ಬೆಂಗಳೂರು ಕನ್ನಡಿಗರಿಗೊಂದು ಬಹಿರಂಗ ಪತ್ರ
-ಭರತ್ ಬಿಕೆ
ಬೆಂಗಳೂರಲ್ಲೀ ಇದೀರಾ ? ಬೆಂಗಳೂರಿಗೆ ಬಂದ್ರಾ ?? ಸಂತೋಷ 🙂 ಬೆಂಗಳೂರಲ್ಲೇ ಹುಟ್ಟೀ, ಬೆಂಗಳೂರಲ್ಲೇ ಬೆಳೆದ್ರಾ ?? ತುಂಬಾ ಸಂತೋಷ 🙂
ಬೆಂಗಳೂರಲ್ಲೇ ಬದುಕಬೇಕು ಅಂತಾ ಇದೀರಾ ?? ಇನ್ನೂ ಸಂತೋಷ:)
ಆದರೇ ಇಲ್ಲಿನ ಭಾಷೆ, ನೆಲ, ಜಲ, ವ್ಯವಸ್ಥೆ, ಅವಸ್ಥೆ,ಸಮಸ್ಯೆಗಳ ಬಗ್ಗೆ ಸ್ವಲ್ಪ ಯೋಚನೆ ಮಾಡಿದ್ದೀರಾ? ಅದಕ್ಕಾಗಿ, ಅದಕ್ಕೆ ಸಂಬಂಧಿಸಿದ ವಿಚಾರಗಳಲ್ಲೀ ಭಾಗವಹಿಸಿದ್ದೀರಾ ??
ಸಾರ್ವಜನಿಕವಾಗಿ ?? ವಯಕ್ತಿಕವಾಗಿ ??
ಅಷ್ಟೆಲ್ಲಾ ಯಾಕೇ ಬಿಡಿ.. ಫೇಸ್ ಬುಕ್ ಪ್ರೋಫೈಲಲ್ಲೀ ಪೋಸ್ಟ್ ಮಾಡಿದಿರಾ ? ಸಂಬಂಧಿಸಿದ ಪೋಸ್ಟ್ ಗಳಿಗೇ ಲೈಕ್ ಮಾಡಿಡ್ಡೀರಾ ?? ಕಮೇಂಟ್ ಕೊಟ್ಟಿದ್ದೀರಾ ??
ಹೀಗೊಂದು ಅಧುನಿಕ ತುಘಲಕ್ ಸಂಸ್ಕೃತಿ
ಮಧುಚಂದ್ರ ಭದ್ರಾವತಿ
ಅಲ್ಲೊಂದು ದೇವಸ್ಥಾನದ ವಿಮಾನ ಗೋಪುರದ ಪ್ರತಿಷ್ಠಾಪನೆಯ ಕಾರ್ಯಕ್ರಮ. ಕಾರ್ಯಕ್ರಮ ಅಂದರೆ ವೆಲ್ಕಮ್ ಕಮಿಟಿ ಅಂತ ಒಂದು ಕಾಲದಲ್ಲಿ ಇರುತಿತ್ತು . ಅವರು ಮಾತ್ರ ದೇವಸ್ಥಾನದ ರಾಜ ಬೀದಿಯಲ್ಲಿ ” ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶುಭ ಕೋರುತ್ತಿದ್ದೇವೆ ” ಅಂತ ಎಲ್ಲೋ ಒಂದು ಬೋರ್ಡ್ ಹಾಕಿ ಕೈ ತೊಳೆದುಕೊಳ್ಳುತಾ ಇದ್ದರು .
ಈಗ ಕಾಲ ಬದಲಾಗಿದೆ ” ವಿಮಾನ ಗೋಪುರದ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಭಕ್ತರಿಗೆ ಶುಭ ಕೋರುವವರು ..” ಎಂದು ಮೂವತ್ತೆರಡು ದಂತ ಪಂಕ್ತಿ ಗಳನ್ನು ಪ್ರದರ್ಶಿಸುತ್ತಾ ಕಾಲ್ಗಟೆ ಸ್ಮೈಲ್ ಕೊಡುತ್ತ ನಿಂತಿರುವ ನರ ರೊಪದ ಅಧುನಿಕ ತುಘಲಕರ ಭಾವ ಚಿತ್ರಗಳು ಎಲ್ಲ್ ಎಲ್ಲಿ ನೋಡಿದರು ರಾರಾಜಿಸುತ್ತಿರುತ್ತವೆ .
ಈ ರೀತಿಯ ಹುಚ್ಚು ಮನಸ್ಸಿನ ಅವಿವೇಕ ಎಲ್ಲಿಂದ ಬಂತೋ ಗೊತ್ತಿಲ್ಲ. ಕೇವಲ ಪ್ರಚಾರ ಮತ್ತು ರಾಜಕೀಯ ಲಾಭ ಮಾಡಿಕೊಳ್ಳಲು ತಮ್ಮ ಇರುವಿಕೆ ಮತ್ತು ಶಕ್ತಿ ಪ್ರದರ್ಶನ ಮಾಡಲು ಕೀಳು ಮಟ್ಟಕ್ಕೆ ಪುಡಾರಿಗಳು ಇಳಿಯುತ್ತಾರೆ. ಆವರಿಗೆ ಸಾತ್ ನೀಡಲು ನಮ್ಮ ನೆಚ್ಚಿನ ಜನ ನಾಯಕ ಎಂದು ಅವರ ಪಕ್ಕದಲ್ಲಿ ತಮ್ಮದೊಂದು ಮುಖಾರವಿಂದ ಇರಲಿ ಎಂದು ಮರಿ ಪುಡಾರಿಗಳು ಊರ ತುಂಬೆಲ್ಲ ಫ್ಲೆಕ್ಷ್ ಹಾಕಿ ಮೆರೆಯುತ್ತಾರೆ.
ಮಳೆಗಾಲಕ್ಕೆ ಸರಿಯಾಗಿ ಮಳೆ ಬರುತ್ತೋ ಇಲ್ಲವೋ, ಹಿಂದೂಗಳ ಹಬ್ಬ ಬಂದಾಗ ಹಿಂದುಗಳಿಗೆ , ಮುಸ್ಲಿಂರ ಹಬ್ಬಕ್ಕೆ ಮುಸ್ಲಿಮರಿಗೆ , ಕ್ರಿಶ್ಚಿಯನ್ನರ ಹಬ್ಬ ಬಂದಾಗ ಕ್ರಿಶ್ಚಿಯನ್ನರಿಗೆ ಶುಭಾಶಯಗಳ ಫ್ಲೆಕ್ಷ್ ಬ್ಯಾನರ್ ಮಾತ್ರ ಬಂದೆ ಬರುತ್ತೆ.





