ದಲಿತ ನಾಯಕರಿಗೆ ದಲಿತರ ಮೇಲೇಕಿಲ್ಲ ಕಾಳಜಿ?
– ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿಯ ಮುನ್ನಾ ಎರಡು ದಿನಗಳಲ್ಲಿ ದೇಶದ ಗೃಹ ಮಂತ್ರಿಗಳು, ಕರ್ನಾಟಕದ ಮುಖ್ಯಮಂತ್ರಿಗಳು ಸೇರಿ ನಾಲ್ವರು ರಾಜಕಾರಣಿಗಳು ಇದ್ದಕ್ಕಿದ್ದಂತೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ, ಕಾಳಜಿ ರಕ್ಷಣೆಯ ಮಾತುಗಳನ್ನಾಡಿದ್ದಾರೆ. ಪ್ರಮುಖವಾಗಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಬೇಡಿ ಎಂದಿದ್ದಾರೆ.
ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಪೊಲೀಸ್ನ ಹಾಲಿ ನಿರ್ದೇಶಕರಿಗೆ ಪತ್ರ ಬರೆದು ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ 2 ರಿಂದ 3 ಮಂದಿ ಮುಸ್ಲಿಂ ಸಿಬ್ಬಂದಿಗಳನ್ನು ನೇಮಿಸುವಂತೆ ಆದೇಶಿಸಿದ್ದಾರೆ. ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ಖಾತೆ ಪಡೆದಿರುವ ಕೆ. ರೆಹಮಾನ್ ಖಾನ್ ಕೂಡ ಮುಸ್ಲಿಂ ಯುವಕರನ್ನು ಬಂಧಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಇನ್ನು ಅಹಿಂದ ಹೋರಾಟದ ಹಿನ್ನೆಲೆಯಲ್ಲಿ ಬಂದಿರುವ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಮೇಲೆ ‘ಎಲ್ಲೋ’ ದೌರ್ಜನ್ಯ ನಡೆಸಿದರೆ ಪರಿಣಾಮ ನೆಟ್ಟಗೆ ಇರುವುದಿಲ್ಲವೆಂಬ ಕಠೋರ ಸಂದೇಶ ಕೊಟ್ಟಿದ್ದಾರೆ. ಹೀಗೆ ಒಂದು ಸಮುದಾಯದ ಬಗೆಗಿನ ಕಾಳಜಿ ವ್ಯಕ್ತಪಡಿಸುವ ಮೂಲಕ ಭಾರತದಲ್ಲಿ ದಲಿತರು ಕೂಡ ನಿತ್ಯವೂ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂಬುದನ್ನು ಮರೆತಿರುವ ಈ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದು ಅನಿವಾರ್ಯವೆನಿಸುತ್ತಿದೆ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
– ಮು.ಅ ಶ್ರೀರಂಗ, ಬೆಂಗಳೂರು
ಎಸ್. ಎಲ್. ಭೈರಪ್ಪನವರ” ಧರ್ಮಶ್ರೀ”ಯಿಂದ “ಅನ್ವೇಷಣ”ದವರೆಗಿನ ಹನ್ನೆರೆಡು ಕಾದಂಬರಿಗಳನ್ನು ಕುರಿತಂತೆ ಒಟ್ಟು ಅರವತ್ತಾರು ವಿಮರ್ಶೆಗಳಿರುವ “ಸಹಸ್ಪಂದನ” ಎಂಬ ವಿಮರ್ಶಾ ಗ್ರಂಥ ೧೯೭೮ರಲ್ಲಿ ಪ್ರಕಟವಾಯ್ತು. (ಪ್ರಕಾಶಕರು :ಸಾಹಿತ್ಯ ಭಂಡಾರ ಬೆಂಗಳೂರು —೫೩) ಅದರ ಪ್ರಕಾಶಕರು ಹೇಳಿರುವ ಮಾತುಗಳಿಂದ ಈ ನನ್ನ ಮುನ್ನುಡಿಯನ್ನು ಪ್ರಾರಂಭಿಸುವುದು ಉತ್ತಮ.”ಇದು (ಸಹಸ್ಪಂದನ) ಭೈರಪ್ಪನವರ ಮೇಲಿನ ಕೇವಲ ಅಭಿಮಾನದಿಂದ ತಂದಿರುವ ಗ್ರಂಥವಲ್ಲ. ಮೆಚ್ಚಿಗೆ,ಹೊಗಳಿಕೆಗಳ ಬರವಣಿಗೆಯಿಂದ ಯಾವ ಲೇಖಕನ ಕೃತಿಗಳೂ ಬದುಕಲಾರವು. ಇಲ್ಲಿ ಬಂದಿರುವ ಲೇಖನಗಳು ಒಂದೇ ಬಗೆಯ ದೃಷ್ಟಿಕೋನದವೂ ಅಲ್ಲ. ಮೆಚ್ಚುಗೆ, ವಿರೋಧ,ಟೀಕೆ,ಘಾಟು, ಹೀಗೆ ……….. ”
ಈ ಮುಖಾಮುಖಿಯನ್ನು ಆ ಒಂದು ಎಚ್ಚರ,ಜವಾಬ್ದಾರಿಗಳ ಹಿನ್ನೆಲೆಯಲ್ಲಿ ನಡೆಸುವುದು ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ.
ನಮ್ಮ ಅಕಾಡೆಮಿಕ್ ವಲಯದ ವಿಮರ್ಶಕರುಗಳು ಜತೆಗೆ ನಾನ್ ಅಕಾಡೆಮಿಕ್ ವಿಮರ್ಶಕರುಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಹೊಸ ಕನ್ನಡ ಸಾಹಿತ್ಯದಲ್ಲಿ ವಿಮರ್ಶೆಗೊಂದು ಮಹತ್ವವಿದೆ. ಕಾಲಾನುಕಾಲಕ್ಕೆ ಅದು ಓದುಗರ ವಿವೇಕವನ್ನು ಎಚ್ಚರಿಸುತ್ತಾ, ಸಾಹಿತಿಗಳನ್ನು ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಪ್ರಭಾವಿಸುತ್ತಲಿದೆ. ಇಷ್ಟಲ್ಲದೆ ಸಾಹಿತಿಗಳು ಹೊಸಹೊಸ ತಂತ್ರಗಳತ್ತ, ವಿಷಯಗಳತ್ತ ಯೋಚಿಸುವಂತೆ ಹೊರಳುವಂತೆ ಮಾಡಿವೆ. ಭಾಷೆಯನ್ನು ಪರಿಣಾಮಕಾರಿಯಾಗಿ ಯಾವ ರೀತಿ ಉಪಯೋಗಿಸಬೇಕೆನ್ನುವ ಮಾರ್ಗದರ್ಶನ ಕೂಡ ವಿಮರ್ಶೆಯಿಂದ ನಡೆಯುತ್ತಿರುತ್ತದೆ.
