ಖೆಡ್ಡ :೩ – ಕುರ್ಚಿಗಳು!
ಹೇಮಂತ್ ಕುಮಾರ್
ಸೂರ್ಯ ಎಂದಿನಂತೆ ಬೆಳಕನ್ನು ಕಕ್ಕುತ್ತಲಿದ್ದ ಆದರೆ ಇಂದಿನ ಬೆಳಗ್ಗೆ ಎಂದಿನಂತಿರಲಿಲ್ಲ. ಅಪ್ಪ ಅಮ್ಮ, ಅವರ ಎಂಟು ವರ್ಷದ ಮಗ ಎಂದಿನಂತೆಯೇ ಸ್ನಾನಾದಿ ತಿಂಡಿ ತೀರ್ಥಗಳನ್ನು ಗಡಬಡನೇ ಮುಗಿಸಿ ಟಿಫಿನ್ ಬಾಕ್ಸುಗಳನ್ನು ಸಿದ್ಧಗಳೊಸಿಕೊಂಡು, ಮಗ ಶಾಲೆಯ ಸಮವಸ್ತ್ರ, ಅಪ್ಪ ಅಮ್ಮ ಆಫೀಸಿನ ಐಡೆಂಟಿಟಿ ಕಾರ್ಡು, ಊಟದ ಬುತ್ತಿಯನ್ನು ಹೊತ್ತುಕೊಂಡು ಮನೆಯಿಂದ ಹೊರಡುತ್ತಾ ಮೂವರೂ ಒಂದೊಂದು ಕುರ್ಚಿಗಳನ್ನು ಹೊತ್ತುಕೊಂಡು ಮನೆ ಬೀಗ ಹಾಕಿ ಹೊರಡುವರು. ಅಕ್ಕ ಪಕ್ಕದ ಮನೆಯವರೂ ಸಹ ಅದೇ ರೀತಿ ಸಂಸಾರ ಸಮೇತ ಕುರ್ಚಿಗಳನ್ನು ಹೊತ್ತುಕೊಂಡು ಸೈಕಲ್ ಗಳಿದ್ದ ಮಕ್ಕಳು ಸೈಕಲ್ಲಿನಲ್ಲಿ, ದ್ವಿಚಕ್ರವಾಹನಗಳಿದ್ದವರು, ಕಾರಿದ್ದವರು, ಬಸ್ಸಿನಲ್ಲಿ ಹೊರಡುವವರು ಎಲ್ಲರ ಕೈಗಳಲ್ಲೂ ಹೆಗಲ ಮೇಲೂ ಒಂದೊಂದು ಕುರ್ಚಿಗಳು. ಇಡೀ ಊರಿಗೆ ಊರೇ ಒಬ್ಬರನ್ನೊಬ್ಬರು ನೋಡುತ್ತಾ ಮುಗುಳ್ನಗುತ್ತಾ ಗೊತ್ತಿದ್ದವರೊಂದಿಗೆ ಮಾತನಾಡುತ್ತಾ ಬಣ್ಣ ಬಣ್ಣದ ಕುರ್ಚಿಗಳನ್ನು ಹಿಡಿದುಕೊಂಡು ಒಂದೇ ದಾರಿಯಲ್ಲಿ ಸಾಗುತ್ತಿರುವುದು. ದೊಡ್ಡ ಲಾರಿಯೊಂದು ಅದರ ಭರ್ತಿ ಕುರ್ಚಿಗಳನ್ನು ಹೊತ್ತುಕೊಂಡು ಜನರ ನಡುವಿನಲ್ಲಿ ಜಾಗ ಮಾಡಿಕೊಂಡು ಮುಂದುವರೆಯಿತು.
