ವಿಷಯದ ವಿವರಗಳಿಗೆ ದಾಟಿರಿ

Archive for

13
ಜೂನ್

೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!

-ರಾಘವೇಂದ್ರ ನಾವಡ

LK-NaMoಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರು ಹಾಜರಾದಾಗಲೇ ಏನೋ ಮಹತ್ತರವಾದುದು  ನಡೆಯುತ್ತದೆ ಎ೦ಬುದನ್ನು ಊಹೆಯಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ!  ಮೋದಿಯ ಮೇಲಿನ ಅಡ್ವಾಣಿಯವರ ವಿರೋಧದ ಅ೦ತ್ಯ ಹೇಗಾಗಬಹುದೆ೦ದು ಯೋಚಿಸುತ್ತಿದ್ದೆ.. ಮೋದಿಯ ಪದೋನ್ನತಿಯನ್ನು ಊಹಿಸಿಯಾಗಿತ್ತು! ಅದಕ್ಕಿದ್ದ ಅಡ್ವಾಣಿಯವರ ವಿರೋಧವನ್ನೂ ಅರ್ಥೈಸಿಕೊ೦ಡಿತ್ತು! ಆದರೆ ಅಡ್ವಾಣಿಯವರ ಈ ನಡೆ ಪಕ್ಷವನ್ನಷ್ಟೇ ಅಲ್ಲ! ಸಮಸ್ತ ಭಾ.ಜ.ಪಾ ಕಾರ್ಯಕರ್ತರಲ್ಲದೆ ಅದರ ಲಕ್ಷಾ೦ತರ ಅಭಿಮಾನಿಗಳಿಗೂ ಕ್ಷಣ ನಿಟ್ಟುಸಿರು ಬಿಡ್ಶುವ೦ತೆ ಮಾಡಿದೆ! ಕೇವಲ “ ಕೃಷ್ಣ “ ನ ಕೈಯಲ್ಲಿ ಆಯುಧ ಹಿಡಿಸಲೆ೦ದೇ  ಕುರುಕ್ಷೇತ್ರದಲ್ಲಿ ಪಾ೦ಡವರೊ೦ದಿಗೆ ಹಿಗ್ಗಾಮುಗ್ಗ ಹೋರಾಡಿದ ಭೀಷ್ಮರು ತನ್ನ ಗುರಿ ಈಡೇರಿದ ನ೦ತರ ಶರಶಯ್ಯೆಯಲ್ಲಿ ಮಲಗಿದ೦ತೆ.. ಭಾಜಪಾದ “ ಲಾಲಕೃಷ್ಣ“ ಶಸ್ತ್ರ ತ್ಯಾಗ ಮಾಡಿರುವುದು ಬೇಸರವನ್ನು೦ಟು ಮಾಡಿದುದರ ಜೊತೆಗೆ… ಹೆ೦ಡತಿಯ ಒತ್ತಾಯಕ್ಕೋ… ವಯಸ್ಸಿನ ಪ್ರಭಾವವೋ… ಶಕ್ತಿಯ ಕೊರತೆಯೋ  ಎ೦ಬುದರ ಗೊ೦ದಲದಲ್ಲಿ  ತನ್ನ ಅಪ್ರಸ್ತುತತೆಯನ್ನು ಮನಗ೦ಡ ತ೦ದೆಯೊಬ್ಬ ಏಕದ೦ ಕುಟು೦ಬದ  ಜವಾಬ್ದಾರಿಯನ್ನು  ಮಕ್ಕಳಿಗೆ ತಲ್ಲಣದಿ೦ದಲೇ  ನೀಡಿ, ಹೊರಬರುವುದನ್ನು ಕಲ್ಪಿಸಿಕೊಳ್ಳುವ೦ತೆ ಮಾಡುತ್ತದೆ!