ಮತ್ತಷ್ಟು ಓದು 
ಫ್ಯೂಡಲ್, ಲಿಬರಲ್, ಸ್ಲೇವರಿ: ಪರಿಕಲ್ಪನೆಗಳ ಭೌದ್ದಿಕ ದಾರಿದ್ರ್ಯ
ಹೀಗೋಮ್ಮೆ ಮಾಸ್ತಿ ಹಾಗು ಕುರ್ತಕೋಟಿಯವರ ಲೇಖನಗಳನ್ನು ಓದುವಾಗ ಅವರು ಹೇಳುತ್ತಿದ್ದ ವಿಚಾರಗಳು ಎಷ್ಟು ಆಪ್ತವಾಗಿದ್ದವು ಎಂದರೆ ಅವು ಇಂದಿಗೂ ಪ್ರಸ್ತುತ ಎನಿಸುತ್ತದೆ. ಕೆ.ವಿ.ನಾರಾಯಣ ಸ್ವಾಮಿಯವರು ಮಾಸ್ತಿಯವರನ್ನು ಒಮ್ಮೆ ಸಂದರ್ಶನ ಮಾಡುವ ಸಂದರ್ಭದಲ್ಲಿ ಕೆ.ವಿ.ಎನ್ ರವರು ಪ್ರಶ್ನೆ ಕೇಳುವ ರಭಸದಲ್ಲಿ ಲಿಬರಲ್/ಉದಾರವಾದಿ ಶಬ್ದವನ್ನು ಪ್ರಯೋಗಿಸದರಂತೆ, ಅದಕ್ಕೆ ಮಾಸ್ತಿಯವರು ಹಾಗೆಂದರೇನು? ಎಂದು ಮರುಪ್ರಶ್ನೆ ಮಾಡಿದರಂತೆ, ಕೊನೆಗೂ ಲಿಬರಲ್ ಅಥವಾ ಉದಾರವಾದಿ ಎಂದರೇನು ಎಂಬುದನ್ನು ವಿವರಿಸುವಲ್ಲಿ ಕೆ.ವಿ.ಎನ್ ವಿಫಲರಾಗಿ ತಬ್ಬಿಬ್ಬಾಗಿದ್ದನ್ನು ಅವರೇ ಒಪ್ಪಿಕೊಳ್ಳುತ್ತಾರೆ. ಒಟ್ಟಿನಲ್ಲಿ ನಮ್ಮದಲ್ಲದ ಜೊತೆಗೆ ನಮಗೆ ಅರ್ಥವಾಗದ ಪದಗಳನ್ನು ಬಳಸುವುದರಿಂದ ನಿರುಪಯುಕ್ತವಾದ ಸಂಭಾಷಣೆಯಾಗುತ್ತದೆ ಎಂಬುದು ಅದರ ತಾತ್ಪರ್ಯವಾಗಿತ್ತು. ಅದೇ ರೀತಿ ‘ನಿರೂಪಣಾ ಶಕ್ತಿ’ ಎಂಬ ಕುರ್ತಕೋಟಿಯವ ಲೇಖನವಿದೆ. ಆ ಲೇಖನದಲ್ಲಿ ಕುಂ.ವೀರಭದ್ರಪ್ಪನವರು ‘ಫ್ಯೂಡಲ್’ ಪದವನ್ನು ಬಳಸುವ ಮೂಲಕ ಅವರ ತಂದೆಯವರ ಚಿತ್ರಣವನ್ನು ಎಷ್ಟು ಹದಗೆಡಿಸಿದರೆಂದರೆ, ಕುಂ.ವಿ.ಯವರು ಅವರ ತಂದೆಯ ಚಿತ್ರಣವನ್ನೂ ಪ್ರೇಕ್ಷಕರಿಗೆ ಸರಿಯಾಗಿ ಕಟ್ಟಿಕೊಡಲಾಗಲಿಲ್ಲ, ಜೊತೆಗೆ ಫ್ಯೂಡಲ್ ಎಂಬುದನ್ನೂ ಸರಿಯಾಗಿ ಅರ್ಥಮಾಡಿಸಲು ಆಗಲಿಲ್ಲ.