ಶೇರು ಮಾರುಕಟ್ಟೆ : ಭಾಗ -೨
– ವೆಂಕಟೇಶ್ ಗುರುರಾಜ್
ನಮ್ಮ ದೇಶದ ಗುಜರಾತಿಗಳು ಮತ್ತು ಮಾರ್ವಾಡಿಗಳು ಈ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವುದು ಹೆಚ್ಚಾಗಿ ಕಂಡುಬರುತ್ತದೆ. ನಮ್ಮ ಕನ್ನಡಿಗರು ಹೆಚ್ಚಾಗಿ ಬ್ಯಾಂಕ್/ಅಂಚೆ ಕಛೇರಿ ಗಳಲ್ಲಿ ನಿಶ್ಚಿತ ಠೇವಣಿಗಳಲ್ಲಿ ಹಣ ಇಟ್ಟು ಅವರು ಕೊಡುವ ೧೦-೧೧% ವಾರ್ಷಿಕ ಬಡ್ಡಿಗೆ ತೃಪ್ತಿಪಟ್ಟುಕೊಳ್ಳುತ್ತಾರೆ. ಇನ್ನು ಕೆಲವರು ಚಿನ್ನವನ್ನು ಒಡವೆ ರೂಪದಲ್ಲಿ ಇಟ್ಟುಕೊಂಡು ತಮ್ಮ ಕಷ್ಟ ಕಾಲದಲ್ಲಿ ಉಪಯೋಗಿಸಿಕೊಳ್ಳುತ್ತಾರೆ. ಮತ್ತೆ ಕೆಲವರು ಭೂಮಿಯ ಮೇಲೆ ಹಣವನ್ನು ವಿನಿಯೋಗಿಸುತ್ತಾರೆ. ಕನ್ನಡಿಗರು ಈ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವುದು ಬಹಳ ಕಡಿಮೆ. ಒಂದು ಜ್ಞಾನದ ಕೊರತೆಯಾದರೆ, ಮತ್ತೊಂದು ಹೆಚ್ಚಿನ ರಿಸ್ಕ್ ತೆಗೆದುಕೊಳ್ಳಲು ಹೆಚ್ಚಾಗಿ ಕನ್ನಡಿಗರು ಇಷ್ಟಪಡುವುದಿಲ್ಲ. ಆದ ಕಾರಣ ನಮ್ಮಲ್ಲಿ ಈ ಶೇರು ಮಾರುಕಟ್ಟೆಯ ಬಗ್ಗೆ ಕನ್ನಡದಲ್ಲಿ ಬಂದಿರುವ ಪುಸ್ತಕಗಳು ಬಹಳ ಕಡಿಮೆ. ಕೆಲವು ಪತ್ರಿಕೆಗಳು ಲೇಖನಗಳನ್ನು ಆಗಾಗ ಪ್ರಕಟಿಸುತ್ತವೆ. ಆದರೆ ಅದು ಬಹಳ ಕಡಿಮೆ. ನಮ್ಮ ಕನ್ನಡಿಗರು ಈ ಮಾರುಕಟ್ಟೆಯಿಂದ ದೂರ ಇರಲು ಇದೂ ಸಹ ಒಂದು ಕಾರಣವಿರಬಹುದು. ಆಂಗ್ಲ ಭಾಷೆಯಲ್ಲಿ ಈ ಮಾರುಕಟ್ಟೆಯ ಬಗ್ಗೆ ಸಂಭೃದ್ದ ಮಾಹಿತಿ ಇದೆ. ಗೊಗಲ್ ನಲ್ಲಿಯೂ ಸಹ ಅನೇಕ ಮಾಹಿತಿ ಪಡೆಯಬಹುದು.
ಪ್ರಪಂಚದ ೩ನೇ ಅತೀ ದೊಡ್ಡ ಶ್ರೀಮಂತ ವಾರನ್ ಬಫೆಟ್ ಶೇರು ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಹಣ ಸಂಪಾದಿಸಿರುವ ವ್ಯಕ್ತಿ. ಇವರ ಹೂಡಿಕೆ ಕಂಪನಿಯ ಹೆಸರು ” ಬರ್ಕ್ ಶೈರ್ ಹಾಥ್ ವೇ ’ ಇವರು ತಮ್ಮ ೧೩-೧೪ನೇ ವಯಸ್ಸಿನಲ್ಲಿ ಈ ಶೇರು ಮಾರುಕಟ್ಟೆಯ ವ್ಯವಹಾರದಲ್ಲಿ ಇಳಿದು, ” ಬಫೆಟ್ ಲೀ ” ಮುಂತಾದ ಕೆಲವು ಕಂಪನಿಗಳನ್ನೂ ಸೃಷ್ಟಿಸಿದ್ದಾರೆ. ಭಾರತದಲ್ಲಿ ಶೇರು ಮಾರುಕಟ್ಟೆಯ ರಾಜನೆಂದು ಪ್ರಸಿದ್ದಿಗೆ ಬಂದವರು ರಾಕೇಶ್ ಜುಂಜುನ್ ವಾಲ. ಇವರು ಅತಿ ದೊಡ್ಡ ಮಾರುಕಟ್ಟೆಯ ವಿಶ್ಲೇಷಕರು ಹಾಗೂ ನಮ್ಮ ಶೇರು ಮಾರುಕಟ್ಟೆಯ ದೊಡ್ದ ಹೂಡಿಕದಾರರಲ್ಲಿ ಒಬ್ಬರು.
