಬ್ಬನನ್ನು ರ೦ಗದಿ೦ದ ಆಚೆ ತಳ್ಳಿದ೦ತಾಗುತ್ತದೆ೦ಬ ಚಾಣಾಕ್ಷ ನಡೆಯನ್ನು ಆಗ ಯಡಿಯೂರಪ್ಪ ಇಟ್ಟರು!) ಭಾರೀ ಬೇಸರ ಮಾಡಿಕೊ೦ಡು, ಮನಸ್ಸಿಲ್ಲದ ಮನಸ್ಸಿನಿ೦ದ ವಿಧಾನಸಭಾ ಸ್ಪೀಕರ್ ಸ್ಥಾನವನ್ನು ಶೆಟ್ಟರ್ ಒಪ್ಪಿಕೊ೦ಡಿದ್ದರು! ಆನ೦ತರ ಮ೦ತ್ರಿಯಾಗುವವರೆಗೂ ಕಾದರು.. ಇದೀಗ ಮುಖ್ಯಮ೦ತ್ರಿಯಾಗಿದ್ದಾರೆ! ಆದರೆ ವಿಪರ್ಯಾಸ ನೋಡಿ:

ಭವಿಷ್ಯದ  ಜನನಾಯಕನಾಗಬಲ್ಲ ಛಾತಿ ಹಾಗೂ ಅದೇ ತರಹದ ವರ್ಚಸ್ಸು  ಮತ್ತು ನಡತೆಯನ್ನು ಅದರೊ೦ದಿಗೆ ತನ್ನ ರಾಜಕೀಯ ಜೀವನವನ್ನು ಮೊದಲಿನಿ೦ದಲೂ ಕಟ್ಟಿಕೊ೦ಡು ಬ೦ದವರು ಜಗದೀಶ್ ಶೆಟ್ಟರ್! ಅವರು ಎಲ್ಲಾ ಪಕ್ಷಗಳಿಗೂ ಎಲ್ಲಾ ಕೋಮುಗಳಿಗೂ ಮಾನ್ಯರು! ಅಜಾತಶತ್ರು.. ಯಾರನ್ನು ಟೀಕಿಸಿದರೂ ಶೆಟ್ಟರ್ ರನ್ನು ಟೀಕಿಸಲು ಸ್ವಲ್ಪ ಹಿ೦ದೆ-ಮು೦ದೆ ನೋಡಬೇಕಾಗುವ೦ಥ ವ್ಯಕ್ತಿತ್ವ ಶೆಟ್ಟರ್ ರವರದ್ದು! ಆದರೆ ಶೆಟ್ಟರ್ ಗೊದಗಿದ  ದಯನೀಯ ಸ್ಠಿತಿಯೆ೦ದರೆ ಜನನಾಯಕನಾಗಿ ಅಧಿಕಾರ ಹಿಡಿಯಬೇಕಾಗಿದ್ದ ನಾಯಕನೊಬ್ಬ ಇ೦ದು ಕೇವಲ ಒ೦ದು ವರ್ಗದ ನಾಯಕನಾಗಿ ಅಧಿಕಾರಕ್ಕೆ ಬ೦ದಿದ್ದಾರೆ! ಇದು ಕರ್ನಾಟಕ ಜನತೆಯ ಸೋಲೋ ಅಥವಾ ಸ್ವತ: ಶೆಟ್ಟರ್ ಸೋಲೋ?

ಮತ್ತಷ್ಟು ಓದು »