ಇಂತಹ ಅನುಭವ ಭೌದ್ದಿಕವಲಯದ ಪರಿಚಯವಿದ್ದವರಿಗೆ ಸರ್ವೇಸಾಮಾನ್ಯವಾದುದು. ಅದರಲ್ಲಿಯೂ ಪ್ರಗತಿಪರರ ಭಾಷಣಗಳನ್ನು ಕೇಳಿದರೆ ಅವುಗಳಲ್ಲಿ ಅರ್ಥವಾದ್ದಕ್ಕಿಂತ ಅರ್ಥವಾಗದೆ ಇರುವ ಪದಗಳೇ ಹೆಚ್ಚಾಗಿರುತ್ತವೆ. ಇದು ಕೇವಲ ಪ್ರಗತಿಪರರಗೆ ಮಾತ್ರ ಸೀಮಿತವಾಗಿರದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ಅಲ್ಲಿ ಕಾಣಸಿಗುತ್ತದೆ. ಲಿಬರಲ್, ಫ್ಯೂಡಲ್, ನಂತಹ ಶಬ್ದಗಳು ನಮ್ಮ ಸಂಸ್ಕೃತಿಯ ಮೂಲದವುಗಳಲ್ಲ. ಬದಲಿಗೆ ಪಾಶ್ಚಾತ್ಯರ ಸಂಸ್ಕೃತಿಯನ್ನು ವಿವರಿಸಲು ಬೆಳೆದುಬಂದಿರುವ ಪದಗಳಾಗಿವೆ. ಭಾರತದಲ್ಲಿ ಜಮೀನುದಾರರನ್ನು ಹಾಗೂ ಅವರ ದರ್ಪವನ್ನು ವಿವರಿಸಲು ಫ್ಯೂಡಲ್ ಪದವನ್ನು ಸಾಮಾನ್ಯವಾಗಿ ಬುದ್ದಿಜೀವಿಗಳು ಬಳಸುತ್ತಾರೆ. ಆದರೆ ಅದು ನಿಜವಾಗಿಯೂ ಫ್ಯೂಡಲಿಸಂನ್ನು ಪ್ರತಿನಿಧಿಸುತ್ತದೆಯೆ? ಎಂದು ಕೇಳಿಕೊಂಡರೆ, ಖಂಡಿತವಾಗಿಯೂ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಫ್ಯೂಡಲ್ ನ ಅರ್ಥವನ್ನು ನೋಡುತ್ತಾ ಹೋದರೆ, ಸಾಮಾನ್ಯವಾಗಿ ಕೆಲವೊಂದು ಕಾನೂನು ಹಾಗೂ ಮಿಲಿಟರಿ ಶಕ್ತಿ ಅಥವಾ ಅದಕ್ಕೆ ಪರ್ಯಾಯವಾದ ಶಕ್ತಿಯನ್ನು ಒಗ್ಗೂಡಿಸಿಕೊಂಡು ಸಮಾಜವನ್ನು ಅದಕ್ಕೆ ತಕ್ಕಂತೆ ರೂಪಿಸುವುದು, ಹಾಗೂ ಅದನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ಎಂದರ್ಥವಾಗುತ್ತದೆ. ಅದರ ಒಟ್ಟಿಗೆ ಸರ್ಫ್ ಡಮ್ ಎಂಬುದಾಗಿಯೂ ಅದನ್ನು ಕರೆಯುತ್ತಾರೆ, ಅಂದರೆ ಲ್ಯಾಂಡ್ ಲಾರ್ಟ್ ಮತ್ತು ಸರ್ಫ್ ಗಳ ಸಂಬಂಧವು ಪ್ರಧಾನ ಭೂಮಿಕೆಯಲ್ಲಿರುತ್ತದೆ. ಹಾಗೂ ಸ್ಲೇವರಿ ಎಂದು ಬಳಸುವ ಪರಿಕಲ್ಪನೆಯ ಹಿಂದೆ ಮಾಸ್ಟರ್ ಮತ್ತು ಸ್ಲೇವ್ ಎಂಬ ಸಾಮಾಜಿಕ ಮತ್ತು ಅಂತಸ್ತಿನ ವಿಭಾಗವಿರುತ್ತದೆ. ಇಲ್ಲಿ ಸ್ಲೇವ್ ಆದವನಿಗೆ ಯಾವುದೇ ರೀತಿಯ ಸ್ವಂತಿಕೆ (ಸೆಲ್ಫ್) ಇರುವುದಿಲ್ಲ. ಆತ ಕೇವಲ ವ್ಯಾಪಾರ ಒಂದು ವಸ್ತುವಾಗಿ ಅಸ್ತಿತ್ವದಲ್ಲಿ ಇರುತ್ತಾನೆ. ಆದರೆ ಭಾರತದಲ್ಲಿ ಇಂತಹ ರಚನೆಯನ್ನು ಎಲ್ಲಿ ಕಾಣಬಹುದು? ಅಬ್ಬಬ್ಬಾ ಎಂದರೆ ಜಮೀನುದಾರರನ್ನು ಕಾಣಬಹುದು, ಅಥವಾ ಅವರ ಒಕ್ಕಲುಗಳನ್ನು ಕಾಣಬಹುದು, ಜಮೀನುದಾರರಲ್ಲೇ ಒಳ್ಳೆಯವರನ್ನೂ ಹಾಗೂ ಕೆಟ್ಟವರನ್ನೂ ಕಾಣಬಹುದು, ಆದರೆ ಫ್ಯೂಡಲ್ ಲಾರ್ಡಗಳನ್ನು ಕಾಣುವುದು ಎಲ್ಲಿ? ಯಾವ ಸಮುದಾಯಗಳು ಮಿಲಿಟರಿ ಶಕ್ತಿಯನ್ನು ಹೊಂದಿ ಕಾನೂನು ಗಳ ಮೂಲಕ ಇಡೀ ಸಮಾಜವನ್ನು ಅವರಿಗೆ ಬೇಕಾದ ರೀತಿಯಲ್ಲಿ ಮಾರ್ಪಡಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ?
ಇತಿಹಾಸಕಾರರಿ೦ದ ಮರೆಯಾದ ಸಸ್ಯಶಾಸ್ತ್ರದ ಪಿತಾಮಹ, ನಮ್ಮೀ ಭೋಧಿಧರ್ಮ……
– ಶಂಕರ್ ನಾರಾಯಣ್