ಕಾಡುವಂತ ಗೆಳೆಯ ಬೇಕು..
– ಅನಿತ ನರೇಶ್ ಮಂಚಿ
ಮಾತೃಭಾಷೆಯಲ್ಲಿಯೇ ಶಿಕ್ಷಣ-ಮಕ್ಕಳ ಹಕ್ಕನ್ನು ರಕ್ಷಿಸಿ
– ಪಂಡಿತಾರಾಧ್ಯ,ಮೈಸೂರು
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡಬೇಕೆಂಬ ಜಗತ್ತಿನ ಎಲ್ಲ ಶ್ರೇಷ್ಠ ಶಿಕ್ಷಣ ತಜ್ಞರ ವಿಚಾರಗಳು ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಿ ಕರ್ನಾಟಕ ಸರಕಾರವು ತನ್ನ ಭಾಷಾನೀತಿಯನ್ನು ಅಂತಿಮವಾಗಿ ರೂಪಿಸಿತು(೧೯೯೪). ಅದರ ಪ್ರಕಾರ ಒಂದರಿಂದ ಐದನೇ ತರಗತಿಯವರೆಗೆ ಮಾತೃಭಾಷೆ/ರಾಜ್ಯಭಾಷೆ ಮಾತ್ರ ಕಡ್ಡಾಯ. ಕನ್ನಡ ಮಾತೃಭಾಷೆಯಲ್ಲದವರಿಗೆ ಒಂದನೆಯ ತರಗತಿಯಲ್ಲಿ ಪರಿಸರಭಾಷೆ/ರಾಜ್ಯಭಾಷೆಯಾದ ಕನ್ನಡವೂ ಕಡ್ಡಾಯ ಕಲಿಕೆಯ ವಿಷಯವಲ್ಲ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ ಅಂದರೆ ಮೂರನೆಯ ತರಗತಿಯಿಂದ ಅವರಿಗೆ ರಾಜ್ಯಭಾಷೆ ಕನ್ನಡ ಐಚ್ಛಿಕ ಕಲಿಕೆಯ ವಿಷಯ ಮಾತ್ರ; ಪರೀಕ್ಷೆ ಕಡ್ಡಾಯವಲ್ಲ. ಐದನೆಯ ತರಗತಿಯಿಂದ ಕನ್ನಡ ಕಲಿಕೆ ಮತ್ತು ಪರೀಕ್ಷೆ ಕಡ್ಡಾಯ. ಎರಡನೆಯ ಭಾಷೆಯನ್ನು ಕಲಿಯುವ ಹಂತದಿಂದ ಅಂದರೆ ಮೂರನೆಯ ತರಗತಿಯಿಂದ ಮಾತ್ರ ಇಂಗ್ಲಿಷ್ ಮಾತೃಭಾಷೆಯಲ್ಲದ ಮಕ್ಕಳಿಗೆ ಇಂಗ್ಲಿಷ್ ಐಚ್ಛಿಕ ಕಲಿಕೆಯ ವಿಷಯ, ಪರೀಕ್ಷೆ ಕಡ್ಡಾಯವಲ್ಲ. ಐದನೆಯ ತರಗತಿಯಿಂದ ಇಂಗ್ಲಿಷ್ ಕಲಿಕೆ ಮತ್ತು ಪರೀಕ್ಷೆ ಕಡ್ಡಾಯ. ಕರ್ನಾಟಕ ಸರಕಾರದ ಈ ಭಾಷಾನೀತಿಯನ್ನು ಸರ್ವೋನ್ನತ ನ್ಯಾಯಾಲಯವೂ ಪ್ರಶಂಸಿಸಿ ಅನುಮೋದಿಸಿತ್ತು(೧೯೯೩).
