ವಿಷಯದ ವಿವರಗಳಿಗೆ ದಾಟಿರಿ

Archive for

20
ಸೆಪ್ಟೆಂ

ಅಭಿವ್ಯಕ್ತಿ ಸ್ವಾತಂತ್ರ್ಯ ಅನ್ನುವುದು ಯಾರ ಸ್ವತ್ತು ಅನಂತ ಮೂರ್ತಿಗಳೇ?

– ನವೀನ್ ನಾಯಕ್

URAಮೊನ್ನೆ ಮೊನ್ನೆ ನಡೆದ ಒಂದು ಕಾರ್ಯಕ್ರಮದಲ್ಲಿ ಅನಂತ ಮೂರ್ತಿಯವರು ” ನರೇಂದ್ರ ಮೋದಿ ಪ್ರಧಾನಿಯಾಗುವ ದೇಶದಲ್ಲಿ ನಾನು ಬದುಕಿರಲು ಇಷ್ಟಪಡುವುದಿಲ್ಲ ” ಎಂಬ ಹೇಳಿಕೆ ನೀಡಿ ಮೋದಿ ಅಭಿಮಾನಿಗಳ ವಿರೋಧಕ್ಕೆ ಗುರಿಯಾಗಿದ್ದರು.ತದನಂತರ ನಡೆದ ಸಂದರ್ಶನದಲ್ಲಿ ಅನಂತ ಮೂರ್ತಿಯವರು ” ಮೋದಿ ಪ್ರಧಾನಿಯಾಗಬಾರದೆಂದು ” ಎಂಬ ಉದ್ದೇಶದಿಂದ ಹಾಗೆ ಹೇಳಿದೆ. ಯೌವನದಲ್ಲಿಯಾಗಿದ್ದರೆ ಮೋದಿ ಪ್ರಧಾನಿಯಾಗಗೊಡವುದಿಲ್ಲ ಅಂತ ಹೇಳುತ್ತಿದ್ದೆ ಈಗ ವಯಸ್ಸಾಗಿದೆ ಅದಕ್ಕೆ ಹಾಗೆ ಹೇಳಿದೆ,ನನ್ನ ನಿಲುವೊಂದೆ ಮೋದಿ ಈ ದೇಶದ ಪ್ರಧಾನಿಯಾಗಬಾರದು. ಇದರರ್ಥ ಮೋದಿ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆಂದು ಅರ್ಥವಲ್ಲ ವೆಂದು ಸಮಜಾಯಿಸಿ ನೀಡಿದರು.

ಹಾಗೆ ಮೋದಿ ಅಭಿಮಾನಿಗಳು ನೀಡುತ್ತಿರುವ ಉತ್ತರ ಮತ್ತು ಅವರು ಪ್ರತಿಕ್ರಿಯಿಸುತ್ತಿರುವ ರೀತಿ ನೋಡಿದರೆ ಅಧಿಕಾರವಿಲ್ಲದೇನೇ ಹೀಗೆ ಇನ್ನು ಮೋದಿ ಅಧಿಕಾರವಹಿಸಿಕೊಂಡ ಮೇಲೆ ಅಭಿವ್ಯಕ್ತಿ ಸ್ವಾತಂತ್ರ್ಯಇರೋದೇ ಇಲ್ಲ,  ಇದು ನಿಜವಾದ ಅಪಾಯವೆಂದಿದ್ದಾರೆ. ಅದೇ ಸಂದರ್ಶನದಲ್ಲಿ ಪ್ರಜಾಪ್ರಭುತ್ವವಾದಿಗೆ ಪ್ರಜಾಪ್ರಭುತ್ವವನ್ನು  ಸಂಶಯದಿಂದ ನೋಡುವ ಶಕ್ತಿಯಿರಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳನ್ನು ಮರುಳು ಮಾಡುವ ವಿಧಾನದಿಂದ ಆಯ್ಕೆಯಾಗಿ ಬರುವವರನ್ನು ವಿರೋಧಿಸುವ ಗುಣವನ್ನು ಬೆಳೆಸಿಕೊಳ್ಳಬೇಕು.

ಅನಂತ ಮೂರ್ತಿಯವರಿಗೆ ಮಾತ್ರವೇ ಅಥವಾ ಅವರನ್ನು ಬೆಂಬಲಿಸುವವರಿಗೆ ಮಾತ್ರವೇ ಇರುವುದಾ ಆಭಿವ್ಯಕ್ತಿ ಸ್ವಾತಂತ್ರ್ಯ? ಇಲ್ಲಿ ಒಬ್ಬರ ಉದ್ದೇಶ ಮಾತ್ರ ಸ್ಪಷ್ಟಪಡಿಸಿಕೊಂಡರೆ ಅದು ಫ್ಯಾಸಿಸ್ಷ್ ಧೋರಣೆಯಾಗುತ್ತದೆ. ಕೇವಲ ಅನಂತಮೂರ್ತಿಯವರ ಹೇಳಿಕೆಗೆ ಅಥವ ಅವರನ್ನು ಸಮರ್ಥಿಸುವ ಹಿಂಬಾಲಕರಿಗೆ ಮಾತ್ರವಾ ಹಿಂದೆ ಉದ್ದೇಶವಿರುವುದು. ಆ ಹೇಳಿಕೆಯನ್ನು ಟೀಕಿಸುವವರಿಗೆ ಉದ್ದೇಶವಿಲ್ಲವೇ. ಅನಂತಮೂರ್ತಿಯವರು ನಾನು ಮೋದಿ ಪ್ರಧಾನಿಯಾದರೆ ಬದುಕಿರಲು ಇಷ್ಟಪಡುವುದಿಲ್ಲ ಎಂಬ ಹೇಳಿಕೆಗೆ ಅದಕ್ಕೆ ವಿರೋಧವಾಗಿ ನೀವು ಸಾಯಿರಿ ಎಂಬ ಹೇಳಿಕೆಯನ್ನು ಮೋದಿ ಅಭಿಮಾನಿಗಳು ಕೊಟ್ಟಿದ್ದಾರೆ. ಇಲ್ಲಿ ಮೋದಿ ಅಭಿಮಾನಿಗಳು ಕತ್ತಿ  ಕುಡಾರಿ ಹಿಡಿದುಕೊಂಡು ಅನಂತಮೂರ್ತಿಯವರ ಹಿಂದೆ ಬಿದ್ದಿದ್ದಾರಾ, ಇಲ್ಲವಲ್ಲ. ಅವರ ಹೇಳಿಕೆಗೆ ಇದು ವಿರೋಧವಾಗುತ್ತೆ ವಿನಃ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲ. ಹೇಳಿಕೆಯ ಹಿಂದಿರುವ ಉದ್ದೇಶ ಎರಡೂ ಕಡೆ ಗಮನಿಸುವುದು ಉತ್ತಮ.

ಮತ್ತಷ್ಟು ಓದು »