ವಿಷಯದ ವಿವರಗಳಿಗೆ ದಾಟಿರಿ

Archive for

3
ಡಿಸೆ

ದಿನೇ ದಿನೇ ಹೆಚ್ಚುತ್ತಿರುವ ‘ಮೋದಿ ಜಪ’

– ನರೇಂದ್ರ ಕುಮಾರ ಎಸ್.ಎಸ್

NaModiದಿನಗಳೆದಂತೆ, ೨೦೧೪ರ ಮಹಾ ಚುನಾವಣೆಯು ಹತ್ತಿರ ಬಂದಂತೆ ಭಾರತದಾದ್ಯಂತ ‘ಮೋದಿ ಜಪ’ ಹೆಚ್ಚುತ್ತಿದೆ. ಇದನ್ನು ಕೆಲವರು ‘ಮೋದಿ ಜ್ವರ’, ‘ಮೋದಿತ್ವ’ ಎಂದೂ ಬಣ್ಣಿಸುತ್ತಿರುವರು. ಯಾರು ಏನೇ ಹೇಳಲಿ, ಭಾರತದಾದ್ಯಂತ ನಿತ್ಯವೂ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ “ನರೇಂದ್ರ ಮೋದಿ”. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಾದ ಟ್ವಿಟ್ಟರ್ ಹಾಗೂ ಪೇಸ್^ಬುಕ್ ಗಳಲ್ಲಿ, ಯುವಕರು ನಡೆಸುವ ಚರ್ಚೆಗಳಲ್ಲಿ, ಕ್ಷೌರಿಕನ ಅಂಗಡಿಯಲ್ಲಿ ನಡೆಯುವ ವಾರ್ತಾಲಾಪಗಳಲ್ಲಿ, ಹಳ್ಳಿಗಳಲ್ಲಿ ನಡೆಯುವ ಸಂಭಾಷಣೆಗಳಲ್ಲಿ – ಎಲ್ಲರೂ ಮೋದಿಯ ಕುರಿತು ಮಾತನಾಡುತ್ತಿದ್ದಾರೆ! ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಜನರ ಚರ್ಚೆಗಳಲ್ಲಿ ಇಷ್ಟರಮಟ್ಟಿಗೆ ಹೊಕ್ಕಿರುವ ಮತ್ತೊಂದು ಹೆಸರಿಲ್ಲ.

ನಾನು ಕೆಲವು ದಿನಗಳ ಹಿಂದೆ, ಬೆಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದೆ. ರಸ್ತೆಗಳೆಲ್ಲ ಗುಂಡಿಗಳಿಂದ ಗಬ್ಬೆದ್ದು ಹೋಗಿದ್ದವು. ಈ ರೀತಿ ಸ್ವಲ್ಪ ಹೊತ್ತು ಪ್ರಯಾಣಿಸಿದ ನಂತರ, ನನಗೆ ನಾನೇ “ಯಾವಾಗ ಸರಿ ಹೋಗುತ್ತೋ ನಮ್ಮ ಬೆಂಗಳೂರು” ಎಂದು ಸ್ವಲ್ಪ ಗಟ್ಟಿಯಾಗಿ ಹೇಳಿಕೊಂಡೆ. ಕೂಡಲೇ, ಆಟೋ ರಿಕ್ಷಾದ ಚಾಲಕ, “ಸಾರ್, ನರೇಂದ್ರ ಮೋದಿಯವರಿಗೆ ಒಂದು ಚಾನ್ಸ್ ಕೊಟ್ಟು ನೋಡಿ, ಎಲ್ಲಾ ಸರಿ ಹೋಗುತ್ತೆ” ಎಂದು ಬಿಡೋದೇ!?

ಮತ್ತಷ್ಟು ಓದು »