14
ಜುಲೈ

ಕಪಟ ನಾಟಕ ಸೂತ್ರಧಾರಿ ನೀನೇ…

– ಅಶ್ವಿನ್ ಅಮಿನ್

ದೇಶದ ಯಾವುದೇ ಮೂಲೆಯಲ್ಲಿ ಆಡ್ವಾಣಿ, ವಾಜಪೇಯಿಯಂತಹ ಹಿರಿಯ ಬಿಜೆಪಿ ಮುತ್ಸದ್ದಿಗಳು ‘ಜೈ ಶ್ರೀ ರಾಮ್ ಎಂದರೆ ಸಾಕು ಅದು ಮಂಗಳೂರಿನವರ ಬಾಯಲ್ಲಿ ಮಾರ್ದನಿಸುತ್ತದೆ. ಹಿಂದುತ್ವ ಎಂದರೆ ಉಸಿರು, ಹಿಂದುತ್ವ ಎಂದರೆ ಜೀವನ, ಹಿಂದುತ್ವ ಎಂದರೆ ಸರ್ವಸ್ವ ಎಂದು ಹಿಂದುತ್ವವನ್ನೇ ಮೈಗೂಡಿಸಿಕೊಂಡ ನಾಡು ಈ ಕರಾವಳಿಯ ಮಂಗಳೂರು ಹಾಗು ಉಡುಪಿ ಜಿಲ್ಲೆಗಳು… ಬರೀ ವೋಟ್ ಬ್ಯಾಂಕ್ ಗಷ್ಟೇ ಹಿಂದುತ್ವದ ಸೋಗು ಹಾಕಿಕೊಳ್ಳುವ ಈ ಕಾಲದಲ್ಲಿ ಹೃದಯದಿಂದ ಹಿಂದುತ್ವವನ್ನು ಅಪ್ಪಿಕೊಂಡವರಿವರು.ಇಲ್ಲಿ ಬಿಜೆಪಿಯಿಂದ ಹಿಂದುತ್ವ ಬಂದಿಲ್ಲ ಬದಲಾಗಿ ಹಿಂದುತ್ವದಿಂದ ಬಿಜೆಪಿ ಬಂದಿದೆ ಆದರೆ ಈಗ ನಾವೆಷ್ಟು ಮೂರ್ಖರಾಗಿದ್ದೆವು ಎಂಬುದರ ಅರಿವಾಗುತ್ತಿದೆ. ವೋಟ್ ಬ್ಯಾಂಕ್ ಗಾಗಿ ನಮ್ಮ ಹಿಂದುತ್ವವನ್ನು ಬಳಸಿಕೊಂಡರಲ್ಲ ಎಂಬ ಬಗ್ಗೆ ಖೇದವಾಗುತ್ತಿದೆ. ಇದಕ್ಕೆ ಕಾರಣರಾದವರ ಮೇಲೆ ಕೋಪ, ಸಿಟ್ಟು, ಅಸಹನ, ಜೊತೆ ಜೊತೆಗೆ ನಮ್ಮ ಮೇಲೆಯೇ ಅಸಹನೆ ಹುಟ್ಟುತ್ತಿದೆ…!

ಈಗಿನ ಕಾಲಘಟ್ಟದಲ್ಲಿ ಕರ್ನಾಟಕದಲ್ಲಿ ಬಿಜೆಪಿ ನಿಜವಾಗಲೂ ಅದರ ಸಿದ್ಧಾಂತಗಳನ್ನು ಉಳಿಸಿಕೊಂಡಿದ್ದರೆ ಅದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಮಾತ್ರವೇನೋ… ಪ್ರತಿ ಸಲದ ಚುನಾವಣೆಯಲ್ಲೂ ಬಿಜೆಪಿಗೆ ಅತ್ಯಧಿಕ ಶಾಸಕರನ್ನು ಕೊಟ್ಟ, ಪಕ್ಷದ ಯಾವ ಕ್ಲಿಷ್ಟ ಸಂದರ್ಭಗಳಲ್ಲೂ ಕೈ ಹಿಡಿಯುವಂತಹ ಜಿಲ್ಲೆಯಿದು. ಆದರೆ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಮಾತ್ರ ಎಲ್ಲರಿಂದಲೂ ಕಡೆಗಣಿಸಲ್ಪಟ್ಟಿತು. ಚುನಾವಣಾ ಗೆಲ್ಲುವವರೆಗೆ ಹಿಂದುತ್ವ ಎಂದು ಮಾತನಾಡುತ್ತಿದ್ದ ರಾಜ್ಯದ ಹಿರಿಯ ನಾಯಕರುಗಳು ಲಿಂಗಾಯಿತ, ಒಕ್ಕಲಿಗ ಎಂದು ಶುರುವಿಟ್ಟುಕೊಂಡರು. ‘ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು’ ಎಂದು ಭಾಷಣ ಮಾಡುವ ಮಂದಿ ಜಾತಿ ಲೆಕ್ಕ ಆರಂಭಿಸಿದರು.

