ವಿಷಯದ ವಿವರಗಳಿಗೆ ದಾಟಿರಿ

Archive for

22
ಜೂನ್

‘ಅಪಶೂದ್ರಾಧಿಕರಣ’ ಏನನ್ನು ಹೇಳುತ್ತದೆ?

Shankaraacharya1ಡಾ.ರಾಜಾರಾಮ ಹೆಗಡೆ

ಶಂಕರಾಚಾರ್ಯರ ಬ್ರಹ್ಮಸೂತ್ರಭಾಷ್ಯದ ಅಪಶೂದ್ರಾಧಿಕರಣದಲ್ಲಿ ಮಂಡಿತವಾದ ವಿಚಾರಗಳ ಕುರಿತು ಬರುತ್ತಿರುವ ಟೀಕೆಗಳಿಗೆ ಸಂಬಂಧಿಸಿದಂತೆ ಈ ಪ್ರತಿಕ್ರಿಯೆ.

ಯಾರು ಎಷ್ಟೇ ದೊಡ್ಡ ವ್ಯಕ್ತಿಯಾಗಿರಬಹುದು, ಗ್ರಂಥವಾಗಿರಬಹುದು ಅದನ್ನು ಟೀಕೆ ಮಾಡುವುದರಲ್ಲಿ ಅಥವಾ ಅದರ ವಿಚಾರಗಳನ್ನು ಖಂಡಿಸುವುದರಲ್ಲಿ ಯಾವ ದೋಷವೂ ಇಲ್ಲ. ಆದರೆ ಈ ಕೆಲಸವನ್ನು ತರ್ಕಬದ್ಧವಾಗಿ ಪ್ರಮಾಣಪೂರ್ವಕವಾಗಿ ಮಾಡಬೇಕೆಂಬುದು ಒಂದು ಬೌದ್ಧಿಕ ಚರ್ಚೆಯ ನಿಬಂಧನೆ. ಪ್ರಸ್ತುತ ಟೀಕೆಗಳನ್ನೇ ಗಮನಿಸಿ. ಈ ಟೀಕೆಯನ್ನು ನಡೆಸುವವರು ಎರಡು ಹೆಜ್ಜೆಗಳನ್ನು ಇಡುತ್ತಿದ್ದಾರೆ. 1) ಶಂಕರಾಚಾರ್ಯರು ಏನನ್ನು ಹೇಳುತ್ತಿದ್ದಾರೆ ಎಂಬುದು ಮೊದಲನೆಯದು ಹಾಗೂ 2) ಅದು ಸ್ವೀಕಾರಾರ್ಹವಲ್ಲ ಎಂಬುದು ಎರಡನೆಯದು. ಮೊದಲನೆಯದು ಸಿದ್ಧವಾಗದೇ ಎರಡನೆಯದು ಸಾಧ್ಯವಿಲ್ಲ. ಒಂದೊಮ್ಮೆ ಶಂಕರರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನೇ ತಪ್ಪಾಗಿ ತಿಳಿಯಲಾಗಿದೆ ಅಂತಾದರೆ ಎರಡನೆಯ ಹೆಜ್ಜೆಯೂ ದಿಕ್ಕು ತಪ್ಪಿಹೋಗಿರುತ್ತದೆ. ಈ ಟೀಕೆಗಳಿಗೂ ಇದೇ ಗತಿಯಾಗಿದೆ ಎಂಬುದು ನನ್ನ ಅಭಿಪ್ರಾಯ.

