ವಿಷಯದ ವಿವರಗಳಿಗೆ ದಾಟಿರಿ

Archive for

7
ಜೂನ್

ಇದು ವಿಮರ್ಶೆಯಲ್ಲ ನನ್ನನಿಸಿಕೆ…

-ಕೆ.ಗುರುಪ್ರಸಾದ್

yADSಇತ್ತೀಚೆಗೆ ಒಂದು ವಿಷಯದ ಬಗ್ಗೆ ನಾ ಮೆಚ್ಚುವ ಇಬ್ಬರು ಲೇಖಕರ ಆರ್ಟಿಕಲ್ ಓದಿದೆ. ಒಂದು ಪ್ರತಾಪ್ ಸಿಂಹ ಅವರ ” ಮೇನಕೆ ಬಂದು ಕುಣಿಯುವವರೆಗೆ ವಿಶ್ವಾಮಿತ್ರ ಮಹಾತಪಸ್ವಿಯಾಗಿದ್ದ, ಬಿಜೆಪಿ ಕಥೆಯೂ ಹಾಗೇಯೇ ಆಯಿತು ” ಇನ್ನೊಂದು ಚಕ್ರವರ್ತಿ ಸೂಲಿಬೆಲೆಯವರ ” ಎರಡು ರಾಷ್ಟ್ರೀಯ ಪಕ್ಷ ಎಷ್ಟೊಂದು ಅಂತರ “. ಮೊದಲೇ ಹೇಳಿದಂತೆ ಎರಡೂ ಕರ್ನಾಟಕದಲ್ಲಿನ ಬಿಜೆಪಿಯ ಸೋಲಿನ ಕುರಿತಾಗೇ ಇರೋದು. ಪ್ರತಾಪ್ ಸಿಂಹ ಅವರು ಯಾವ ರೀತಿ ಸೋಲನುಭವಿಸಿತು ಅನ್ನೋದನ್ನ ವಿಶ್ಲೇಷಣೆ ಮಾಡಿದ್ದರೆ, ಸೂಲಿಬೆಲೆಯವರು ಎರಡು ಪಕ್ಷಗಳ ನಡುವಿನ ವ್ಯತ್ಯಾಸವನ್ನ ಜನರ ಮುಂದಿಡುವ ಪ್ರಯತ್ನ ಮಾಡಿದ್ದಾರೆ. ಈ ಎರಡು ಲೇಖನಗಳನ್ನ ಓದಿದ ನಂತರ ನನಗೆ ನನ್ನ ಅನಿಸಿಕೆಯನ್ನು ಹೇಳೋ ಮನಸಾಯಿತು ಹಾಗಾಗಿ ಈ ಸಣ್ಣ ಲೇಖನ…ಮೊದಲೇ ಶೀರ್ಷಿಕೆಯ ರೂಪದಲ್ಲಿ ಹೇಳಿದ್ದೇನೆ, ಇದು ವಿಮರ್ಶೆಯಲ್ಲ ಯಾಕೆಂದರೆ ಇಬ್ಬರೂ ತಮ್ಮ ಬರಹಗಳಿಂದ ಜನರ ಮಂತ್ರಮುಗ್ಧರನ್ನಾಗಿಸಿದವರು. ಅವರ ಕುರಿತಾಗಿ ವಿಮರ್ಶೆ ಮಾಡುವ ಯೋಗ್ಯತೆ ಎಳ್ಳಷ್ಟೂ ನನ್ನಲ್ಲಿಲ್ಲ ಅನ್ನೋದು ನನ್ನ ಧೃಡವಾದ ನಂಬಿಕೆ. ಹಾಗಾಗಿ ಇಲ್ಲಿರೋದು ಅದೇ ವಿಷಯದ ಕುರಿತಾದ ನನ್ನ ಅನಿಸಿಕೆ ಅಷ್ಟೇ..