ಮತ್ತಷ್ಟು ಓದು »

13
ಜುಲೈ

ಜಾತಿ ರಾಜಕೀಯದ ನಡುವೆ ಜಾತಿ ಇಲ್ಲದವನ ಪಾಡು..!

-ಶ್ರೀಧರ್ ಜಿ ಬನವಾಸಿ

ಮೊನ್ನೆ ರಾಜ್ಯ ಒಕ್ಕಲಿಗರ ಸಮಾವೇಷ ಅದ್ದೂರಿಯಾಗಿ ನೇರವೇರಿತು. ಜಗದ್ಗುರು ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಲಾಯಿತು. ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಒಕ್ಕಲಿಗರ ಘಟಾನಘಟಿ ನಾಯಕರುಗಳನ್ನೆಲ್ಲಾ ಒಂದೇ ವೇದಿಕೆಯಲ್ಲಿ ಕೂರಿಸಲಾಗಿತ್ತು. ಒಕ್ಕಲಿಗರ ಬೇರೆ ಬೇರೆ ಮಠದ ಸ್ವಾಮೀಜಿಗಳು ಕೂಡ ಒಂದೇ ವೇದಿಕೆಯಲ್ಲಿ ಸೇರಿಕೊಂಡಿದ್ದು ಆ ದಿನದ ವಿಶೇಷವಾಗಿತ್ತು. ಒಕ್ಕಲಿಗರಲ್ಲಿ ಮೂರ್ನಾಲ್ಕು ಪಂಗಡಗಳಿದ್ದರೂ ನಾವೆಲ್ಲಾ ಒಂದೇ ಅಂತ ತೋರಿಸುವ ಪ್ರಯತ್ನ ಹಾಗೂ ರಾಜಕೀಯ ಪಕ್ಷಗಳ ನಡುವೆಯೂ ಒಕ್ಕಲಿಗರು ಒಂದು ತೋರಿಸವ ಪ್ರಯತ್ನ ಕೂಡ ಮಾಡಲಾಯಿತು. ಮುಖ್ಯಮಂತ್ರಿ ಸದಾನಂದ ಗೌಡರು ತಮಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದ್ದೇ ತಾವು ಒಕ್ಕಲಿಗ ಅನ್ನುವ ಕಾರಣ ಅಂತ ಸಭೆಯಲ್ಲಿ ಉದ್ಗೋಷಿಸಿದರು.

ಮತ್ತಷ್ಟು ಓದು »

12
ಜುಲೈ

ಮಿಂಚು ಸ್ನೇಹ

– ಪ್ರಶಸ್ತಿ ಪಿ. ಸಾಗರ

ಹೊಸ ನೀರು ಬಂದಾಗ ಹಳೇ ನೀರು ಕೊಚ್ಕೊಂಡು ಹೋಗೋ ತರ ಹೊಸ ಗೆಳೆಯರು ಬಂದಾಗ ಹಳಬ್ರು ಮರ್ತೋಗೋದು ತುಂಬಾ ಕಾಮನ್ನು ಅನ್ನೋ ಹಾಗೆ ಆಗ್ತಾ ಇದೆಯಲ್ಲಾ ಈಗ. ಹೈಟೆಕ್ ಜಮಾನಾದಲ್ಲಿ ತುಂಡಾಗೋ ಹೈ ಸ್ಪೀಡ್ ಸಂಬಂಧಗಳ ಮಧ್ಯೆ ಅಲ್ಲೊಂದು ಇಲ್ಲೊಂದು ಬೆಸುಗೆಗಳು ಕಾಲದೊಂದಿಗೆ ಸವೆಯದೇ ಹಾಗೇ ಉಳ್ಕಂಡು ತಾವೆಷ್ಟು ಗಟ್ಟಿ ಅನ್ನೋದ್ನ ಸಾರ್ತಾ ಇರುತ್ತೆ. ಅದೇ ತರ ಕೆಲ ನೆನಪುಗಳೂ ಸಹ. ಎಷ್ಟೋ ಸಲ ಬಸ್ಸಲ್ಲಿ, ರೈಲಲ್ಲಿ ಹೋಗಿರ್ತೀವಿ.ಈ ತರ ಒಂದೂವರೆ ಘಂಟೆ ಇಂದ , ಒಂದು ದಿನದ ಪ್ರಯಾಣದಲ್ಲಿ ಜೊತೆಯಾಗೋ ಜನರು ನಿರೀಕ್ಷಿಸದ ಸಮಯದಲ್ಲಿ ಮೂಡೋ ಮಿಂಚಂತೆ ಮಿಂಚಿ ನಮಗೇ ಅರಿವಿಲ್ಲದಂತೆ ಆ ಪ್ರಯಾಣದ ಅವಧಿಗೆ ನಮ್ಮ ಸ್ನೇಹಿತರಾಗಿ ಹಾಗೇ ಮರೆಯಾಗಿ ಬಿಡ್ತಾರೆ.ಆದರೆ ಅವರಲ್ಲಿ ಎಷ್ಟೋ ಜನರ ಮಾತುಗಳು, ನೆನಪುಗಳು ಅವರ ಹೆಸರು ಮರ್ತೋದ್ರೂ ನೆನ್ಪಲ್ಲಿ ಉಳ್ದು ಬಿಡುತ್ತೆ.ಅಂಥದೇ ಕೆಲ ನೆನಪುಗಳ ಸುತ್ತ.. ಈ ಬರಹ