ಮೊದಲನೆಯದು, ಅಂದರೆ ಶಂಕರಾಚಾರ್ಯರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂಬುದು ಬ್ರಹ್ಮಸೂತ್ರ್ರಭಾಷ್ಯದ ಅಪಶೂದ್ರಾಧಿಕರಣವನ್ನು ಓದಿದಾಗ ಸ್ಪಷ್ಟವಾಗುತ್ತದೆ. ಶಂಕರರು ಈ ಭಾಗದಲ್ಲಿ ಬ್ರಹ್ಮಸೂತ್ರದ ಕೆಲವು ಸೂತ್ರಗಳ ಅರ್ಥವನ್ನು ಶ್ರುತಿ, ಸ್ಮೃತಿಗಳ ಅಭಿಪ್ರಾಯಗಳನ್ನು ಆಧರಿಸಿ ನಿರ್ಣಯಿಸುತ್ತಾರೆ. ಈ ಭಾಗವು 1) ಶೂದ್ರರಿಗೆ ಬ್ರಹ್ಮಜ್ಞಾನ ಸಾಧ್ಯವಿಲ್ಲ ಎಂದು ನಿರ್ಣಯಿಸುತ್ತಿಲ್ಲ. 2) ಶೂದ್ರರಿಗೆ ಉಪನಯನಕ್ಕೆ ಹಾಗೂ ವೇದವಿದ್ಯೆಗೆ ಅಧಿಕಾರವಿಲ್ಲ ಎಂಬುದಾಗಿಯೂ ಹೇಳುತ್ತಿಲ್ಲ. 3)ವೇದಾಧ್ಯಯನದಿಂದ ಮಾತ್ರವೇ ಬ್ರಹ್ಮಜ್ಞಾನ ಸಾಧ್ಯ ಎಂಬುದಾಗಿ ಹೇಳುತ್ತಿಲ್ಲ. ಈ ಅಧಿಕರಣದಲ್ಲ್ಲಿ ಹೇಳುತ್ತಿರುವುದೇನೆಂದರೆ ಶೂದ್ರರಿಗೆ ವೇದಾಧ್ಯಯನದ ಮೂಲಕ ಜ್ಞಾನಾಧಿಕಾರವಿಲ್ಲ ಎಂಬುದಷ್ಟೇ. ಉಪನಯನ ಸಂಸ್ಕಾರವಿಲ್ಲದವರಿಗೆ ವೇದಾಧ್ಯಯನಕ್ಕೆ ಅರ್ಹತೆ ಬರುವುದಿಲ್ಲ ಎಂಬುದೇ ಶ್ರುತಿಗಳ ಅಭಿಪ್ರಾಯ ಎಂಬುದನ್ನು ನಿರ್ಣಯಿಸುತ್ತಿದ್ದಾರೆ. ಹುಟ್ಟಾ ಎಲ್ಲರೂ ಶೂದ್ರರು, ಉಪನಯನ ಸಂಸ್ಕಾರವನ್ನು ಹೊಂದಿದವನನ್ನು ದ್ವಿಜ (ಉಪನಯನ ಎರಡನೆಯ ಹುಟ್ಟು) ಎಂಬುದಾಗಿ ಕರೆಯಲಾಗಿದೆ. ಹಾಗಾಗಿ ಎರಡು ಪ್ರಕಾರದ ಶೂದ್ರರನ್ನು ಕುರಿತು ಅವರು ಚರ್ಚಿಸುತ್ತಾರೆ: 1) ಉಪನಯನ ಸಂಸ್ಕಾರವಾಗುವುದಕ್ಕೂ ಪೂರ್ವದ ಅವಸ್ಥೆ (ಇವರಲ್ಲಿ ಬ್ರಾಹ್ಮಣಾದಿ ನಾಲ್ಕು ವರ್ಣಗಳೂ ಬರುತ್ತವೆ) 2) ಜಾತಿ ಶೂದ್ರರು: ಪಾರಂಪರಿಕವಾಗಿ ಉಪನಯನ ಸಂಸ್ಕಾರದ ಆಚರಣೆಯನ್ನೇ ಹೊಂದಿಲ್ಲದ ಜಾತಿಗಳು. ಭಾಷ್ಯವು ವೇದಾಧಿಕಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರಲ್ಲೂ ಯಾವುದೇ ವ್ಯತ್ಯಾಸವನ್ನು ಮಾಡುತ್ತಿಲ್ಲ.

ಮತ್ತಷ್ಟು ಓದು »