ಮೊದಲಿಗೆ ಪ್ರತಾಪ್ ಸಿಂಹರ ಲೇಖನವನ್ನ ನೋಡೋದಾದ್ರೆ… ಬಿಜೆಪಿಯ ಸೋಲಿನ ಕುರಿತಾದ ಪ್ರತಾಪ್ ಅವರ ಅನಾಲಿಸಿಸ್ ಸೂಪರ್… ಎರಡು ಮಾತಿಲ್ಲದೆ ಒಪ್ಪಿಕೊಳ್ಳಬಹುದಾದ ರೀತಿಯಲ್ಲಿ ಪ್ರಸ್ತುತ ಪಡಿಸಿದ್ದಾರೆ. ಅಧಿಕಾರದ ಮೆಟ್ಟಲೇರುವ ಹೊತ್ತಲ್ಲಿ ಆದ ಸಣ್ಣ ಸಣ್ಣ ತಪ್ಪುಗಳು ಮುಂದೆ ಯಾವ ರೀತಿ ಯುಡಿಯೂರಪ್ಪ ಅವರನ್ನ ಕಾಡತೊಡಗಿತು, ಯಾವ ರೀತಿ ಹೈಕಮಾಂಡ್ ನ ನಡೆಗಳು ಯಡಿಯೂರಪ್ಪ ಅವರನ್ನ ತಪ್ಪು ದಾರಿ ಹಿಡಿಯುವಂತೆ ಪ್ರೇರೇಪಿಸಿತು ಅನ್ನೋದರ ಸ್ಪಷ್ಟ ಚಿತ್ರಣ ಕೊಡುತ್ತಾ ಹೋಗುತ್ತಾರೆ. ಆಪರೇಶನ್ ಕಮಲ, ರೆಡ್ಡಿಗಳ ದರ್ಪ, ಸುಷ್ಮಾರವರ ಮಾತುಗಳು, ಅನಂತ್ ಕುಮಾರರ ಒಳಸಂಚು ಹೀಗೆ…ಏಕಾಂಗಿತನವನ್ನ ಅನುಭವಿಸಿದ ಯಡಿಯೂರಪ್ಪನವರು ಎಡವಿದರು ಅಂದರು. ಇದೆಲ್ಲವನ್ನೂ ಒಪ್ಪೋಣ ಆದರೆ ಸ್ವಲ್ಪ ಹಿಂದಿನದನ್ನು ಮೆಲುಕು ಹಾಕಿದರೆ ಇದೇ ಪ್ರತಾಪ್ ಸಿಂಹ ಅವರು ಯಡಿಯೂರಪ್ಪ ಅವರನ್ನ ತಮ್ಮ ಎರಡು ಮೂರು ಲೇಖನದಲ್ಲಿ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದರು…( ೨೦೦೮ ರ ಲೇಖನಗಳು.. ಅವರ ಬ್ಲಾಗ್ ನಲ್ಲಿ ಈಗಲೂ ಲಭ್ಯವಿದೆ) ವರ್ಗಾವಣೆಯ ಕುರಿತಾಗಿ, ನಿವೃತ್ತಿ ವಯಸ್ಸನ್ನು ಏರಿಸಿದ್ದುದರ ಕುರಿತಾಗಿ ಹೀಗೆ ಹಲವು ವಿಷಯಗಳಲ್ಲಿ ನೇರವಾಗಿ ದೋಷಾರೋಪಣೆ ಮಾಡಿದ್ದ ಪ್ರತಾಪರಿಗೆ ಈಗ ಯುಡಿಯೂರಪ್ಪನವರ ತಪ್ಪುಗಳು ಕೂಡ ಬಿಜೆಪಿಯ ಸೋಲಿಗೆ ಒಂದು ಕಾರಣ ಅಂತನ್ನಿಸದೇ ಇರೋದು ನನಗೇಕೋ ಸರಿ ಅನ್ನಿಸಲಿಲ್ಲ. ಯಡಿಯೂರಪ್ಪನವರ ಪುತ್ರ ಪ್ರೇಮದ ಬಗ್ಗೆ ಟೀಕಿಸಿದ್ದ ಪ್ರತಾಪರು ಯಾಕೋ ಇಲ್ಲಿ ಅದನ್ನ ಉಲ್ಲೇಖಿಸಲಿಲ್ಲ. ಬಿಜೆಪಿಯಿಂದ ಹೊರ ಬಂದ ಮೇಲೆ ಯಡಿಯೂರಪ್ಪನವರ ನಡೆಯ ಬಗೆಗೆ ಯಾವುದೇ ರೀತಿಯ ಮಾತುಗಳನ್ನಾಡದೇ “ಬಿಜೆಪಿ” ಯಡಿಯೂರಪ್ಪನವರ ಬಳಿ ಹೋಗಿ ಅವರನ್ನ ಕರೆತರುವ ಪ್ರಯತ್ನ ಮಾಡಬೇಕು ಅಂದರು.

ಮತ್ತಷ್ಟು ಓದು »

7
ಜೂನ್

ಶಿವ ನಾನು, ಶಿವ ನಾನು!

Shankaraacharya1ಈ ಬರಹವು ’ಎಲ್ಲರ ಕನ್ನಡ ‘ ದಲ್ಲಿದೆ.ಎಲ್ಲರ ದನಿಗೂ ವೇದಿಕೆಯಾಗುವ ನಿಲುಮೆಯ ಎಂದಿನ ನಿಲುವಿನಂತೆ ಈ ಲೇಖನವನ್ನು “ನಿಲುಮೆ” ಪ್ರಕಟಿಸುತ್ತಿದೆ.ಆದರೆ ವಿಷಯಗಳು ಸಾಮಾನ್ಯ ಕನ್ನಡಿಗರಿಗೆ ತಲುಪಬೇಕೆಂದರೆ ವಿಷಯ ಸಾಮಾನ್ಯ ಕನ್ನಡದಲ್ಲಿದ್ದರೆ ಒಳಿತಾದ್ದರಿಂದ ಪ್ರಚಲಿತ ಬಳಕೆಯಲ್ಲಿರುವ ಕನ್ನಡದ ಲೇಖನಗಳನ್ನು ಅಪೇಕ್ಷಿಸುತ್ತದೆ.

– ಕಿರಣ್ ಬಾಟ್ನಿ

{ಇತ್ತೀಚೆಗೆ ಜಾತಿಗಳ ಬಗೆಗಿನ ಚರ‍್ಚೆ ಹಾದಿ ತಪ್ಪುತ್ತಿದೆ ಎಂದು ನನ್ನ ಅನಿಸಿಕೆ. ಒಂದು ಕಡೆ ’ಬಲಗಡೆ’ಯವರಲ್ಲಿ ಮುಂಚೂಣಿಯಲ್ಲಿದ್ದಾರೆ ಎನಿಸಿಕೊಂಡವರು ಬಾರತದಲ್ಲಿ ಜಾತಿಯೇರ‍್ಪಾಡೆಂಬುದೇ ಇಲ್ಲ ಎಂದು ವಾದಿಸಿ ಆ ಮೂಲಕ ಕೂಡಣಮಾರ‍್ಪಿಗೆ ಅರ‍್ತವೇ ಇಲ್ಲವೆಂಬ ಅನಿಸಿಕೆಯನ್ನು ಬಿತ್ತುತ್ತಿದ್ದಾರೆ. ಇನ್ನೊಂದು ಕಡೆ ’ಎಡಗಡೆ’ಯವರಲ್ಲಿ ಜಾತಿಯೇರ‍್ಪಾಡಿನ ಕೆಡುಕುಗಳ ಬಗ್ಗೆ ಹಾಡಿ ಗೋಳಾಡುವುದೇ ಒಂದು ಕಸುಬಾಗಿ ಬಿಟ್ಟಿರುವುದರಿಂದ ಅವರಿಂದ ಕೂಡಣಮಾರ‍್ಪಿನ ನಿಟ್ಟನ್ನು ಬಯಸುವುದೇ ತಪ್ಪೆಂಬಂತಿದೆ. ಇನ್ನು ಇವೆರಡು ಗುಂಪುಗಳು ಅರಿವನ್ನು ಹಂಚಿಕೊಳ್ಳುವುದಂತೂ ದೂರದ ಮಾತು.