ಸ್ವಾಮೀ ವಿವೇಕಾನ೦ದರು, ಚಿಕಾಗೋದಲ್ಲಿದ್ದ ಸಮಯ. ಅವರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿತ್ತು. ಮೇಲಿ೦ದ ಮೇಲೆ, ಪ್ರಶ್ನೆಗಳು ತೂರಿಬರುತ್ತಿದ್ದವು. ಅದೊ೦ದು ದಿನ ಒಬ್ಬ ಅಮೇರಿಕಾದ ಪ್ರಜೆಯೊಬ್ಬ, “ಬುದ್ಧನೇಕೆ ಧರ್ಮ ಪ್ರಸರಣೆಗಾಗಿ ಯುರೋಪು, ಅಮೇರಿಕಾಗಳಿಗೆ ಬರಲಿಲ್ಲ..!?” ಎ೦ದು ಕೇಳುತ್ತಾನೆ. ಅದಕ್ಕೆ, ವಿವೇಕಾನ೦ದರು, “ಬುದ್ಧನ ಕಾಲದಲ್ಲಿ ಯುರೋಪ್ ಎಲ್ಲಿತ್ತು..? ನಿನ್ನ ಅಮೇರಿಕಾ ಎಲ್ಲಿತ್ತು..? ಎನ್ನುತ್ತಾರೆ. ಹೌದು. ಚೀನಾವೂ ಸೇರಿ, ಪಾಶ್ಚಿಮಾತ್ಯ ದೇಶಗಳು ಕಣ್ಣುಬಿಡುವ ಮೊದಲೇ ಭಾರತ ಸುಸ೦ಸ್ಕೃತ ದೇಶವಾಗಿತ್ತು. ಭಾರತೀಯರಿಗೆ, ಚಿನ್ನ-ಬೆಳ್ಳಿಗಳ ಪರಿಚಯವಿತ್ತು. ಚಿನ್ನದ ಆಭರಣಗಳನ್ನು ಇಲ್ಲಿನ ಮಹಿಳೆಯರು ತೊಡುತ್ತಿದ್ದರು. ಇದಕ್ಕೆ ಉದಾಹರಣೆ ಎ೦ದರೆ, ಹರಪ್ಪ ಮತ್ತು ಮೊಹೆ೦ಜದಾರೋ ನಗರಗಳು. ನಾಗರೀಕತೆಗಳು. ಪಾಶ್ಚಿಮಾತ್ಯ ದೇಶೀಯರು, ಮರದಲ್ಲಿ ವಾಸಿಸುವ ಸ೦ಧರ್ಭದಲ್ಲಿ, ಒ೦ದು ವ್ಯವಸ್ಥಿತ ನಗರ ಭಾರತದಲ್ಲಿತ್ತು. ಖಗೋಳ ವಿಜ್ನಾನದಲ್ಲಿ ಆರ್ಯಭಟನೂ, ಆಯುರ್ವೇದದಲ್ಲಿ ಚರಕನೂ, ಶಸ್ತ್ರಚಿಕಿತ್ಸೆಯಲ್ಲಿ ಸುಶ್ರುತನೂ, ಅರ್ಥಶಾಸ್ತ್ರದಲ್ಲಿ ಚಾಣಕ್ಯನೂ ಹೀಗೆ ಒ೦ದೊ೦ದು ವಿಭಾಗದಲ್ಲಿ ಒಬ್ಬೊಬ್ಬರು ಪ್ರಖ೦ಡ ಜ್ನಾನಿಗಳಾಗಿದ್ದರು. ಭಾರತ ಬಿಟ್ಟರೆ, ಚೀನಾದಲ್ಲೂ ನಾಗರೀಕತೆಗಳು ಹುಟ್ಟಿಕೊ೦ಡಿದ್ದವು. ಆದರೆ, ಅವುಗಳನ್ನು ಹರಪ್ಪ, ಮೊಹೆ೦ಜದಾರೋಗಳೊ೦ದೆಗೆ ಹೋಲಿಸಲಾಗದು..
ಆದರೆ,
ತುತ್ತನ್ನು ನಿರ್ಲಕ್ಷಿಸುವ ಮುನ್ನ
– ನವೀನ್ ನಾಯಕ್
ಭಾರತ ಬದಲಾಗುತಿದೆ, ಇದನ್ನು ನಮ್ಮ ಮುಖ್ಯಮಂತ್ರಿಯಿಂದ ಹಿಡಿದು ಪ್ರಧಾನ ಮಂತ್ರಿಯವರೆಗೆ ಎಲ್ಲರೂ ದಿನಕೊಮ್ಮೆ ಮಂತ್ರದಂತೆ ಪಟಿಸುತಿದ್ದಾರೆ. ಇದರಿಂದ ನಮ್ಮ ಕಂಗಳು ಬದಲಾವಣೆಯ ಸಮಯ ಹತ್ತಿರ ಬರುತಿದೆ ಎಂದು ಹೊಸ ಕನಸು ಕಾಣತೊಡಗಿದೆ. ಇಂಥ ಸಮಯದಲ್ಲಿ ವಾಸ್ತವವನ್ನು ವಿಶ್ವಸಂಸ್ಥೆ ಬಯಲಿಗೆಳೆದು ನಮ್ಮ ಸರಕಾರ ನಡೆಸುತ್ತಿರುವವರ ಮುಖವಾಡವನ್ನು ಕಳಚಿದೆ. ವಿಶ್ವಸಂಸ್ಥೆ ನಡೆಸಿರುವ ಸಮೀಕ್ಷೆಯನ್ನು ಗಮನಿಸಿದರೆ ಭಾರತದ ಬದಲಾವಣೆಯು ಮುಂದುವರೆಯುವದು ಬಿಟ್ಟು ಹಿಮ್ಮುಖವಾಗಿ ನಡೆಯತೊಡಗಿದೆ.ಈ ಅನಿಸಿಕೆ ಏಕೆಂದರೆ ಅದರ ಸಮೀಕ್ಷೆಯ ವರದಿಯನ್ನು ನೋಡಿ.
ವಿಶ್ವಸಂಸ್ಥೆ;- ವಿಶ್ವದಲ್ಲಿ 120 ಕೋಟಿ ಜನ ಇನ್ನೂ ಕಿತ್ತು ತಿನ್ನುವ ಬಡತನದ ಬೇಗೆಯಲ್ಲಿ ದಿನವನ್ನು ಕಳೆಯುತಿದ್ದಾರೆ. ಅದರಲ್ಲಿ ಮೂರನೆಯ ಒಂದರಷ್ಟು ಅಂದರೆ 33% (39 ಕೋಟಿ 60 ಲಕ್ಷ ಜನ) ಭಾರತೀಯರಾಗಿದ್ದಾರೆ. ಇವರು ದಿನವೊಂದಕ್ಕೆ ಸುಮಾರು 65 ರುಪಾಯಿಗಳಿಗಿಂತಲೂ ಕಡಿಮೆ ಹಣದಲ್ಲಿ ಜೀವನ ದೂಡುತಿದ್ದಾರೆ. ಅವರದೇ ವರದಿ ಪ್ರಕಾರ 1981 ರಿಂದ 2010ರ ನಡುವೆ ವಿಶ್ವದ ಬಡತನದ ಪ್ರಮಾಣ ಸುಮಾರು ಅರ್ಧದಷ್ಟು ಇಳಿಕೆಯಾಗಿದೆ ಮತ್ತು ಇದಕ್ಕೆ ವಿರುದ್ಧವಾಗಿ ಅಭಿವೃದ್ಧಿಶೀಲ ಹಾಗು ಬಡರಾಷ್ಟ್ರಗಳಲ್ಲಿ
ಅಧಿಕಾರ ದಾಹಕ್ಕೆ ಮೇಧಾವಿಯ ಆತ್ಮಾಭಿಮಾನವನ್ನೂ ಕೊಲ್ಲುವ ಶಕ್ತಿಯಿದೆಯೇ…..?
