ವೈದ್ಯೋ ನಾರಾಯಣೋ ಹರಿ
ಮಧುಚಂದ್ರ ಭದ್ರಾವತಿ
ಪ್ರತಿ ಸೇವೆಗೆ ಸೇವಾ ಶುಲ್ಕವೆಂದು ಪ್ರತಿಯೊಂದು ಕಾರ್ಮಿಕ ವರ್ಗವು ಪಡೆಯುತ್ತದೆ . ಇಂದು ಸೇವಾ ಶುಲ್ಕದಲ್ಲಿ ಸೇವೆ ಎನ್ನುವ ಪದ ತಾನಾಗೆ ಬೇರ್ಪಟ್ಟಿದೆ. ಈಗ ಶುಲ್ಕದ ಮೇಲೆ ಮತ್ತೊಂದು ರೀತಿಯ ಶುಲ್ಕವನ್ನು ಹಾಕಿ ಹಲ್ಕಿರಿಯುತ್ತ ಗ್ರಾಹಕರನ್ನು ಶೋಷಣೆ ಮಾಡುವ ವ್ಯಾಮೋಹಕ್ಕೆ ತಮ್ಮ ಸಂಸ್ಕಾರವನ್ನು ಮರೆತು ಬಿಟ್ಟು ಹಗಲು ದರೋಡೆಯಲ್ಲಿ ಹಲವು ಕಾರ್ಮಿಕ ವರ್ಗಗಳು ನಿರತವಾಗಿವೆ. ಕೆಳ ಮಟ್ಟದ ಕಾರ್ಮಿಕ ವರ್ಗದಿಂದ ಹಿಡಿದು ಅತ್ಯುತ್ತಮ ಮಟ್ಟದ ಕಾರ್ಮಿಕ ವರ್ಗದವರೆಗೂ ಈ ಸಂಸ್ಕಾರ ಅಂಟಿಕೊಂಡಿದೆ(ಎಲ್ಲರು ಈ ವರ್ಗಕ್ಕೆ ಸೇರುವುದಿಲ್ಲ ,ಕೆಲವರು ಇದಕ್ಕೆ ಅಪವಾದ ).
ಅದಕ್ಕೆ ” ವೈದ್ಯ ” ಎಂಬ ಕಾರ್ಮಿಕ ವರ್ಗವು ಸಹ ತಡವಾಗಿ ಸೇರಿದರು ಎಲ್ಲ ವರ್ಗವನ್ನು ಮಿರಿ ಅತ್ಯಂತ ವೇಗವಾಗಿ ಮುನ್ನುಗುತ್ತಿದೆ. ಬಹುಶ ನಮ್ಮ ಸುತ್ತಮುತ್ತಲಿರುವ ವೈದ್ಯರನ್ನು ಮತ್ತು ಆಸ್ಪತ್ರೆಗಳನ್ನು ನೀವಾಗಿ ನಿಮ್ಮ ಮನದಲ್ಲಿ ಪ್ರಸ್ತಾಪಿಸಿದರೆ ಅದಕ್ಕೆ ತಕ್ಕ ಮಟ್ಟಿಗೆ ಉತ್ತರ ನಿಮಗೆ ದೊರೆಯುತ್ತದೆ . ಸೇವಾ ಮನೋಭಾವ ಎಂಬುದನ್ನು ಮರೆತು, ಕೇವಲ ಹಣಕ್ಕಾಗಿ ತಮ್ಮನ್ನು ಮಾರಿಕೊಂಡು ತಮ್ಮ ಮೂಲ ವೃತ್ತಿಗೆ ದ್ರೋಹ ಬಗೆಯುತ್ತ ಜೀವನವೆಂಬ ರಥವನ್ನು ಎಳೆಯುತ್ತಾ ರೋಗಿಗಳ ರಕ್ತವನ್ನು ಕುಡಿಯುತ್ತಿರುತ್ತಾರೆ. ವಾಸ್ತವ ಹೇಗಿದೆ ಎಂದರೆ ಇಂದು ವೈದ್ಯನೆಂದರೆ ಹಣ ಕೀಳುವ ಜಿಗಣೆ ಎಂಬಂತಾಗಿದೆ.