ಇವೆರಡರ ನಡುವಿನ ಹಾದಿಯೊಂದನ್ನು ನಾವು ಕಂಡುಕೊಳ್ಳದೆ ಹೋದರೆ ಒಟ್ಟಾರೆಯಾಗಿ ಕನ್ನಡಿಗರಿಗೆ ಏಳಿಗೆಯಿಲ್ಲ ಎಂಬ ನಂಬಿಕೆ ನನ್ನಲ್ಲಿ ಬಹಳ ಗಟ್ಟಿಯಾಗಿದೆ. ’ಎಲ್ಲರಕನ್ನಡ’ವನ್ನು ನಾನು ಒಪ್ಪಿ ಅದನ್ನೇ ಬಳಸುವ ಹಟ ಹಿಡಿದಿರುವುದಕ್ಕೆ ಈ ನಂಬಿಕೆ ಒಂದು ಮುಕ್ಯವಾದ ಕಾರಣ. ಹುಟ್ಟಿನಿಂದ ಮಾದ್ವ ಬ್ರಾಮಣ ಜಾತಿಗೆ ಸೇರಿದ ನಾನು ಈ ನಡುಹಾದಿಯಲ್ಲಿ ನಡೆಯುವಾಗ ಸಂಸ್ಕ್ರುತದಲ್ಲಿ ಈಗಾಗಲೇ ಇರುವ ಮತ್ತು ಕನ್ನಡದ ಕೂಡಣವನ್ನು ಒಡೆಯದೆ ಅದನ್ನು ಇಡಿಯಾಗಿ ಆದ್ಯಾತ್ಮಿಕ ಎತ್ತರಕ್ಕೊಯ್ಯುವಂತಹ ಅರಿವನ್ನು ನನ್ನ ಕಯ್ಲಾದಶ್ಟು ಎಲ್ಲರಕನ್ನಡಕ್ಕೆ ತರಬೇಕಾದುದು ನನ್ನ ಕರ‍್ತವ್ಯವೆಂದೇ ತಿಳಿದುಕೊಂಡಿದ್ದೇನೆ.

ಇಲ್ಲಿ ಬಹಳ ಚಿಕ್ಕದಾದ ಅಂತಹ ಒಂದು ಮೊಗಸನ್ನು ಮಾಡಿದ್ದೇನೆ. ಎಲ್ಲರಕನ್ನಡದಲ್ಲಿ ಹೀಗೆ ಗೇದರೆ ಬ್ರಾಮಣರು ಜಾತಿಯೇರ‍್ಪಾಡನ್ನು ಕೆಡವಲು ನೆರವಾಗಬಹುದು ಮತ್ತು ಬ್ರಾಮಣಿಕೆಯನ್ನು ಒಂದು ಜಾತಿಯಂತೆ ಕಾಣುವುದನ್ನು ನಿಲ್ಲಿಸಿ ಹಿಂದಿನ ಬ್ರಾಮಣರು ಮಾಡಿದ ಕೆಲಸದಲ್ಲಿ ನಿಜವಾಗಲೂ ಉಳಿಸಿಕೊಳ್ಳತಕ್ಕುದನ್ನು ಉಳಿಸಿಕೊಂಡು ಆ ಮೂಲಕ ಕೂಡಣಕ್ಕೆ ನೆರವಾಗಬಹುದು. ಇದನ್ನು ಎಶ್ಟು ಸಾರಿ ಕೂಗಿ ಹೇಳಿದರೂ ಸಾಲದು. – ಕಿ. ಬಾ.}

ಮತ್ತಷ್ಟು ಓದು »

5
ಜೂನ್

ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ

– ರಾಕೇಶ್ ಶೆಟ್ಟಿ

chini yuddhaಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.

ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್  ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.

ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).

ಮತ್ತಷ್ಟು ಓದು »

4
ಜೂನ್

ಸಂಶೋಧನೆಯ ದಾರಿಯನ್ನು ಯಾರು ನಿರ್ಧರಿಸಬೇಕು?

  ಪ್ರೊ.ರಾಜಾರಾಮ ಹೆಗಡೆ

{20-5-2013 ಕನ್ನಡ ಪ್ರಭದಲ್ಲಿ ವರದಿಯಾದಂತೆ ಡಾ. ಎಂ.ಎಂimages. ಕಲ್ಬುರ್ಗಿಯವರು ಬಸವಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಕುವೆಂಪು ವಿಶ್ವವಿದ್ಯಾನಿಲಯದ ಸಂಶೋಧಕರ ಕುರಿತು ಆಡಿದ ಮಾತಿಗೆ ಈ ಪ್ರತಿಕ್ರಿಯೆ.}

