ಕುಚ್ಚಿನ ಟೋಪಿಯ ಬೆಚ್ಚನೆ ಬೇಂದ್ರೆ, ನೆನಪುಗಳ ಗುಂಗಿನಲ್ಲಿ…
– ಅಶೋಕ ಶೆಟ್ಟರ್
(ಇಂದು, ಅಂದರೆ ಜನವರಿ ಮೂವತ್ತೊಂದು., ದ.ರಾ ಬೇಂದ್ರೆ ಜನಿಸಿದ ದಿನ. ಬೇಂದ್ರೆ ಕಾವ್ಯ ಒಂದು ಕಣಜ. ಮೊಗೆದಷ್ಟೂ ಒಸರುವ ಒರತೆ. ಜಗತ್ತಿನ ಶ್ರೇಷ್ಠ ಕವಿಗಳ ಸಾಲಿನಲ್ಲಿ ನಿಲ್ಲಬಲ್ಲ ಪ್ರತಿಭೆ.ಅವರು ಕನ್ನಡ ಕಾವ್ಯದ ಬಹುಮುಖ್ಯ ಧ್ವನಿ.ಅವರ ಕುರಿತಾಗಿ ಅಶೋಕ್ ಶೆಟ್ಟರ್ ಅವರು ೨ ವರ್ಷದ ಹಿಂದೆ ಬರೆದ ಈ ಲೇಖನ ಈಗ ಇಲ್ಲಿ, “ನಿಲುಮೆ”ಯ ಓದುಗರಿಗಾಗಿ – ನಿಲುಮೆ)
“ಅಲ್ಲಿ ಸಂಪಿಗೆಯಿತ್ತು ಪಾರಿಜಾತಕವಿತ್ತು
ಮಾವು ಮಲ್ಲಿಗೆಯಿತ್ತು ಮನೆಯಿದುರು
ಮುಗಿಲ ಮಲ್ಲಿಗೆಯಿತ್ತು ತೆಂಗಿತ್ತು ಹಲಸಿತ್ತು
ನಿಂಬಿಯ ಇಂಬಿತ್ತು ಎಡೆಎಡೆಗೆ
ಹೊಂಗೆಯ ಸಾಲಿತ್ತು ಕಣ್ಮುಂದೆ ಕೆರೆಯಿತ್ತು
ಗುಡ್ಡದ ನೆರೆಯಿತ್ತು ಅದರಾಚೆಗೆ… …..”
“ಸಖಿಗೀತ”ದಲ್ಲಿ ಬರುವ ಈ ಸಾಲುಗಳು ಬೇಂದ್ರೆ ಕಂಡ ಸಾಧನಕೇರಿಯ ಶಬ್ದಚಿತ್ರಗಳು.ನಿನ್ನೆ ಅಂದರೆ ೨೯ ಜನವರಿ ೨೦೧೧ ರಂದು ಮಧ್ಯಾಹ್ನ ಒಂದೆರಡು ತಾಸು ಧಾರವಾಡದ ಬೇಂದ್ರೆ ಭವನದಲ್ಲಿ ಇದ್ದೆ. ಬೇಂದ್ರೆ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಶಾಮಸುಂದರ ಬಿದರಕುಂದಿಯವರೊಂದಿಗೆ ಮಾತಾಡಿ ಆಮೇಲೆ ಬೇಂದ್ರೆಯವರ ಮೂಲನಿವಾಸ “ಶ್ರೀಮಾತಾ”ದಲ್ಲೇ ಇರುವ ಅವರ ಪುತ್ರ ವಾಮನ ಬೇಂದ್ರೆಯವರ ಜೊತೆ ಸ್ವಲ್ಪ ಹೊತ್ತು ಕಳೆದೆ. ಬೇಂದ್ರೆ ಭವನದ ಮೇಲಂತಸ್ತಿನ ಬಾಲ್ಕನಿಯಿಂದ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ನವೀಕೃತ ಸಾಧನಕೆರೆಗೆ ಹೋಗುವ ದಾರಿ,ಉದ್ದಕ್ಕೂ ಕಟಾಂಜನ ಇವನ್ನೆಲ್ಲ ನೋಡುತ್ತಿದ್ದಾಗ ನನ್ನ ಮನಸಿನಲ್ಲಿ ಅಚ್ಚೊತ್ತಿದಂತಿರುವ ಆ ಪರಿಸರದ ಬೇರೆಯದೇ ಚಿತ್ರದ ಮೇಲೆ ನಾನು ಇವುಗಳನ್ನು ಸುಪರಿಂಪೋಸ್ ಮಾಡಬೇಕಾಗಿ ಬಂತು.ನನ್ನ ಮನಸಿನಲ್ಲಿ ಸುಳಿಯುತ್ತಿದ್ದುದು ೩೦-೩೫ ವರ್ಷಗಳ ಹಿಂದೆ ಬೇಂದ್ರೆ ಮನೆ ಇರುವ ಸಾಲಿಗೆ ಎದುರಾಗಿ,ಗೋವಾಕ್ಕೆ ಹೋಗುವ ಮುಖ್ಯರಸ್ತೆಯಾಚೆ, ಸಾಧನಕೆರೆಯ ಒಂದು ಮೇರೆಯಾಗಿರುವ, ನಾನು ಪೋಲಿಸ್ ವಸತಿಗೃಹಗಳಿಗೆ ಸಾಗಿ ಹೋಗುತ್ತಿದ್ದ, ಕಿರಿದಾದ ಮಣ್ಣ ರಸ್ತೆ, ಸಾಧನಕೆರೆಯ ಇನ್ನೊಂದು ಮೇರೆಯಾಗಿ ಆ ಕೆರೆಯ ಏರಿ, ಅದರಾಚೆ ಭತ್ತದ ಗದ್ದೆ, ತೋಟ ಪಟ್ಟಿಗಳು,ಆಗೊಂದು ಈಗೊಂದರಂತೆ ಗೋವಾಕ್ಕೆ ಹೋಗುತ್ತಿದ್ದ ಖಾಸಗಿ ಅಥವಾ ಸರಕಾರಿ ವಾಹನಗಳು,ಕೆಲಗೇರಿ ಹಾಗು ಮುಗದ ಗ್ರಾಮಗಳ ನಡುವಿನ ಕುರುಚಲು ಕಾಡುಗಳಲ್ಲಿ ಸಂಗ್ರಹಿಸಿದ ಕಟ್ಟಿಗೆಗಳ ಹೊರೆ ಹೊತ್ತು ಓಟದ ನಡಿಗೆಯಲ್ಲಿ ಧಾರವಾಡದತ್ತ ಹೋಗುತ್ತಿದ್ದ ಬಡಪಾಯಿ ಹೆಂಗಳೆಯರು, ಮುಕ್ತಾಯಗೊಳ್ಳಬೇಕು ಎಂಬ ಯಾವ ಧಾವಂತವೂ ಇಲ್ಲದೇ ನಿಷ್ಕಾರಣವೆಂಬಂತೆ ನಿಷ್ಕರುಣೆಯಿಂದ ಸುರಿಯುತ್ತಿದ್ದ ಜಿಡ್ಡುಮಳೆ,ಅಂಚಿನಲ್ಲೆಲ್ಲ ಜೊಂಡು ಬೆಳೆದಿದ್ದ ಚಿಕ್ಕದೂ ಅಲ್ಲದ ಬಹಳ ವಿಸ್ತಾರವೂ ಅಲ್ಲದ ಸಾದನಕೆರೆ..ಹಳೆ ಕಾಲದ ಕೆಂಪು ಹಂಚಿನ ಮನೆಗಳು,ಸುಶಿಕ್ಷಿತ ಜನ..ಆ ಪರಿಸರದಲ್ಲಿದ್ದಷ್ಟೂ ಹೊತ್ತು ಮನಸಿನಲ್ಲಿ ನೆನಪುಗಳ ಸಂತೆ ನೆರೆದಿತ್ತು. “ಸಾಧನಕೇರಿಯ ಸಂಜೆ ಮಳೆ ಸೆಳಕುಗಳು” ಎಂಬ ನನ್ನದೊಂದು ಕವಿತೆಯಲ್ಲಿ ಸಾದನಕೇರಿಯ ಇತರೆ ಚಿತ್ರಗಳೊಂದಿಗೆ ಬೇಂದ್ರೆ ನನ್ನ ಮನಸಿನಲ್ಲಿ ಮೂಡಿದ್ದು ಹೀಗೆ:
ಮತ್ತಷ್ಟು ಓದು 
‘ದಾಮಿನಿ’ಗೆ ಮಿಡಿದ ಹೃದಯಗಳು ’ಸೌಜನ್ಯ’ಳಿಗೂ ಮಿಡಿಯಲಾರವೇ?
– ಭುವಿತ್ ಶೆಟ್ಟಿ
ಪ್ರಿಯ ಮಂಗಳೂರಿನ ನಾಗರೀಕರೇ,
ನಾವೇಕೆ ಈ ರೀತಿ? ನಮ್ಮ ಮನೆಯಲ್ಲಿ ಸೂತಕವಿದ್ದರೂ ಪರಮನೆಯ ಸಾವಿಗೆ ಕಣ್ಣೀರು ಸುರಿಸುವ ಹೃದಯ ವೈಶಾಲ್ಯತೆ ನಮಗೇಕೆ? ಊರ ಉಸಾಬರಿ ನಮಗ್ಯಾಕೆ ಅಂತ ಸುಮ್ಮನೆ ಕೂರುವಂಥ ಕಾಲ ಇದಲ್ಲ. ಅದನ್ನು ಒಪ್ಪಲೇ ಬೇಕು. ಆದರೆ, ಇತ್ತೀಚೆಗೆ ನಾವು ತೀರ ಸ್ವಂತಿಕೆಯ ಎಲ್ಲೆ ಮೀರಿ ಹೋಗುತ್ತಿದ್ದೇವೆ. ನೆರೆಮನೆ ಸುಡುತ್ತಿದ್ದರೂ ಮಾತಾಡದೆ, TV ಯಲ್ಲಿ ಕ್ರೈಂ ಸ್ಟೋರಿ ನೋಡಿ ಅಯ್ಯೋ ಪಾಪ ಎನ್ನುತ್ತೇವೆ. ಅಂಥ ಮನೋಸ್ಥಿಥಿ ನಮ್ಮದು. ಮಾನವೀಯತೆ ಎಂಬುದು ಮಾದ್ಯಮಗಳು ಬಿತ್ತರಿಸುವ ಸುದ್ದಿಯನ್ನು ನೋಡಿ ಉಕ್ಕಿ ಹರಿಯುತ್ತದೆ ಹೊರತು ವಾಸ್ತವತೆಯನ್ನರಿತಲ್ಲ. ಮಂಗಳೂರು ಖಂಡಿತವಾಗಿಯೂ ಬದಲಾಗಿದೆ ಎನ್ನಲು ಇತ್ತೀಚೆಗೆ ನಡೆದ Home Stay ಗಲಾಟೆ ಹಾಗೂ ಸೌಜನ್ಯ ಸಾವಿನ ಪ್ರಕರಣದ ಬಗ್ಗೆ ಮಂಗಳೂರಿನ ಜನತೆ ವ್ಯಕ್ತಪಡಿಸಿದ ಪ್ರತಿಕ್ರಿಯೆಯೇ ಸಾಕು.
ರಾಜಕೀಯ ಪ್ರೇರಿತ ‘ಮಂಗಳೂರು ರೆಸಾರ್ಟ್ ಗಲಾಟೆ’ಯಲ್ಲಿ ಸಿರಿವಂತ ಮನೆಯ ಹೆಣ್ಣುಮಕ್ಕಳಿಗಾದ ಅನ್ಯಾಯಕ್ಕೋಸ್ಕರ ಅದೆಷ್ಟು ಮಂದಿ ಬೀದಿಗಿಳಿಯಲಿಲ್ಲಾ? Facebook ತುಂಬಾ ಅದೇನೂ ಸ್ಟೇಟಸ್ Update ಗಳು, ಅದೇನೂ ಅಕ್ರೋಶ? ದಾಳಿ ಮಾಡಿದವರನ್ನು ಕೈಗೆ ಕೊಟ್ಟಿದ್ದರೆ ಕೊಂದು ಬಿಡುತ್ತಿದ್ದರೋ ಏನೋ… ಆ ರೀತಿ ಇತ್ತು ಪ್ರತಿಭಟನೆಯ ಜೋರು.