ನಮ್ಮೂರು ಸಾಗರದಿಂದ ಶಿವಮೊಗ್ಗಕ್ಕೆ ಒಂದೂವರೆ ಘಂಟೆ ದೂರ .ಈಗಿನ ಬೆಂಗಳೂರಿನ ಟ್ರಾಫಿಕ್ಕಿಗೆ ಹೋಲಿಸಿದ್ರೆ ಅದು ತೀರಾ ಹೆಚ್ಚು ಹೊತ್ತಾಗ್ದೇ ಇದ್ರೂ ಆಗ ನಮಗದು ಸ್ವಲ್ಪ ಜಾಸ್ತೀನೆ ಹೊತ್ತು.ಆಗ ಹೈಸ್ಕೂಲು ದಿನಗಳು. ಬಸ್ಸಲ್ಲಿ ಮೈಮರೆತು ನಿದ್ರೆ ಮಾಡಿದ್ರೆ ಪಕ್ಕಕ್ಕಿರೋರು ದುಡ್ಡು, ಬ್ಯಾಗು ಕದ್ಕೊಂಡು ಹೋಗ್ತಾರೆ ಅಂತ ಲೆಕ್ಕ ಇಲ್ಲದ, ರೆಕ್ಕೆ ಪುಕ್ಕ ಇಲ್ಲದ ಗಾಳಿ ಸುದ್ದಿ ಕಿವಿಗೆ ಬಿದ್ದಿದ್ರ ಪರಿಣಾಮನೋ ಏನೋ ನಾವೆಂತೂ ಬಸ್ಸಲ್ಲಿ ಒಬ್ನೇ ಹೋಗ್ತಾ ಪಕ್ಕಕ್ಕೆ ಬಂದು ಕೂರೋ ಅವ್ರುನ್ನ ಮೊದಲು ಗಮನಿಸ್ತಿದ್ದೆ. ಸ್ವಲ್ಪ ದೊಡ್ಡೋರು ಅಂದ್ರೆ ನೀವೆಲ್ಲಿಗೆ ಹೋಗೋವ್ರು ಅಣ್ಣಾ, ಶಿವಮೊಗ್ಗಕ್ಕಾ ಅಂತನೋ ಏನೋ ಮಾತಿಗೆಳ್ಯೋದು.ಕೆಲೋ ಸಲ ಅವ್ರೇ ನೀವೆಲ್ಲಿಗೆ ಹೋಗೋರು ಅಂತ ಮಾತಿಗೆ ಶುರು ಮಾಡೋರು. ತೀರಾ ಬಿಗುಮಾನ ಇಲ್ದೇ ಮಾತಾಡೋರಾದ್ರೆ ಇಬ್ರಿಗೂ ಒಳ್ಳೇ ಟೈಂ ಪಾಸ್

ಮತ್ತಷ್ಟು ಓದು »

10
ಜುಲೈ

ಧರ್ಮವೆಂಬ ಅಫೀಮು ಮತ್ತು ಜಾತಿಯೆಂಬ ಮರಿಜುವಾನ….

