ವಿಷಯದ ವಿವರಗಳಿಗೆ ದಾಟಿರಿ

Archive for

11
ಸೆಪ್ಟೆಂ

ಚಿಕಾಗೋದಲ್ಲಿ ಹರಿದ ವಿವೇಕಾಮೃತ ಧಾರೆ

– ಚಕ್ರವರ್ತಿ ಸೂಲಿಬೆಲೆ

ಸ್ವಾತಂತ್ರ್ಯ ಹೋರಾಟದ ಹೊತ್ತು. ಕ್ರಾಂತಿಕಾರಿಯೊಬ್ಬ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಸಂದರ್ಭ. ಪ್ರೀತಿಲತಾ ವಡ್ಡೆದಾರ್ ಎಂಬ ಮತ್ತೊಬ್ಬ ಮಹಿಳಾ ಕ್ರಾಂತಿಕಾರಿಗೆ ಜೈಲಿನಿಂದಲೇ ಪತ್ರ ಬರೆದ. ಅಚಾನಕ್ಕಾಗಿ ನಿನ್ನ ತೋಳಿನ ರವಿಕೆಯ ಮೇಲಿದ್ದ ವಿವೇಕಾನಂದರ ಚಿತ್ರ ನನ್ನ ಕಣ್ಣಿಗೆ ಬಿತ್ತು. ಬಹಳ ಆನಂದವಾಯ್ತು. ನಮ್ಮ ಕಾಲದ ಋಷಿ ಆತ. ಆತನನ್ನು ಅನುಸರಿಸುವುದು ಒಳಿತು.ಮುಂದೆ ಪೊಲೀಸರೊಂದಿಗಿನ ಕದನದಲ್ಲಿ ಆ ಹುಡುಗಿ ಅಸುನೀಗಿದಳು.

ಇದು ಸ್ವಾಮಿ ವಿವೇಕಾನಂದರ ದೇಹತ್ಯಾಗದ ಬಹು ವರ್ಷಗಳ ನಂತರ ನಡೆದ ಘಟನೆ. ಅವರು ಬದುಕಿದ್ದಾಗಲೇ ಅಪರೂಪದ ಮತ್ತೊಂದು ಘಟನೆ ಜರುಗಿತ್ತು.
ಸ್ವಾಮೀಜಿ ಪ್ರಯಾಣಿಸುತ್ತಿದ್ದ ರೈಲು ತಮ್ಮೂರನ್ನು ಹಾದುಹೋಗಲಿದೆ ಎಂದರಿತ ಒಂದು ಊರಿನ ಜನ ತಮ್ಮ ಊರಿನಲ್ಲಿ ರೈಲು ನಿಲ್ಲಿಸುವಂತೆ ಕೇಳಿಕೊಂಡರು. ಅದನ್ನು ನಿಯಮ ಬಾಹಿರವೆಂದು ಸ್ಟೇಷನ್ ಮಾಸ್ಟರ್ ನಿರಾಕರಿಸಿದಾಗ ಅವರು ಗೋಗರೆದರು. ಆಗಲೂ ಕೇಳುವ ಲಕ್ಷಣಗಳು ಕಾಣದಾದಾಗ ಊರಿನ ಜನ ರೈಲು ಹಳಿಗಳ ಮೇಲೆ ಅಂಗಾತ ಮಲಗಿಬಿಟ್ಟರು. ಶ್ರೇಷ್ಠ ಸಂತನೊಬ್ಬನ ಪಾದಸ್ಪರ್ಷ ನಮ್ಮೂರಿನ ನೆಲಕ್ಕೆ ಆಗಲಿಲ್ಲವೆಂದರೆ ನಮ್ಮೆಲ್ಲರ ಬದುಕು ವ್ಯರ್ಥ ಎನ್ನುವುದು ಅವರ ನಿಲುವಾಗಿತ್ತು. ರೈಲು ಬಂತು. ಆನರು ಹಳಿಯಿಂದ ಅಲುಗಾಡುವ ಲಕ್ಷಣ ಕಾಣದಿದ್ದಾಗ ಸ್ಟೇಷನ್ ಮಾಸ್ಟರ್ ಗಾಬರಿಗೊಂಡು ನಿಲುಗಡೆ ಸೂಚಿಸಿದ. ಜನ ಫ್ಲಾಟ್‌ಫಾರಮ್‌ನತ್ತ ಧಾವಿಸಿದರು. ಸ್ವಾಮೀಜಿ ಮೆಟ್ಟಿಲ ಬಳಿ ಬಂದು, ನಿಂತಿದ್ದ ಜನರತ್ತ ಕೈಬೀಸಿದರು. ರೈಲು ಮತ್ತೆ ಹೊರಟಿತು.

ಅಬ್ಬ! ಇದು ವ್ಯಕ್ತಿಯೊಬ್ಬನಿಗೆ ಸಿಗಬಹುದಾದ ಅತ್ಯಂತ ಶ್ರೇಷ್ಠ ಗೌರವ. ಆತನ ಚಿಂತನೆಗಳನ್ನು ಅನುಸರಿಸುತ್ತ ಜೀವ ತೆರುವುದು ಒಂದೆಡೆಯಾದರೆ ಆತನಿಗಾಗಿ ಬಯಸಿ ಪ್ರಾಣ ಕೊಡಲು ಸಿದ್ಧವಾಗುವುದು ಮತ್ತೊಂದು. ಸ್ವಾಮೀಜಿ ಎರಡೂ ರೀತಿಯ ಅನುಯಯಿಗಳನ್ನು ಹೊಂದಿದ್ದ ಅಪರೂಪದ ವ್ಯಕ್ತಿಯಾಗಿದ್ದರು.

ಮತ್ತಷ್ಟು ಓದು »