“ವಚನ ಚಳುವಳಿಯ ಚರ್ಚೆಯಲ್ಲಿ ಪ್ರಜಾವಾಣಿ ಪತ್ರಿಕೆಯು ಒಂದು ಪಕ್ಷದವರ ನಿಲುವುಗಳನ್ನು ಹೆಚ್ಚಾಗಿ ಬೆಂಬಲಿಸಿ ಈಗ ಚರ್ಚೆಯನ್ನು ಸಂಪೂರ್ಣವಾಗಿ ಆ ಪತ್ರಿಕೆಯು ನಿಲ್ಲಿಸಿಯಾಗಿದೆ. ಆದರೆ ಆ ಚರ್ಚೆಯ ಪರಿಣಾಮಗಳು ಗಾಢವಾಗಿವೆ ಎಂಬುದು ಸ್ಪಷ್ಟ. ಹಲವಾರು ಪ್ರಗತಿಪರ ಸಂಘಟನೆಗಳು ನಮ್ಮ ಸಂಶೋಧನಾ ಕೇಂದ್ರವನ್ನು ಮತ್ತು ಸಂಶೋಧನೆಯನ್ನು ನಿಲ್ಲಿಸುವಂತೆ ಸರ್ಕಾರದ ಮಟ್ಟದಲ್ಲಿ, ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಬೀರುತ್ತಾ ಒತ್ತಡ ತರುತ್ತಿವೆ. ಇಂತಹ ಸಮಯದಲ್ಲಿ ಬಸವಶ್ರೀ ಪ್ರಶಸ್ತಿ ಪಡೆದ ಎಂ.ಎಂ.ಕಲಬುರ್ಗಿಯವರು ವಿಕೃತ ಸಂಶೋಧನೆಯನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳ ಮುಂದೆ ಅಲವತ್ತುಕೊಂಡಿರುವುದು ಹಲವಾರು ಪತ್ರಿಕೆಗಳಲ್ಲಿ ಪಕ್ರಟವಾಗಿದೆ. ಅವರ ಕೋರಿಕೆಗೆ ಕೆಲವಾದರೂ ಪರಿಣಾಮಗಳು ಇದ್ದೇ ಇರುತ್ತವೆ. ಕನ್ನಡಪ್ರಭದಲ್ಲಿ ಪ್ರಕಟವಾದ ಅವರ ಅಂಬೋಣಕ್ಕೆ ಪ್ರತಿಕ್ರಿಯೆಯಾಗಿ ಈ ಲೇಖನವನ್ನು ಬರೆದು ಕನ್ನಡಪ್ರಭ ಪತ್ರಿಕೆಗೆ ಕಳುಹಿಸಲಾಗಿತ್ತು. ಆದರೆ ಪ್ರಕಟವಾಗಿಲ್ಲ.”

ವಿಶ್ವವಿದ್ಯಾನಿಲಯದ ಸಿಂಡಿಕೇಟು ಸದಸದ್ಯರು ಈ ಅಧ್ಯಾಪಕರಿಗೆ ಎಚ್ಚರಿಕೆ ನೀಡಬೇಕೆಂದು ಅವರು ಕರೆಕೊಟ್ಟಿದ್ದಾರೆ. ಅದೇ ಭಾಷಣದಲ್ಲಿ ಅವರು ವಚನಗಳ ಕುರಿತು ಕುವೆಂಪು ವಿಶ್ವವಿದ್ಯಾಲಯದ ಸಂಶೋಧಕರು ನಡೆಸುತ್ತಿರುವುದು ವಿಕೃತ ಸಂಶೋಧನೆ, ಅದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೂ ಕೇಳಿಕೊಂಡಿದ್ದಾರೆ ಎಂಬುದನ್ನು ಇತರ ಪತ್ರಿಕೆಗಳೂ ಪ್ರಕಟಿಸಿವೆ.