– ಡಾ. ಅಶೋಕ್ ಕೆ.ಆರ್

ಮಾರ್ಕ್ಸ್ ವಾದ ಮತ್ತದರ ವಿವಿಧ ಸರಣಿವಾದಗಳು ಪದೇ ಪದೇ ವಿಫಲವಾದ ನಂತರೂ ಮತ್ತೆ ಮತ್ತೆ ಪ್ರಸ್ತುತವೆನ್ನಿಸುತ್ತಲೇ ಸಾಗುವುದಕ್ಕೆ ಕಾರಣಗಳೇನು? ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದಾಗ “Religion is opium” ಎಂದು ದಶಕಗಳ ಹಿಂದೆ ಯಾವಗಲೋ ಮಾರ್ಕ್ಸ್ ಹೇಳಿದ್ದ ಮಾತುಗಳು ನೆನಪಾಗದೇ ಇರದು. ‘ಭಿನ್ನ’ ಪಕ್ಷವೆಂದು ತನ್ನ ಬೆನ್ನು ತಾನೇ ತಟ್ಟಿಕೊಳ್ಳುವ ಭಾ.ಜ.ಪದ ಭಿನ್ನತೆ ಇಷ್ಟೊಂದು ಅಸಹ್ಯಕರವಾಗಿರಬಲ್ಲದು ಎಂದು ಸ್ವತಃ ಅದರ ಕಾರ್ಯಕರ್ತರೇ ನಿರೀಕ್ಷಿಸಿರಲಿಲ್ಲವೇನೋ?!

 ಮಾತೆತ್ತಿದರೆ ‘ಹಿಂದೂ’ವಾದದ ಬಗ್ಗೆ ಪುಂಖಾನುಪುಂಖವಾಗಿ ಭಾಷಣ ಮಾಡುವ, ‘ಅಖಂಡ’ ಹಿಂದೂ ರಾಷ್ಟ್ರ ನಿರ್ಮಾಣವೇ ನಮ್ಮ ಗುರಿ ಎಂದು ಚುನಾವಣೆ ಸಮಯದಲ್ಲಿ ಅಬ್ಬರಿಸುವ ಭಾರತೀಯ ಜನತಾ ಪಕ್ಷ ಮೊದಲಿನಿಂದಲೂ ‘ಹಿಂದೂ’ ಎಂಬ ಧರ್ಮದ ಒಳಗಿನ ಜಾತಿಯೆಂಬ ಅನಿಷ್ಟದ ಬಗ್ಗೆ ಪ್ರಜ್ಞಾಪೂರ್ವಕ ಮೌನಕ್ಕೆ ಶರಣಾಗುತ್ತಿತ್ತು. ಯಾರಾದರೂ ಜಾತಿಯಾಧಾರಿತ ‘ಹಿಂದೂ’ ಧರ್ಮದ ಬಗ್ಗೆ ಖಂಡನೀಯ ಮಾತುಗಳನ್ನಾಡಿದರೆ ಅವರನ್ನು ಸ್ಯೂಡೋ ಸೆಕ್ಯುಲರ್ ಎಂದು, ರಾಷ್ಟ್ರದ್ರೋಹಿಯೆಂದು ಪಟ್ಟ ಕಟ್ಟುವಲ್ಲಿ ಭಾ.ಜ.ಪ ಮತ್ತದರ ಅಂಗಸಂಸ್ಥೆಗಳದು ಎತ್ತಿದ ಕೈ. ‘ನಾವೆಲ್ಲರೂ ಒಂದು ನಾವು ಹಿಂದು’ ಎಂದು ಪ್ರಚಾರ ಮಾಡುತ್ತ ಜನರನ್ನು ನವ ಬ್ರಾಹ್ಮಣ್ಯದ ಕಡೆಗೆ ಆಕರ್ಷಿತರನ್ನಾಗಿ ಮಾಡಿ ದಲಿತ-ಶೂದ್ರ-ಬ್ರಾಹ್ಮಣ-ಅಬ್ರಾಹ್ಮಣ ಯುವಜನತೆಯಲ್ಲಿ ಕೋಮುದ್ವೇಷವನ್ನು ಬಿತ್ತುವಲ್ಲಿಯೂ ಭಾ.ಜ.ಪದ ಪಾತ್ರ ಹಿರಿದು.
9
ಜುಲೈ

ಸದಾನ೦ದ ಗೌಡರ ತಲೆದ೦ಡ ಭಾ.ಜ.ಪಾಕ್ಕೆ ಭಾರೀ ಹೊರೆಯಾದೀತು !!