ಜನ ಮನ್ನಣೆ
– ಮಧುಚಂದ್ರ ಭದ್ರಾವತಿ
ಇಂದು ಅತ್ಯಂತ ಪ್ರಸ್ತುತದಲ್ಲಿರುವ ಪದ ಎಂದರೆ ” ಜನ ಮನ್ನಣೆ “. ಅದಕ್ಕಾಗಿ ನಾವು ಏನೆಲ್ಲಾ ಮಾಡುತ್ತೇವೆ. ದಾನ ಮಾಡಿದಾಗ ನಮ್ಮ ಹೆಸರು, ಶಂಕು ಸ್ಥಾಪನೆ ಮಾಡಿದಾಗ ನಮ್ಮ ಹೆಸರು( ಕಾಮಗಾರಿ ಆಗುತ್ತೋ ಇಲ್ಲವೋ), ಕಂಡ ಕಂಡಲೆಲ್ಲ ಹೆಸರು ರಾರಜಿಸುವುದಕ್ಕೆ ಏನೆಲ್ಲಾ ಮಾಡಬಹುದು ಎಲ್ಲಾ ಮಾಡುತ್ತೇವೆ. ಆದರೆ ಅದನ್ನು ಇಂದಿನ ಮಾನವ ಕೇವಲ ಕ್ಷಣಕ್ಕೆ ಮಾತ್ರ ಪರಿಗಣಿಸಿ ನಂತರ ಕಡೆಗಣಿಸುತ್ತಾನೆ. ಅವರಾರು ತಮ್ಮ ಹೆಸರನ್ನು ಕಡೆಯವರೆಗೂ ಉಳಿಸಿಕೊಂಡು ಮನ್ನಣೆ ಪಡೆಯಲು ಸಾಧ್ಯವಾಗದೆ ಅಳಿದು ಹೋಗುತ್ತಾರೆ .ಇಂದು ಸೇವಾ ಮನೋಭಾವವಿಲ್ಲದ ದಾನ ಕೇವಲ ಪ್ರಚಾರಕ್ಕೆ ಮಾತ್ರ ನಿಮಿತ್ತ. ಅಂದರೆ ದಾನಿಗಳು ಇರುವವರೆಗೂ ಮಾತ್ರ, ಅವರಳಿದ ಮೇಲೆ ಅವು ಸಹ ಅಳಿಯುತ್ತದೆ. ಅವು ಎಂದೂ ಜನರ ಮನದಲ್ಲಿ ಉಳಿಯುವುದೇ ಇಲ್ಲ. ಸ್ವಾರ್ಥದ ಸೇವೆ ಎಲ್ಲಿಯೂ ಸಲ್ಲುವುದಿಲ್ಲ. ನಿಸ್ವಾರ್ಥ ಸೇವೆ ಇಂದು ಕಣ್ಮರೆಯಾಗುತ್ತಿದೆ. ನಿಸ್ವಾರ್ಥ ಸೇವೆ ಎನ್ನುವುದು ಎಂದೆಂದಿಗೂ ಶಾಶ್ವತ ಎನ್ನುವುದಕ್ಕೆ ಒಂದು ಚಿಕ್ಕ ಉದಾಹರಣೆ ನಿಮ್ಮ ಮುಂದೆ ನೀಡುತ್ತಿದ್ದೇನೆ. ಆಮೇಲೆ ಸೇವೆ ಎನ್ನುವ ಪದಕ್ಕೆ ಸಮಾನಾರ್ಥಕ ಪದ ನೀವೇ ನಿರ್ಧರಿಸಿ.
ಕನ್ನಂಬಾಡಿ ಆಣೆಕಟ್ಟು ನಿರ್ಮಾಣವಾದ ನಂತರ ಪ್ರತಿದಿನವೂ ದೇಶ ವಿದೇಶಗಳಿಂದ ಜನರು ಭೇಟಿ ನೀಡುತ್ತಿದ್ದರು. ಅ ಸಮಯದಲ್ಲಿ ಕನ್ನಂಬಾಡಿ ಕಟ್ಟೆಯ ನಿರ್ಮಾತರ ಹೆಸರಿನ ಫಲಕಗಳು, ಗುರುತುಗಳು ಸಹ ಇರಲಿಲ್ಲ. ಓಮ್ಮೆ ಆಂಧ್ರದ ಹಳ್ಳಿಯ ರೈತನೊಬ್ಬ ಕನ್ನಂಬಾಡಿ ಆಣೆಕಟ್ಟನ್ನು ಸಂದರ್ಶಿಸಿದನು. ಅಲ್ಲಿದ್ದ ಕಾವೇರಿಯ ಮೂರ್ತಿಗೆ ನಮಸ್ಕರಿಸಿ ಅಣೆಕಟ್ಟಿನ ಸೊಬಗನ್ನು ಸವಿಯುತ್ತಿದ್ದನು. ಹೀಗಿರುವಾಗ ಅಲ್ಲಿಗೆ ಬಂದ ಹಿರಿಯರೊಬ್ಬರು ಅಲ್ಲೇ ಇದ್ದ ಮಕ್ಕಳ ಹತ್ತಿರ ರೈತನಿಗೆ ” ಕನ್ನಂಬಾಡಿ ಆಣೆಕಟ್ಟು ನಿರ್ಮಿಸಿದವರು ಯಾರು ಗೊತ್ತೇ? ” ಎಂದು ಕೇಳಲು ಹೇಳಿದರು.
ಅಗ ರೈತನು ” ಏಮಂಡಿ, ಆ ಮಹಾನುಭಾವಲು ವಿಶ್ವೇಶ್ವರಯ್ಯಗಾರು ಚೆಸಿಂದಿಕಾದ ” (‘ ಏನು ಸ್ವಾಮಿ , ಆ ಮಹಾನುಭಾವ ವಿಶ್ವೇಶ್ವರಯ್ಯನವರು ಕಟ್ಟಿಸಿದ್ದಲ್ಲವೇ ? ‘) ಎಂದು ಉತ್ತರಿಸಿದನು.
ನಿಜವಾದ ಸೇವೆಗೆ ಶಿಲೆಯ ಮೇಲಿನ ಶಾಸನವಾಗಲಿ, ಫ್ಲೆಕ್ಸ್ ಬ್ಯಾನರ್ ಅಗಲಿ ಬೇಕಿಲ್ಲ. ಸೇವೆಯು ನಿರಂತರವಾಗಿ ತಲುಪುವ ಹಾಗಿರಬೇಕು. ಅಗ ಮಾತ್ರ ಜನಮನ್ನಣೆ ಪಡೆದು ಚಿರಸ್ಥಾಯಿಯಾಗಿರುತ್ತದೆ. ನಮ್ಮವರು ಇದರಿಂದ ಕಲಿಯುವುದು ಯಾವಾಗ ಎಂದು ನೀವೇ ಹೇಳಬೇಕು.