ಈ ಭಾಷಾನೀತಿಗೆ ಇದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂದರ್ಭದಲ್ಲಿ ಅದನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿತು. ಪೂರ್ವ ಪ್ರಾಥಮಿಕವೂ ಸೇರಿದಂತೆ ಒಂದನೆಯ ತರಗತಿಯಿಂದಲೇ ಇಂಗ್ಲಿಷ್ ಮಾತೃಭಾಷೆಯಲ್ಲದವರಿಗೂ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ನಡೆಸಲು ಅನುದಾನರಹಿತ ಖಾಸಗಿ ಶಾಲೆಗಳಿಗೆ ಮುಕ್ತ ಅವಕಾಶ ನೀಡಿತು(೨೦೦೮). ಇದು ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕೆಂಬ ಮಕ್ಕಳ ಶೈಕ್ಷಣಿಕ ಹಕ್ಕಿನ ನೀತಿಗೆ ವಿರುದ್ಧವಾಗಿದೆ. ಇದರಿಂದ ಮಕ್ಕಳು ಆರಂಭದ ಹಂತದಲ್ಲಿಯೇ ‘ಸಮಾನ ಅವಕಾಶ-ಸಮಾನ ಸ್ಪರ್ಧೆ’ ಎಂಬ ಸಮಾನತೆಯ ನ್ಯಾಯದಿಂದ ವಂಚಿತರಾಗಿದ್ದಾರೆ.
ಕಾನೂನಿನಂಗಳ ೪ : ಆಧುನಿಕ ಕಾನೂನುಗಳು
– ಉಷಾ ಐನಕೈ ಶಿರಸಿ
ಭಾರತದಲ್ಲಿ ಕಾನೂನುಗಳನ್ನು ಅಧ್ಯಯನ ಮಾಡುವಾಗ ಸ್ಥೂಲವಾಗಿ ಎರಡು ವಿಭಾಗಗಳಲ್ಲಿ ನೋಡುವುದು ಅನಿವಾರ್ಯವಾಗುತ್ತದೆ. ಅದಾವವೆಂದರೆ ಬ್ರಿಟಿಶ್ ವಸಾಹತುಶಾಹಿ ಪೂರ್ವದ ಕಾನೂನುಗಳು ಹಾಗೂ ವಸಾಹತುಶಾಹಿ ನಂತರದ ಕಾನೂನುಗಳು. ಪೂರ್ವದ ಕಾನೂನುಗಳು ಪ್ರಾಚೀನ ಭಾರತದ ಕಾನೂನುಗಳೆಂದೇ ಗುರುತಿಸಲ್ಪಡುತ್ತದೆ. ಶ್ರುತಿ, ಸ್ಮೃತಿ, ಧರ್ಮ, ಸಂಪ್ರದಾಯಗಳೆಲ್ಲ ಆ ಕಾಲದ ಕಾನೂನಿನ ನೆಲೆಗಳು. ವಸಾಹತುಶಾಹಿ ನಂತರದ ಕಾನೂನುಗಳು ಆಧುನಿಕ ಕಾನೂನುಗಳೆಂದು ಗುರುತಿಸ್ಪಟ್ಟು ಇಂದಿಗೂ ಕೂಡ ಚಾಲನೆಯಲ್ಲಿವೆ.
