ವಿಷಯದ ವಿವರಗಳಿಗೆ ದಾಟಿರಿ

Archive for

22
ಜುಲೈ

ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’

–  ರಾಕೇಶ್ ಶೆಟ್ಟಿ

NaModiಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.

೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!

ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,

ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”

ಮತ್ತಷ್ಟು ಓದು »

22
ಜುಲೈ

ಅನ್ನ ಭಾಗ್ಯದ ಮುಂದೆ ಇನ್ನು ಭಾಗ್ಯವುಂಟೆ?

– ತುರುವೇಕೆರೆ ಪ್ರಸಾದ್

dantavillada_kathegalu_nilumeಉಡುಪಿ ಕೃಷ್ಣನ ದರ್ಶನಕ್ಕೆ ಕನಕನ ಕಿಂಡೀಲಿ ಭಕ್ತರು ಕಾದಿದ್ದಂತೆ, ಕೃಷ್ಣಾ ಮುಂದೆ ಬೆಳಗಿನ ಥಂಡೀಲಿ ಸಾವಿರಾರು ಜನ ಸಿಎಂ ಸಾಹೇಬ್ರ  ದರ್ಶನಕ್ಕೆ ಕಾದಿದ್ರು. ಅಂತೂ ಸಿಎಂ ಸಾಹೇಬ್ರು ಕಾರಿಳಿದು ಸರ ಸರ ಬಂದ್ರು. ಅವರದ್ದೇ ಪಕ್ಷದ ಎಮ್ಮೆಲ್ಯೆ ಓಡಿ ಬಂದು ಒಂದು ಅರ್ಜಿ ಕೊಟ್ರು:

‘ಏನ್ರೀ ಇದು? ಟ್ರಾನ್ಸ್‍ಫರ್ ಕ್ಯಾನ್ಸಲೇಶನ್‍ಗೆ ಅರ್ಜಿ ಕೊಟ್ಟಿದೀರಿ?’

‘ ನನ್ನ ಕ್ಷೇತ್ರದಲ್ಲಿ  ಇದ್ದ ಬದ್ದ  ಆಫೀಸರ್‍ಗಳನ್ನೆಲ್ಲಾ ಎತ್ತಂಗಡಿ ಮಾಡಿದೀರಿ.ಎಲೆಕ್ಷನ್‍ನಲ್ಲಿ ನಮ್ ಕೈ ಬಲಪಡಿಸೋಕೆ ಎಷ್ಟೆಲ್ಲಾ ದುಡ್ದಿದಾರೆ. ಒಂದಿಷ್ಟು  ಕೈ ಬಿಸಿ ಮಾಡ್ಕೊಳಾದು ಬೇಡ್ವಾ? ಅಷ್ಟರಲ್ಲೇ ಎಲ್ಲರನ್ನ ಎತ್ತಂಗಡಿ ಮಾಡುದ್ರೆ ಹೇಗೆ?  ಎಲ್ಲರನ್ನ ವಾಪಸ್ ಹಾಕುಸ್ಕೊಡಬೇಕು’

‘ಸರಿ! ನೋಡೋಣ ನಡೀರಿ, ನೆಕ್ಸ್ಟ್..!’ ಒಬ್ಬ ಹುಡುಗ ಒಂದು ಅರ್ಜಿ ಹಿಡ್ಕಂಡು ಬಂದ.

ಮತ್ತಷ್ಟು ಓದು »