ರಾಘವೇಂದ್ರ ನಾವಡ

ನಾಟಕದ ಎರಡನೇ ಅ೦ಕಕ್ಕೆ ತೆರೆಬಿದ್ದಿದೆ! ಸದಾನ೦ದ ಗೌಡರು ಕೆಳಗಿಳಿದಿದ್ದಾರೆ. ನಿರೀಕ್ಷಿತವಾಗಿ ಶೆಟ್ಟರ್ ಮೇಲೆದ್ದಿದ್ದಾರೆ! “ ಪರವಾಗಿಲ್ಲ “ ಏನೋ ಒ೦ದು ದಾರಿಗೆ ಬರ್ತಾ ಇದ್ದಾರೆ.. ಮುಖ್ಯವಾಗಿ ಕರ್ನಾಟಕದಲ್ಲಿ ಬಿ.ಜೆ.ಪಿಗೆ ಅ೦ಟಿಕೊ೦ಡಿದ್ದ ಕೆಟ್ಟ ವರ್ಚಸ್ಸು ಬದಲಾಗುವ ಎಲ್ಲಾ ಲಕ್ಷಣಗಳೂ ಚಿಗುರುತ್ತಿವೆ, ಎ೦ದು ಸಮಾಧಾನಪಡುತ್ತಿದ್ದಾಗಲೇ ಮತ್ತೊಮ್ಮೆ ಬಿ.ಜೆ.ಪಿ.ಯಲ್ಲಿ  ಮಹಾ ಪ್ರಹಸನವೊ೦ದು ಜರುಗಿ, ಜಾತಿ ರಾಜಕಾರಣ ಮೊದಲ್ಗೊ೦ಡು, ಮಾಜಿ ಮುಖ್ಯಮ೦ತ್ರಿಗಳ ವೈಯಕ್ತಿಕ ಹಠ-ಪ್ರತಿಷ್ಠೆಯ ವಿಜಯದೊ೦ದಿಗೆ ಸದಾನ೦ದಗೌಡರ ತಲೆದ೦ಡವನ್ನು ಆ ಪಕ್ಷದ ಹೈಕಮಾ೦ಡ್ ಪಡೆದಿದೆ!