ಚಿತ್ರ ಕೃಪೆ – ಅಂತರ್ಜಾಲ
ರಾಜರಿಲ್ಲದ ರಾಜ್ಯದಲ್ಲಿ ವಂಶಾಡಳಿತದ ಪೋಷಣೆ
-ಗೋಪಾಲ ಕೃಷ್ಣ
ರಾಜಪ್ರಭುತ್ವದ ನೆರಳು ಮಾಸುವ ಮುನ್ನವೇ, ಕುಟುಂಬ ರಾಜಕಾರಣ ತಲೆ ಎತ್ತುತ್ತಿದೆ. ಪ್ರಜಾಪ್ರಭುತ್ವದ ಹರೆಯದಲ್ಲೇ ಆಶಯಗಳು ಸತ್ತು ಬೀಳುತ್ತಿವೆ. ಜನಸೇವೆಯೆಂಬ ಟೊಳ್ಳು ಕುದುರೆಗೆ ಹಣ, ಹೆಣ್ಣು, ಅಧಿಕಾರದ ಲೇಪನ ಹಚ್ಚಿ ಹಾದಿ ತಪ್ಪಿಸಲಾಗುತ್ತಿದೆ. ದೇಶ ವಿಭಜನೆಯ ನಂತರ, ಧರ್ಮದ ಮೂಲಕ ವಿಭಜನೆ, ಇದೀಗ ಜಾತಿ ಜಾತಿಗಳ ನಡುವೆ ವಿಭಜಿಸಿ, ಸಾಮರಸ್ಯದ ಬದಲಿಗೆ ಸಂಘರ್ಷದ ಬೋಧನೆ ನಡೆಯುತ್ತಿದೆ.ಕಾಲು ಮುರಿದ ಕಾರ್ಯಾಂಗ,ಸವೆದು ಹೋದ ಶಾಸಕಾಂಗಗಳ ಮಧ್ಯೆ ಆಮ್ ಆದ್ಮಿ ಕಂಗಾಲಾಗಿದ್ದಾನೆ.
ಇಲ್ಲಿ ದೂರುವುದಾದರೂ ಯಾರನ್ನು? ಸಂತತಿ ರಾಜಕಾರಣದ ಉನ್ನತೀಕರಣಕ್ಕೆ ನೀರು-ಗೊಬ್ಬರ ಹಾಕಿ ಬೆಳೆಸುತ್ತಿರುವಾಗ ವಂಶಾಡಳಿತದ ಫಲ ದೊರೆಯದೆ ಮತ್ತಿನ್ನೇನು ಸಿಕ್ಕೀತು…..? ನಾಗರೀಕ, ಜ್ಞಾನಸಂಪನ್ನ ಸಮಾಜದಲ್ಲಿಯೇ ಜನತಂತ್ರ ವ್ಯವಸ್ಥೆಗೆ ಧಕ್ಕೆಯಾದರೆ, ಪ್ರಜಾಪ್ರಭುತ್ವಕ್ಕೆ ಉಳಿಗಾಲವುಂಟೇ?ಉದಾತ್ತ ಭಾರತ ಸಂಸ್ಕೃತಿಯನ್ನು ಬಿಟ್ಟು, ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋದ ಯುವ ಜನತೆಯಿಂದ ಸಮೃದ್ಧ ರಾಷ್ಟ್ರ ನಿರ್ಮಾಣವನ್ನು ಬಯಸಲಾದೀತೆ? ತಪ್ಪು-ಒಪ್ಪುಗಳಿಗೆ ನಮ್ಮ ಮನಸ್ಸುಗಳು ಒಗ್ಗೂಡದಿರುವಾಗ, ಚಾರಿತ್ರ್ಯವಂತ ಸಮಾಜದ ನಿರೀಕ್ಷೆ ನಮ್ಮ ಭ್ರಮೆಯಲ್ಲವೇ?
ಮತ್ತಷ್ಟು ಓದು 
ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ?
– ರಾಕೇಶ್ ಶೆಟ್ಟಿ
ಪ್ರಶಾಂತವಾಗಿರುವ ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ? ಬಹುಶಃ ಹೌದು ಅನ್ನಿಸುತ್ತಿದೆ. ಶ್ರೀರಂಗ ಪಟ್ಟಣದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 50 ಪ್ರತಿಶತ ಮೀಸಲು ನೀಡುವಂತ ವಿವಿಯೊಂದನ್ನು ಸ್ಥಾಪಿಸುವ ಯೋಜನೆ ಕೇಂದ್ರ ಸರ್ಕಾರದ ಮುಂದಿದೆ ಮತ್ತು ಆ ವಿವಿಗೆ ‘ಟಿಪ್ಪು ವಿಶ್ವವಿದ್ಯಾಲಯ’ ಅಂತ ನಾಮಕರಣ ಮಾಡುತ್ತೇವೆ ಅನ್ನುವ ಹೇಳಿಕೆಯನ್ನು ಕೇಂದ್ರ ಸಚಿವರು ಕೊಟ್ಟ ದಿನದಿಂದಲೇ,’ಟಿಪ್ಪು’ ಬಗ್ಗೆ ಚರ್ಚೆ ಶುರುವಾಗಿದೆ.ಚಿದಾನಂದ ಮೂರ್ತಿ,ಎಸ್.ಎಲ್ ಭೈರಪ್ಪ ಮತ್ತು ಇತರರು, ಟಿಪ್ಪು ಕಾಲದಲ್ಲಿ ನಡೆದ ಮತಾಂತರ,ಪರ್ಷಿಯಾ ಭಾಷೆಯ ಹೇರಿಕೆ ಮತ್ತು ಮಲಬಾರಿನ ಸೇನಾಧಿಪತಿಗಳಿಗೆ ಮತ್ತು ಇತರರಿಗೆ ಟಿಪ್ಪು ಬರೆದ ಪತ್ರವನ್ನು ಮುಂದಿಟ್ಟು ‘ಟಿಪ್ಪು ಹೆಸರಿನ ವಿವಿ’ಯನ್ನು ವಿರೋಧಿಸುತಿದ್ದರೆ, ಇನ್ನೊಂದು ಕಡೆ ಟಿಪ್ಪು ಪರ ನಿಂತವರು, ಟಿಪ್ಪು ಒಬ್ಬ ದೇಶ ಭಕ್ತ, ಮಕ್ಕಳನ್ನು ದೇಶಕ್ಕಾಗಿ ಅಡ ಇಟ್ಟವನು ಅನ್ನುತಿದ್ದಾರೆ. ಟಿಪ್ಪು ಕುರಿತ ಈ ಚರ್ಚೆ ನಡೆಯುತ್ತಿರುವುದೂ ಇದೇ ಮೊದಲೇನಲ್ಲ.ಟಿಪ್ಪು ಕಾಲದ ಇತಿಹಾಸದ ಬಗ್ಗೆ ಅನೇಕ ಸಾಕ್ಷಿಗಳು ಸಿಗುವುದರಿಂದ ಟಿಪ್ಪು ಏನು ಅಂತ ನಿರ್ಧರಿಸುವುದು ಬೇರೆಯದೇ ವಿಷಯ.ಹಾಗಾಗಿ ಈ ಲೇಖನದಲ್ಲಿ ಟಿಪ್ಪು ಬಗ್ಗೆ ಗಮನ ಹರಿಸುವುದಕ್ಕಿಂತ,’ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿವಿ (ಅಥವಾ 50% ಮೀಸಲು ನೀಡುವ ವಿವಿ) ಅಗತ್ಯವಿದೆಯೇ?’ ಅನ್ನುವ ಪ್ರಶ್ನೆಯನ್ನು ಕೇಂದ್ರ ಸರ್ಕಾರಕ್ಕೆ ಮತ್ತು ಟಿಪ್ಪು ವಿವಿ ಬೆಂಬಲಿಸುತ್ತಿರುವವರಿಗೆ ಕೇಳ ಬಯಸುತ್ತೇನೆ?
