ವಿಷಯದ ವಿವರಗಳಿಗೆ ದಾಟಿರಿ

Archive for

4
ಮೇ

‘ಕುಮಾರ’ ಮುಖ್ಯಮಂತ್ರಿ ಗಾದಿಗೆ! ‘ಮೋದಿ’ ಪ್ರಧಾನಿ ಹುದ್ದೆಗೆ!

– ಗೋಪಾಲಕೃಷ್ಣ

KMಅಭಿವೃದ್ಧಿಯೇ ಮಾತನಾಡುವುದಾದರೆ; ‘ಕುಮಾರಣ್ಣ’ ಮುಖ್ಯಮಂತ್ರಿ ಗಾದಿಗೆ! ‘ಮೋದಿಜಿ’ ಪ್ರಧಾನಿ ಹುದ್ದೆಗೆ!

ಅರವತ್ತಾರು ವಸಂತಗಳ ಬಂಧಮುಕ್ತ ಬದುಕು.ಈ ನಡುವೆ ದೇಶ ಕಂಡದ್ದು 13 ಮಂದಿ ಪ್ರಧಾನಮಂತ್ರಿಗಳನ್ನು. ರಾಜ್ಯವನ್ನಾಳಿದ್ದು 21 ಮುಖ್ಯಮಂತ್ರಿಗಳು.  ಇವರೆಲ್ಲರಲ್ಲಿಯೂ; ದೇಶದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಪಿ.ವಿ.ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿಯವರನ್ನು ಮತ್ತೆ ಮತ್ತೆ ನೆನದರೆ, ರಾಜ್ಯದಲ್ಲಿ ದೇವರಾಜ ಅರಸು ಅವರ ಸಾಮಾಜಿಕ ಪರಿಕಲ್ಪನೆ, ರಾಮಕೃಷ್ಣ ಹೆಗಡೆ ಅವಧಿಯ ಜನಪರ ಕಾರ್ಯಕ್ರಮಗಳು, ಎಸ್.ಎಂ.ಕೃಷ್ಣ ಅವರ ಲಯ ತಪ್ಪದ ಆಡಳಿತ, ಹೆಚ್.ಡಿ.ಕುಮಾರಸ್ವಾಮಿಯವರ ಇಪ್ಪತ್ತೇ ತಿಂಗಳ ಆಡಳಿತವನ್ನು ಮಾತ್ರ ಇಂದಿಗೂ ಮೆಲುಕು ಹಾಕುವಂತಾಗಿದೆ.

ಭಾರತದ ಜನಸಂಖ್ಯೆ 121 ಕೋಟಿಯನ್ನು ದಾಟಿರಬಹುದು.  ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸುಮಾರು 5400 ಮಂದಿಯಷ್ಟೇ.  ಆದರೆ, ಇಷ್ಟು ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನರ ಆಶಯಗಳಿಗೆ ತಕ್ಕಂತೆ ನಡೆಯುವುದು ಅಪರೂಪ.  ಅವರುಗಳ ನಿಷ್ಠೆಯೇನಿದ್ದರೂ ದೇಶವಾದರೆ ಪ್ರಧಾನಿಗೆ! ರಾಜ್ಯವಾದರೆ ಮುಖ್ಯಮಂತ್ರಿಗೆ ಮೀಸಲು ಎಂಬಂತಿರುತ್ತದೆ.  ಸಂವಿಧಾನದ ಪ್ರಕಾರ ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಯನ್ನು ಶಾಸಕರು, ಲೋಕಸಭಾ ಸದಸ್ಯರು ಆಯ್ಕೆ ಮಾಡಬೇಕು.  ಆ ಪರಿಪಾಠ ಮುರಿದು ಬಿದ್ದು ಎಷ್ಟೋ ವರ್ಷಗಳು ಆಗಿವೆ.  ಈಗೇನಿದ್ದರೂ ಚುನಾವಣಾ ಪೂರ್ವದಲ್ಲಿಯೇ ನಾಯಕನ ಆಯ್ಕೆ ಇಲ್ಲವೇ ಹೈಕಮಾಂಡ್ ಹೇಳಿದವರು ಅತ್ಯುನ್ನತ ಹುದ್ದೆಯಲ್ಲಿ ಕೂರುತ್ತಾರೆ.

ಮತ್ತಷ್ಟು ಓದು »