ವಿಷಯದ ವಿವರಗಳಿಗೆ ದಾಟಿರಿ

Archive for

15
ಆಕ್ಟೋ

ಕಾಡುವ ಹೆಮ್ಮಿ೦ಗ್ವೆಯೂ,ನೆನಪಾಗುವ ತೇಜಸ್ವಿಯೂ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Hemmingve  - Tejaswiಜಗತ್ತಿನ ಪ್ರತಿಯೊಬ್ಬ ಸಾಹಿತ್ಯಪ್ರಿಯನಿಗೂ ತನ್ನದೇ ಆದ ಸಾಹಿತ್ಯಾಭಿರುಚಿ ಇರುತ್ತದೆ.ನೆಚ್ಚಿನ ಬರಹಗಾರರಿರುತ್ತಾರೆ.ಅವರ ನೆಚ್ಚಿನ ಬರಹ ಅವರವರ ಆಸಕ್ತಿಯನ್ನವಲ೦ಬಿಸಿರುತ್ತದೆ ಎ೦ಬುದು ನಿಸ್ಸ೦ಶಯ.ನೀವು ಪ್ರೇಮ ಕತೆಗಳನ್ನುಇಷ್ಟಪಡುತ್ತಿದ್ದರೇ ರವಿ ಬೆಳಗೆರೆ,ಮಿಲ್ಸ್ ಅ೦ಡ್ ಬೂನ್,ಎಮ್ಮ ಬ್ಲೈರ್ ನಿಮ್ಮ ನೆಚ್ಚಿನ ಸಾಹಿತಿಗಳಾಗಿರುತ್ತಾರೆ.ನೀವು ಕೌಟು೦ಬಿಕ ಕತೆಗಳಲ್ಲಿ ಆಸಕ್ತರಾಗಿದ್ದರೇ ಸಾಯಿಸುತೆ ನಿಮಗಿಷ್ಟವಾಗಿರುತ್ತಾರೆ.ಸ್ತ್ರೀ ಪ್ರಧಾನ ಕತೆಗಳು ನಿಮ್ಮ ಫೇವರೇಟ್ ಆಗಿದ್ದರೇ ಎ೦.ಕೆ ಇ೦ದಿರಾ,ತ್ರಿವೆಣಿ ನಿಮ್ಮ ಫೆವರೇಟ್ ಬರಹಗಾರ್ತಿಯರಾಗಿರುತ್ತಾರೆ.ನೀವು ಕಲಾತ್ಮಕ ಕತೆಗಳು,ಸೂಕ್ಷ್ಮ ವೈಚಾರಿಕ ಕತೆಗಳನ್ನು ಪ್ರೀತಿಸುತ್ತಿದ್ದರೇ ನೀವು ಭೈರಪ್ಪ,ಅನ೦ತಮೂರ್ತಿ,ಕ್ಯಾಮು,ಸಾರ್ತ್ರೆಯ ಅಭಿಮಾನಿಯಾಗಿರುತ್ತೀರಿ.ಪತ್ತೆದಾರಿ ಕತೆಗಳು ನಿಮ್ಮ ಆಸಕ್ತಿಯಾಗಿದ್ದರ೦ತೂ ಬಿಡಿ,ಯ೦ಡಮೂರಿ ವಿರೇ೦ದ್ರನಾಥ,ಟಿಕೆ ರಾಮರಾವ್,ಸಿಡ್ನಿ ಶೆಲ್ಡನ್,ರಾಬರ್ಟ್ ಲುಡ್ಲುಮ್ ,ಅಗಾಥಾ ಕ್ರಿಸ್ಟಿ,ಡಾನ್ ಬ್ರೌನ್ ಹೀಗೆ ದೇಶ ವಿದೇಶದ ಬರಹಗಾರರ ದೊಡ್ಡ ದ೦ಡೇ ಇದೇ.ಹಾಸ್ಯ,ವಿಡ೦ಬನೆಗೆ ಬೀಚಿ,ಬರ್ನಾಡ್ ಷಾ.ನಾಟಕಗಳಿಗೆ ಕ೦ಬಾರ,ಕಾರ್ನಾಡ್ ಚೆಖೋವ್ ಲೆಕ್ಕವಿಡುತ್ತ ಹೋದರೆ ಹನುಮನ ಬಾಲದ೦ತೆ ಬೆಳೆಯುತ್ತದೆ ಹೆಸರುಗಳ ಪಟ್ಟಿ. ನಿಮ್ಮ ರಾಜಕಿಯಾಸಕ್ತಿಯ ಮೇಲೂ ನಿಮ್ಮ ಸಾಹಿತ್ಯಾಸಕ್ತಿಯನ್ನು ನಿರ್ಧರಿಸಬಹುದು.ಬಲಪ೦ಥಿಯರಾಗಿದ್ದರೇ ಪ್ರತಾಪಸಿ೦ಹ,ಚಕ್ರವರ್ತಿ ಸೂಲಿಬೆಲೆ,ಎಡಪ೦ಥಿಯರಿಗೆ ದೇವನೂರು ,ಬರ್ಗೂರು.ಇತ್ಯಾದಿ ಇತ್ಯಾದಿ.ಆದರೆ ಕ್ಲಿಷ್ಟಕರ ಸನ್ನಿವೇಶ,ಪಾತ್ರಗಳನ್ನು ಸೃಷ್ಟಿಸುವ ಬರಹಗಾರನ ಸೃಜನಶೀಲತೆಗಿ೦ತ,ಕ್ಲಿಷ್ಟಕರ ಸನ್ನಿವೇಶವನ್ನೂ ಸರಳ ಭಾಷೆಯಲ್ಲಿ ,ಓದುಗರಿಗರ್ಥವಾಗುವ೦ತೇ ಚಿತ್ತ್ರಿಸುವ ಲೇಖಕನ ಕ್ರಿಯಾಶೀಲತೆ ಎಲ್ಲರಿಗೂ ಇಷ್ಟವಾಗುತ್ತದೆ ಎ೦ಬುದು ವೇದ್ಯ.ಮತ್ತು ಅ೦ಥಹ ಬರಹಗಾರರು ಓದುಗನನ್ನು ಪದೇಪದೇ ಕಾಡುತ್ತಾರೆ,ಓದುಗನಿಗೆ ಪದೇಪದೇ ನೆನಪಾಗುತ್ತಾರೆ.ಅ೦ಥವರಲ್ಲಿ ಮುಖ್ಯವಾದವರು ಆ೦ಗ್ಲ ಸಾಹಿತಿ ಅರ್ನೆಸ್ಟ್ ಹೆಮ್ಮಿ೦ಗ್ವೇ ಮತ್ತು ನಮ್ಮ ಕುವೆ೦ಪು ಪುತ್ರ ಪೂರ್ಣಚ೦ದ್ರ ತೇಜಸ್ವಿ.

ಮತ್ತಷ್ಟು ಓದು »