ಕನ್ನಡ ಸಾರಸ್ವತ ಲೋಕದಲ್ಲಿ ಕಲಬುರ್ಗಿಯವರನ್ನು ಸಂಶೋಧಕರು ಎಂದೇ ಗುರುತಿಸಲಾಗುತ್ತದೆ. ಅವರು ಹಂಪಿ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದಾರೆ. ಅದಕ್ಕಿಂತ ಸ್ವತಃ ಅವರೇ ತಮ್ಮ ಮಾರ್ಗ 2 ಸಂಪುಟದಲ್ಲಿನ ಲೇಖನವೊಂದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ಎದುರಿಸಬೇಕಾದ ಪರಿಸ್ಥಿತಿ ಕೂಡ ಒಮ್ಮೆ ಬಂದಿತ್ತು. ಆಗ ಅಭಿಪ್ರಾಯ ಸ್ವಾತಂತ್ರ್ಯದ ಮೌಲ್ಯ ಅವರಿಗೆ ರಕ್ಷಣೆಯಾಗಿ ಬಂದಿತ್ತು. ಆದರೆ ಈಗ ಒಂದು ವಿಪರ್ಯಾಸವನ್ನು ನೋಡುತ್ತಿದ್ದೇವೆ. ನಮ್ಮ ಶಿಕ್ಷಣ ವ್ಯವಸ್ಥೆಯು ಸಂಶೋಧಕನೊಬ್ಬನಿಗೆ ನೀಡುವ ಯಾವ ಭರವಸೆಯು ಕಲಬುರ್ಗಿಯವರ ಸಂಶೋಧನೆಯನ್ನು ಸಾಧ್ಯ ಮಾಡಿತೊ ಹಾಗೂ ಅದರ ಹೆಸರಿನಲ್ಲಿ ಎದ್ದ ವಿವಾದಗಳಿಗೆ ಎದುರಾಗಿ ಅವರನ್ನು ರಕ್ಷಿಸಿತೊ ಅದು ಮುಂದಿನ ತಲೆಮಾರಿನ ಸಂಶೋಧಕರಿಗೆ ಬೇಡ ಎಂಬ ಅಭಿಪ್ರಾಯಕ್ಕೆ ಅವರು ಬಂದಂತಿದೆ. ಅಥವಾ ಅವರು ಈಗ ಸಂಶೋಧನೆಗೆ ಬೇರೆಯದೇ ಆದ ಅರ್ಥ ಹಚ್ಚುತ್ತಿರಲೂಬಹುದು

ಮತ್ತಷ್ಟು ಓದು »

3
ಜೂನ್

ಗಾಂಧಿ ಕ್ಲಾಸು: ಸೃಜನಶೀಲ ಬದುಕಿನ ವಿಭಿನ್ನ ಮುಖಗಳು

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

Gaandhi Clasu‘ಬದುಕು ನನ್ನನ್ನು ರೂಪಿಸಿತೋ, ನಾನೇ ನನ್ನ ಬದುಕನ್ನು ಹೀಗೆ ರೂಪಿಸಿಕೊಂಡೆನೋ ಆದರೆ ಒಂದಂತೂ ಸತ್ಯ ನನ್ನೀ ಬದುಕು ನನ್ನ ಪ್ರಾರಬ್ಧ ಮತ್ತು ಸವಾಲಿನದು. ನಾನು ಬಾಲ್ಯವನ್ನಾಗಲೀ ಹದಿಹರೆಯದ ದಿನಗಳನ್ನಾಗಲೀ ಉತ್ಕಟವಾಗಿ ಎಲ್ಲರಂತೆ ಅನುಭವಿಸುವುದು ಆಗಲೇ ಇಲ್ಲ. ದುರ್ಬರ ಬದುಕು ಅದಕ್ಕೆ ಆಸ್ಪದ ಮಾಡಿಕೊಡಲೇ ಇಲ್ಲ. ಬಾಲ್ಯದ, ಹದಿಹರೆಯದ ಅನುಭವಗಳಿಗೆ ಅಕ್ಷರ ರೂಪ ಕೊಡುವಾಗ ನನ್ನ ಕಣ್ಣುಗಳು ಒದ್ದೆಯಾಗಿರುವುದೂ ಉಂಟು. ಹಿಂಬಾಲಿಸುತ್ತಲೇ ಇದ್ದ ಆತಂಕ, ಅನಿಶ್ಚಿತತೆಗಳನ್ನು ನಿರಾಸೆಗೊಳಿಸಿ ಬದುಕು ಅರವತ್ತರ ಹೊಸ್ತಿಲ ಬಳಿ ತಂದು ನಿಲ್ಲಿಸಿರುವುದು ಪವಾಡವೇ ಸರಿ.’ ಈ ಸಾಲುಗಳು ಇತ್ತೀಚಿಗೆ ನಾನು ಓದಿದ ‘ಗಾಂಧಿ ಕ್ಲಾಸು’ ಪುಸ್ತಕದಿಂದ ಹೆಕ್ಕಿ ತೆಗೆದವುಗಳು.