ರಾಜ್ಯದಲ್ಲಿ ಈಗಾಗಲೇ ಇರುವ 20ಕ್ಕೂ ಹೆಚ್ಚು ರಾಜ್ಯದ ವಿವಿ ಮತ್ತು ಡೀಮ್ದ್ ವಿವಿಗಳಲ್ಲಿ ಇಲ್ಲದಿರುವ ಹೊಸತನವೇನಾದರೂ, ಶ್ರೀರಂಗ ಪಟ್ಟಣದಲ್ಲಿ ನಿರ್ಮಿಸ ಬಯಸಿರುವ ವಿವಿಯಲ್ಲಿ ಇರಲಿದೆಯೇ? ಮೈಸೂರಿನಲ್ಲೇ 2 ವಿವಿ ಇರುವಾಗ ಶ್ರೀರಂಗಪಟ್ಟಣದಲ್ಲಿ ಇನ್ನೊಂದ್ಯಾಕೆ ಅನ್ನುವುದು ಒಂದು ಪ್ರಶ್ನೆಯಾದರೆ, ಜ್ಞಾನರ್ಜನೆಗಾಗಿಯೇ ವಿವಿಯನ್ನು ಸ್ಥಾಪಿಸುವ ಉದ್ದೇಶವಿದ್ದರೆ,ಅದರಲ್ಲಿ ಅಲ್ಪಸಂಖ್ಯಾತರಿಗೆ 50 ಪ್ರತಿಶತ ಮೀಸಲು ಯಾತಕ್ಕಾಗಿ? ಜ್ಞಾನಕ್ಯಾವ ಧರ್ಮ? ವಿದ್ಯೆ ಕಲಿಯಲು ಬರುವವರು ಪದವಿಯ ವಿಷಯಗಳ ಮೇಲೆ ನಿರ್ಧರಿಸಿ ಒಂದು ವಿವಿಗೆ ಹೋಗುತ್ತಾರೋ? ಅಥವಾ ಅವರ ಧರ್ಮಕ್ಕೆ ಅನುಗುಣವಾಗಿ ವಿವಿಗಳನ್ನು ಆಯ್ಕೆ ಮಾಡಿಕೊಳ್ಳುತಾರೆಯೋ?
’ಟಿಪ್ಪು’ ಹೆಸರಿನಲ್ಲಿ ’ಕೈ’ ರಾಜಕೀಯ?
– ಅಶ್ವಿನ್ ಎಸ್. ಅಮೀನ್
ಬಹುಶಃ ಭಾರತದಲ್ಲಿ ಹಿಂದೂ ಧರ್ಮ ಬಿಟ್ಟು ಇತರ ಧರ್ಮೀಯರಿಗೆ ಕೊಡುವ ಸವಲತ್ತುಗಳು,ಸೌಕರ್ಯಗಳು ಇತರ ಯಾವ ದೇಶದಲ್ಲೂ ಇರಲಿಕ್ಕಿಲ್ಲ.. ನಮ್ಮ ರಾಜಕೀಯ ವ್ಯವಸ್ಥೆಯೇ ಅಂತಹುದು. ನಮ್ಮ ರಾಷ್ಟ್ರಪಿತರು ಬುನಾದಿ ಹಾಕಿದ ಈ ಸಂಸ್ಕೃತಿ ಇಂದಿನವರೆಗೂ ನಿಂತಿಲ್ಲ.. ಈಗ ಇಂತಹದೇ ಒಂದು ಕಾರಣಕ್ಕಾಗಿ ಸುದ್ದಿ ಮಾಡುತ್ತಿರುವುದು ಪ್ರತ್ಯೇಕ ಮುಸ್ಲಿಂ ವಿಶ್ವ ವಿದ್ಯಾಲಯ.
ಭಾರತದಲ್ಲಿರುವ ಒಂದು ಪ್ರತ್ಯೇಕ ಮುಸ್ಲಿಂ ವಿದ್ಯಾಲಯ ಅಲಿಘಡ. ಈಗ ಕೇಂದ್ರ ಸರ್ಕಾರ ಇನ್ನೊಂದು ಪ್ರತ್ಯೇಕ ಮುಸ್ಲಿಂ ವಿವಿ ಯನ್ನು ಕರ್ನಾಟಕದ ಶ್ರೀರಂಗಪಟ್ಟಣ ದಲ್ಲಿ ಸ್ಥಾಪಿಸಲು ಉದ್ದೇಶಿಸಿದೆ.ಈಗಾಗಲೇ ಒಂದು ಪ್ರತ್ಯೇಕ ವಿವಿ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ಮತ್ತೊಂದು ವಿವಿ ಯಾಕೆ? ಅದರಲ್ಲೂ ಧರ್ಮದ ಆಧಾರದ ಮೇಲೆ ವಿವಿ ವಿಂಗಡಣೆ ಸರಿಯೇ? ವಿಶ್ವವಿದ್ಯಾಲಯಗಳಿಗೆ ಧರ್ಮದ ಲೇಪ ಯಾಕೆ ಬೇಕು? ಭಾರತದಲ್ಲಿರುವ ಅಷ್ಟೂ ವಿವಿಗಳಲ್ಲಿ ಮುಸ್ಲಿಮರು ಓದಲಾರರೇ? ವಿವಿಗಳಲ್ಲಿ ಮುಸ್ಲಿಮರಿಗೆ ಅಂತಹ ತೊಂದರೆಗಳಿವೆಯೇ? ಹಾಗೆ ಹೀಗೆ ಎಂದು ಪ್ರಶ್ನೆಗಳನ್ನು ಕೇಳುತ್ತಾ ಹೋದರೆ ನಮಗೆ ಸಿಗುವ ಉತ್ತರ “ಹಾಗೇನೂ ಇಲ್ಲ, ಎಲ್ಲವೂ ಸರಿಯಾಗಿದೆ..” ಹಾಗಿದ್ದಲ್ಲಿ ಪ್ರತ್ಯೇಕ ಮುಸ್ಲಿಂ ವಿವಿ ಸ್ಥಾಪನೆಯ ಉದ್ಧೇಶ ರಾಜಕೀಯ ತಂತ್ರ ಅನ್ನುವುದು ಸ್ಪಷ್ಟವಾಗುತ್ತದೆ.