– ಗುರುರಾಜ ಕೊಡ್ಕಣಿ,ಯಲ್ಲಾಪುರ
ಅವರು ಸಾಮಾನ್ಯ ವ್ಯಕ್ತಿಯೇನಲ್ಲ. ಚಿನ್ನದ ಪದಕದೊ೦ದಿಗೆ ಪದವಿ ಮುಗಿಸಿದವರು. ವಿಶ್ವದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒ೦ದಾದ ಆಕ್ಸಫರ್ಡ್ ಕಾಲೇಜಿನಿ೦ದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದವರು.ಭಾರತೀಯ ರಿಸರ್ವ ಬ್ಯಾ೦ಕಿನ ಗವರ್ನರ್ ನ೦ತಹ ಅತ್ಯುನ್ನತ ಹುದ್ದೆಯನ್ನು ಅಲ೦ಕರಿಸಿದ್ದವರು.ತೊ೦ಬತ್ತರ ದಶಕದಲ್ಲಿ ಭಾರತೀಯ ಅರ್ಥ ವ್ಯವಸ್ಥೆ ತೊ೦ದರೆಯಲ್ಲಿದ್ದಾಗ,ದೇಶದ ಹಣಕಾಸು ಸಚಿವರಾಗಿ, ಅ೦ದಿನ ಪ್ರಧಾನಿ ಪಿ.ವಿ ನರಸಿ೦ಹರಾವ್ ರವರ ಸಾರಥ್ಯದಲ್ಲಿ ಜಾಗತೀಕರಣದ೦ತಹ ವ್ಯವಸ್ಥೆಯಿ೦ದ ದೇಶದ ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತಲು ಸಹಕಾರಿಯಾದವರು. ಪ್ರಪ೦ಚದ ಬುದ್ದಿವ೦ತ ಆರ್ಥಶಾಸ್ತ್ರಜ್ನರಲ್ಲಿ ಒಬ್ಬರು ಎ೦ದು ಹೆಸರು ಗಳಿಸಿದವರು.ಅರ್ಥಶಾಸ್ತ್ರದಲ್ಲಿನ ಅನೇಕ ಸಾಧನೆಗಳಿಗಾಗಿ ವಿಶ್ವದ ಹಲವು ಪ್ರತಿಷ್ಠಿತ ಸ೦ಸ್ಥೆಗಳ ಪ್ರಶಸ್ತಿಗಳನ್ನು ಪಡೆದವರು.ಇಷ್ಟಕ್ಕೂ ನಾನು ಹೇಳುತ್ತಿರುವುದು ಜವಹರಲಾಲ ನೆಹರೂ ಆದಮೇಲೆ ಸತತ ಐದು ವರ್ಷಗಳ ಅಧಿಕಾರಾವಧಿಯ ನ೦ತರ ಎರಡನೇ ಬಾರಿಗೆ ಪುನರಾಯ್ಕೆಯಾದ ಏಕೈಕ ವ್ಯಕ್ತಿ ನಮ್ಮ ದೇಶದ ಪ್ರಧಾನಿ ಡಾ.ಮನಮೊಹನ್ ಸಿ೦ಗ್ ರವರ ಬಗ್ಗೆ.
ಆದರೆ ಇ೦ದು ಆಗುತ್ತಿರುವುದಾದರೂ ಏನು..? ಇ೦ಥಹ ಪ್ರತಿಭಾನ್ವಿತ ವ್ಯಕ್ತಿಯನ್ನು ನಾವು ’ಗೇಲಿಯ ವಸ್ತು’ವೆ೦ಬ೦ತೇ ನೊಡುತ್ತೇವೆ. ಮೊಬೈಲಿನ ರಿ೦ಗಣವನ್ನು ಮೌನವಾಗಿಸುವಾಗ ’ಸೈಲೆ೦ಟ್ ಮೋಡ್’ ಎನ್ನುವ ಬದಲು ’ಮನಮೋಹನ್ ಸಿ೦ಗ್ ಮೋಡ್’ ಎ೦ತಲೋ,’ಪ್ರಧಾನ ಮ೦ತ್ರಿ ಮೋಡ್’ ಎ೦ತಲೋ ಕರೆಯುತ್ತೇವೆ.ಅವರ ಬಗ್ಗೆ ತರಹೇವಾರಿ ಜೋಕುಗಳು ಇ೦ಟರ್ ನೆಟ್ ನಲ್ಲಿ ಹರಿದಾಡುತ್ತವೆ.ದಿನಕ್ಕೊ೦ದು ಎಸೆಮ್ಮಸ್ ಗಳು ಹುಟ್ಟಿಕೊಳ್ಳುತ್ತವೆ. ’ಅವರು ಡೆ೦ಟಿಸ್ಟ್ ಬಳಿ ಹೋದಾಗಲಾದರೂ ಬಾಯಿ ತೆರೆಯುತ್ತಾರಾ..’ ಎನ್ನುವ೦ತೇ ಲೇವಡಿ ಮಾಡುತ್ತೇವೆ.ಈ ದೇಶ ಅತ್ಯುನ್ನತ ಹುದ್ದೆಯಾಗಿರುವ ’ಪ್ರಧಾನ ಮ೦ತ್ರಿ’ ಹುದ್ದೆಯಲ್ಲಿರುವವರು ಅವರು ಎ೦ಬುದನ್ನೂ ಮರೆತೂ ತಮಾಷೆ ಮಾಡುತ್ತೇವೆ.