3
ಡಿಸೆ

6-5=2 ಚಿತ್ರ ವಿಮರ್ಶೆ

-ಡಾ.ಅಶೋಕ್ ಕೆ ಆರ್

6-5=2ಎರಡು ವಾರದ ಮುಂಚೆ 6-5=2 ಎಂಬ ವಿಚಿತ್ರ ಹೆಸರಿನ ಚಿತ್ರದ ಪೋಸ್ಟರನ್ನು ಪತ್ರಿಕೆಗಳಲ್ಲಿ ನೋಡಿ ನಕ್ಕುಬಿಟ್ಟಿದ್ದೆ! ‘ಏನ್ ಕರ್ಮಾರೀ ಏನೇನೋ ಹೆಸರಿಟ್ಟು ಫಿಲ್ಮ್ ತೆಗೀತಾರೆ’ ಎಂದು ನಗಾಡಿದ್ದೆ! ನಾಲ್ಕು ದಿನದ ಹಿಂದೆ ಮತ್ತೆ ಅದೇ ಚಿತ್ರದ ಜಾಹೀರಾತನ್ನು ಪತ್ರಿಕೆಯಲ್ಲಿ ನೋಡಿದಾಗ ಗಮನಿಸಿದೆ, ಸ್ವರ್ಣಲತಾ ಪ್ರೊಡಕ್ಷನ್ಸ್ ಮತ್ತು A video shot by Late Ramesh ಎಂಬೆರಡು ವಾಕ್ಯಗಳನ್ನು ಬಿಟ್ಟರೆ ಜಾಹೀರಾತಿನಲ್ಲಿ ಮತ್ತೇನೂ ಇರಲಿಲ್ಲ! ಅಲಲಾ! ಇದೇನೋ ಹೊಸ ಗಿಮಿಕ್ ಮಾಡ್ತಿದ್ದಾರಲ್ಲ ಈ ಫಿಲಮ್ನೋರು ಎಂಬ ಸಣ್ಣ ಕುತೂಹಲ ಹುಟ್ಟಿತು. ನಿರ್ದೇಶಕರ ಹೆಸರಿಲ್ಲ, ತಂತ್ರಜ್ಞರ ಹೆಸರಿಲ್ಲ, ಕಲಾವಿದರ ಹೆಸರಿಲ್ಲ, ನೈಜ ವೀಡೀಯೋವೊಂದು ದೊರಕಿದ್ದು ಅದನ್ನೇ ಚಿತ್ರಮಂದಿರದಲ್ಲಿ ಪ್ರದರ್ಶಿಸುತ್ತಿದ್ದೇವೆ ಎಂಬ ಸಾಲುಗಳು ಬೇರೆ. ಮ್… ಇವರು ಮಾಡಿರೋ ಗಿಮಿಕ್ಕಿಗಾದರೂ ಚಿತ್ರವನ್ನೊಮ್ಮೆ ನೋಡಬೇಕು ಎಂದು ನಿರ್ಧರಿಸಿದೆ.
ಎರಡು ಘಂಟೆಯ 6-5=2 ಚಿತ್ರ ಪ್ರೀತಿ ಪ್ರೇಮದ ಚಿತ್ರಗಳ ಗುಂಗಿನಲ್ಲಿ ಕಳೆದುಹೋದ ಪ್ರೇಕ್ಷಕರನ್ನು ಖಂಡಿತ ಹೊಡೆದೆಬ್ಬಿಸುತ್ತದೆ! ಬಹುಶಃ ಉಪೇಂದ್ರ ನಿರ್ದೇಶನದ ಶ್ ಚಿತ್ರದ ನಂತರ ಕನ್ನಡದಲ್ಲಿ ಬಂದ ಪರಿಣಾಮಕಾರಿ ‘ದೆವ್ವದ’ ಚಿತ್ರ ಎಂದರೆ ತಪ್ಪಲ್ಲ. ಕೊನೇಪಕ್ಷ ಶ್  ಸಿನಿಮಾದಲ್ಲೂ ಪ್ರೀತಿ ಪ್ರೇಮ ಕಾಮ ಹಾಡು ಫೈಟುಗಳಿದ್ದವು. ಈ ಚಿತ್ರದಲ್ಲಿ ಅದೂ ಇಲ್ಲ. ಆರು ಮಂದಿ ಟ್ರೆಕ್ಕಿಂಗಿಗೆಂದು ಹೋಗುತ್ತಾರೆ, ಕಾಡಿನ ಪರಿಸರ ಗಮನಿಸಿದರೆ ಗುಂಡ್ಯ, ಬಿಸಿಲೆ, ಕುಮಾರಪರ್ವತವಿರಬೇಕು. ಆ ಆರು ಜನರಲ್ಲಿ ಒಬ್ಬ ಸಿನಿಮಾದಲ್ಲಿ ಕ್ಯಾಮೆರಾಮೆನ್ ಆಗಬೇಕೆಂಬ ಕನಸನ್ನೊತ್ತವನು. ತನ್ನ ಗುರುವಿನಿಂದ ಒಂದು ಕ್ಯಾಮೆರಾ ತರುತ್ತಾನೆ ಟ್ರೆಕ್ಕಿಂಗಿನ ಪ್ರತಿ ಘಟ್ಟವನ್ನು ಚಿತ್ರಿಸಬೇಕೆಂಬ ಆಸೆಯೊಂದಿಗೆ. ಇಡೀ ಚಿತ್ರ ಆ ಕ್ಯಾಮೆರಾದಲ್ಲಿ ಚಿತ್ರಿತವಾದ ‘ನೈಜ’ ದೃಶ್ಯಗಳಷ್ಟೇ! ಟ್ರೆಕ್ಕಿಂಗಿನ ಸಮಯದಲ್ಲಿ ನಡೆದ ತಮಾಷೆ ಸಿಟ್ಟು ಸೆಡವು ದುರ್ಘಟನೆಗಳು ಅಲ್ಲಿನ ರಮ್ಯ ಪರಿಸರವೆಲ್ಲ ಲೇಟ್ ರಮೇಶನ ಕ್ಯಾಮೆರಾದಲ್ಲಿ ಹಸಿಹಸಿಯಾಗಿ ಬಂಧಿಯಾಗಿದೆ. ಚಾರಣಕ್ಕೆಂದು ಬಂದವರ ಮೇಲೆ ಆ ಪರಿಸರದಲ್ಲಿನ ಕ್ರುದ್ಧ ಶಕ್ತಿಗಳು ಆಕ್ರಮಣ ಮಾಡುತ್ತವೆ. ಬದುಕುವರ್ಯಾರು, ಸಾಯುವವರ್ಯಾರು, ಕಾಣೆಯಾಗುವವರ್ಯಾರು ಎಂಬುದೇ ಚಿತ್ರದ ಹೂರಣ. ಕ್ರುದ್ಧ ಶಕ್ತಿಗಳು ಆಕ್ರಮಣ ಮಾಡಲು ಕಾರಣವೇನು ಎಂಬುದರ ವಿವರವಿಲ್ಲ, ಮನದಲ್ಲಿ ಮೂಡುವ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡುವ ಯಾವ ವಿವರಗಳೂ ಚಿತ್ರದಲ್ಲಿಲ್ಲ! ಯಾಕೆಂದರೆ ಸ್ವರ್ಣಲತಾ ಪ್ರೊಡಕ್ಷನ್ನಿನ ಜಾಹೀರಾತು ತಿಳಿಸುವಂತೆ ಇದು ಚಲನಚಿತ್ರವಲ್ಲ! ನೈಜ ವಿಡಿಯೋ ಅಷ್ಟೇ!!