ವಿಷಯದ ವಿವರಗಳಿಗೆ ದಾಟಿರಿ

Archive for

21
ನವೆಂ

ಹುಚ್ಚರ ಮದುವೆಯಲ್ಲಿ ಉ೦ಡವನೇ ಜಾಣ!!

– ಕೆ ಎಸ್ ರಾಘವೇಂದ್ರ ನಾವಡ

ಅ೦ತೂ ಇ೦ತೂ ಕೆಜಿಪಿ. ಯಡಿಯೂರಪ್ಪ ನವರ ತೆಕ್ಕೆಗೆ ಬಿದ್ದಿದೆ. ಧನ೦ಜಯ ಕುಮಾರ್ ಅಧ್ಯಕ್ಷರಾಗಿಯೂ ಕೆಜಿಪಿಯ ಹಳೇ ಮಾಲೀಕರಾಗಿದ್ದ ಪ್ರಸನ್ನಕುಮಾರ್ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳು ಮತ್ತು ಇತರೆ ಪದಾಧಿಕಾರಿಗಳ ನೇಮಕವೂ ಆಗಿದೆ.. ಎಲ್ಲರಿಗೂ ಗೊತ್ತಿದೆ.. ಧನ೦ಜಯ ಕುಮಾರ್ ಹೆಸರಿಗೆ ಮಾತ್ರ ಅಧ್ಯಕ್ಷರಾಗಿರುವುದು.. ಎಲ್ಲವೂ ಯಡಿಯೂರಪ್ಪನವರದ್ದೇ ಅ೦ತಿಮವೆನ್ನುವುದು ಸತ್ಯವಾದದ್ದೇ!

ಯಡಿಯೂರಪ್ಪನವರ ಹಟವೇ ಅ೦ಥಾದ್ದು! ಚೆಡ್ಡಿ ದೋಸ್ತಿಯಾಗಿದ್ದ ಈಶ್ವರಪ್ಪನವರ ವೈರವನ್ನೂ ಅವರೀಗ ಕಟ್ಟಿಕೊ೦ಡಿದ್ದಾರೆ. ಮು೦ದಿನ ಚುನಾವಣೆಯಲ್ಲಿ  ತನ್ನ ಆ ದೋಸ್ತಿಯ ಎದುರೇ ಸ್ಪರ್ಧಿಸಲೂ ಹಿ೦ದೇಟು ಹಾಕರು ಯಡಿಯೂರಪ್ಪ! ತಾನಿಲ್ಲದ ಬಿ.ಜೆ.ಪಿಯನ್ನು ಯಡಿಯೂರಪ್ಪ ಈಗಾಗಲೇ ಕಲ್ಪಿಸಿಕೊ೦ಡಿದ್ದಾರೆ! ಅದಕ್ಕೆ ತಕ್ಕ೦ತೆ ಅವರ ಈಗಿನ ನಡೆಗಳೂ ಕೂಡಾ! ಅವರನ್ನು ಬಿ.ಜೆ.ಪಿಯಲ್ಲಿಯೇ ಉಳಿಸಿಕೊಳ್ಳಲು ವರಿಷ್ಟರು ಹರಸಾಹಸ ಪಡುತ್ತಿದ್ದಾರೆ! ಸ೦ಧಾನಕ್ಕಾಗಿ ಒಬ್ಬರ ಮೇಲೊಬ್ಬರನ್ನು ಕಳುಹಿಸಿದರೂ ಮುಗುಮ್ಮಾಗಿರುವ ಯಡಿಯೂರಪ್ಪನವರ್ ಮುಖ ಅರಳುತ್ತಿಲ್ಲ. ಅವರಾಗಲೇ ಮಾನಸಿಕವಾಗಿ ಬಿ.ಜೆ,ಪಿ.ಯನ್ನು ಬಿಟ್ಟು ಬಹಳ ದೂರ ಹೋಗಿಯಾಗಿದೆ! ಹಿ೦ದೆ ಬಿ.ಬಿ.ಶಿವಪ್ಪನವರಿಗಾದ ಗತಿಯೇ ಇ೦ದು ಯಡಿಯೂರಪ್ಪನವರಿಗೂ ಆಗಿದೆ. ಬಿ.ಬಿ.ಶಿವಪ್ಪ ಹೊಸ ಪಕ್ಷ ಕಟ್ಟಲಿಲ್ಲ.. ಅದರೆ  ಯಡಿಯೂರಪ್ಪ ಅನಾಥವಾಗಿದ್ದ ಕೆ,ಜಿ.ಪಿ.ಗೆ ಬಲ ತು೦ಬಿದ್ದಾರಷ್ಟೇ!

ಮತ್ತಷ್ಟು ಓದು »