ವಿಷಯದ ವಿವರಗಳಿಗೆ ದಾಟಿರಿ

Archive for

20
ಡಿಸೆ

ವಿಡಂಬನೆ:ಪೊರೆ ಪೊರೆ ಪೊರಕೆ..!

–  ತುರುವೇಕೆರೆ ಪ್ರಸಾದ್

ಪೊರಕೆದೆಹಲಿಲಿ ಆಮ್ ಆದ್ಮಿ ಪಕ್ಷ ‘ಹಾಥ್ ಕಾ ಸಫಾಯಾ’ ಮಾಡಾದ ಮೇಲೆ ದೇಶದ ಎಲ್ಲಾ ಪಕ್ಷಗಳನ್ನೂ ಗುಡಿಸಿ ಗುಂಡಾಂತರ ಮಾಡುತ್ತೆ ಅನ್ನೋ ಹಸಿ ಬಿಸಿ ಸುದ್ದಿ ಹಿನ್ನಲೆಯಲ್ಲಿ ಧೂಮಕೇತು ಸಂಪಾದಕ ಪರ್ಮೇಶಿ ಕನ್ನಡ ನಾಡಿನ ಖ್ಯಾತ ನಾಮರು ಹಾಗೂ ಆಮ್ ಆದ್ಮಿಗಳಿಗೆ ಕೇಜ್ರಿವಾಲ್, ಅವರ ಪೊರಕೆ ಗೊತ್ತಾ? ಪೊರಕೆ ಎಫೆಕ್ಟ್  ಸಿಕ್ಕಾಪಟ್ಟೆ ಡ್ಯಾಮೇಜ್ ಮಾಡಿದೆ ಅಲ್ವಾ? ಕರ್ನಾಟಕದಲ್ಲೂ ಜನ ಪೊರಕೆ ಹಿಡ್ಕಂಡ್ರೆ ಏನ್ಮಾಡ್ತೀರ? ಇತ್ಯಾದಿ ಪ್ರಶ್ನೆಹಾಕಿ ಮಾಡಿದ ಸಂದರ್ಶನದ ಗಿಳಿಪಾಠ ಇಲ್ಲಿದೆ.

ಮುದ್ದುರಾಮಯ್ಯ: ಕ್ರೇಜಿ ಪೊರಕೆಗೆ ನೋ ಛಾನ್ಸ್! ನಮ್ಮನೆ ಕಸ ನಾವೇ ಗುಡಿಸ್ಕಂಡ್ರೆ ಬೇರೆಯವರು ಪರಕೆ ಹಿಡ್ಕಂಡು ಅಲ್ಲಾಡಿಸೋ ಛಾನ್ಸೇ ಇರಲ್ಲ..ನಾನು  ಮೊದ್ಲೇ ಎಲ್ಲ ಕಾಂಗ್ರೆಸ್ ಕಳೆ ಬೆಳೀದಂಗೆ ಔಷ್ಧಿ ಹೊಡ್ದಿದ್ದೆ. ಎಲ್ಲೋ ಒಂದು ಸೇರ್ಕಂಡು ಬಿಟ್ಟಿತ್ತು.ಅದ್ನೂ ಗುಡಿಸಿ ಕ್ಲೀನ್ ಮಾಡಿದೀನಿ. ಮೊನ್ನೆ ಮೊನ್ನೆ ಇನ್ನೂ ಅಲ್ಲಾಡ್ತಿದ್ ಕೂಳೆನೂ ಕಿತ್ ಎಸ್ದಿದೀನಿ..! ದೊಡ್ ಮಠದೋರಿಗೆ ಎಲ್ಲಾ ಗುಡಿಸಿ ಹಾಕೋ ಕಾಂಟ್ರಾಕ್ಟ್ ಕೊಟ್ಟಿದೀನಿ. ಇಷ್ಟಕ್ಕೂ ನಮ್ದು ಹೈಟೆಕ್ ರಾಜ್ಯ..! ಪೊರಕೆ, ಗಿರಕೆ ಎಲ್ಲಾ ನಮ್ ಹತ್ರ ನಡೆಯಲ್ಲ..ನಮ್ದೇನಿದ್ರೂ ವಾಕ್ಯೂಮ್ ಕ್ಲೀನರ್ ಸಂಸ್ಕೃತಿ..! ಹಾಗೂ ಬೇಕು ಅಂದ್ರೆ ಅನ್ನಭಾಗ್ಯ, ಕ್ಷೀರ ಭಾಗ್ಯ, ಶಾದೀ ಭಾಗ್ಯದ ತರ ಪೊರಕೆ ಭಾಗ್ಯ ಅಂತ ಮನೆ ಮನೆಗೆ ಇಂಪೋರ್ಟೆಡ್ ಪೊರಕೆ ಸಪ್ಲೈ ಮಾಡ್ತೀವಿ..ನಾವು ಪೊರಕೆ ಹಿಡಿಯೋ ಹೆಣ್ ಮಗಳು ಹೇಳ್ದಂಗೆ ಕೇಳ್ಕಂಡಿರೋ ಮಂದಿ..ಏನೋ ಆ ಶೀಲಮ್ಮ, ಸ್ವಲ್ಪ ಏಮಾರುದ್ರು ಅಂದ್ರೆ ನಾವೂ ಏಮಾರ್ತೀವಾ ?’ಕೈಯ್ಯೇ’ಇಲ್ಲದೆ ಪೊರಕೆ ಹಿಡಿಯೋದು ಹೆಂಗೆ? ಇವತ್ತಲ್ಲ ನಾಳೆ ಆ ಪೊರಕೆನ ನಾವು ಹಿಡ್ಕೊತೀವಿ ಅನ್ನೋ ನಂಬಿಕೆ ನನಗಿದೆ..

ಮತ್ತಷ್ಟು ಓದು »