ವಿಷಯದ ವಿವರಗಳಿಗೆ ದಾಟಿರಿ

Archive for

11
ಆಕ್ಟೋ

ದಲಿತ ನಾಯಕರಿಗೆ ದಲಿತರ ಮೇಲೇಕಿಲ್ಲ ಕಾಳಜಿ?

 – ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

shindheರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿಯ ಮುನ್ನಾ ಎರಡು ದಿನಗಳಲ್ಲಿ ದೇಶದ ಗೃಹ ಮಂತ್ರಿಗಳು, ಕರ್ನಾಟಕದ ಮುಖ್ಯಮಂತ್ರಿಗಳು ಸೇರಿ ನಾಲ್ವರು ರಾಜಕಾರಣಿಗಳು ಇದ್ದಕ್ಕಿದ್ದಂತೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ, ಕಾಳಜಿ ರಕ್ಷಣೆಯ ಮಾತುಗಳನ್ನಾಡಿದ್ದಾರೆ. ಪ್ರಮುಖವಾಗಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಬೇಡಿ ಎಂದಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಪೊಲೀಸ್ನ ಹಾಲಿ ನಿರ್ದೇಶಕರಿಗೆ ಪತ್ರ ಬರೆದು ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ 2 ರಿಂದ 3 ಮಂದಿ ಮುಸ್ಲಿಂ ಸಿಬ್ಬಂದಿಗಳನ್ನು ನೇಮಿಸುವಂತೆ ಆದೇಶಿಸಿದ್ದಾರೆ. ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ಖಾತೆ ಪಡೆದಿರುವ ಕೆ. ರೆಹಮಾನ್ ಖಾನ್ ಕೂಡ ಮುಸ್ಲಿಂ ಯುವಕರನ್ನು ಬಂಧಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಇನ್ನು ಅಹಿಂದ ಹೋರಾಟದ ಹಿನ್ನೆಲೆಯಲ್ಲಿ ಬಂದಿರುವ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಮೇಲೆ ‘ಎಲ್ಲೋ’ ದೌರ್ಜನ್ಯ ನಡೆಸಿದರೆ ಪರಿಣಾಮ ನೆಟ್ಟಗೆ ಇರುವುದಿಲ್ಲವೆಂಬ ಕಠೋರ ಸಂದೇಶ ಕೊಟ್ಟಿದ್ದಾರೆ. ಹೀಗೆ ಒಂದು ಸಮುದಾಯದ ಬಗೆಗಿನ ಕಾಳಜಿ ವ್ಯಕ್ತಪಡಿಸುವ ಮೂಲಕ ಭಾರತದಲ್ಲಿ ದಲಿತರು ಕೂಡ ನಿತ್ಯವೂ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂಬುದನ್ನು ಮರೆತಿರುವ ಈ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದು ಅನಿವಾರ್ಯವೆನಿಸುತ್ತಿದೆ.

ಮತ್ತಷ್ಟು ಓದು »