ಮಿ.ರಾಹುಲ್,ಹಿರೋಯಿಸಂ ಅನ್ನುವುದು ಸಿನೆಮಾಗಳಲ್ಲೇ ಚೆನ್ನ
– ರಾಕೇಶ್ ಶೆಟ್ಟಿ
ಕಾಂಗ್ರೆಸ್ಸಿನ ನಾಯಕರಾಗಿದ್ದಂತಹ ಅರ್ಜುನ್ ಸಿಂಗ್ ಅವರ ಆತ್ಮಕತೆ ‘A Grain of Sand in the Hourglass of Time’ ಯಲ್ಲಿ ಒಂದು ಪ್ರಸಂಗವನ್ನು ದಾಖಲಿಸಿದ್ದಾರೆ ಅನ್ನುವ ವರದಿಯೊಂದು ಕಳೆದ ವರ್ಷ ಪತ್ರಿಕೆಗಳಲ್ಲಿ ಬಂದಿತ್ತು.ಅಲ್ಲಿ ಅವರು ಆಗಿನ್ನೂ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರದಿದ್ದ ಸೋನಿಯಾ ಅವರನ್ನು ಪಕ್ಷಕ್ಕೆ ಕರೆ ತಂದು ಅಧ್ಯಕ್ಷೆಯ ಪಟ್ಟಕಟ್ಟುವ ಬಗ್ಗೆ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರ ಬಳಿ ಮಾತನಾಡಲು ಸೀತರಾಂ ಕೇಸರಿ ಮತ್ತಿತ್ತರರೊಂದಿಗೆ ಹೋಗಿರುತ್ತಾರೆ. ಸೋನಿಯಾರನ್ನು ಅಧ್ಯಕ್ಷೆಯನ್ನಾಗಿ ಮಾಡುವ ಇವರ ಮಾತನ್ನು ಕೇಳಿ ಕ್ಷಣಕಾಲ ಸುಮ್ಮನಿದ್ದ ಪಿವಿಎನ್ ಒಮ್ಮೆಲೇ ” ರೈಲಿನ ಕಂಪಾರ್ಟ್-ಮೆಂಟ್ ಗಳನ್ನು ಇಂಜಿನ್ನಿಗೆ ಜೋಡಿಸಿದಂತೆ,ಕಾಂಗ್ರೆಸ್ಸ್ ಅನ್ನು ನೆಹರೂ ಕುಟುಂಬಕ್ಕೆ ಜೋತು ಬೀಳಿಸುವುದೇಕೆ? ಬೇರೆ ದಾರಿಗಳಿಲ್ಲವೇ ನಮ್ಮ ಮುಂದೆ?” ಅಂತ ಸಿಡುಕುತ್ತಾರೆ. ಕಾಂಗ್ರೆಸ್ಸಿನಂತ ಲಕೋಟೆ ಪಕ್ಷದಲ್ಲಿ ಪಿವಿಎನ್ ಮತ್ತು ಸೀತರಾಂ ಕೇಸರಿಯವರನ್ನು ಆಮೇಲೆ ಹೇಗೆ ನಡೆಸಿಕೊಳ್ಳಲಾಯಿತು ಅನ್ನುವುದೆಲ್ಲ ಮತ್ತೆ ಬಿಡಿಸಿ ಹೇಳಬೇಕಿಲ್ಲ.
೧೨೮ ವರ್ಷಗಳ ಇತಿಹಾಸ ಹೊಂದಿರೋ ಈ ರಾಷ್ಟ್ರೀಯ ಪಕ್ಷಕ್ಕೆ “ನೆಹರೂ ಕುಟುಂಬ”ದ ಬೋಗಿಯನ್ನು ಮೊದಲಿಗೆ ಜೋಡಿಸಿದ್ದು ಮಹಾತ್ಮ ಗಾಂಧೀಜಿ.ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಸರ್ದಾರ್ ವಲ್ಲಭಾಯ್ ಪಟೇಲ್ ಅಂತ ದಿಗ್ಗಜರನ್ನೆಲ್ಲ ಬದಿಗೆ ಸರಿಸಿ ಜವಹರಲಾಲ್ ನೆಹರೂ ಅವರನ್ನು ಗಾಂಧೀಜಿ ಮುನ್ನೆಲೆಗೆ ತಂದ ಹಿನ್ನೆಲೆಯೇನು ಅನ್ನುವುದರ ಬಗ್ಗೆ ಇವತ್ತಿಗೂ ಬೇರೆ ಬೇರೆ ಕತೆಗಳಿವೆ.ನೆಹರೂ ನಂತರ ಬಂದ ಇಂದಿರಾ ಅವರು ನೆಹರೂಗಿಂತ ಉತ್ತಮವಾಗಿ ದೇಶವನ್ನು ಮುನ್ನಡೆಸಿದರೂ, ಸುಲಭವಾಗಿ ದಕ್ಕಿದ್ದಂತಹ ಪ್ರಧಾನಿ ಹುದ್ದೆ ಅವರೊಳಗಿನ ಸರ್ವಾಧಿಕಾರಿಯನ್ನು ಜಾಗೃತಗೊಳಿಸಿ ಈ ದೇಶದ ಪ್ರಜಾಪ್ರಭುತ್ವದ ಇತಿಹಾಸದ ಕಪ್ಪುಚುಕ್ಕೆ “ಎಮರ್ಜೆನ್ಸಿ”ಯ ದಿನಗಳಿಗೆ ಕಾರಣವಾಯಿತು. (ಆದರೆ ಕರ್ನಾಟಕದ ಕೆಲವು ಬುದ್ಧಿಜೀವಿಗಳಿಗೆ ಈಗಲೂ ಕಾಂಗ್ರೆಸ್ಸ್ ಪ್ರಜಾಪ್ರಭುತ್ವದ ರಕ್ಷಕನಂತೆ,”ಬತ್ತಲಾರದ ಗಂಗೆ” ಕಾಣುತ್ತದೆ…! ) ಇಂದಿರಾ ಹಂತಕರ ಗುಂಡಿಗೆ ಬಲಿಯಾದ ನಂತರ ಕಾಂಗ್ರೆಸ್ಸ್ ರೈಲಿನ ಬೋಗಿಗೆ ’ರಾಜೀವ್’ ಜೋಡಣೆಯಾದರು.