ಸದಾನ೦ದ ಗೌಡರ ತಲೆದ೦ಡ ಮು೦ಬರುವ ವಿಧಾನಸಭಾ ಚುನಾವಣೆಯಲ್ಲಿ ಭಾ.ಜ.ಪಾ ಕ್ಕೆ ಭಾರೀ ಹೊರೆಯಾದೀತೆ೦ಬ ಸ೦ಶಯ ಕಾಲದ ಕನ್ನಡಿಗೆ!ಕಳೆದ ನಾಲ್ಕು ವರ್ಷದಿ೦ದಲೂ  ಕಚ್ಚಾಡುತ್ತಲೇ ಇದ್ದ ಬಿ.ಜೆ.ಪಿ. ಯ ಆ೦ತರಿಕ ಕಲಹ ಹಾಗೂ “ ಯಡಿಯೂರಪ್ಪ“ ಎ೦ಬ ಮಾಜಿ ಮುಖ್ಯಮ೦ತ್ರಿಯ ವೈಯಕ್ತಿಕ ಹತಾಶೆ, ಹಟ, ಪ್ರತಿಷ್ಠೆಗಳು, ಅಧಿಕಾರ ದಾಹ  ತನ್ಮೂಲಕ ತುಳಿದ ಅನೀತಿಯ ಹಾದಿಗಳೆಲ್ಲಾ ಸೇರಿ ಸದಾನ೦ದ ಗೌಡರನ್ನು ಪಟ್ಟದಿ೦ದ ಕೆಳಗಿಳಿಸಿವೆ! ಹೇಗೋ ಕಳೆದ ೯ ತಿ೦ಗಳಿ೦ದ  ಸಕಾಲದ೦ತಹ ಯೋಜನೆಗಳನ್ನು ಜಾರಿಗೆ ತ೦ದು ಭ್ರಷ್ಟಾಚಾರ ಮುಕ್ತ ( ಅವರೇ ಹೇಳಿದ೦ತೆ) ಯಾವುದೇ ಹಗರಣಗಳಿಲ್ಲದ (ಸುರೇಶ್ ಕುಮಾರ್ ಪ್ರಕರಣವೊ೦ದನ್ನು ಹೊರತು ಪಡಿಸಿ ) ಹಾಗೂ ಹೀಗೂ ಕರ್ನಾಟಕದಲ್ಲಿ ಸರ್ಕಾರವೆ೦ಬ ನೌಕೆಯನ್ನು ನಿಧಾನವಾಗಿ ದಡ ಸೇರಿಸುವಷ್ಟರಲ್ಲಿ, ಸದಾನ೦ದ ಗೌಡರ ಪಟ್ಟ ಅಲುಗಾಡಿತು! ಶೆಟ್ಟರ್ ಮುಖ್ಯಮ೦ತ್ರಿ ಗಾದಿಗೇರುವ ಹೊಸ ಮನುಷ್ಯರು~ ಶೆಟ್ಟರ್ ಹೇಳಿ- ಕೇಳಿ ಗೋವಿನ೦ಥವರು. ಸದಾನ೦ದಗೌಡರಷ್ಟೂ ಗಡಸು ಅವರಲ್ಲ!  ಉಳಿದ ಅವಢಿಯನ್ನ೦ತೂ ಪೂರೈಸಬಲ್ಲರೇನೋ? ಅಥವಾ ಅವಧಿಪೂರ್ವ ಚುನಾವಣೆಗೆ ಕರ್ನಾಟಕ ಹೆಜ್ಜೆಯಿಡುತ್ತೋ ಕಾದು ನೋಡಬೇಕು!

ಮತ್ತಷ್ಟು ಓದು »

9
ಜುಲೈ

ಯಾವ್ ಜಾತಿಯ ಮುಖ್ಯಮಂತ್ರಿ ಬೇಕು!?

– ರಾಕೇಶ್ ಶೆಟ್ಟಿ

ಯಡ್ಡಿ ಕೆಳಗಿಳಿದಾಗ ಬರೆದಿದ್ದು.. ಈಗ ಸದಾ ಇಳಿಯುವಾಗಲೂ ಅಪ್ಪ್ಲೈ ಆಗುತ್ತೆ…! ಅತಿ ಕೆಟ್ಟ ರಾಜಕಾರಣಕ್ಕೆ ನಮ್ಮ ರಾಜ್ಯ ಸಾಕ್ಷಿಯಾಗಿರುವುದು ದೌರ್ಭಾಗ್ಯ…!

———————————————————————————————————————————————-

ಅಂತು ಬಿಜೆಪಿ ಹೈಕಮಾಂಡ್ ಧೈರ್ಯ ಮಾಡಿದೆ…! ಯಡ್ಯೂರಪ್ಪನವ್ರಿಗೆ ಕುರ್ಚಿ ಬಿಡಿ ಅನ್ನುವ ಸಂದೇಶವನ್ನ ರವಾನಿಸಿದೆ.ಸಂದೇಶ ಮಾಧ್ಯಮದ ಮೂಲಕ ಬಂದಿದ್ದು ನಿನ್ನೆ ಬೆಳಿಗ್ಗೆಯೇ.ಆದ್ರೆ ಇನ್ನ ಯಡ್ಯೂರಪ್ಪ ಮಾತ್ರ ಜಪ್ಪಯ್ಯ ಅನ್ನುತ್ತಿಲ್ಲ..!

