ರಾಜರಿಲ್ಲದ ರಾಜ್ಯದಲ್ಲಿ ವಂಶಾಡಳಿತದ ಪೋಷಣೆ
-ಗೋಪಾಲ ಕೃಷ್ಣ
ರಾಜಪ್ರಭುತ್ವದ ನೆರಳು ಮಾಸುವ ಮುನ್ನವೇ, ಕುಟುಂಬ ರಾಜಕಾರಣ ತಲೆ ಎತ್ತುತ್ತಿದೆ. ಪ್ರಜಾಪ್ರಭುತ್ವದ ಹರೆಯದಲ್ಲೇ ಆಶಯಗಳು ಸತ್ತು ಬೀಳುತ್ತಿವೆ. ಜನಸೇವೆಯೆಂಬ ಟೊಳ್ಳು ಕುದುರೆಗೆ ಹಣ, ಹೆಣ್ಣು, ಅಧಿಕಾರದ ಲೇಪನ ಹಚ್ಚಿ ಹಾದಿ ತಪ್ಪಿಸಲಾಗುತ್ತಿದೆ. ದೇಶ ವಿಭಜನೆಯ ನಂತರ, ಧರ್ಮದ ಮೂಲಕ ವಿಭಜನೆ, ಇದೀಗ ಜಾತಿ ಜಾತಿಗಳ ನಡುವೆ ವಿಭಜಿಸಿ, ಸಾಮರಸ್ಯದ ಬದಲಿಗೆ ಸಂಘರ್ಷದ ಬೋಧನೆ ನಡೆಯುತ್ತಿದೆ.ಕಾಲು ಮುರಿದ ಕಾರ್ಯಾಂಗ,ಸವೆದು ಹೋದ ಶಾಸಕಾಂಗಗಳ ಮಧ್ಯೆ ಆಮ್ ಆದ್ಮಿ ಕಂಗಾಲಾಗಿದ್ದಾನೆ.
ಇಲ್ಲಿ ದೂರುವುದಾದರೂ ಯಾರನ್ನು? ಸಂತತಿ ರಾಜಕಾರಣದ ಉನ್ನತೀಕರಣಕ್ಕೆ ನೀರು-ಗೊಬ್ಬರ ಹಾಕಿ ಬೆಳೆಸುತ್ತಿರುವಾಗ ವಂಶಾಡಳಿತದ ಫಲ ದೊರೆಯದೆ ಮತ್ತಿನ್ನೇನು ಸಿಕ್ಕೀತು…..? ನಾಗರೀಕ, ಜ್ಞಾನಸಂಪನ್ನ ಸಮಾಜದಲ್ಲಿಯೇ ಜನತಂತ್ರ ವ್ಯವಸ್ಥೆಗೆ ಧಕ್ಕೆಯಾದರೆ, ಪ್ರಜಾಪ್ರಭುತ್ವಕ್ಕೆ ಉಳಿಗಾಲವುಂಟೇ?ಉದಾತ್ತ ಭಾರತ ಸಂಸ್ಕೃತಿಯನ್ನು ಬಿಟ್ಟು, ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋದ ಯುವ ಜನತೆಯಿಂದ ಸಮೃದ್ಧ ರಾಷ್ಟ್ರ ನಿರ್ಮಾಣವನ್ನು ಬಯಸಲಾದೀತೆ? ತಪ್ಪು-ಒಪ್ಪುಗಳಿಗೆ ನಮ್ಮ ಮನಸ್ಸುಗಳು ಒಗ್ಗೂಡದಿರುವಾಗ, ಚಾರಿತ್ರ್ಯವಂತ ಸಮಾಜದ ನಿರೀಕ್ಷೆ ನಮ್ಮ ಭ್ರಮೆಯಲ್ಲವೇ?
ಮತ್ತಷ್ಟು ಓದು 