ಮತ್ತಷ್ಟು ಓದು 
ಮೂರ್ತಿಗಳ ದ್ವಂದ್ವಗಳು ಮತ್ತು ದೇವನೂರರ ಬಾಂಬುಗಳು
– ಮು.ಅ ಶ್ರೀರಂಗ, ಬೆಂಗಳೂರು
ಸುಮಾರು ಹತ್ತು ದಿನಗಳಿಂದ ಈಚೆಗೆ ನಮ್ಮೀ ಸುವರ್ಣ ಕರ್ನಾಟಕವು ಅನಂತಮೂರ್ತಿಯವರ ಹೇಳಿಕೆ,ಮರುಹೇಳಿಕೆ,ಅವುಗಳಿಗೆ ಮಾಧ್ಯಮಗಳ,ಜನರ ಪ್ರತಿಕ್ರಿಯೆಗಳು,ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಏನು ಎತ್ತ ಎಂದು ಇತರ ಬುದ್ಧಿಜೀವಿಗಳ ಪಾಠಗಳಿಂದ ತುಂಬಿ ಹೋಗಿದೆ. ಈರುಳ್ಳಿ ಬೆಲೆ ಎಷ್ಟು ಏರಿತು,ರುಪಾಯಿ ಎಷ್ಟು ಆಳಕ್ಕೆ ಬಿತ್ತು ಇತ್ಯಾದಿಗಳ ಕಡೆಗೆ ನಮಗೆ ಆಸಕ್ತಿಯಿಲ್ಲ. ಅನಂತಮೂರ್ತಿಯವರು ಏನು ಹೇಳಿದ್ದಾರೆ?ಈಗ ಎಲ್ಲಿದ್ದಾರೆ?ಏನು ಮಾಡುತ್ತಿದ್ದಾರೆ?ಇದೇ ಮುಖ್ಯವಾಗಿದೆ. ಇದರ ಜತೆಗೆ ಈಗ ನಮ್ಮ ಖ್ಯಾತ ದಲಿತ ಮತ್ತು ಬಂಡಾಯ ಸಾಹಿತಿಗಳಾದಂತಹ ಮಾನ್ಯ ದೇವನೂರು ಮಹಾದೇವ ಅವರು ಬೆಂಗಳೂರು ಸುತ್ತಮುತ್ತಲಿನ ಬ್ರಾಹ್ಮಣ ಮತ್ತು ಲಿಂಗಾಯಿತರ townshipಗಳನ್ನು ಪ್ರಾಣಹಾನಿ ಆಗದಂತೆ ಬಾಂಬ್ ಹಾಕಿ ನಾಶಪಡಿಸಲೇಬೇಕು ಎಂದು “ಫತ್ವಾ” ಹೊರಡಿಸಿದ್ದಾರೆ. . ಈ ಬಾಂಬ್ ಯೋಜನೆಯನ್ನು ಅವರು ಹೇಳಿದ್ದು ಕರ್ನಾಟಕ ಕೇಂದ್ರೀಯ ವಿ ವಿ ಮತ್ತು ಗುಲ್ಬರ್ಗ ವಿ ವಿ ಸಂಯುಕ್ತವಾಗಿ ಆಯೋಜಿಸಿದ ಕರ್ನಾಟಕ ದಲಿತ ಚಳುವಳಿ ಹಾಗು ಸಾಹಿತ್ಯದ “ಉದ್ಘಾಟನಾ” ಸಮಾರಂಭದಲ್ಲಿ. ಇದುವರೆಗೆ ವಿ ವಿ ಗಳ ಕೆಲವು ಅಧ್ಯಾಪಕರು ಮತ್ತು ಪ್ರಾಧ್ಯಾಪಕರು ನಕ್ಸಲರ ಮತ್ತು ಮಾವೋವಾದಿಗಳ ಹಿಂಸೆಗೆ ಬೌದ್ಧಿಕ ಬೆಂಬಲವನ್ನು ಮಾತ್ರ ಕೊಡುತ್ತಿದ್ದರು. ಇನ್ನು ಮುಂದೆ ಭೌತಿಕ ಬೆಂಬಲವನ್ನೂ ಸಹ ನಿರ್ಭಯವಾಗಿ ನೀಡಬಹುದು. ಏಕೆಂದರೆ ಬುದ್ಧಿಜೀವಿಗಳು ಹೇಳಿದ ಮೇಲೆ ಮುಗಿಯಿತು. ಅವರು ಏನೇ ಮಾಡಿದರೂ, ಹೇಳಿದರೂ ಅದು ಅಪರಾಧವಲ್ಲ.
ಪ್ರೊ.ಬಾಲು ಅವರಿಗೆ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್
ಕರ್ನಾಟಕದಲ್ಲಿ ಈಗ ಗೌರವ ಡಾಕ್ಟರೇಟ್ ಪದವಿ ಎನ್ನುವುದು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಾಗಿರುವುದು ನಮಗೆಲ್ಲ ಗೊತ್ತಿರುವ ವಿಚಾರವೇ. ಆದರೆ ಯುರೋಪಿನ ವಿಶ್ವವಿದ್ಯಾಲಯಗಳಲ್ಲಿ ಇದು ಇನ್ನೂ ತನ್ನ ಘನತೆ ಹಾಗೆ ಉಳಿಸಿ ಕೊಂಡಿದೆ. ಉದಾಹರಣೆಗೆ, ಪ್ರೊಫೆಸರ್ ಎಸ್. ಎನ್. ಬಾಲಗಂಗಾಧರ ರಾವ್ ಅವರಿಗೆ ೩೦/೯/೨೦೧೩ರಂದು ಗೌರವ ಡಾಕ್ಟರೇಟ್ ಪದವಿ ಮತ್ತು ಬಂಗಾರದ ಪದಕದೊಂದಿಗೆ ಸನ್ಮಾನ ಮಾಡಿದ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯ ತನ್ನ ೧೫ ವರ್ಷಗಳ ಇತಿಹಾಸದಲ್ಲಿ ಕೊಟ್ಟಿದ್ದು ಕೇವಲ ಬೆರಳೆಣಿಕೆಯಷ್ಟು ಗೌರವ ಡಾಕ್ಟರೇಟ್ ಪದವಿಗಳನ್ನು ಮಾತ್ರ.
ಈ ಸಂದರ್ಭದಲ್ಲಿ ಎಸ್. ಎನ್. ಬಾಲಗಂಗಾಧರ ರಾವ್ ಅವರ ಸಾಧನೆಗಳ ಕುರಿತು ಅಲ್ಲಿನ ಸಮಾಜ ವಿಜ್ಞಾನಗಳ ಡೀನ್ ಮಾಡಿದ ಭಾಷಣದ ಕನ್ನಡ ಅವತರಣಿಕೆಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.
– ನಿಲುಮೆ
ನನ್ನ ಗಾಂಧೀಜಿ
-ಬಿಂಧು ಮಾಧವಿ,ಹೈದರಾಬಾದ್
ಗಾಂಧೀಜಿ ನಮ್ಮೆಲ್ಲರಿಗೂ ಸೇರಿದವರು, ಹಾಗಿದ್ದರೂ ಏಕೆ ಈ ಶಿರೋನಾಮೆ ಎಂದು ಕೇಳುವಿರಾ? ಏಕೆಂದರೆ ಗಾಂಧೀಜಿ ಎನ್ನುತ್ತಿದ್ದಂತೆ ಒಬ್ಬೊಬ್ಬೊರಗೂ ಅವರದೇ ಆದ ಒಂದು ರೂಪು ಮನಸ್ಸಿನಲ್ಲಿ ಮೂಡುವುದು. ಗಾಂಧೀಜಿ ಎಂದರೆ ನನ್ನ ಮನಸ್ಸಿನಲ್ಲಿ ಬರುವ ಚಿತ್ರಗಳ ಬಗ್ಗೆ ಈ ಲೇಖನ, ಹಾಗಾಗಿ ಇದು, ನನ್ನ ಗಾಂಧೀಜಿ.