ಕಳೆದ ೧೦-೧೫ ದಿನಗಳಿಂದ ಕರ್ನಾಟಕ ಸರ್ಕಾರ ಜನರ ಸಮಸ್ಯೆಯನ್ನ ನೋಡೋದು ಬಿಟ್ಟು ತನ್ನ ಬುಡ ಭದ್ರ ಮಾಡಿಕೊಳ್ಳುವ ಬಗ್ಗೆಯೇ ತಲೆಕೆಡಿಸಿಕೊಂಡು ಕೂತಿದೆ.ಕಳೆದ ಹತ್ತು ದಿನ ಬಿಡಿ, ಉತ್ತರ ಕರ್ನಾಟಕದಲ್ಲಿ ನೆರೆ ಬಂದು ಜನ ತುತ್ತು ಅನ್ನಕ್ಕೆ ಸೂರಿಗೆ ಪರದಾಡುತ್ತಿರುವಾಗಲೇ ರೆಡ್ಡಿಗಳು ಬಂಡಾಯದ ಬಾವುಟ ಹಾರಿಸಿದಾಗಲೂ ಜನ ಸತ್ತರೆ ಸಾಯಲಿ ಕುರ್ಚಿ ಉಳಿದರೆ ಸಾಕು ಅಂತ ಬಿಜೆಪಿ ಸರ್ಕಾರವೇ ದೆಹಲಿಗೆ ಓಡಿ ಹೋಗಿತ್ತು…! ಹಾಗೇನಾದರೂ ಯಡ್ಯೂರಪ್ಪ ಬಂಡಾಯಕ್ಕೆ ಬಗ್ಗದೇ ರಾಜೀನಾಮೆ ಕೊಟ್ಟಿದ್ದರೆ ಜನ ಮತ್ತೆ ಗೆಲ್ಲಿಸಿ ಕಳಿಸುತಿದ್ದರೇನೋ.ಆದರೆ ಯಡ್ಯೂರಪ್ಪ ಶರಣಾಗಿ ಕುರ್ಚಿಯ ಮುಂದೆ ಬೋರಲು ಬಿದ್ದಿದ್ದರು..!

ಹಾಗೇ ನೋಡಿದರೆ ಈ ಸರ್ಕಾರ ರೆಡ್ಡಿಗಳ ಬಂಡಾಯದ ಸಮಯದಲ್ಲಿ ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಕ್ಕಿ ತತ್ತರಿಸುತ್ತಿದ್ದರೂ ಹಾಳು ಬಿದ್ದು ಹೋಗಿ ಅನ್ನುವಂತೆ ಸುಮ್ಮನಿದ್ದಿದ್ದೇ ಕಡೆ ಬಾರಿಯೇನಲ್ಲ,ಅದಾದ ಮೇಲೆ ರೆಸಾರ್ಟ್ನಲ್ಲಿ ಕತ್ತೆ ವ್ಯಾಪರಕ್ಕಿಳಿದಾಗಲೂ ತಿಂಗಳುಗಟ್ಟಲೇ ರಾಜ್ಯ ಅನಾಥವಾಗಿತ್ತು.ಸರ್ಕಾರಿ ಯಂತ್ರಕ್ಕೆ ತುಕ್ಕು ಹಿಡಿದಿತ್ತು.

ಮತ್ತೆ ಮುಖ್ಯಮಂತ್ರಿಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿದಾಗ ಖುದ್ದು ಆಡಳಿತ ಪಕ್ಷವೇ ಬಂದ್ ಕರೆ ಕೊಟ್ಟೂ ವೋಟ್ ಹಾಕಿ ಕಳುಹಿಸಿದ ಜನಸಾಮಾನ್ಯರಿಗೆ ತೊಂದರೆ ಕೊಟ್ಟಿದ್ದು ಮಹಾನ್ ಸಾಧನೆಯೇ (?) ಸರಿ.ಅದೆಲ್ಲಾ ಆಗಿ ಮತ್ತೆ ಸುಪ್ರಿಂ ಕೋರ್ಟ್ ತೀರ್ಪು ಬಂದ ಮೇಲೂ ಮತ್ತೆ ದೆಹಲಿಯಲ್ಲಿ ಕುರ್ಚಿ ಸವಾರಿ ಮಾಡಿ ಬಂದಾಗಲೂ ಕರ್ನಾಟಕ ಅನಾಥವಾಗಿತ್ತು.

ಮತ್ತಷ್ಟು ಓದು »