ಗುಂಡಿಗೆ ಎದೆ ಕೊಟ್ಟವ ೧೩ರ ಪೋರ..!
– ರಾಕೇಶ್ ಶೆಟ್ಟಿ
ಸರಿಯಾಗಿ ಇಂದಿಗೆ ೬೯ ವರ್ಶದ ಹಿಂದಿನ,ಅಂದು ಆಗಸ್ಟ್ ೧೫ ,೧೯೪೨ನೆ ಇಸವಿ. ಆಗಿನ್ನೂ ಹುಬ್ಬಳಿಯ ಆಗಸದಲ್ಲಿ ಸ್ವಾತಂತ್ರ್ಯದ ಸೂರ್ಯ ಉದಯಿಸಿದ್ದ.ಹಕ್ಕಿಗಳ ಕಲರವದ ನಡುವೆ , ದುರ್ಗದ ಬಯಲಿನಲ್ಲಿ ‘ವಂದೇ ಮಾತರಂ’ ‘ಭಾರತ ಮಾತಾಕಿ ಜೈ’ ಘೋಷಣೆಗಳು ಮೊಳಗುತಿದ್ದವು. ಅಕ್ಕ ಪಕ್ಕದ ಮನೆಯ ಮಕ್ಕಳೆಲ್ಲ ಆಟವಾಡುತಿದ್ದರೆ ಅವನು ಮಾತ್ರ ಬೆಳಿಗ್ಗೆ ಬೇಗ ಎದ್ದು, ಶ್ವೇತವರ್ಣದ ಜುಬ್ಬಾ-ಪೈಜಾಮ ಧರಿಸಿ, ತನಗಿಂತಲೂ ಎತ್ತರವಿದ್ದ ಒಂದು ಬೊಂಬಿಗೆ ‘ತ್ರಿವರ್ಣ ಧ್ವಜ’ ಕಟ್ಟಿಕೊಂಡವನೇ ಮಲಗಿದ್ದ ತಾಯಿಯ ಬಳಿ ಹೋಗಿ ಅವಳನ್ನು ಎಬ್ಬಿಸಿ ಆಶೀರ್ವದಿಸುವಂತೆ ಕೇಳಿದ. ಶ್ವೇತ ವಸ್ತ್ರಧಾರಿಯಾಗಿ ‘ತ್ರಿವರ್ಣ ಧ್ವಜ’ವನ್ನಿಡಿದ ಮಗನನ್ನು ನೋಡಿ,
ಆ ತಾಯಿ ಕೇಳಿದಳು “ಎಲ್ಲಿ ಹೊರಟೆ ಮಗು?”
“ಅಮ್ಮ , ನಾನು ದುರ್ಗದ ಬಯಲಿನಲ್ಲಿ ನಡೆಯುತ್ತಿರುವ ‘ಕ್ವಿಟ್ ಇಂಡಿಯಾ ಚಳುವಳಿ’ಯಲ್ಲಿ ಪಾಲ್ಗೊಳ್ಳಲು ಹೊರಟಿದ್ದೇನೆ”
“ಆದರೆ ಮಗು, ಅಲ್ಲಿ ಹಿರಿಯರೇ ಇರುತ್ತಾರೆ ಕಣೋ!”
ಮತ್ತಷ್ಟು ಓದು 