ಮಹಾತ್ಮಾ ಗಾಂಧಿ ಎನ್ನುತ್ತಿದ್ದಂತೆ ಒಂದೇ ಎರಡೇ ಹಲವಾರು ಚಿತ್ರಗಳು, ವಿಷಯಗಳು, ಕವಿತೆಗಳು ಮತ್ತು ಪುಸ್ತಕಗಳು ನನ್ನ ಮುಂದೆ ಬಂದು ನಿಲ್ಲುತ್ತವೆ. ಎಲ್ಲಿಂದ ಪ್ರಾರಂಭಿಸಲಿ? ಬಹುಶಃ ಕಣ್ಣಮುಂದೆ ಬಂದು ನಿಲ್ಲುವ ಮೊಟ್ಟಮೊದಲ ಚಿತ್ರ ರಿಚರ್ಡ್ ಅಟೆನ್ ಬರೋ ತೆಗೆದೆ ಆಂಗ್ಲ ಚಲನ ಚಿತ್ರ ’ಗಾಂಧಿ’ . ಅದರಲ್ಲಿನ ಗಾಂಧಿ ಪಾತ್ರಧಾರಿ ಬೆನ್ ಕಿಂಗ್ಸ್ಲೇ. ಅವರು ಯಾವತ್ತಿದ್ದರೂ ನಮ್ಮ ಪಾಲಿಗೆ ಗಾಂಧಿಯೇ ಹೊರತು ಬೆನ್ ಕಿಂಗ್ಸ್ ಲೇ ಅಲ್ಲ. ಅದರಲ್ಲಿನ ಚಾರ್ಲ್ಸ್ ನ ಪಾತ್ರ, ಕಸ್ತೂರಿ ಬಾ ಪಾತ್ರ, ಜಿನ್ನಾ ಎಲ್ಲರೂ ಪಾತ್ರಗಳಾಗಿ ಕಾಣುವರೇ ಹೊರತು, ಪಾತ್ರಧಾರಿಗಳು ಎಂದು ಎನಿಸುವುದಿಲ್ಲ. ಚಿಕ್ಕಂದಿನಿಂದಲೇ ನಮಗೆ ಈ ರೀತಿಯ ಚಿತ್ರಗಳನ್ನು ತೋರಿಸಿ ನಮಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ, ದೇಶಭಕ್ತಿಯ ಬಗ್ಗೆ, ಸಮಾನತೆಯ ಬಗ್ಗೆ ಅರಿವು ಮೂಡಿಸಿದ ನನ್ನ ತಂದೆ ತಾಯಿಗೆ ನಾನು ಎಂದೂ ಚಿರ ಋಣಿ. ಗಾಂಧೀಜಿ ಬ್ರಿಟಿಷರ ವಿರುದ್ಧ ಹೋರಾಡಿದರು, ಆ ಬ್ರಿಟಿಷರೇ ಏಕೆ ಇಡೀ ವಿಶ್ವವೇ ಗಾಂಧೀಜಿಯ ಮುಂದೆ ತಲೆಬಾಗಿತು. ನೋಡು ಒಬ್ಬ ಆಂಗ್ಲ ನಿರ್ದೇಶಕನು ಗಾಂಧಿ ಚಿತ್ರವನ್ನು ಎಷ್ಟರಮಟ್ಟಿಗೆ ತೆಗೆದಿದ್ದಾನೆ, ಅದನ್ನು ಆಂಗ್ಲ ಕಲಾವಿದ ಬೆನ್ ಕಿಂಗ್ಸ್ ಲೇ ಎಷ್ಟು ಸಮಂಜಸವಾಗಿ ಮಾಡಿದ್ದಾನೆ ಎಂದು ನನ್ನ ಅಮ್ಮ ಹೇಳಿದ ನುಡಿಗಳು ಇಂದಿಗೂ ನೆನಪಿದೆ. ಹಾಗಾಗಿ ನಾನೂ ಕೂಡ ನನ್ನ ಐದು ವರ್ಷದ ಮಗಳಿಗೆ ಇಂದು ಬೆಳಿಗ್ಗೆ youtube ನಲ್ಲಿ ಗಾಂಧಿ ಚಿತ್ರವನ್ನು ಹಾಗಿ ತೋರಿಸುತ್ತಿದ್ದೆ. ಅವಳೂ ಆಸಕ್ತಿಯಿಂದ ನೋಡುತ್ತಿದ್ದಳು, ಗೆಳೆಯರು ಬಂದು ಆಡಲು ಕರೆಯುವವರೆಗೆ!! ಒಂದು ವೇಳೆ ಅವಳು ಚಿತ್ರವನ್ನು ಕಡೆಯವರೆಗೆ ನೋಡಿದರೆ, ಅವಳು ಗಾಂಧೀಜಿಯನ್ನು ಏಕೆ ಕೊಂದರು ಎಂದು ಕೇಳುತ್ತಾಳೆ. ಐದು ವರ್ಷದ ಅವಳಿಗೆ ಸತ್ಯಕ್ಕಾಗಿ ಹೋರಾಡಿದವರಿಗೆ, ನ್ಯಾಯಕ್ಕಾಗಿ ಹೋರಾಡಿದ ಗಾಂಧಿತಾತನಿಗೆ ಈ ರೀತಿಯ ಅಂತ್ಯ ಎಂದು ತಿಳಿದರೆ, ಅವಳಿಗೆ ಸತ್ಯಕ್ಕೇ ಜಯ, ಎಂಬ ಮಾತಿನ ಮೇಲೆ ನಂಬಿಕೆಯೇ ಬರುವುದಿಲ್ಲ. ಹಾಗಾಗಿ ಚಿತ್ರವನ್ನು ಕೊನೆಯ ತನಕ ತೋರಿಸಬೇಕೇ ಬೇಡವೇ ಎಂಬ ಪ್ರಶ್ನೆ ನನ್ನ ಮುಂದೆ!





