ಕಾಯಕ ಯೋಗಿಗೊಂದು ನಮನ
ಮಧುಚಂದ್ರ ಭದ್ರಾವತಿ
ಭರತ ಖಂಡದ ಅಸಂಖ್ಯ ಭೂ ಪ್ರದೇಶಕ್ಕೆ ನೀರು ಹರಿಸಿದ ಇವರನ್ನು ಭಗೀರಥನೆನ್ನ ಬೇಕೆ?. ಪ್ರತಿಯೊಬ್ಬ ಪ್ರಜೆಗೆ ಮೂಲಭೂತ ಹಕ್ಕಾದ ಶಿಕ್ಷಣವನ್ನು ನೀಡಲು ಶ್ರಮಿಸಿದ ಸರಸ್ವತಿ ಪುತ್ರನೆನ್ನ ಬೇಕೆ ? ಭರತ ಖಂಡವೇ ಆಂಗ್ಲರ ವಿರುದ್ದ ಹೋರಾಟ ಮಾಡುತ್ತಿದ್ದಾಗ ಅದೇ ಅಂಗ್ಲರನ್ನು ಉಪಯೋಗಿಸಿಕೊಂಡು ದೇಶದ ಅಭಿರುದ್ದಿಗೆ ಶ್ರಮಿಸಿದ ಚಾಣಾಕ್ಯನೆನ್ನ ಬೇಕೆ? ಅತ್ತ ಕಡೆ ಪರಕೀಯರು, ಇತ್ತ ಕಡೆ ದೂರ ದೃಷ್ಟಿಯಿಲ್ಲದ ಸ್ವದೇಶಿಯರು, ಸಾಲದೇ ಪ್ರಾಮಾಣಿಕತೆಯಿಲ್ಲದ ಅಧಿಕಾರಿಗಳ ವರ್ಗ ಅವರೆಲ್ಲರನ್ನು ಮೀರಿ ಕಾರ್ಯ ಸಾಧನೆ ಮಾಡಿದ ಭೀಷ್ಮನೆ ?. ಆಂಗ್ಲರು ತಮ್ಮ ಸಚಿವ ಮಂಡಳಿಯಲ್ಲಿ ನೀಡಿದ ಸಚಿವ ಸ್ಥಾನವನ್ನು ನಯವಾಗಿ ನಿರಾಕರಿಸಿ ದೇಶಪ್ರೇಮ ಮೆರದ ದೇಶಭಕ್ತನೆ?.ಕೇವಲ ಭರತ ಖಂಡಕ್ಕೆ ಅಲ್ಲದೆ ಇಡಿ ವಿಶ್ವದ ಮನುಕುಲದ ಉದ್ದಾರಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡ ವಿಶ್ವಮಾನವನೆನ್ನ ಬೇಕೆ ?..
ನಾ ಅರಿಯೇ.