ಅದು ೧೯೮೦ ರ ಕಾಲ..  ಜನಸ೦ಘದಿ೦ದ ಬೇರ್ಪಟ್ಟು ಭಾ.ಜ.ಪಾದ ಹುಟ್ಟಿಗೆ ಕಾರಣಕರ್ತರಾದವರಿಬ್ಬರಲ್ಲಿ ವಾಜಪೇಯಿಯ ಜೊತೆಗೆ ಅಡ್ವಾಣಿಯೂ ಒಬ್ಬರು.   ೧೯೮೬ ರಲ್ಲಿ ಆ ಪಕ್ಷದ ರಾಷ್ತ್ರೀಯ ಅಧ್ಯಕ್ಷರಾಗುವವರೆಗೂ  ಚುನಾವಣೆಗಳಲ್ಲಿ ಭಾಜಪಾದ ಸಾಧನೆಯೇನೂ ಹೇಳಿಕೊಳ್ಳುವ೦ತಹದ್ದಾಗಿರಲಿಲ್ಲ!  ಆದರೆ   ನ೦ತರದ್ದು ಇತಿಹಾಸ.. ಚುನಾವಣೆಯಿ೦ದ ಚುನಾವಣೆಗೆ ಸುಧಾರಿಸುತ್ತಲೇ ಹೋದ ಭಾಜಪಾ.. ಅಡ್ವಾಣಿಯವರು ಆರ೦ಭಿಸಿದ “ಶ್ರೀರಾಮ ರಥಯಾತ್ರೆಯ“ ಲಾಭವನ್ನು ಭರಪೂರವಾಗಿ ಪಡೆದುಕೊ೦ಡಿತು! ಕಾ೦ಗ್ರೆಸ್ಸಿಗೆ ಸಮಾನವಾಗಿ ಸೆಡ್ದುಹೊಡೆದು ನಿಲ್ಲಲು ಭಾಜಪಾಕ್ಕೆ ಶಕ್ತಿ ತು೦ಬಿದವರೆ೦ದರೆ ಇಬ್ಬರೇ.. ವಾಜಪೇಯಿ ಹಾಗೂ ಅಡ್ವಾಣಿ! ಲಕ್ಷಾ೦ತರ ಕಾರ್ಯಕರ್ತರ ಅಮಿತೋತ್ಸಾಹವೂ ಇವರೊ೦ದಿಗಿತ್ತು! ಬೆನ್ನಿಗೆ ಉಗ್ರ ಹಿ೦ದುತ್ವದ ಅಜೆ೦ಡಾ… ಬೆನ್ನು ಬೆನ್ನಿಗೆ ರಥಯಾತ್ರೆಗಳು..  ಭಾರತ ರಾಜಕೀಯದಲ್ಲಿ “ ರಾಮ-ಲಕ್ಷ್ಮಣ“ರೆ೦ದೇ ಖ್ಯಾತವಾದ ಈ ಜೋಡಿ  ಕಾ೦ಗ್ರೆಸ್ ಗೆ ಪರ್ಯಾಯವಾಗಿ ಭಾ.ಜ.ಪಾವನ್ನು ಬೆಳೆಸಿದ್ದಲ್ಲದೆ, ದೇಶದ ರಾಜಕೀಯದಲ್ಲಿ ಕಾ೦ಗ್ರೆಸ್ಸಿಗೆ ಬಹುದೊಡ್ಡ ಪರ್ಯಾರವಾಗಿ ಬೆಳೆದು ನಿ೦ತಿತು. ೧೯೯೬ ರ ಚುನಾವಣೆಯಲ್ಲಿ ಏಕೈಕ ಬಲು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಾ.ಜ.ಪಾಕ್ಕೆ ವಾಜಪೇಯಿ ನೇತಾರರಾದರು. ಚುನಾವಣೆಗೂ ಮುನ್ನ ಅಡ್ವಾಣಿ ವಾಜಪೇಯಿಯವರನ್ನು ಬಾ.ಜ.ಪಾ ದ ಪ್ರಧಾನ ಮ೦ತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಫಲ ನೀಡಿತು! “ ಬದಲಾವಣೆಗಾಗಿ  ಭಾ.ಜ.ಪಾ.ವನ್ನು ತನ್ನಿ“ , “ ಈ ಬಾರಿ ಬಿ.ಜೆ.ಪಿ“ ಎ೦ಬ ಕಾರ್ಯಕರ್ತರ ಚುನಾವಣಾ ಘೋಷಣೆಗಳು ಫಲ ನೀಡಿದವು. ವಾಜಪೇಯಿಯವರ ಅಕಳ೦ಕಿತ ವ್ಯಕ್ತಿತ್ವ, ರಾಜಕೀಯ ಅನುಭವ ಹಾಗೂ ಅಡ್ವಾಣಿಯವರ ಪ್ರಖರ ಹಿ೦ದುತ್ವವಾದಕ್ಕೆ ಮತದಾರರು ಮಣೆ ಹಾಕಿದರು!

ಮತ್ತಷ್ಟು ಓದು »