ವಿಷಯದ ವಿವರಗಳಿಗೆ ದಾಟಿರಿ

Archive for

23
ಸೆಪ್ಟೆಂ

ವಿರೋಧಿಗಳೆಸೆದ ಕಲ್ಲನ್ನೇ ತನ್ನ ಏಳಿಗೆಯ ಮೆಟ್ಟಿಲಾಗಿಸಿಕೊಂಡ ಮೋದಿ

– ಪ್ರಸನ್ನ  ಬೆಂಗಳೂರು

NaModiಭಾರತದ ರಾಜಕೀಯ ಇತಿಹಾಸದಲ್ಲಿ ೧೦ ವರ್ಷಗಳಿಗೂ ಹೆಚ್ಚು ಕಾಲ ವಿರೋಧ ಪಕ್ಷಗಳು,ಮಾಧ್ಯಮಗಳು,ಪ್ರಗತಿಪರರು ಟಾರ್ಗೆಟ್ ಮಾಡಿರುವುದು ನರೇಂದ್ರ ಮೋದಿಯವರನ್ನು . ಮೋದಿಯವನರನ್ನು  ಬಿಜೆಪಿ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಅವರ ಮೇಲಿನ ಹಿಂದಿನ ಆರೋಪಗಳ ಜೊತೆ ಜೊತೆಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ವಿಶ್ಲೇಷಣೆಗೊಳಪಡಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯಾದವರ ಬಗ್ಗೆ ಇಷ್ಟೊಂದು ವಿಶ್ಲೇಷಣೆ ವಿಮರ್ಶೆ ಪರೀಕ್ಷೆ ನಡೆದಿತ್ತೆ? ನಡೆದು ಅಂತಹ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಂದಿದ್ದರೆ ಬಹುಶಃ ಭಾರತವಿಂದು ಇಂತಹ ಪರಿಸ್ಥಿತಿಯಲ್ಲಿರುತ್ತಿರಲಿಲ್ಲ ಅಲ್ಲವೆ? ಮೋದಿ ಈ ಪರಿ ಬೆಳೆದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟವನಿಗೆ ಕಂಡದ್ದು ಈ ವಿಭಿನ್ನವಾದ ಆದರೆ ತೆರೆಮರೆಯ ಕಾರಣ.

ಅದು ತನ್ನ ಕುಕೃತ್ಯಕ್ಕೆ ತಾನೆ ಬಲಿಯಾದ ಆತನ ದ್ವೇಷ ವರ್ಗ.ಇವರ ದ್ವೇಷ,’ತನ್ನೊಡಲ ಬೆಂಕಿ ತನ್ನನ್ನಲ್ಲದೆ ಅನ್ಯರನ್ನು ಸುಡದು‘ ಎಂಬ ಜನಪ್ರಿಯ ವಚನದಂತೆ ದ್ವೇಷಿಗಳೇ ನಾಲಿಗೆ ಕಚ್ಚಿಕೊಳ್ಳುವಂತಾಗಿರುವುದು ಸುಳ್ಳಲ್ಲ. ತಾನು ವೈಭವೀಕರಿಸಿದ ಸುಳ್ಳು ತನಗೇ ತಿರುಗುಬಾಣವಾಗಿರುವುದು ಅವರ ಈಗಿನ ಬಡಬಡಿಕೆಗೆ ಕಾರಣವಾಗಿದೆ. ಈ ವರ್ಗ ಮೋದಿಯ ವಿರುದ್ದ ಮಾಡಿದ ಅಪಪ್ರಚಾರಗಳೇ ಅಪಚಾರಗಳೇ ಅವರಿಗೆ ಇಂದು ಮುಳುವಾಗಲು ಮೂಲ ಕಾರಣವೆಂದು ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲದಿದ್ದರೂ ಅದು ಸತ್ಯವಲ್ಲವೆಂದು ತಳ್ಳಿ ಹಾಕಲು ಅವರಿಗೆ ಸಾಧ್ಯವಾಗುವುದಿಲ್ಲ.

ಮೋದಿ ಮಾಡದ ತಪ್ಪಿಗೆ ಅವನನ್ನು ಹೊಣೆಗಾರನನ್ನಾಗಿಸುವ ಮೂಲಕ ಆತನ ಬೆಳವಣಿಗೆ ದಾರಿ ಮಾಡಿಕೊಟ್ಟದ್ದು ಹೇಗೆ?

ಮತ್ತಷ್ಟು ಓದು »