ವಿಷಯದ ವಿವರಗಳಿಗೆ ದಾಟಿರಿ

Archive for

5
ಜೂನ್

ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ

– ರಾಕೇಶ್ ಶೆಟ್ಟಿ

chini yuddhaಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.

ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್  ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.

ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).

ಮತ್ತಷ್ಟು ಓದು »