ಇನ್ನು ಮುಸ್ಲಿಮರಿಗೆ ಪ್ರತ್ಯೇಕ ವಿಶ್ವ ವಿದ್ಯಾಲಯ ಕೊಟ್ಟರೆ ಏನಾಗುತ್ತದೆ ಅನ್ನುವುದು ಅಲಿಘಡ ವಿವಿಯಲ್ಲೇ ಗೊತ್ತಾಗಿದೆ. ಅಲ್ಲಿ ಹುಟ್ಟಿಕೊಂಡ ‘ಸಿಮಿ’ ಸಂಘಟನೆ ದೇಶವ್ಯಾಪಿ ಬೆಳೆದು ದೇಶ ವಿರೋಧಿ ಭಯೋತ್ಪಾದನಾ ಸಂಘಟನೆಯಾಗಿ ಮಾರ್ಪಟ್ಟು ದೇಶದಾದ್ಯಂತ ವಿದ್ವಂಸಕ ಹಾಗು ದೇಶ ದ್ರೋಹಿ ಕೃತ್ಯಗಳನ್ನು ನಡೆಸಿ ಇಂದು ಆ ಸಂಘಟನೆಯನ್ನು ನಿಷೇಧಿಸಿದ್ದಾರೆ ಅಂದರೆ ಅದರ ಭಯಂಕರತೆಯನ್ನು ನಾವು ಅರ್ಥೈಸಿಕೊಳ್ಳಬೇಕಾಗಿದೆ. ಆದರೆ ಕೇಂದ್ರ ಸರಕಾರ ಇದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿ ಮತ್ತೊಂದು ವಿವಿಗೆ ಕೈ ಹಾಕಿರುವುದು ನಮ್ಮ ದೇಶದ ದುರದೃಷ್ಟವೆನ್ನಬೇಕು.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ತಾಂತ್ರಿಕ ಗೋಷ್ಠಿಗಳನ್ನ ಸೇರಿಸುವಂತೆ ಆಗ್ರಹ
– ಗಣೇಶ್ ದಾವಣಗೆರೆ
ಫೆಬ್ರವರಿಯಲ್ಲಿ ನಡೆಯಲಿರುವ ಬಿಜಾಪುರ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಕೆಳಕಂಡ ಕನ್ನಡ ತಾಂತ್ರಿಕ ಗೋಷ್ಠಿಗಳನ್ನ ಸೇರಿಸಿ. ಕನ್ನಡದ ಅಭಿವೃದ್ಧಿಯ ದೃಷ್ಟಿಯಿಂದ ಇದು ಅತ್ಯವಶ್ಯಕ.
ಸಧ್ಯದ ಮಾಹಿತಿಯ ಪ್ರಕಾರ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಒಂದೇ ಒಂದು ತಾಂತ್ರಿಕ ಗೋಷ್ಟಿಯನ್ನ ಹಾಕಿಲ್ಲ. ಕನ್ನಡವೆಂದರೆ ಬರೀ ಹಳೆಗನ್ನಡ, ನಡುಗನ್ನಡ, ಆಧುನಿಕ ಕನ್ನಡ, ನವೋದಯ, ನವ್ಯ, ನವ್ಯೋತ್ತಗಳಷ್ಟೇನಾ? ನಿಮ್ಮ ಮೊಬೈಲುಗಳಲ್ಲಿ ಕನ್ನಡ ಸಾಹಿತ್ಯವನ್ನ ಓದಲಿಕ್ಕೆ, ಬರೆಯಲಿಕ್ಕೆ ಕನ್ನಡದ ಸಾಫ್ಟ್ವೇರುಗಳು, ಆಂಡ್ರಾಯ್ಡ್ App ಗಳು, ಕಂಪ್ಯೂಟರಿನಲ್ಲಿ, ಲ್ಯಾಪ್ಟಾಪಿನಲ್ಲಿ , ಟ್ಯಾಬ್ಲೆಟ್ನಲ್ಲಿ ಕನ್ನಡ ಬೇಡವಾ? ಕಂಪ್ಯೂಟರ್ನಲ್ಲಿ ಕನ್ನಡ ಬರೆಯುವ ಬಗ್ಗೆ ಜಾಗೃತಿ ಬೇಡವಾ? ಸ್ವತಃ ಕ.ಸಾ.ಪ ವೆಬ್ ಸೈಟೇ ಅಸ್ತಿತ್ವದಲ್ಲಿಲ್ಲ. ಯಾವುದೇ ಮಾಹಿತಿಯೂ ಇಲ್ಲ. ಕಂಪ್ಯೂಟರ್ ಯುಗದಲ್ಲಿರುವ ನಾವು ನಮ್ಮ ಭಾಷೆಗೆ ತಂತ್ರಜ್ಞಾನದ ನೆರವು ಪಡೆಯಬೇಕು.
ಕಸಾಪ ಅಧ್ಯಕ್ಷರಿಗೆ ಕೇಳಿದರೆ, ಈ ಬಾರಿ ಎಲ್ಲವೂ ಸಭೆಯಲ್ಲಿ ನಿರ್ಣಯಿಸಲಾಗಿದೆ ಸೇರಿಸಲಿಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೂ ಬಹಳ ದಿನಗಳ ಸಮಯವಿದೆ. ಕನ್ನಡದ, ಕನ್ನಡಿಗರ ಶ್ರೇಯೋಭಿವೃದ್ಧಿಗಾಗಿ ಆಸಕ್ತಿವಹಿಸಬೇಕಾದ ಕ.ಸಾ.ಪ.ಗೇಕೆ ತಂತ್ರಾಂಶ, ತಂತ್ರಜ್ಞಾನದ ಬಗ್ಗೆ ಇಷ್ಟು ಅಸಡ್ಡೇ?