‘ಗಾಂಧಿ ಕ್ಲಾಸು’ ಕನ್ನಡದ ಖ್ಯಾತ ಬರಹಗಾರ ಕುಂವೀ ಎಂದೇ ಹೆಸರಾದ ಕುಂಬಾರ ವೀರಭದ್ರಪ್ಪನವರ ಆತ್ಮಕಥನ. ಕುಂವೀ ನಾನು ಮೆಚ್ಚುವ ಹಾಗೂ ಅತಿಯಾಗಿ ಹಚ್ಚಿಕೊಂಡಿರುವ ಲೇಖಕರಲ್ಲೊಬ್ಬರು. ಅವರ ಆತ್ಮಕಥನ ಪ್ರಕಟವಾಗಿದೆ ಎಂದು ಗೊತ್ತಾದದ್ದೆ ತಡ ಓದಲೇ ಬೇಕೆನ್ನುವ ಉತ್ಕಟ ಆಸೆ ಪುಸ್ತಕವನ್ನು ಹುಡುಕಿಕೊಂಡು ಹೋಗಿ ಖರೀದಿಸಿ0iÉುೀ ಬಿಟ್ಟಿತು. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ಕುಂ.ವೀರಭದ್ರಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕೆಲಸ ಮಾಡಿ 2009ರಲ್ಲಿ ನಿವೃತ್ತರಾಗಿರುವರು. ನೂರಾರು ಕಥೆಗಳನ್ನು ಬರೆದಿರುವ ಇವರು ಕಾದಂಬರಿಗಳು ಮತ್ತು ಜೀವನ ಚರಿತ್ರೆಗಳನ್ನು ಬರೆದು ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿರುವರು. ಅವರ ಅನೇಕ ಕಥೆಗಳು ಹಾಗೂ ಕಾದಂಬರಿಗಳು ಸಿನಿಮಾಗಳಾಗಿ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಳ್ಳುವುದರ ಜೊತೆಗೆ ಶ್ರೀಯುತರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳೂ ಸಂಧಿವೆ. ಅದು ಕಥೆ ಇರಲಿ, ಕಾದಂಬರಿಯಾಗಲಿ, ಜೀವನ ಚರಿತ್ರೆ ಇರಲಿ ಪ್ರತಿಯೊಂದರಲ್ಲಿ ಕುಂವೀ ಶೈಲಿ ತನ್ನ ಛಾಪು ಮೂಡಿಸಿ ಓದುಗರನ್ನು ಮಂತ್ರ ಮುಗ್ಧರನ್ನಾಗಿಸುತ್ತದೆ. ತಮ್ಮ ಕೃತಿಗಳ ಓದಿಗಾಗಿ ಓದುಗರ ಒಂದು ವಲಯವನ್ನೇ ಸೃಷ್ಟಿಸಿಕೊಂಡಿರುವ ವಿಶಿಷ್ಟ ಬರಹಗಾರ ಕುಂವೀ. ಹಲವು ದಶಕಗಳಿಂದ ಕನ್ನಡದ ಸಾಹಿತ್ಯಾಸಕ್ತರನ್ನು ಕಾಡುತ್ತಲೇ ಬಂದಿರುವ ಈ ಲೇಖಕನ ವೈಯಕ್ತಿಕ ಬದುಕು ಹೇಗಿರಬಹುದೆಂಬ ಕುತೂಹಲ ನನ್ನದಾಗಿತ್ತು. ‘ಗಾಂಧಿ ಕ್ಲಾಸು’ ಆ ಕೃತಿ ಕೈಯಲ್ಲಿ ಹಿಡಿದ ಘಳಿಗೆ ಅದು ಹೇಗೆ ಸಮಯ ಸರಿದು ಹೋಯಿತು ಎಂದು ಅರಿವಿಗೆ ಬರದಂತೆ ಆರು ದಶಕಗಳ ಕುಂವೀ ಬದುಕು ಕಣ್ಣೆದುರು ಅನಾವರಣಗೊಂಡಿತು.

ಮತ್ತಷ್ಟು ಓದು »