ವಿಷಯದ ವಿವರಗಳಿಗೆ ದಾಟಿರಿ

Archive for

27
ಆಗಸ್ಟ್

ಹೊಸಬರಿಗೆ ಉದ್ಯೋಗವಕಾಶ -ಬಿಇ, ಬಿಟೆಕ್, ಎಂಇ, ಎಂಟೆಕ್, ಎಂಸಿಎ. – ಕನ್ನಡಿಗರಿಗೆ ಆದ್ಯತೆ

-ಅರವಿಂದ್

ಮೊಬ್ಯೆಲ್ ಟೆಕ್ನಾಲಜಿ ಕ್ಷೇತ್ರದಲ್ಲಿ ವಿಶ್ವದಲ್ಲೇ ಎರಡನೇ ಅತ್ಯುತ್ತಮ ಕಂಪೆನಿಯಾದ ರಿನೆಸೆಸ್ ಮೊಬ್ಯೆಲಿನಲ್ಲಿ ಉದ್ಯೋಗವಕಾಶ.

ಅಭ್ಯರ್ಧಿಗಳು ತಮ್ಮ ಪರಿಚಯ ಪತ್ರವನ್ನು ೩೦ನೇ ಆಗಸ್ಟ್ ೨೦೧೨ರ ಗುರುವಾರದೊಳಗೆ ಕೆಳಗಿನ ಮಿಂಚೆಗ ಕಳುಹಿಸಬೇಕು, ನಂತರ ಬರುವ ಅರ್ಜಿಗಳು ಮಾನ್ಯವಿರುವುದಿಲ್ಲ.

ವಿದ್ಯಾರ್ಹತೆ :  ೨೦೧೨ ರ ಸಾಲಿನಲ್ಲಿ  ಶ್ಯೆಕ್ಷಣಿಕ ವರ್ಷದಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ.

ಮತ್ತಷ್ಟು ಓದು »

27
ಆಗಸ್ಟ್

ಕಾನೂನಿನಂಗಳ ೭ : ಗಂಡ-ಹೆಂಡತಿ ಉತ್ತರ ದಕ್ಷಿಣ- ವಿಚ್ಛೇದನ

-ಉಷಾ ಐನಕೈ  ಶಿರಸಿ

ವಿವಾಹ  ಒಂದು ಪವಿತ್ರ ಧಾರ್ಮಿಕ ಸಂಸ್ಕಾರ. ಇದರ ಹಿಂದೆ ಮದುವೆಯಾದ ಗಂಡು -ಹೆಣ್ಣಿಗೆ ಅವರದೇ ಆದ ಸಾಮಾಜಿಕ ಹಾಗೂ ಭಾವನಾತ್ಮಕ ಬದ್ಧತೆ ಇರುತ್ತದೆ. ಕಷ್ಟವಿರಲಿ, ಸುಖವಿರಲಿ ಗಂಡ-ಹೆಂಡತಿ ಸಮನಾಗಿ ಹಂಚಿ ಕೊಂಡು ಸಹಬಾಳ್ವೆ ನಡೆಸಬೇಕೆಂಬುದೇ ವಿವಾಹ ಬಂಧನದ ಹಿಂದಿರುವ ತತ್ವ. ಅದಕ್ಕಾಗೇ ಪತ್ನಿಗೆ ‘ಅರ್ಧಾಂಗಿ’ ಎಂದು ಕರೆದಿರುವುದು. ಆದರೆ ಆಧುನಿಕ ಯುಗದಲ್ಲಿ ಇದು ಸಾಧ್ಯವೇ? ಬದಲಾದ ಕಾಲ, ಆಧುನಿಕ ಶಿಕ್ಷಣ, ವೈಚಾರಿಕ ಸ್ವಾತಂತ್ರ್ಯ, ಸಮಾನತೆಯ ಹೋರಾಟ ಮುಂತಾದ ಬೆಳವಣಿಗೆಯಲ್ಲಿ ಸಾಂಪ್ರದಾಯಿಕ ಮೌಲ್ಯಗಳು ಉಳಿದುಕೊಳ್ಳಲು ಸಾಧ್ಯವೇ? ಆಧುನಿಕ ಸಂಪರ್ಕ, ವೈವಿಧ್ಯಮಯ ಮಾಧ್ಯಮಗಳು ಹಾಗೂ ವ್ಯಕ್ತಿ ಸ್ವಾತಂತ್ರ್ಯದ ಹಂಬಲಗಳ ನಡುವೆ ಪರಸ್ಪರ ನಂಬಿಕೆ, ವಿಶ್ವಾಸ, ಸಹನೆ, ಸಹಬಾಳ್ವೆ ಸ್ವಾಭಾವಿಕವಾಗೇ ಶಿಥಿಲವಾಗತೊಡಗಿವೆ. ವೈಯಕ್ತಿಕ ಪ್ರತಿಷ್ಠೆ ದಿನದಿಂದ ದಿನಕ್ಕೆ ಗಂಡು-ಹೆಣ್ಣು ಇಬ್ಬರಲ್ಲೂ ಹೆಚ್ಚಾಗತೊಡಗಿವೆ. ಗಂಡ-ಹೆಂಡತಿಯ ನಡುವೆ ಹೆಚ್ಚು ವಯಸ್ಸಿನ ಅಂತರವಿದ್ದರೂ ಕಲಹ, ಅಂತರವೇ ಇಲ್ಲದಿದ್ದರೂ ಕಲಹ. ಹೀಗೆ ಹಲವಾರು ಕಾರಣಗಳಿಂದ ವಿವಾಹ ವಿಚ್ಛೇದನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ದಾಂಪತ್ಯದ ನಡುವೆ ವಿರಸ ಹಿಂದೆಯೂ ಇತ್ತು. ಆದರೆ ಆಗ ನ್ಯಾಯಾಲಯದ ಮೆಟ್ಟಿ ಲೇರುವ ಅವಕಾಶ ಮತ್ತು ಧೈರ್ಯ ಎರಡೂ ಇಲ್ಲವಾಗಿತ್ತು. ಅದರಲ್ಲೂ ಹೆಣ್ಣು ದನಿ ಇಲ್ಲದೇ ಸಹಿಸಿಕೊಂಡೇ ಬಾಳಬೇಕಾಗಿತ್ತು. ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ಚಿಕ್ಕ ಚಿಕ್ಕ ಕಾರಣಗಳಿಗೂ ಕಾನೂನಿಗೆ ಮೊರೆಹೋಗುವುದು ಸ್ವಾಭಾವಿಕವಾಗಿದೆ. ಮಹಿಳಾ ಶೋಷಣೆಯನ್ನು ತಪ್ಪಿಸುವ ಸಲುವಾಗಿ ಹುಟ್ಟಿ ಕೊಂಡ ಕಾನೂನುಗಳು ಇದಕ್ಕೆ ಅವಕಾಶ ಮಾಡಿ ಕೊಡುತ್ತಿವೆ.

ಮತ್ತಷ್ಟು ಓದು »