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪುಂಡಲೀಕ ಹಾಲಂಬಿಯವರಿಗೆ ಒಂದು ಸವಿನಯ ಮನವಿ. ಕನ್ನಡದ ಅಂತರ್ಜಾಲ ಪ್ರಪಂಚದಲ್ಲಿ ಸಕ್ರಿಯವಾಗಿರುವ ಸಾವಿರಾರು ಬ್ಲಾಗಿಗರು,ಕನ್ನಡ ವೆಬ್ ಡೆವಲಪರ್ಗಳು,ಓಪನ್ ಸೋರ್ಸ್ ಆಸಕ್ತರು, ಸಾಫ್ಟ್ವೇರ್ ಎಂಜಿನಿಯರುಗಳು, ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರುಗಳು, ವಿದ್ಯಾರ್ಥಿಗಳನ್ನ ಸೇರಿಸುವ ಪ್ರಯತ್ನವಾಗಿ ಕೆಳಕಂಡ ಗೋಷ್ಟಿಗಳನ್ನ ಸೇರಿಸಿ. ಕನ್ನಡದ ತಾಂತ್ರಿಕ ಅಭಿವೃದ್ಧಿಯ ದೃಷ್ಟಿಯಿಂದ ಇದು ಅತ್ಯಾವಶ್ಯಕ.
‘ಅನ್ ಎಥಿಕಲ್ ’ ಸಂಸ್ಥೆಗಳು
-ಬಿಂದು ಮಾಧವಿ,ಹೈದರಾಬಾದ್
ನನಗೆ ethical ಎಂಬ ಪದಕ್ಕೆ ನೀತಿ, ಸಿದ್ಧಾಂತ ಎಂಬ ಅರ್ಥಗಳು ಕನ್ನಡಕಸ್ತೂರಿ.ಕಾಮ್ ನಲ್ಲಿ ಸಿಕ್ಕವು. ಆದರೆ ಏಕೋ Ethics ಅಂದರೆ ಅಷ್ಟೇ ಅಲ್ಲ ಎನ್ನಿಸಿತು, ಹಾಗಾಗಿ ಈ ಬರಹಕ್ಕೆ ಆಂಗ್ಲ ನಾಮಧೇಯವನ್ನೇ ಇಟ್ಟಿದ್ದೇನೆ.
ಮೊನ್ನೆ ಮೊನ್ನೆ ಓಸ್ಮಾನಿಯ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಅನ್ಯಾಯದ ವಿರುದ್ದ ಪ್ರತಿಭಟಿಸಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದರು ಎಂದು ಓದಿದ್ದೆ. ಹೀಗೇ ಅನೇಕ ವಿಷಯಗಳನ್ನು ಓದಿದಾಗ, ಏಕೆ ಹಾಗೆ ಅನಾಗರೀಕರಂತೆ ವರ್ತಿಸಬೇಕು? ಅನ್ಯಾಯದ ವಿರುದ್ದ ಪ್ರತಿಭಟಿಸುವುದೇ ಆದರೆ ಸರಿಯಾದ ಮಾರ್ಗವಿಲ್ಲವೇ ಎಂದೆನಿಸುತ್ತದೆ. ಆದರೆ ನಾವುಗಳೇ ಅನ್ಯಾಯದ ಬಲಿಪಶುಗಳಾದಾಗ, ನಾವುಗಳೇ ’ಕುರಿ ಕುರಿ’ ಆದೆವು ಎಂದು ತಿಳಿದಾಗ, ಸಂಯಮದಿಂದಿರುವುದು ಎಷ್ಟು ಕಷ್ಟ ಎಂದು ತಿಳಿಯುತ್ತದೆ. ಇಲ್ಲೇ ಇವರಿಗೆ ಕೆನ್ನೆಗೆ ಬಾರಿಸಿದರೆ ಏನು ತಪ್ಪು ಎಂದು ಎನಿಸುತ್ತದೆ.
ತೇಜಃಪುಂಜ
– ರಾಜೇಶ್ ರಾವ್
ತಮಿಳುನಾಡಿನ ಒಂದು ಹಳ್ಳಿ. ಮರವೊಂದರ ಕೆಳಗೆ ಕುಳಿತು ಸಂತನೊಬ್ಬ ತನ್ನ ಶಿಷ್ಯರಿಗೆ ಹೇಳುತ್ತಿದ್ದಾನೆ…
“ಹಿಂದೂಸ್ಥಾನ ಮತಾಂಧರ ದಾಸ್ಯಕ್ಕೆ ಸಿಲುಕಿ ತನ್ನ ಕ್ಷಾತ್ರತ್ವ, ಸ್ವಾಭಿಮಾನ, ಅಸ್ಮಿತೆಯನ್ನು ಮರೆತು ನಿದಿರೆ, ಮದಿರೆ, ನಪುಂಸಕತ್ವದ ವಶವಾಗಿದ್ದಾಗ ದೇಶದ ಕ್ಷಾತ್ರ ತೇಜವನ್ನು ಬಡಿದೆಬ್ಬಿಸಿದನಾತ. ಮತಾಂಧ ಮೊಘಲ್, ಆದಿಲ್, ನಿಜಾಮ್, ಬರೀದ್, ಕುತುಬ್, ಇಮಾಮ್ ಶಾಹಿಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಹಿಂದೂಗಳ ಮಾನ, ಪ್ರಾಣ ರಕ್ಷಣೆ ಮಾಡಿದ. ತೋರಣ, ಚಾಕಣ, ಪನ್ನಾಳ, ಪುರಂದರ…ಹೀಗೆ ಕೋಟೆಗಳ ಮೇಲೆ ಕೋಟೆ ಗೆದ್ದು…ಛತ್ರಪತಿಯಾಗಿ ಹಿಂದೂಸಾಮ್ರಾಜ್ಯದ ಶೌರ್ಯ, ಸ್ಥೈರ್ಯ, ಸಾಹಸವನ್ನು ಜಗತ್ತಿಗೆ ಪ್ರಚುರಪಡಿಸಿದ….”