ವಸಾಹತುಶಾಹಿ ನಂತರದ ಕಾನೂನುಗಳು ಏಕೆ ಆಧುನಿಕ ಕಾನೂನುಗಳೆಂದು ಕರೆಯಲ್ಪಟ್ಟವು ಎಂಬುದಕ್ಕೆ ವಿವರಣೆಗಳು ಬೇಕಿಲ್ಲ. ಏಕೆಂದರೆ ಅದೊಂದು ಸಾಮಾನ್ಯ ಜ್ಞಾನ. ಐರೋಪ್ಯರು ಭಾರತಕ್ಕೆ ವ್ಯಾಪಾರಕ್ಕಾಗಿ ಬಂದವರು. ನಂತರ ಈ ದೇಶದ ಆಡಳಿತವನ್ನು ಕೈಗೆ ತೆಗೆದುಕೊಂಡರು. ಪಾಶ್ಚಾತ್ಯ ದೇಶಗಳ ಹಾಗೆ ಇಡೀ ಭಾರತದ ದೇಶವನ್ನು ಪುನರ್ಕಟ್ಟಲು ಪ್ರಯತ್ನಿಸಿದರು. ಅವರ ಈ ಪ್ರಯತ್ನ ಒಳಿತು ಕೆಡಕುಗಳೆರಡನ್ನೂ ಒಳಗೊಂಡಿದೆ. ಭಾರತ ನೂರಾರು ಪ್ರಾಂತಗಳಾಗಿ ಒಡೆದು ಹಂಚಿಹೋಗಿತ್ತು. ಇದು ಆಡಳಿತಾತ್ಮಕವಾಗಿ ಹಾಗೂ ಕಾನೂನಾತ್ಮಕವಾಗಿ ತುಂಬ ತೊಂದರೆಯನ್ನುಂಟುಮಾಡುತ್ತಿತ್ತು.
ಕಾನೂನಿನ ವಿಷಯವಾಗಿ ನೋಡುವುದಾದರೆ ಆಯಾ ಪ್ರಾಂತ್ಯದ ರೂಢಿ, ಪದ್ಧತಿಗಳೇ ಅಲ್ಲಿನ ಕಾನೂನುಗಳಾಗಿದ್ದವು. ಹೀಗಾಗಿ ಸ್ಥಳದಿಂದ ಸ್ಥಳಕ್ಕೆ ಕಾನೂನಿನ ಸ್ವರೂಪ ಕೂಡ ಭಿನ್ನತೆಯನ್ನು ಹೊಂದಿತ್ತು. ಇದು ಇಡೀ ಭಾರತವನ್ನು ಆಳಲು ಹೊರಟ ಇಂಗ್ಲೀಶರಿಗೆ ನ್ಯಾಯ ನಿರ್ಣಯ ನೀಡಲು ತೊಡಕಾಯಿತು. ಹೀಗಾಗಿ ತಮ್ಮಂತಹದೇ ಒಂದು ಏಕರೂಪಿ ಕಾನೂನಿನ ಪರಿಕಲ್ಪನೆಯನ್ನು ಇಲ್ಲಿ ಅನುಷ್ಠಾನಗೊಳಿಸಲು ನಿರ್ಣಯಿಸಿದರು. ಪ್ರಾರಂಭದಲ್ಲಿ ಈಸ್ಟ್ ಇಂಡಿಯಾ ಕಂಪನಿ ತನ್ನ ಅಧಿಕಾರದ ಕೇಂದ್ರಗಳಾದ ಮದ್ರಾಸ್, ಮುಂಬಯಿ, ಕಲ್ಕತ್ತಾಗಳ ಮೂಲಕ ಬ್ರಿಟಿಶ್ ಇಂಗ್ಲೀಶ್ ಕಾನೂನುಗಳನ್ನು ಆಧಾರವಾಗಿಟ್ಟುಕೊಂಡು ಆಡಳಿತ ನಡೆಸುತ್ತಿತ್ತು. ನಂತರ ಈ ಅಧಿಕಾರ ಬ್ರಿಟಿಶ್ ಸರಕಾರಕ್ಕೆ ಹಸ್ತಾಂತರವಾದಾಗ ಇಡೀ ಭಾರತಕ್ಕೆ ಅನ್ವಯವಾಗುವಂತಹ ಹಲವು ಕಾನೂನುಗಳು ರಚಿತವಾದವು.
ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?
– ರಾಕೇಶ್ ಶೆಟ್ಟಿ
ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?
೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.
ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.
ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?