ಶಿಷ್ಯರಿಗೋ ಆಶ್ಚರ್ಯ. ತಮ್ಮ ಗುರುಗಳ್ಯಾಕೆ ಆ ದರೋಡೆಕೋರ ಶಿವಾಜಿಯ ಬಗ್ಗೆ ಹೇಳುತ್ತಿದ್ದಾರೆ?
ಆ ಗುರು ಮತ್ಯಾರು ಅಲ್ಲ. ಮುಂದೊಂದು ದಿನ ಐದೇ ಐದು ನಿಮಿಷಗಳ ಭಾಷಣದಲ್ಲಿ ಜಗತ್ತಿನ ಎದುರು ತನ್ನ ದೇಶ ಜಗತ್ತಿನ ಗುರು, ತನ್ನ ಸಂಸ್ಕೃತಿ ಉತ್ಕೃಷ್ಟವಾದ ಸನಾತನ ಸಂಸ್ಕೃತಿ, ತನ್ನ ನಾಗರೀಕತೆ ಇಂದಿಗೂ ಅಳಿದಿಲ್ಲ ಎಂದು ಜಾಗತಿಕ ಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆ, ಗರಿಮೆಯನ್ನು ಜಗತ್ತಿಗೆ ಮನವರಿಕೆ ಮಾಡಿಕೊಟ್ಟನೋ, ನನ್ನ ಭಾರತಕ್ಕೆ ಶಿವಾಜಿಯಂತಹ ೧೦೦ ಮಂದಿ ತರುಣರು ಸಾಕೆಂದು ಯುವ ಜನತೆಯನ್ನು ಬಡಿದೆಬ್ಬಿಸಿದನೋ ಅಂತಹ ಸಿಡಿಲ ಸಂತ ಸ್ವಾಮಿ ವಿವೇಕಾನಂದ.
ಭಾರತದ ಯುವವರ್ಗದ ಚೈತನ್ಯವನ್ನು ಬಡಿದೆಬ್ಬಿಸಿದ ಸಿಡಿಲ ಸಂತ ಸ್ವಾಮಿ ವಿವೇಕಾನಂದ
-ಶ್ರೀವಿದ್ಯಾ
ಜನವರಿ ೧೨, ೧೮೬೩ ರಂದು ಕೊಲ್ಕತ್ತಾದ ಸಿಮ್ಲ ಎಂಬ ಭಾಗದಲ್ಲಿ ನರೇಂದ್ರನಾಥ ದತ್ತ ಜನಿಸಿದನು. ಸ್ವಾಮಿ ವಿವೇಕಾನಂದರ ಹುಟ್ಟು ಹೆಸರು ನರೇಂದ್ರನಾಥ ದತ್ತ. ತಂದೆ ವಿಶ್ವನಾಥ ದತ್ತ, ತಾಯಿ ಭುವನೇಶ್ವರಿ.
ತಂದೆ ವಕೀಲರಾಗಿದ್ದು, ಬೇಕಾದಷ್ಟು ವಿಷಯಗಳನ್ನು ತಿಳಿದುಕೊಂಡಿದ್ದರು ಮತ್ತು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ತಾಯಿ ನೋಡುವುದಕ್ಕೆ ಮತ್ತು ನಡೆನುಡಿಗಳಲ್ಲಿ ರಾಣಿಯಂತಿದ್ದಳು. ಎಲ್ಲರೂ ಆಕೆಯನ್ನು ಗೌರವ ಆದರಗಳಿಂದ ಕಾಣುತ್ತಿದ್ದರು.ಅವಳಿಗೆ ಭಗವಂತನಲ್ಲಿ ತುಂಬ ಭಕ್ತಿ. ಅವಳಿಗೆ ಇದ್ದ ಒಂದು ವಿಶೇಷ ಶಕ್ತಿಯೆಂದರೆ ಅಸಾಧಾರಣವಾದ ನೆನಪು. ರಾಮಾಯಣ, ಮಹಾಭಾರತದ ಅನೇಕ ಭಾಗಗಳು ಅವಳಿಗೆ ಬಾಯಲ್ಲೇ ಬರುತ್ತಿದ್ದವು.
ನರೇನ್ ಬೆಳೆಯುತ್ತ ಬೆಳೆಯುತ್ತ ಅಸಾಧ್ಯ ತುಂಟನಾದ. ಅವನ ಬದುಕಿನಲ್ಲಿ ಮೊದಲ ದೊಡ್ಡ ಗುರು ತಾಯಿ. ತಾಯಿಯಿಂದ ನರೇನ್ ರಾಮಾಯಣ, ಮಹಾಭಾರತಗಳನ್ನು ಕೇಳಿದ್ದಷ್ಟೇ ಅಲ್ಲದೇ ಧೈರ್ಯ, ಸತ್ಯಪ್ರಿಯತೆಗಳನ್ನೂ ಕಲಿತ. ಜೊತೆಯಲ್ಲಿ ಔದಾರ್ಯ ಗುಣ ಬೆಳೆಯಿತು. ಬಡವರು ಹಾಗೂ ಸಂನ್ಯಾಸಿಗಳು ಭಿಕ್ಷೆ ಬೇಡಿದಾಗ ಅವನ ಮನಸ್ಸು ಕರಗಿ ಕೈಯಲ್ಲಿ ಏನು ಇರುತ್ತದೆಯೋ ಅದನ್ನು ದಾನ ಮಾಡುತ್ತಿದ್ದನು. ವೈರಾಗ್ಯ ಮತ್ತು ಅಲೌಕಿಕತೆಗಳು ಬಾಲ್ಯದಿಂದಲೇ ನರೇಂದ್ರನ ಸ್ವಭಾವವಾಗಿ ಮೈಗೂಡಿದ್ದವು. ಚಿಕ್ಕಂದಿನಿಂದಲೂ ನರೇಂದ್ರನಿಗೆ ಅಸಾಧಾರಣವಾದ ಅನುಭವವಿತ್ತು. ಅವನು ಕಣ್ಣು ಮುಚ್ಚಿದಾಗ ಅವನಿಗೆ ಹುಬ್ಬುಗಳ ನಡುವೆ ಒಂದು ಬೆಳಕು ಕಾಣಿಸಿಕೊಳ್ಳುತ್ತಿತ್ತು. ಅವನಲ್ಲಿ ವಿಶಿಷ್ಟವಾದ ಏಕಾಗ್ರತೆಯ ಗುಣ ಇತ್ತು. ವಿರಾಮದ ವೇಳೆಗಳಲ್ಲಿ ಧ್ಯಾನದಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಿದ್ದನು.





